ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಹಿದಾಯತ್ | ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ಸೌದಿ ಅರೆಬಿಯಾದಿಂದ ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿ ಸಂಜಯನಗರ ನಿವಾಸಿ ಹಿದಾಯತ್ ಅವರು ಸೌದಿ ಅರೇಬಿಯಾದಲ್ಲಿ ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿ ಜಿದ್ದಾದಿಂದ ರಾತ್ರಿ 10:30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ತಲುಪುವವರಿದ್ದರು. ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ […]