ನಿಧನ

ಮಂಗಳೂರಿನ ಜನಪ್ರಿಯ ರೀಲ್ಸ್ ರಾಣಿ ಆಶಾ ಪಂಡಿತ್ ನಿಧನ

ಮಂಗಳೂರು: ತಮ್ಮ ಬೈಗುಳಗಳ‌ ಮೂಲಕವೇ ಸಾಮಾಜಿಕ ಜಾಲತಾಣಗಳಲ್ಲಿ ಹಾಸ್ಯ ಚಟಾಕಿ ಹಾರಿಸಿ ಜನರಿಗೆ ಮನರಂಜನೆ ನೀಡುತ್ತಿದ್ದ ಮಂಗಳೂರಿನ ಪ್ರಸಿದ್ಧ ರೀಲ್ಸ್ ರಾಣಿ ಆಶಾ ಪಂಡಿತ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಳಪೆ ಸಮೀಪ ಸಣ್ಣ ಕ್ಯಾಂಟಿನ್ ನಡೆಸಿಕೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದ ಅವರು ಜನರ ಮನದಲ್ಲಿ ಆಶಾಕ್ಕ ಎಂದೇ ಫೇಮಸ್ ಆಗಿದ್ದರು. ತಮ್ಮ ಕಾಮಿಡಿ ರೀಲ್ಸ್‌ಗಳ ಮೂಲಕವೇ ಸಾವಿರಾರು ಅಭಿಮಾನಿಗಳನ್ನು ಸಂಪಾದಿಸಿದ್ದರು. ನಿನ್ನೆ ರಾತ್ರಿ ವೇಳೆ ಅವರಿಗೆ ವಾಂತಿಯಾಗಿತ್ತು. ಇಂದು ಬೆಳಗ್ಗೆ ಹೃದಯಾಘಾತಕ್ಕೆ ತುತ್ತಾಗಿ ಮನೆಯ ಅಂಗಳದಲ್ಲಿ ಬಿದ್ದಿದ್ದರು. […]

ಮಂಗಳೂರಿನ ಜನಪ್ರಿಯ ರೀಲ್ಸ್ ರಾಣಿ ಆಶಾ ಪಂಡಿತ್ ನಿಧನ Read More »

ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ಪಿಲಿಗುಂಡದಲ್ಲಿ ನಡೆದಿದೆ. ಮೃತರನ್ನು ಗೋಪಾಲ ನಾಯ್ಕ (55) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮಲಗಿದ್ದ ಇವರು ಬೆಳಗ್ಗೆ ಮನೆ ಮಂದಿ ನೋಡುವ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇವರು ಪುತ್ತೂರು ಬಸ್ಸು ನಿಲ್ದಾಣದ ಸಮೀಪ ರಿಕ್ಷಾ ಬಾಡಿಗೆ ಮಾಡುತ್ತಿದ್ದರು. ಪುತ್ತೂರು ಸಹಕಾರಿ ಸಂಘದಲ್ಲಿ ರಿಕ್ಷಾದ ಸಾಲದ ಕಂತು, ರಿಕ್ಷಾದ ವಿಮೆ ಪಾವತಿ ಸಹ ಬಾಕಿ ಇತ್ತು. ಈ ಹಿನ್ನೆಲೆ

ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಧನುಪೂಜೆಗೆಂದು ಹೋಗಿದ್ದ ಬಾಲಕ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು ಗೊತ್ತಾ?

