ನಿಧನ

ಪ್ರಖ್ಯಾತ ಹೃದ್ರೋಗ ತಜ್ಞ ಡಾ. ಕೆ. ಎಂ. ಚೆರಿಯನ್ ನಿಧನ

ಬೆಂಗಳೂರು : ಖ್ಯಾತ ಹೃದ್ರೋಗ ತಜ್ಞ, ಹೆಸರುವಾಸಿಯಾದ ಪ್ರಖ್ಯಾತ ಶಸ್ತ್ರ ಚಿಕಿತ್ಸಕ ಡಾ. ಕೆ. ಎಂ. ಚೆರಿಯನ್ ಬೆಂಗಳೂರಿನಲ್ಲಿ ಭಾನುವಾರ ನಿಧನರಾಗಿದ್ದಾರೆ. ಡಾ. ಚೆರಿಯನ್ ಫ್ರಾಂಟಿಯರ್ ಲೈಫ್ಲೈನ್ ಮತ್ತು ಡಾ.ಚೆರಿಯನ್ ಹಾರ್ಟ್ ಫೌಂಡೇಶನ್ ನ್ನು ಸ್ಥಾಪಿಸಿದರು. ಅವರು 1991 ರಲ್ಲಿ ಪದ್ಮಶ್ರೀ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದಾರೆ. 1975 ರಲ್ಲಿ ಚೆನ್ನೈನ ಪೆರಂಬೂರಿನ ದಕ್ಷಿಣ ರೈಲ್ವೆ ಪ್ರಧಾನ ಕಚೇರಿ ಆಸ್ಪತ್ರೆಯಲ್ಲಿ ಭಾರತದ ಮೊದಲ ಯಶಸ್ವಿ ಪರಿಧಮನಿ ಅಪಧಮನಿ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಿದ್ದರು. ಮೊದಲ ಹೃದಯ-ಶ್ವಾಸಕೋಶ ಕಸಿ, ಮೊದಲ […]

ಪ್ರಖ್ಯಾತ ಹೃದ್ರೋಗ ತಜ್ಞ ಡಾ. ಕೆ. ಎಂ. ಚೆರಿಯನ್ ನಿಧನ Read More »

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

ಮಂಗಳೂರು : ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಹರೇಕಳ ಹಾಜಬ್ಬ ಅವರನ್ನು

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ Read More »

ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ  ವರದಿಗಾರ ಗುರುವಪ್ಪ ಬಾಳೆಪುಣಿ  ನಿಧನ

ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ  ವರದಿಗಾರ ಗುರುವಪ್ಪ ಬಾಳೆಪುಣಿ  (62)  ಅಲ್ಪಕಾಲದ ಅಸೌಖ್ಯದಿಂದ ಇಂದು ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ   ಕಾರ್ಯ ನಿರ್ವಹಿಸಿದ್ದರು. ಹರೇಕಳ ಹಾಜಬ್ಬ ಅವರನ್ನು ಮೊದಲ

ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ  ವರದಿಗಾರ ಗುರುವಪ್ಪ ಬಾಳೆಪುಣಿ  ನಿಧನ Read More »

ಬಾವಿಗೆ ಹಾರಿ ಯುವಕ  ಆತ್ಮಹತ್ಯೆ

ಕಾರ್ಕಳ : ಕಾರ್ಕಳದ ಕಸಬಾ ಗ್ರಾಮದಲ್ಲಿ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಸಬಾ ಗ್ರಾಮದ ಮೀನಗುಂಡಿ ಕಂಪೌಂಡ್‌ನ ಕೆ. ವೆಂಕಟೇಶ ಹೆಗ್ಡೆ (22) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತ ಕೆ. ವೆಂಕಟೇಶ ಹೆಗ್ಡೆ ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸ ಮುಂದುವರೆಸಲು ಕಷ್ಟವಾಗುತ್ತಿದೆ ಎಂದು ತಂದೆಯ ಬಳಿ ಹೇಳಿಕೊಂಡಿದ್ದನು ಎನ್ನಲಾಗಿದೆ. ಸುಮಾರು 10 ದಿನಗಳಿಂದ ಮೌನವಾಗಿದ್ದ ಈತ ಇದೇ ಕಾರಣದಿಂದ ಮನನೊಂದು ಮನೆಯ ಹಿಂಬದಿಯ

ಬಾವಿಗೆ ಹಾರಿ ಯುವಕ  ಆತ್ಮಹತ್ಯೆ Read More »

ಬೈಕ್‍ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬಾಲಕ | ಸ್ಥಳದಲ್ಲೆ ಮೃತ್ಯು

ಕಡಬ : ಬೈಕ್ ಸವಾರನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ. ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎನ್ನಲಾಗಿದೆ. ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ  ಗಂಭೀರ

ಬೈಕ್‍ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬಾಲಕ | ಸ್ಥಳದಲ್ಲೆ ಮೃತ್ಯು Read More »

