ನಿಧನ

ಪಿಎಲ್‍ ಡಿ ಬ್ಯಾಂಕ್‍ ಮಾಜಿ ಅಧ್ಯಕ್ಷ ಹಸಂತಡ್ಕ ರಾಮ ಭಟ್‍ ನಿಧನ

ಪುತ್ತೂರು: ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಅವರ ತಂದೆ ಹಸಂತಡ್ಕ ರಾಮ ಭಟ್ ಜ.21 ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ. ಪಿಎಲ್‍ಡಿ ಬ್ಯಾಂಕ್‍ ಮಾಜಿ ಅಧ್ಯಕ್ಷರಾಗಿದ್ದ ಅವರು, ಸಂಘ ಪರಿವಾರದ ಹಿರಿಯ ಕಾರ್ಯಕರ್ತರಾಗಿದ್ದರು. ಅವರು ಈ ಹಿಂದೆ ಪುತ್ರನ ವಿವಾಹ ಸಂದರ್ಭದಲ್ಲಿ ನೇತ್ರದಾನ ಮಾಡುವ ಕುರಿತು ನೋಂದಾವಣೆ ಮಾಡಿದ್ದರು. ಅದರಂತೆ ಭಾನುವಾರ ರಾತ್ರಿ ಮಂಗಳೂರಿನಿಂದ ನೇತ್ರ ತಜ್ಞರು ಆಗಮಿಸಿದ್ದರು. ಮೃತರರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಪಿಎಲ್‍ ಡಿ ಬ್ಯಾಂಕ್‍ ಮಾಜಿ ಅಧ್ಯಕ್ಷ ಹಸಂತಡ್ಕ ರಾಮ ಭಟ್‍ ನಿಧನ Read More »

ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರ ಸ್ಥಾಪಕಾಧ್ಯಕ್ಷ ಶ್ರೀಪಾಲ್ ಜೈನ್ ನಿಧನ

ಪುತ್ತೂರು: ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಶ್ರೀಪಾಲ್ ಜೈನ್ (74) ನಿಧನರಾಗಿದ್ದಾರೆ. ಕೊಡುಗೈ ದಾನಿಯಾಗಿದ್ದ ಅವರು, ಸರಳ, ಸಜ್ಜನಿಕೆ ವ್ಯಕ್ತಿಯಾಗಿದ್ದರು. ಸಾಮಾಜಿಕ, ಧಾರ್ಮಿಕ ಮುಖಂಡರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರನ್ನು ಅಗಲಿದ್ದಾರೆ.

ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರ ಸ್ಥಾಪಕಾಧ್ಯಕ್ಷ ಶ್ರೀಪಾಲ್ ಜೈನ್ ನಿಧನ Read More »

ಮೋದಿ ಹುಟ್ಟುಹಬ್ಬದಂದು ಉಚಿತ ಸೇವೆ ನೀಡುತ್ತಿದ್ದ ಸೆಲೂನ್ ಬಾಲ ನಿಧನ

ಪುತ್ತೂರು: ದೂರದ ತಮಿಳ್ನಾಡಿನಲ್ಲಿ ಜನಿಸಿ ಪುತ್ತೂರಿನ ಸಂಟ್ಯಾರ್ ನಲ್ಲಿ ಸೆಲೂನ್ ಬಾಲ ಅಣ್ಣಾ ಎಂದೇ ಖ್ಯಾತರಾಗಿದ್ದ ಬಾಲ ಅವರು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಎಲ್ಲರಿಗೂ ಚಿರಪರಿಚಿತರಾಗಿ ತನ್ನ ಕಾಯಕವನ್ನು ನಿಷ್ಠೆಯಿಂದ ಪ್ರೀತಿಯಿಂದ ಮಾಡುತ್ತಿರುವ ಬಾಲಾ ಅವರು ಜ. 07ರಂದು ಸ್ವಗೃಹ ದಲ್ಲಿ ಹೃದಯಘಾತದಿಂದ ನಿಧನ ರಾಗಿದ್ದಾರೆ. ಅಪ್ಪಟ ದೇಶಪ್ರೇಮಿಯಾಗಿರುವ ಬಾಲ ಅವರು ನರೇಂದ್ರ ಮೋದಿಯ ಅಪ್ಪಟ ಅಭಿಮಾನಿ. ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಹುಟ್ಟುಹಬ್ಬದಂದು ತನ್ನ ಸೆಲೂನ್ ನಲ್ಲಿ ಎಲ್ಲರಿಗೂ ಉಚಿತವಾಗಿ ಹೇರ್ ಕಟ್ಟಿಂಗ್ ಮಾಡಿಸುತ್ತಿದ್ದರು ಎಂದು ಸ್ಥಳೀಯರು

ಮೋದಿ ಹುಟ್ಟುಹಬ್ಬದಂದು ಉಚಿತ ಸೇವೆ ನೀಡುತ್ತಿದ್ದ ಸೆಲೂನ್ ಬಾಲ ನಿಧನ Read More »

ಎಡಕ್ಕಾನ ಗಣಪತಿ ಭಟ್ ನಿಧನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಅಯ್ಯಪ್ಪ ಗುಡಿಯ ಮಾಜಿ ಅರ್ಚಕ ಸುಳ್ಯ ತಾಲೂಕಿನ ಕಲ್ಮಡ್ಕ ನಿವಾಸಿ ಎಡಕ್ಕಾನ ಗಣಪತಿ  ಭಟ್ (79) ಶನಿವಾರ ನಿಧನರಾದರು. ಕಲ್ಮಡ್ಕದ ಎಡಕ್ಕಾನ ನಿವಾಸಿಯಾಗಿರುವ ಮೃತರು ಹಲವು ವರ್ಷಗಳ ಕಾಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಅಸೌಖ್ಯದಿಂದ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯನ್ನು ಅಗಲಿದ್ದಾರೆ.

ಎಡಕ್ಕಾನ ಗಣಪತಿ ಭಟ್ ನಿಧನ Read More »

ಅನಾರೋಗ್ಯದಿಂದ ಯುವತಿ ಮೃತ್ಯು !

ಕಡಬ: ಯುವತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ಗಂಡಿತಡ್ಕ ರಾಮಚಂದ್ರ ನಾಯ್ಕ ಎಂಬವರ ಪುತ್ರಿ ತೃಪ್ತಿ ಮೃತಪಟ್ಟ ಯುವತಿ ಸುಬ್ರಹ್ಮಣ್ಯ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ತೃಪ್ತಿ ಎರಡು ದಿನಗಳಿಂದ ಅನಾರೋಗ್ಯದಿಂದಿದ್ದು, ಗುರುವಾರ ಪುತ್ತೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅನಾರೋಗ್ಯದಿಂದ ಯುವತಿ ಮೃತ್ಯು ! Read More »

ಫುಟ್ಬಾಲ್ ದಿಗ್ಗಜ ಫ್ರಾಂಜ್ ಬೆಕನ್ಬೌರ್ ಇನ್ನಿಲ್ಲ!

ಜರ್ಮನಿಯ ಫುಟ್ಬಾಲ್ ತಂಡದ ವಿಶ್ವಕಪ್ ವಿಜೇತ ನಾಯಕ ಮತ್ತು ಕೋಚ್ ಫ್ರಾಂಜ್ ಬೆಕನ್ಬೌರ್ (78) ನಿಧನರಾಗಿದ್ದಾರೆ ಎಂದು ಜರ್ಮನ್ ಸುದ್ದಿ ಸಂಸ್ಥೆ ಡಿಪಿಎ ಪ್ರಕಟಿಸಿದೆ. “ಫ್ರಾಂಜ್ ಬೆಕನ್ಬೌರ್ ಅಗಲಿಕೆ ತೀವ್ರ ದುಃಖದ ವಿಚಾರ” ಎಂದು ಅವರ ಕುಟುಂಬವು ಜರ್ಮನ್ ಸುದ್ದಿ ಸಂಸ್ಥೆಯ ಹೇಳಿಕೆಯಲ್ಲಿ ತಿಳಿಸಿದೆ. 1974ರಲ್ಲಿ ಜರ್ಮನಿ ತಂಡದ ನಾಯಕರಾಗಿದ್ದಾಗ ಬೆಕನ್ಬೌರ್ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದಿದ್ದರು. ನಿವೃತ್ತಿ ಬಳಿಕ ಅವರು ತಂಡದ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಅವರ ಮಾರ್ಗದರ್ಶನದಲ್ಲಿ ತಂಡ 1990ರಲ್ಲಿ ಮತ್ತೊಮ್ಮೆ ಪ್ರಶಸ್ತಿ ಗೆದ್ದಿತ್ತು.