ಬೆಳ್ತಂಗಡಿ: ದೇವಸ್ಥಾನಕ್ಕೆ ಧನು ಪೂಜೆಗೆಂದು ಹೊರಟು ತೋಟದ ಕೆರೆಯಲ್ಲಿ ಶವ ಪತ್ತೆಯಾದ ಸಂಭೋಳ್ಯದ ಸುಮಂತ್ (16) ಎಂಬ ಬಾಲಕನ ಮರಣೋತ್ತರ ಪರೀಕ್ಷೆ ನಡೆದಿದ್ದು, ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಅಂಶ ಬಯಲಾಗಿದೆ. ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ರೀತಿಯ ಆಯುಧದಿಂದ ಬಲವಾದ ಪೆಟ್ಟು ಬಿದ್ದಿದೆ. ಆತ ಅರೆಪ್ರಜ್ಞಾವಸ್ಥೆಯಲ್ಲಿ ಕೆರೆಗೆ ಬಿದ್ದಿರುವ ಸಾಧ್ಯತೆ ಇದ್ದು, ಆತನ ಶ್ವಾಸಕೋಶದಲ್ಲಿ ನೀರು ತುಂಬಿದ್ದ ಅಂಶ ಸಹ ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಬಾಲಕನನ್ನು ಯಾರೋ

ಧನುಪೂಜೆಗೆಂದು ಹೋಗಿದ್ದ ಬಾಲಕ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು ಗೊತ್ತಾ? Read More »

ಧನುಪೂಜೆಗೆ ಹೋಗಿದ್ದ ಬಾಲಕ ನಾಪತ್ತೆ ಪ್ರಕರಣ: ಮೃತ ದೇಹ ಕೆರೆಯಲ್ಲಿ ಪತ್ತೆ

ಮಡಂತ್ಯಾರ್: ಬೆಳಗ್ಗೆ ಧನುಪೂಜೆಗೆಂದು ಮನೆಯಿಂದ ದೇವಸ್ಥಾನಕ್ಕೆ ಹೋದ ಬಾಲಕ ನಾಪತ್ತೆ ಪ್ರಕರಣ ದುಃಖಾಂತ್ಯವಾಗಿದ್ದು, ಬಾಲಕನ ಮೃತ ದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಎಂದಿನಂತೆ ಗೆಳೆಯರ ಜೊತೆಗೆ ಧನುಪೂಜೆಗೆ ಹೋಗುವುದಾಗಿ ಹೇಳಿ ಹೋಗಿದ್ದ ಸಂಬೋಳ್ಯದ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ 9 ನೇ ತರಗತಿ ವಿದ್ಯಾರ್ಥಿ ಸುಮಂತ್ (16) ಮೃತ ದುರ್ದೈವಿ. ಎಂದಿನಂತೆ ಆತನ ಗೆಳೆಯರು ಧನುಪೂಜೆಗೆ ಹೋಗಲು ಆತನಿಗಾಗಿ ಕಾದಿದ್ದು, ಆತ ಬರದೇ ಇದ್ದಾಗ ಅವರು ಪೂಜೆಗೆ ತೆರಳಿದ್ದಾರೆ. ಪೂಜೆ ಯಿಂದ. ಮರಳಿ ಸುಮಂತ್ ಮನೆಗೆ

ಧನುಪೂಜೆಗೆ ಹೋಗಿದ್ದ ಬಾಲಕ ನಾಪತ್ತೆ ಪ್ರಕರಣ: ಮೃತ ದೇಹ ಕೆರೆಯಲ್ಲಿ ಪತ್ತೆ Read More »

ಮಹಿಳೆಗೆ ಲೈಂಗಿಕ ಕಿರುಕುಳ, ಲಕ್ಷಾಂತರ ರೂ. ಪಂಗನಾಮ: ಆರೋಪಿ ಹನೀಫ್ ಬಂಧನ

ಬೆಂಗಳೂರು: ಪತಿಯಿಂದ ಮೋಸಕ್ಕೊಳಗಾದ ಮಹಿಳೆಗೆ ನ್ಯಾಯ ಕೊಡಿಸುವುದಾಗಿ ಹೇಳಿ ಆಕೆ ಯಿಂದ 16 ಲಕ್ಷ ರೂ. ದೋಚಿದ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಕರುನಾಡು ಎಂಬ ಖಾಸಗಿ ಚಾನಲ್‌ನ ಎಂಡಿಯನ್ನು ಡಿಸಿಆರ್‌ಇ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹನೀಫ್ ಎಂದು ಗುರುತಿಸಲಾಗಿದೆ. ಬಿಟಿಎಂ ಲೇಔಟ್ ನಿವಾಸಿ ಮಹಿಳೆಯಿಂದ 16 ಲಕ್ಷ ರೂ. ಪಡೆದು ವಂಚಿಸಿದಲ್ಲದೆ, ಆಕೆಯ ಜಾತಿ ಬಗ್ಗೆ ಅಸಭ್ಯವಾಗಿ ನಿಂದಿಸಿದ್ದ. ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಸಿ ಎಸ್ಟಿ

