ನಿಧನ

ಜಾಂಡೀಸ್ ಕಾಯಿಲೆಗೆ ತುತ್ತಾಗಿ ಯುವಕ ಮೃತ್ಯು !

ಪಂಜ: ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಂಜದಿಂದ ವರದಿಯಾಗಿದೆ. ಪ್ರಶಾಂತ್ (39) ಮೃತಪಟ್ಟ ಯುವಕ. ಕೂತ್ಕುಂಜ ಗ್ರಾಮದ ಕಲ್ಕ ದಿ.ಪದ್ಮಯ್ಯ ಗೌಡ ಹಾಗೂ ಇಂದಿರಾ ದಂಪತಿ ಪುತ್ರರಾಗಿರುವ ಪ್ರಶಾಂತ್‍ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಕೆಲ ಸಮಯಗಳ ಹಿಂದೆ ಮನೆಗೆ ಬಂದಿದ್ದರು. ಜಾಂಡೀಸ್ ಕಾಯಿಲೆಗೆ ಒಳಗಾದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು. ಈ ನಡುವೆ ಹಠಾತ್ತನೇ ಅನಾರೋಗ್ಯಕ್ಕೀಡಾದ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಜಾಂಡೀಸ್ ಕಾಯಿಲೆಗೆ ತುತ್ತಾಗಿ ಯುವಕ ಮೃತ್ಯು ! Read More »

ಕೆಮ್ಮಾಯಿ ರಾಧಾ ವಾಸುದೇವ ಶೆಣೈ ನಿಧನ

ಪುತ್ತೂರು: ಪುಡಾ ನಿಕಟಪೂರ್ವ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಅವರ ತಾಯಿ ಕೆಮ್ಮಾಯಿ ನಿವಾಸಿ ರಾಧಾ ವಾಸುದೇವ ಶೆಣೈ (91) ಶನಿವಾರ ಧನರಾದರು. ಮೃತರು ಪುತ್ರರಾದ ಭಾಮಿ ಅಶೋಕ್ ಶೆಣೈ, ಭಾಮಿ ಜಗದೀಶ್ ಶೆಣೈ, ಭಾಮಿ ಪ್ರಕಾಶ್ ಶೆಣೈ ಮತ್ತು ಪುತ್ರಿಯರಾದ ಶೈಲಾ ನಾಯಕ್, ಶೋಭಾ ನಾಯಕ್, ಭಾರತಿ ನಾಯಕ್ ಅವರನ್ನು ಅಗಲಿದ್ದಾರೆ. ಡಿ.ವಿ.ಸದಾನಂದ ಗೌಡ ಅವರು ತಮ್ಮ ಆರಂಭದ ರಾಜಕೀಯ ಚಟುವಟಿಕೆಗಳ ಸಂದರ್ಭದಲ್ಲಿ ಪುತ್ತೂರು ಕೆಮ್ಮಾಯಿ ಭಾಮಿ ಅಶೋಕ್ ಶೆಣೈ ಅವರ ಮನೆಯಲ್ಲೇ ತಂಗಿದ್ದರು. ಈ

ಕೆಮ್ಮಾಯಿ ರಾಧಾ ವಾಸುದೇವ ಶೆಣೈ ನಿಧನ Read More »

ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ನಿಧನ | ಬಾಂಬ್‌ ಸ್ಪೋಟ ಪ್ರಕರಣದಲ್ಲಿ 29 ವರ್ಷ ಜೈಲಿನಲ್ಲಿದ್ದ ಆರೋಪಿ

ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಅನಾರೋಗ್ಯದ ಕಾರಣಕ್ಕೆ ಜಾಮೀನು ಪಡೆದು ಜೈಲಿನಿಂದ ಹೊರ ಬಂದ, ವೀರಪ್ಪನ್ ಸಹಚರ ಜ್ಞಾನಪ್ರಕಾಶ್ (69) ಕೊನೆಯುಸಿರೆಳೆದಿದ್ದಾರೆ. 1993ರಲ್ಲಿ ನಡೆದಿದ್ದ ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕಾಡುಗಳ್ಳ ವೀರಪ್ಪನ್, ಬಿಲವೇಂದ್ರನ್ ಸೈಮನ್, ಮೀಸೆಕಾರ ಮಾದಯ್ಯ ಅವರೊಂದಿಗೆ ಭಾಗಿಯಾಗಿದ್ದ ಆರೋಪದ ಮೇಲೆ ಮೈಸೂರಿನ ಟಾಡಾ ನ್ಯಾಯಾಲಯ 1997ರಲ್ಲಿ ಜ್ಞಾನಪ್ರಕಾಶ್‌ ಗೆ ಗಲ್ಲು ಶಿಕ್ಷೆ ವಿಧಿಸಿತ್ತು. 2014ರಲ್ಲಿ ಸುಪ್ರಿಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿ ಆದೇಶಿಸಿತ್ತು. ಈ ವೇಳೆ

ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ನಿಧನ | ಬಾಂಬ್‌ ಸ್ಪೋಟ ಪ್ರಕರಣದಲ್ಲಿ 29 ವರ್ಷ ಜೈಲಿನಲ್ಲಿದ್ದ ಆರೋಪಿ Read More »

ನುಳಿಯಾಲು ಸೀತಾರಾಮ ರೈ ತೋಟದಮೂಲೆ ನಿಧನ

ಬೆಟ್ಟಂಪಾಡಿ: ನಿಡ್ಪಳ್ಳಿ ಗ್ರಾಮದ ನುಳಿಯಾಲು ತರವಾಡು ಕುಟುಂಬದ ಹಿರಿಯರಾದ ನುಳಿಯಾಲು ಸೀತಾರಾಮ ರೈ ತೋಟದ ಮೂಲೆ (80) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಮಿತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ, ಭಾರತೀಯ ಜನತಾ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷರಾಗಿ, ವಿನಾಯಕ ನಗರ ಶ್ರೀ ಸಿದ್ಧಿವಿನಾಯಕ ಮಂದಿರ ಸ್ಥಾಪಕಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಪುತ್ರಿ ಹಾಗೂ ಪುತ್ರರನ್ನು ಅಗಲಿದ್ದಾರೆ.

ನುಳಿಯಾಲು ಸೀತಾರಾಮ ರೈ ತೋಟದಮೂಲೆ ನಿಧನ Read More »

ಮಾಜಿ ಗ್ರಾಪಂ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ನಿಧನ

ಪುತ್ತೂರು: ಬಡಗನ್ನೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ (45) ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಶುಕ್ರವಾರ ಮೈಂದನಡ್ಕದಲ್ಲಿ ನಡೆದ ವಾಲಿಬಾಲ್‍ ಪಂದ್ಯಾಟವೊಂದಕ್ಕೆ ತೆರಳಿದ್ದ ಅವರು, ಮನೆಗೆ ಬಂದು ರಕ್ತ ವಾಂತಿ ಮಾಡಿದ್ದರು. ಶನಿವಾರ ಬೆಳಿಗ್ಗೆ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಮೃತಪಟ್ಟಿದ್ದಾರೆ. ಬಡಗನ್ನೂರು ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಒಂದು ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದರು. ಮೃತರು

ಮಾಜಿ ಗ್ರಾಪಂ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ನಿಧನ Read More »

ಹೊಟೇಲ್ ಉದ್ಯಮಿ ರಾಮಣ್ಣ ರೈ ನಿಧನ

ಪುತ್ತೂರು: ಹೊಟೇಲ್ ರಾಮಣ್ಣ ಎಂದೇ ಚಿರಪರಿಚಿತರಾಗಿದ್ದ ಕುಂಬ್ರದ ಹಿರಿಯ ಹೊಟೇಲ್ ಉದ್ಯಮಿ ರಾಮಣ್ಣ ರೈ ಕುಂಬ್ರ (78) ರವರು ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಕುಂಬ್ರದ ಸ್ವಗೃಹದಲ್ಲಿ ನಿಧನರಾದರು. ಕುಂಬ್ರದಲ್ಲಿ ಅನೇಕ ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸಿಕೊಂಡು ಬರುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಹೊಟೇಲ್ ಉದ್ಯಮಿ ರಾಮಣ್ಣ ರೈ ನಿಧನ Read More »

‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನುಭಾಗ್ ನಿಧನ!

