ನಿಧನ

ಎಸ್‌.ಎಂ ಕೃಷ್ಣ ನಿಧನಕ್ಕೆ ರಾಜ್ಯದಲ್ಲಿ 3 ದಿನ ಶೋಕಾಚರಣೆ, ಬುಧವಾರ ರಜೆ

ಸರಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಗೌರವ ಸಲ್ಲಿಕೆ ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​.ಎಂ ಕೃಷ್ಣ ನಿಧನಕ್ಕೆ ಸರ್ಕಾರ ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ ಘೋಷಣೆ ಮಾಡಿದೆ. ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್​ 10ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು […]

ಎಸ್‌.ಎಂ ಕೃಷ್ಣ ನಿಧನಕ್ಕೆ ರಾಜ್ಯದಲ್ಲಿ 3 ದಿನ ಶೋಕಾಚರಣೆ, ಬುಧವಾರ ರಜೆ Read More »

ಕೀಟನಾಶಕ ಸೇರಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉಪ್ಪಿನಂಗಡಿ: ಕೀಟನಾಶಕ ಸೇವಿಸಿದ ವಯೋವೃದ್ಧರೋರ್ವರಿಗೆ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಪಿಲಿಕೂಡೇಲುನಲ್ಲಿ ನಡೆದಿದೆ. ವಯೋಸಹಜ ಕಾಯಿಲೆ ಮತ್ತು ಮರೆಗುಳಿತನದಿಂದ ಬಳಲುತ್ತಿದ್ದ ಪದ್ಮನಾಭ ಭಟ್  ಡಿ.4 ರಂದು ಮನೆಯಲ್ಲಿ ಮಗನಿಲ್ಲದ ವೇಳೆ , ತೋಟಕ್ಕೆ ಸಿಂಪಡಿಸಿ ಉಳಿದಿದ್ದ ಕ್ರಿಮಿನಾಶಕವನ್ನು, ಔಷಧಿ ಎಂದು ತಿಳಿದು ಸೇವಿಸಿದ ಕಾರಣ ಅಸ್ವಸ್ಥಕ್ಕೆ ತುತ್ತಾಗಿದ್ದಾರೆ. ಅವರನ್ನು ಕೂಡಲೆ ಆಸ್ಪತ್ರೆಗೆ ಕರೆದೊಯಿದರು ಚಿಕಿತ್ಸೆಗೆ ಸ್ಪಂದಿಸದೆ ಅದಿತ್ಯವಾರದಂದು ನಿಧನರಾದರು ಎಂದು ಅವರ ಮಗ ಕೇಶವ ಪ್ರಸಾದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಕೀಟನಾಶಕ ಸೇರಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ವಿಟ್ಲದ ತೀರ್ಥಶ್ರೀ ಸಾವಿನ ಪ್ರಕರಣದಲ್ಲಿ ಬಿಗ್‍ ಟ್ವಿಸ್ಟ್ | ಮಾಹಿತಿ ಕಲೆಹಾಕುವಲ್ಲಿ ವಿಟ್ಲ ಪೋಲಿಸರ ಹರಸಾಹಸ

ವಿಟ್ಲ : ಬಂಟ್ವಾಳ ತಾಲೂಕಿನ ಪೆರಾಜೆಯ  ಬಾಲಕಿ ತೀರ್ಥಶ್ರೀ (8) ಜೋಕಾಲಿಯಲ್ಲಿ ಸಿಲುಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಭಂದಿಸಿದಂತೆ ವಿಟ್ಲ ಪೊಲೀಸರು ತನಿಖೆಯನ್ನು ನಡೆಸಿದ್ದಾರೆ. ತನಿಖೆಯ ವರದಿ ಪ್ರಕಾರ ಅದೊಂದು ಆತ್ಮಹತ್ಯೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆರಂಭದಲ್ಲಿ ಆಶೆ ಜೋಕಾಲಿಯ ಹಗ್ಗ ಸಿಲುಕಿ ಮೃತಪಟ್ಟಿರಬಹುದು ಎಂದು ವರದಿಯಾಗಿತ್ತು. ಶೇರಾ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿನಿ ಮಡಲ ನಿವಾಸಿ ಕಿಶೋರ್ ರವರ ಪುತ್ರಿ ತೀರ್ಥಶ್ರೀ ಡಿ 8ರ ಸಂಜೆ 5 ಗಂಟೆಯಿಂದ 7.30ರ ಅವಧಿಯಲ್ಲಿ ಮೃತಪಟ್ಟಿದ್ದಾಳೆ. ಬಟ್ಟೆ ಹಾಕಲು ಹಾಕಿದ ಸ್ಟೀಲ್

ವಿಟ್ಲದ ತೀರ್ಥಶ್ರೀ ಸಾವಿನ ಪ್ರಕರಣದಲ್ಲಿ ಬಿಗ್‍ ಟ್ವಿಸ್ಟ್ | ಮಾಹಿತಿ ಕಲೆಹಾಕುವಲ್ಲಿ ವಿಟ್ಲ ಪೋಲಿಸರ ಹರಸಾಹಸ Read More »