ಮಹಿಳೆಗೆ ಲೈಂಗಿಕ ಕಿರುಕುಳ, ಲಕ್ಷಾಂತರ ರೂ. ಪಂಗನಾಮ: ಆರೋಪಿ ಹನೀಫ್ ಬಂಧನ Read More »

ಶಬರಿಮಲೆಯಲ್ಲಿ ಹೃದಯಾಘಾತದಿಂದ ಉಳ್ಳಾಲದ ಉದ್ಯಮಿ ಸಾವು

ಎರಿಮಲೆ ಬೆಟ್ಟ ಏರುತ್ತಿದ್ದಾಗ ಹೃದಯಾಘಾತವಾಗಿ ಕುಸಿದು ಬಿದ್ದ ಉದ್ಯಮಿ ಮಂಗಳೂರು: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲದ ಅಯ್ಯಪ್ಪ ವ್ರತಧಾರಿಯೋರ್ವರು ಕೇರಳದ ಎರಿಮಲೆ ಬೆಟ್ಟ ಏರುತ್ತಿದ್ದಾಗ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತ ವ್ಯಕ್ತಿ. ಚಂದ್ರಹಾಸ್ ಅವರು ಅಯ್ಯಪ್ಪ ವ್ರತಾಧಾರಿಗಳ ಜೊತೆ ಶನಿವಾರ ಅರ್ಕುಳ ತುಪ್ಪೆಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಗ್ಗೆ ಚಂದ್ರಹಾಸ್ ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ

ಶಬರಿಮಲೆಯಲ್ಲಿ ಹೃದಯಾಘಾತದಿಂದ ಉಳ್ಳಾಲದ ಉದ್ಯಮಿ ಸಾವು Read More »

ಇರಾನ್‌ನಲ್ಲಿ ನಾಗರಿಕ ದಂಗೆ : 200ಕ್ಕೂ ಹೆಚ್ಚು ಮಂದಿ ಸಾವು

ಪ್ರತಿಭಟನೆಯನ್ನು ನಿರ್ದಯವಾಗಿ ದಮನಿಸುತ್ತಿರುವ ಇರಾನ್‌ ಸರ್ಕಾರ ಟೆಹ್ರಾನ್‌: ಇರಾನ್‌ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ 13 ದಿನಕ್ಕೆ ಕಾಲಿಟ್ಟಿದ್ದು, ಹಿಂಸಾಚಾರ ಮತ್ತಷ್ಟು ಹೆಚ್ಚಿದೆ. ಸರ್ಕಾರದ ಸೂಚನೆ ಮೇರೆಗೆ ಭದ್ರತಾ ಪಡೆಗಳು ಹಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ವೈದ್ಯರ ಮಾಹಿತಿ ಪ್ರಕಾರ, ರಾಜಧಾನಿ ಟೆಹ್ರಾನ್‌ನಲ್ಲಿರುವ 6 ಆಸ್ಪತ್ರೆಗಳಲ್ಲಿ ಕನಿಷ್ಠ 217 ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಚ್ಚಿನವರು ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಟೆಹ್ರಾನ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವ

ಇರಾನ್‌ನಲ್ಲಿ ನಾಗರಿಕ ದಂಗೆ : 200ಕ್ಕೂ ಹೆಚ್ಚು ಮಂದಿ ಸಾವು Read More »

