ನಿಧನ

ಮದುವೆ ಊಟದಿಂದ ಆರೋಗ್ಯದಲ್ಲಿ ಏರುಪೇರು | ಮಹಿಳೆ ಮೃತ್ಯು

ಬಂದಾರು : ಮಹಿಳೆಯೊಬ್ಬರು ವಾಂತಿ ಭೇದಿಯಿಂದಾಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಮದುವೆ ಊಟದ ನಂತರ ತುಂಬಾ ಜನರಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ಅನೇಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಜಿರೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ 5 ಮಂದಿ ದಾಖಲಾಗಿದ್ದಾರೆ ಎನ್ನಲಾಗಿದ್ದು, ಇವರಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬಂದಾರು ಗ್ರಾಮದಲ್ಲಿ ಮದುವೆ ಸಮಾರಂಭಕ್ಕೆ ತೆರಳಿದವರಿಗೆಲ್ಲರಿಗು ವಾಂತಿ, […]

ಮದುವೆ ಊಟದಿಂದ ಆರೋಗ್ಯದಲ್ಲಿ ಏರುಪೇರು | ಮಹಿಳೆ ಮೃತ್ಯು Read More »

ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು: ಪಡೀಲ್‌ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ ನ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ತಿಳಿದು ಬಂದಿದೆ. ಪುತ್ತೂರು ಪಡೀಲ್‌ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ ನಲ್ಲಿ ಅಡುಗೆ ತಯಾರಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಕಲ್ಲಡ್ಕ ಸಮೀಪದ ಬಾಳಿಲ ಗ್ರಾಮದ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.   ಮೃತರು ಮೇ.13ರಂದು ಕಲ್ಲಡ್ಕ ಸಮೀಪ ಪೂರ್ಲಿಪ್ಪಾಡಿ ಮನೆಗೆ ತೆರಳಿದ್ದರು. ಮನೆಯಲ್ಲಿ ಅವರ ಪತ್ನಿ ಪೂಜಾ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ.14ರಂದು ಮನೆಗೆ

ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ Read More »

ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ ಎನ್. ಗುಲಾಬಿ ಶೆಟ್ಟಿ ಕಂಪ ನಿಧನ

ಪುತ್ತೂರು: ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕಿಯಾದ ಎನ್. ಗುಲಾಬಿ ಶೆಟ್ಟಿ ಕಂಪ ಅನಾರೋಗ್ಯದಿಂದ ಇಂದು ಬೆಳಗ್ಗೆ ಮೃತ ಪಟ್ಟಿದ್ದಾರೆ. ಇವರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ, ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕಿ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತೆ ಹಾಗೂ ದಾನಿ ಸ್ವಭಾವುಳ್ಳವರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪ ಕಾಲದ ಅಸ್ವಸ್ಥತೆಯ ಕಾರಣದಿಂದ ನಿಧನರಾದರು. ಇವರು ದಿ. ನಾರಾಯಣ ಶೆಟ್ಟಿ ಕಂಪ ಅವರ ಧರ್ಮಪತ್ನಿ

ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ ಎನ್. ಗುಲಾಬಿ ಶೆಟ್ಟಿ ಕಂಪ ನಿಧನ Read More »

ಸ್ನಾನಕ್ಕೆಂದ ತೆರಳಿದ ಇಬ್ಬರು ಯುವಕರು ನೀರಿಗೆ ಬಿದ್ದು ಮೃತ್ಯು

ಮಡಿಕೇರಿ : ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ 8 ಜನ ಯುವಕರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿದ ಘಟನೆ ಮಡಿಕೇರಿ ತಾಲೂಕಿನ ನಾಪೊತ್ತು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ. ಚೇರಂಬಾಣೆ ಮೂಲದ ಗಿರೀಶ್ (16) ಮತ್ತು ಅಯ್ಯಪ್ಪ (18) ಕಾವೇರಿ ನದಿಯಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದಾರೆ. ಇಬ್ಬರ ಪೈಕಿ ಓರ್ವನ ಮೃತದೇಹ ದೊರಕಿದೆ. ಇನ್ನೋರ್ವನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ನಾಪೊಗ್ಗು ಪಿಎಸ್‌ಐ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ನಾನಕ್ಕೆಂದ ತೆರಳಿದ ಇಬ್ಬರು ಯುವಕರು ನೀರಿಗೆ ಬಿದ್ದು ಮೃತ್ಯು Read More »

ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಅರಂತೋಡು ಗ್ರಾಮದ ಕಿರ್ಲಾಯದಲ್ಲಿ ನಡೆದಿದೆ. ಮೃತಪಟ್ಟವರು ಅಡಬಳೆ ವಾಸುದೇವ ಎನ್ನಲಾಗಿದೆ.  ತೆಂಗಿನಕಾಯಿ ತೆಗೆಯಲೆಂದು ಮರಕ್ಕೆ ಹತ್ತಿದ್ದ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡಿದ್ದರು. ತಕ್ಷಣ ವಾಸುದೇವ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.  ಮೃತರು ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು  

ವಿಜಯಪುರ : ತೆರೆದ ಬಾವಿಗೆ ಮೂರು ವರ್ಷದ ಮಗುವೊಂದು ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಬಾವಿಗೆ ಬಿದ್ದು ಸಾವನ್ನಪ್ಪಿರುವ ಮಗು ಮೂರು ವರ್ಷದ ಹರ್ಷಿತ್ ಪಾಟೀಲ್ ಎನ್ನಲಾಗಿದೆ.  ಶುಕ್ರವಾರ ಮಗು ಮನೆಯ ಮುಂದೆ ಆಟವಾಡುತ್ತಿತ್ತು. ಹೀಗೆ ಆಟವಾಡುತ್ತಿದ್ದ ಮಗು ನಾಪತ್ತೆಯಾಗಿತ್ತು. ಮಗು ಎಲ್ಲಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ತಕ್ಷಣ ಕುಟುಂಬಸ್ಥರು ಮಗುವಿನ ಹುಡುಕಾಟದಲ್ಲಿ ತೊಡಗಿದ್ದರು. ಆದರೆ ಇಂದು ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಮಗುವನ್ನು

ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು   Read More »

ಅಶೋಕ್‌ ಕುಮಾರ್‌ ಸೊರಕೆ ಹೃದಯಾಘಾತದಿಂದ ನಿಧನ

ಪುತ್ತೂರು: ಅಶೋಕ್‌ ಕುಮಾರ್‌ ಸೊರಕೆ (73)  ಇಂದು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ. ಸೊರಕೆ ಅಚ್ಚುತ ಪೂಜಾರಿ ಮತ್ತು ದಿ.ಸುನೀತಿ ದಂಪತಿಯ ಹಿರಿಯ ಪುತ್ರನಾಗಿರುವ ಅಶೋಕ್‌ ಕುಮಾರ್‌ ಸೊರಕೆ, ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಮತ್ತು ಮುಂಡೂರು ಸಿ ಎ ಬ್ಯಾಂಕ್ ಅಧ್ಯಕ್ಷರಾಗಿರುವ ಸುರೇಶ್‌ ಕುಮಾರ್‌ ಸೊರಕೆ, ಶರತ್‌ ಮತ್ತು ಶಶಿಕಲಾ ಅವರ ಸಹೋದರರಾಗಿದ್ದಾರೆ. ಹಲವು ವರ್ಷಗಳ ಕಾಲ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಅಶೋಕ್‌ ಕುಮಾರ್‌ ಸೊರಕೆ ನಿವೃತ್ತಿ ಬಳಿಕ ಸೊರಕೆಯಲ್ಲಿ ನೆಲೆಸಿದ್ದರು ಮೃತರು ಪತ್ನಿ,