ಮೆಸ್ಕಾಂ ಉದ್ಯೋಗಿ ಅಶ್ರಫ್‍ ನಿಧನ

ಪುತ್ತೂರು: ಮೆಸ್ಕಾಂ ಉದ್ಯೋಗಿ, ಮಿಷನ್ ಗುಡ್ಡ ನಿವಾಸಿ ಆಶ್ರಫ್ ಇಂದು ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು. ಕೆಲ ಸಮಯದಿಂದ ಕಿಡ್ನಿ ವೈಫಲ್ಯದಿಂದ ಅವರು ಬಳಲುತ್ತಿದ್ದರು ಎಂದು ಹೇಳಲಾಗಿದೆ. ದಿ.ಅದ್ರಾಮ ರವರ ಪುತ್ರರಾಗಿದ್ದ ಅವರು ಚಿಂಙಾಣಿ ನಿವಾಸಿಯಾಗಿದ್ದು, ಬಳಿಕ ಪೋಳ್ಯ ಮಸೀದಿ ಬಳಿ ವಾಸವಿದ್ದು ಇದೀಗ ಉರ್ಲಾಂಡಿ ಯಲ್ಲಿರುವ ಪ್ಲಾಟ್ ಒಂದರಲ್ಲಿ ವಾಸವಾಗಿದ್ದರು. ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

ಮೆಸ್ಕಾಂ ಉದ್ಯೋಗಿ ಅಶ್ರಫ್‍ ನಿಧನ Read More »

ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದ ಯುವಕ| ಯುವಕ ಮೃತ್ಯು

ಮಂಗಳೂರು : ಸ್ನೇಹಿತರೊಂದಿಗೆ  ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಕುಸಿದು ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಫಳೀರ್‌ನಲ್ಲಿ ಜನವರಿ 15 ರಂದು ನಡೆದಿದೆ. ಮೃತಪಟ್ಟ ಯುವಕ ಅಟ್ಟಾವರ್ ಐವರಿ ಟವರ್ ನಿವಾಸಿಯಾಗಿದ್ದ ಮತ್ತು ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಎಂದು ತಿಳಿದು ಬಂದಿದೆ. ಸ್ನೇಹಿತರೊಂದಿಗೆ ಆಡುತ್ತಿದ್ದ ವೇಳೆ  ಬ್ಯಾಡ್ಮಿಂಟನ್  ಆಟಗಾರ ಶಹೀಮ್  ಏಕಾಏಕಿ ಕೋರ್ಟ್ ಮೇಲೆ ಕುಸಿದು ಬಿದ್ದಿದ್ದು ಅವರನ್ನು  ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅದೇ ಸಮಯದಲ್ಲಿ ಶಹೀಮ್ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಶಹೀಮ್

ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದ ಯುವಕ| ಯುವಕ ಮೃತ್ಯು Read More »

ಕನ್ನಡ ಚಿತ್ರರಂಗ, ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಕೆಲ ದಿನಗಳ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿದ್ದು,ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು  ನಿಧನ ಹೊಂದಿದ್ದಾರೆ ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು

ಕನ್ನಡ ಚಿತ್ರರಂಗ, ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ನಿಧನ Read More »

ಬೈಕ್‍ ಅಪಘಾತದಲ್ಲಿ ಬಾಲಕಿ ಮೃತ್ಯು

ಬಂಟ್ವಾಳ : ಬೈಕ್ – ಬೈಕ್ ಗಳ ನಡುವೆ ಅಪಘಾತ ಸಂಭವಿಸಿರುವ   ಘಟನೆ ಇಂದು ರಾತ್ರಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆಯಲ್ಲಿ ನಡೆದಿದೆ.           ಘಟನೆಯಿಂದ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃತಪಟ್ಟ ಬಾಲಕಿ. ಬೈಕ್ ಚಾಲಕ ಬಾಲಕಿಯ ತಂದೆ ಅಬ್ದುಲ್ ರಹಮಾನಿಗೆ ಗಾಯಗಳಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ

ಬೈಕ್‍ ಅಪಘಾತದಲ್ಲಿ ಬಾಲಕಿ ಮೃತ್ಯು Read More »

ನೃತ್ಯ ಗುರು ಕಮಲಾಕ್ಷ ಆಚಾರ್ ನಿಧನ

ಬೆಳ್ತಂಗಡಿ: ನೃತ್ಯ ಗುರು ಕಮಲಾಕ್ಷ ಆಚಾರ್ ( 77)ಮಂಗಳೂರಿನಲ್ಲಿ ವಯೋ ಸಹಜ ಅಸೌಖ್ಯದಿಂದ ಮಂಗಳವಾರ ನಿಧನ ಹೊಂದಿದರು. 2022 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು ತಾಲೂಕಿನ ಪ್ರಥಮ ಭರತನಾಟ್ಯ ಗುರುವಾಗಿದ್ದರು. ಬೆಳ್ತಂಗಡಿಯಲ್ಲಿ ನೃತ್ಯ ನಿಕೇತನ ಸಂಸ್ಥೆಯನ್ನು ಹುಟ್ಟು ಹಾಕಿ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯ ತರಬೇತಿ ನೀಡಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಮುಖ್ಯ ಶಿಕ್ಷಕರಾಗಿ,ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.1986 ರಿಂದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನೃತ್ಯ ಪರೀಕ್ಷಕರಾಗಿ ಸಲಹೆಗಾರರಾಗಿ

ನೃತ್ಯ ಗುರು ಕಮಲಾಕ್ಷ ಆಚಾರ್ ನಿಧನ Read More »

error: Content is protected !!
Scroll to Top