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್‌ ನಿಧನ

ಪಶ್ಚಿಮ ಘಟ್ಟ ಸಂರಕ್ಷಣೆಗಾಗಿ ಅವಿರತ ಶ್ರಮಿಸಿದ್ದ ವಿಜ್ಞಾನಿ ಪುಣೆ : ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ, ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ಬುಧವಾರ ರಾತ್ರಿ ಪುಣೆಯಲ್ಲಿ ನಿಧನರಾದರು. ಪಶ್ಚಿಮ ಘಟ್ಟಗಳಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳನ್ನು ನಿರ್ಮಿಸುವುದು ಹಾನಿಕಾರಕ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಕೆ ನೀಡುತ್ತಲೇ ಇದ್ದರು. ಪಶ್ಚಿಮ ಘಟ್ಟ ಸಂರಕ್ಷಣೆಗೆ ಅವರು ಆಳವಾದ ಅಧ್ಯಯನ ಮಾಡಿ ವರದಿ ಸಲ್ಲಿಸಿದ್ದರು. ಮಾಧವ ಗಾಡ್ಗೀಳ್ ಪ್ರಧಾನ ಮಂತ್ರಿಗಳ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್‌ ನಿಧನ Read More »

KSRTCಯ ನಿವೃತ್ತ ನೌಕರ ಹೃದಯಾಘಾತದಿಂದ ನಿಧನ

ಪುತ್ತೂರು: KSRTC ಯ ನಿವೃತ್ತ ನೌಕರ ಪರಮೇಶ್ವರ ನಾಯ್ಕ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿ. ದ ಮಂಗಳೂರು ವಿಭಾಗದಲ್ಲಿ 20 ವರ್ಷಗಳ ಕಾಲ ನಿರ್ವಾಹಕರಾಗಿ, ಪುತ್ತೂರು ಬಸ್ಸು ನಿಲ್ದಾಣದಲ್ಲಿ 9 ವರ್ಷಗಳ ಕಾಲ ಸೇವೆ ಸಲ್ಲಿಸಿ, ಆ ನಂತರ ಪುತ್ತೂರು ಘಟಕದ ಸಹಾಯಕ ಸಂಚಾರ ನಿಯಂತ್ರಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಸಂಸ್ಥೆಯಲ್ಲಿ ಸುಮಾರು 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಇವರು 2023 ರ ಮಾರ್ಚ್‌ನಲ್ಲಿ ವೃತ್ತಿಯಿಂದ ನಿವೃತ್ತರಾಗಿದ್ದರು. ಮೃತರು ಪತ್ನಿ,

KSRTCಯ ನಿವೃತ್ತ ನೌಕರ ಹೃದಯಾಘಾತದಿಂದ ನಿಧನ Read More »

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಹೊಸಕೋಟೆ: ವ್ಯಕ್ತಿಯ ಮೃತ ದೇಹ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ತಾಲೂಕಿನ ಮೈಲಾಪುರ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಮಂಜುನಾಥ್ (44) ಎಂಬವರೇ ಮೃತ ವ್ಯಕ್ತಿ. ಮಹಿಳೆಯೊಬ್ಬರು ನಾಪತ್ತೆಯಾದ ಪ್ರಕರಣದಲ್ಲಿ ಪೊಲೀಸರು ಇವರಿಗೆ ಕಿರುಕುಳ ನೀಡಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಅವರ ಶವ ತೋಟದ ಸಮೀಪ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಶ್ವಿನಿ ಎಂಬ ಮಹಿಳೆ ತೋಟದ ಕೆಲಸಕ್ಕೆ ಬರುತ್ತಿದ್ದು, ಅವರು ಕಳೆದ ಎಂಟು ದಿನಗಳಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಪೊಲೀಸರು ಮಂಜುನಾಥ ಅವರನ್ನು ವಿಚಾರಣೆ ನಡೆಸಿದ್ದರು. ಮಹಿಳೆಯ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

error: Content is protected !!
Scroll to Top