ಫುಟ್ಬಾಲ್ ದಿಗ್ಗಜ ಫ್ರಾಂಜ್ ಬೆಕನ್ಬೌರ್ ಇನ್ನಿಲ್ಲ! Read More »

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಮೃತ್ಯು !

ಪುತ್ತೂರು: ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಕುಸಿದು ಬಿದ್ದು ಮೃತಪಟ್ಟ ಘಟನೆ ಸೋಮವಾರ ಕೊಡಿಪ್ಪಾಡಿಯಲ್ಲಿ ನಡೆದಿದೆ. ಪೈಂಟಿಂಗ್ ಕೆಲಸ ಮಾಡುತ್ತಿದ್ದ ರಾಘವ ಮೃತಪಟ್ಟವರು. ಕೊಡಿಪ್ಪಾಡಿಯಲ್ಲಿ ಪೈಂಟಿಂಗ್ ಕೆಲಸ ಮಾಡುತ್ತಿದ್ದ ಸಂದರ್ಭ ರಾಘವ ಅವರು ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಮೃತ್ಯು ! Read More »

ಏಳು ಮಕ್ಕಳಿದ್ದೂ ಅನಾಥಾಶ್ರಮ ಸೇರಿದ ವೃದ್ಧೆ ಸಾವು | ಅಂತ್ಯ ಸಂಸ್ಕಾರಕ್ಕೂ ಬಾರದ ಮಕ್ಕಳು!! | ಮಕ್ಕಳ ಸ್ಥಾನದಲ್ಲಿ ನಿಂತು ಆರೋಗ್ಯ ವಿಚಾರಿಸುತ್ತಿದ್ದ ಎಸ್.ಐ. ನಂದಕುಮಾರ್!

ಉಪ್ಪಿನಂಗಡಿ: ವೃದ್ಧಾಪ್ಯದ ಹಿನ್ನಲೆಯಲ್ಲಿ ಮಕ್ಕಳಿಂದ ಅನಾಥಾಶ್ರಮ ಸೇರಿದ ವೃದ್ಧೆಯೊಬ್ಬರು ಹೃದಯಾಘಾತದಿಂದ ಭಾನುವಾರ ನಿಧನರಾದರು. 90ರ ವಯಸ್ಸಿನ ವೃದ್ಧೆ ಲಕ್ಷ್ಮೀ ಹೆಗ್ಡೆ ನಿಧನರಾದವರರು. ದುರಾದೃಷ್ಟ ಎಂದರೆ ಅವರಿಗೆ 7 ಮಕ್ಕಳಿದ್ದರೂ ಯಾರೂ ಪಾರ್ಥಿವ ಶರೀರದ ಅಂತಿಮ ಕಾರ್ಯಕ್ಕೆ ಆಗಮಿಸದ ಕಾರಣ ಅನಾಥಾಶ್ರಮದವರೇ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ ಘಟನೆಯೂ ನಡೆಯಿತು. ಉಪ್ಪಿನಂಗಡಿ ಸಮೀಪದ ಇಳಂತಿಲದಲ್ಲಿ ಲಕ್ಷ್ಮೀ ಹೆಗ್ಡೆ ಸ್ವಂತ ಮನೆಯನ್ನು ಹೊಂದಿದ್ದರು. ವೃದ್ಧಾಪ್ಯದಲ್ಲಿ ಮಕ್ಕಳಿಗೆ ಬೇಡವಾಗಿ ಅಸಹಾಯಕತೆಗೆ ಸಿಲುಕಿದ ಅವರು ನ್ಯಾಯ ಬಯಸಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಮಕ್ಕಳನ್ನು ಕರೆದು

