ಎಡಕ್ಕಾನ ಗಣಪತಿ ಭಟ್ ನಿಧನ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಅಯ್ಯಪ್ಪ ಗುಡಿಯ ಮಾಜಿ ಅರ್ಚಕ ಸುಳ್ಯ ತಾಲೂಕಿನ ಕಲ್ಮಡ್ಕ ನಿವಾಸಿ ಎಡಕ್ಕಾನ ಗಣಪತಿ ಭಟ್ (79) ಶನಿವಾರ ನಿಧನರಾದರು. ಕಲ್ಮಡ್ಕದ ಎಡಕ್ಕಾನ ನಿವಾಸಿಯಾಗಿರುವ ಮೃತರು ಹಲವು ವರ್ಷಗಳ ಕಾಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಅಸೌಖ್ಯದಿಂದ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯನ್ನು ಅಗಲಿದ್ದಾರೆ.
ಎಡಕ್ಕಾನ ಗಣಪತಿ ಭಟ್ ನಿಧನ Read More »