ಹೂವಿನ ವ್ಯಾಪರಿ ಕೆ. ಸೀತಾರಾಮ ಗೌಡ ನಿಧನ

ಪುತ್ತೂರು: ಪುತ್ತೂರು ವಿನಾಯಕ ಪ್ಲವರ್ಸ್ ಮಾಲಕ ಕೆ. ಸೀತಾರಾಮ ಗೌಡ (52 , ಡಿ. 8ರಂದು ಬೆಳಿಗ್ಗೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.   ದರ್ಬೆ ಪರ್ಲಡ್ಕ ನಿವಾಸಿಯಾಗಿದ್ದು, ಸುಮಾರು 30 ವರ್ಷಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯ ದ್ವಾರದಲ್ಲಿ ಹೂವಿನ ಅಂಗಡಿಯಿಟ್ಟು ವ್ಯಾಪಾರ ನಡೆಸುತ್ತಿದ್ದರು. ಮೃತರು ಪತ್ನಿ ಹೇಮಾವತಿ, ಮಕ್ಕಳಾದ ಅಂಕಿತಾ, ಯಕ್ಷಿತಾ ಅವರನ್ನು ಅಗಲಿದ್ದಾರೆ.

ಹೂವಿನ ವ್ಯಾಪರಿ ಕೆ. ಸೀತಾರಾಮ ಗೌಡ ನಿಧನ Read More »

ಜೋಕಾಲಿಯ ಹಗ್ಗ ಸಿಲುಕಿ ಬಾಲಕಿ ಮೃತ್ಯು

ವಿಟ್ಲ : ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ (8) ಜೋಕಾಲಿಗೆ ಬಲಿಯಾದ ಬಾಲಕಿ, ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿದ ದುರಂತ ಸಂಭವಿಸಿದೆ

ಜೋಕಾಲಿಯ ಹಗ್ಗ ಸಿಲುಕಿ ಬಾಲಕಿ ಮೃತ್ಯು Read More »

ಜೆಸಿಐ ತರಬೇತುದಾರ ಪ್ರದೀಪ್‍ ಬಾಕಿಲ ನಿಧನ

ಪುತ್ತೂರು: ಜೆಸಿಐ ನ ತರಬೇತುದಾರ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ (41) ನಿಧನರಾಗಿದ್ದಾರೆ. ಆಲಂಕಾರು ನಿವಾಸಿಯಾಗಿದ್ದ ಪ್ರದೀಪ್ ರವರ ಮೃತದೇಹ ಮನೆಯ ಅಂಗಳದಲ್ಲಿರುವ ಶೆಡ್ ನಲ್ಲಿ ಪತ್ತೆಯಾಗಿದೆ. ಹೃದಯಾಘಾತ ಸಂಭವಿಸಿರಬಹುದು ಎಂದು ಹೇಳಲಾಗಿತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಜೆಸಿಐ ತರಬೇತುದಾರ ಪ್ರದೀಪ್‍ ಬಾಕಿಲ ನಿಧನ Read More »

ಪಿಕಪ್ ಚಾಲಕ ಲೋಕೇಶ್‍ ಕಲ್ಕಾರ್ ನಿಧನ

ಪುತ್ತೂರು: ಶಾಂತಿಗೋಡು ಗ್ರಾಮದ ಕಲ್ಕಾರ್ ನಿವಾಸಿ ಲೋಕೇಶ್‍ ಕಲ್ಕಾರ್ ಬುಧವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ಸೀತಾ-ರಾಮಣ್ಣ ಗೌಡ ದಂಪತಿ ಪುತ್ರರಾಗಿರುವ ಲೋಕೇಶ್‍ ಕಲ್ಕಾರ್ ಸ್ವಂತ ಪಿಕಪ್ ಹೊಂದಿದ್ದು, ಚಾಲಕರಾಗಿದ್ದರು. ಮೃತರು ತಂದೆ, ತಾಯಿ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪಿಕಪ್ ಚಾಲಕ ಲೋಕೇಶ್‍ ಕಲ್ಕಾರ್ ನಿಧನ Read More »

ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಮಂಗಳೂರು: ಪತ್ರಕರ್ತ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪಿತ್ಥಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗಿದೆ. ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು

ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ Read More »

ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಪುತ್ತೂರು: ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಚಾ (17) ಮೃತಪಟ್ಟವರು. ಮೃತರು ತಂದೆ ಪುತ್ತೂರು ಕಮ್ಯುನಿಟಿ ಸೆಂಟರ್ ಸ್ಥಾಪಕ ಹನೀಫ್ ಪುತ್ತೂರು, ತಾಯಿ ಹಾಗು ಕುಟುಂಬಸ್ಥರನ್ನು ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ.

ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು Read More »

ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರಿನ ವ್ಯಕ್ತಿ ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರಿನ ಲಾಡ್ಜ್ ಒಂದರಲ್ಲಿ ಬೆಂಗಳೂರಿನ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ನಾಗಭೂಷಣ್‍ (65) ಮೃತಪಟ್ಟವರು. ಪ್ರತಿಷ್ಠಿತ ಕಂಪನಿಗಳ ಬ್ಯಾಗ್ ಡೀಲರ್ ಆಗಿದ್ದ ನಾಗಭೂಷಣ್‍ ಉದ್ಯೋಗ ನಿಮಿತ್ತ ಪುತ್ತೂರಿಗೆ ಬಂದಿದ್ದು, ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿದ್ದು ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರಿನ ವ್ಯಕ್ತಿ ಹೃದಯಾಘಾತದಿಂದ ನಿಧನ Read More »

error: Content is protected !!
Scroll to Top