ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ ಬಪ್ಪಳಿಗೆ ನಿಧನ
ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ್ ಬಪ್ಪಳಿಗೆ ಅನಾರೋಗ್ಯಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಕ್ರಿಕೆಟ್ ಪಟುವಾಗಿ ಗುರಿತಿಸಿಕೊಂಡಿದ್ದ ಅವರು, ನಿನ್ನೆ ಅಸೌಖ್ಯಕ್ಕೊಳಗಾಗಿದ್ದರು. ಬಳಿಕ ಪುತ್ತೂರಿನ ಸರ್ಕಾರಿ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ತಂದೆ ಹಾಗೂ ಇಬ್ಬರು ಸಹೋದರರನ್ನ ಅಗಲಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ ಬಪ್ಪಳಿಗೆ ನಿಧನ Read More »