ಅಶೋಕ್‌ ಕುಮಾರ್‌ ಸೊರಕೆ ಹೃದಯಾಘಾತದಿಂದ ನಿಧನ Read More »

ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ. ನಿಧನ

ಪುತ್ತೂರು: ಏಳ್ಮುಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ (56)ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ. 07 ರಂದು ನಿಧನರಾದರು. ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, ಮಗಳು, ಅಳಿಯ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ

ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ. ನಿಧನ Read More »

ಉದ್ಯಮಿ ಎಡಕ್ಕಾನ ರಾಜಾರಾಮ ಭಟ್‍ ದುಬೈಯಲ್ಲಿ ಹೃದಯಾಘಾತದಿಂದ ನಿಧನ

ಪುತ್ತೂರು: ಉದ್ಯಮಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣ್‍ ಕುಮಾರ್‍ ಪುತ್ತಿಲ ಅವರ ಪಾಳಯದಲ್ಲಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್‍ ದುಬೈಯಲ್ಲಿ ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿಯಾದ ರಾಜಾರಾಮ ಭಟ್ ರು ಎಡಕ್ಕಾನ ಟ್ರೇಡರ್ಸ್ ಎಂಬ ವ್ಯಾಪಾರ ಮಳಿಗೆಯನ್ನು ಹೊಂದಿದ್ದರಲ್ಲದೆ, ದುಬೈ ಮಸ್ಮತ್ ಗಳಲ್ಲಿ ಖರ್ಜೂರದ ವ್ಯಾಪಾರ ಕೂಡ ಹೊಂದಿದ್ದರು. ವ್ಯವಹಾರದ ನಿಮಿತ್ತ ಕೆಲದಿನಗಳ ಹಿಂದೆ ದುಬೈಗೆ ಹೋಗಿದ್ದ ಅವರು ಅಲ್ಲಿ ಇಂದು ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಕಳೆದ

ಉದ್ಯಮಿ ಎಡಕ್ಕಾನ ರಾಜಾರಾಮ ಭಟ್‍ ದುಬೈಯಲ್ಲಿ ಹೃದಯಾಘಾತದಿಂದ ನಿಧನ Read More »

ಪುತ್ತೂರು ಭರತ್ ವಿಧಿವಶ

ಪುತ್ತೂರು: ಪಡ್ನೂರು ಗ್ರಾಮದ ಮತಾವು ಮನೆಯ ದಿ. ಹರೀಶ ಗೌಡ ಮತ್ತು ಜಯಂತಿ ದಂಪತಿಯ ಹಿರಿಯ ಪುತ್ರ ಭರತ್ ಮತಾವು ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದರು. ಭರತ್ ಅವರಿಗೆ ಸುಮಾರು 46 ವರ್ಷ ವಯಸ್ಸಾಗಿದ್ದು ಬೆಂಗಳೂರಿನಲ್ಲಿ ಸಿವಿಲ್ ಬಿಲ್ದರ್ ಆಗಿ ಸ್ವಯಂವೃತ್ತಿ ನಿರತರಾಗಿದ್ದರು. ಮೇಲೊಬ್ಬ ಮಾಯಾವಿ – ಪುತ್ತೂರು ಭರತ್ ಸಿನಿಮಾ ರಂಗದಲ್ಲೂ ಸಕ್ರಿಯರಾಗಿದ್ದ ಅವರು ‘ಮೇಲೊಬ್ಬ ಮಾಯಾವಿ’ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿ ಹೆಸರು ಮಾಡಿದ್ದರು. ಅಲ್ಲಿ ‘ಪುತ್ತೂರು ಭರತ್’ ಎಂದೇ ಜನಪ್ರಿಯರಾಗಿದ್ದರು. ಪುತ್ತೂರಿನ

ಪುತ್ತೂರು ಭರತ್ ವಿಧಿವಶ Read More »

error: Content is protected !!
Scroll to Top