ಏಳು ಮಕ್ಕಳಿದ್ದೂ ಅನಾಥಾಶ್ರಮ ಸೇರಿದ ವೃದ್ಧೆ ಸಾವು | ಅಂತ್ಯ ಸಂಸ್ಕಾರಕ್ಕೂ ಬಾರದ ಮಕ್ಕಳು!! | ಮಕ್ಕಳ ಸ್ಥಾನದಲ್ಲಿ ನಿಂತು ಆರೋಗ್ಯ ವಿಚಾರಿಸುತ್ತಿದ್ದ ಎಸ್.ಐ. ನಂದಕುಮಾರ್! Read More »

ಶತಾಯುಷಿ ಪಮಣ ಗೌಡ ನಿಧನ

ಕೊಕ್ಕಡ:: ಪಟ್ರಮೆ ಗ್ರಾಮದ ಅಶ್ವತ್ತಡಿ ನಿವಾಸಿ ಶತಾಯುಷಿ ಪಮಣ ಗೌಡ (101) ಜ.6 ರಂದು ನಿಧನರಾದರು. 1923ನೇ ಇಸವಿಯಲ್ಲಿ ಜನಿಸಿದ ಪಮಣ ಗೌಡರು ಸಿಪಿಐಎಂ ತಾಲೂಕು ಸಮಿತಿ ಮುಖಂಡರಾಗಿದ್ದರು. ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಶತಾಯುಷಿ ಪಮಣ ಗೌಡ ನಿಧನ Read More »

ಖ್ಯಾತ ಸಾಹಿತಿ, ವಿಮರ್ಶಕ, ನಿವೃತ್ತ ಪ್ರಾಧ್ಯಾಪಕ ಡಾ.ಅಮೃತ ಸೋಮೇಶ್ವರ ಅಸ್ತಂಗತ

ಪುತ್ತೂರು: ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಸಂಶೋಧಕ, ನಿವೃತ್ತ ಪ್ರಾಧ್ಯಾಪಕ ಡಾ.ಅಮೃತ ಸೋಮೇಶ್ವರ (88) ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅನುವಾದಕ, ವಿಮರ್ಶಕ, ಜಾನಪದ ತಜ್ಞ, ಕವಿ, ಕಥೆಗಾರರಾಗಿದ್ದ ಅವರು, 1935 ರ ಸೆ.27ರಂದು ಕೋಟೆಕಾರು ಸಮೀಪ ಅಡ್ಯ ಎಂಬಲ್ಲಿ ಜನಿಸಿದ್ದರು. ಕೇಟೆಕಾರಿನ ಸ್ಟೆಲ್ಲ ಮೇರಿಸ್ ಕಾನ್ವೆಂಟ್ ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಅನಂತರ ಇಲ್ಲಿನ ಆನಂದಾಶ್ರಮದಲ್ಲಿ ಪ್ರೌಢಶಾಲೆ ವಿಧ್ಯಾಭ್ಯಾಸ ಮಾಡಿದರು. ಅಲೋಶಿಯಸ್ ಕಾಲೇಜಿನಲ್ಲಿ ಪದವಿ ಅಭ್ಯಾಸ ಮುಗಿಸಿ, ಖಾಸಗಿಯಾಗಿ ಓದಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ. ಎ. ಪದವಿ

ಖ್ಯಾತ ಸಾಹಿತಿ, ವಿಮರ್ಶಕ, ನಿವೃತ್ತ ಪ್ರಾಧ್ಯಾಪಕ ಡಾ.ಅಮೃತ ಸೋಮೇಶ್ವರ ಅಸ್ತಂಗತ Read More »

error: Content is protected !!
Scroll to Top