ರೂಪಕಲಾ ನಾಟಕ ತಂಡದ ಮೂರು ಮುತ್ತು ಖ್ಯಾತಿಯ ಅಶೋಕ್ ಶಾನುಭಾಗ್ ಅವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು `ಮೂರು ಮುತ್ತು’, `ಅವನಲ್ಲ ಇವನು’, `ಪಾಪ ಪಾಂಡು’, `ಅಳುವುದೋ ನಗುವುದೋ’, `ರಾಮ ಕೃಷ್ಣ ಗೋವಿಂದ’ ಸೇರಿದಂತೆ ಇನ್ನು ಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಿಂದ ಮಿಂಚಿದ್ದರು. ಕೆಲ ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಮೃತರ ಅಂತ್ಯ ಸಂಸ್ಕಾರ ಶನಿವಾರ ಕುಂದಾಪುರದಲ್ಲಿ ನಡೆಯಲಿದೆ.

‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನುಭಾಗ್ ನಿಧನ! Read More »

ರವೀಂದ್ರ ಕಲಾಕ್ಷೇತ್ರದಲ್ಲಿ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ | ಮಧ್ಯಾಹ್ನದ ಬಳಿಕ ಅಂತ್ಯಕ್ರಿಯೆ

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ನಿಧನರಾಗಿರುವ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ 5:30 ಕ್ಕೆ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.  ನಟಿ ಲೀಲಾವತಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಡಿ. 8ರಂದು ಸಂಜೆ ಕೊನೆಯುಸಿರೆಳೆದರು. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ಪಾರ್ಥಿವ

ರವೀಂದ್ರ ಕಲಾಕ್ಷೇತ್ರದಲ್ಲಿ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ | ಮಧ್ಯಾಹ್ನದ ಬಳಿಕ ಅಂತ್ಯಕ್ರಿಯೆ Read More »

ರಮಾನಾಥ ಬೈಲಾಡಿ ನಿಧನ

ಪುತ್ತೂರು: ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಸಿಬ್ಬಂದಿ, ಸಂಪ್ಯದ ಬೈಲಾಡಿ ನಿವಾಸಿ ರಮಾನಾಥ ಬೈಲಾಡಿ (61) ಬುಧವಾರ ವಿಷ ಪದಾರ್ಥ ಸೇವಿಸಿ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾದವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ರಮಾನಾಥ ಬೈಲಾಡಿ ನಿಧನ Read More »

ಮಹಾಲಿಂಗೇಶ್ವರ ದೇವಸ್ಥಾನದ ದಂಡ್ ಶಿಲಾಲ್ ಪರಿಚಾರಕ ನಿಧನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂದರ್ಭ ದಂಡ್ ಶಿಲಾಲ್ ಪರಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆರೆಮೂಲೆ ನಿವಾಸಿ ಸಂಪತ್ ಪೂಜಾರಿ (31) ಬುಧವಾರ ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪುತ್ತೂರು ಆಸ್ಪತ್ರೆಗೆ ದಾಖಲಾಗಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಮೃತರು ತಂದೆ, ತಾಯಿ, ಸಹೋದರನ್ನು ಅಗಲಿದ್ದಾರೆ.

ಮಹಾಲಿಂಗೇಶ್ವರ ದೇವಸ್ಥಾನದ ದಂಡ್ ಶಿಲಾಲ್ ಪರಿಚಾರಕ ನಿಧನ Read More »

error: Content is protected !!
Scroll to Top