ಶೈಕ್ಷಣಿಕ

ಪ್ರೇರಣಾ ಸಂಸ್ಥೆಗೆ ಕಚೇರಿ ಸಿಬ್ಬಂದಿ ಬೇಕಾಗಿದ್ದಾರೆ

ಪುತ್ತೂರು: ಏಳ್ಮುಡಿಯ ಪ್ರಭು ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಪ್ರೇರಣಾ ಸಂಸ್ಥೆಯಲ್ಲಿ ಖಾಲಿ ಇರುವ ಕಚೇರಿ ಸಿಬ್ಬಂದಿ ಹುದ್ದೆಗೆ ಪದವಿ ವಿದ್ಯಾರ್ಹತೆ ಹೊಂದಿರುವ, ಅಕೌಂಟಿಂಗ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇರುವ ಕಂಪ್ಯೂಟರ್ ಬಲ್ಲ, ಕನ್ನಡ ಟೈಪಿಂಗ್ ತಿಳಿದಿರುವ ಅಭ್ಯರ್ಥಿ ಬೇಕಾಗಿದ್ದಾರೆ. ಆಸಕ್ತರು info@myprerana.in ಇ ಮೇಲ್ ಐಡಿ‌ಗೆ ತಮ್ಮ ಬಯೋಡಟಾ ಕಳುಹಿಸಬಹುದಾಗಿದೆ‌. ಹೆಚ್ಚಿನ ಮಾಹಿತಿಗೆ:‪+918904877721‬, +917204977721‬ ನಂಬರ್ ಗೆ ಸಂಪರ್ಕಿಸಬಹುದು

ಪ್ರೇರಣಾ ಸಂಸ್ಥೆಗೆ ಕಚೇರಿ ಸಿಬ್ಬಂದಿ ಬೇಕಾಗಿದ್ದಾರೆ Read More »

ಪುತ್ತೂರು ಪೊಲೀಸ್ ಇಲಾಖೆ ನೇತೃತ್ವದಲ್ಲಿ ಇಂಡಿಪೆಂಡೆನ್ಸ್ ಕ್ವಿಜ್ 2025

ಪುತ್ತೂರು: ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ನಾವು ಭಾರತೀಯರು ಎನ್ನುವ ಭಾವ ಜಾಗೃತಿಗಾಗಿ ಇಂಡಿಪೆಂಡೆನ್ಸ್ ಕ್ವಿಜ್ 2025 ರ ಕಾರ್ಯಕ್ರಮವನ್ನು ದರ್ಬೆ ಲಿಟ್ಲ್ ಫ್ಲವರ್ ಶಾಲೆ ದರ್ಬೆಯಲ್ಲಿ ನಡೆಸಲಾಯಿತು.ಪುತ್ತೂರು ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಆಂಜನೇಯ ರೆಡ್ಡಿ ರಾಷ್ಟ್ರ ಧ್ವಜ ಎತ್ತಿ ಹಿಡಿದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಪುತ್ತೂರು ನಗರ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶಶಿಕಲಾ, ನಯ ಚಪ್ಪಲ್ ಬಜಾರ್ ಮಾಲಕ ಅಬ್ದುಲ್ ರಫೀಕ್, ಪ್ರಥಮ ದರ್ಜೆ ಗುತ್ತಿಗೆದಾರ ಜುನೈದ್, ಪುತ್ತೂರು ನಗರ ಠಾಣೆ

ಪುತ್ತೂರು ಪೊಲೀಸ್ ಇಲಾಖೆ ನೇತೃತ್ವದಲ್ಲಿ ಇಂಡಿಪೆಂಡೆನ್ಸ್ ಕ್ವಿಜ್ 2025 Read More »

ಅಕ್ಷಯ ಕಾಲೇಜಿನಲ್ಲಿ 21 ನೇ ಶತಮಾನದ ಕೌಶಲ್ಯದ ಪ್ರಾವೀಣ್ಯತೆ ಕಾರ್ಯಾಗಾರ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ “ಬೈಟ್ ಬ್ಲಿಜ್” ಐಟಿ ಕ್ಲಬ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “21 ನೇ ಶತಮಾನದ ಕೌಶಲ್ಯದ ಪ್ರಾವೀಣ್ಯತೆ” ಎಂಬ ವಿಷಯದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ವಾಣಿಜ್ಯ ವಿಭಾಗದ ಉಪನ್ಯಾಸಕ ಕಿಶನ್ ಎನ್ ರಾವ್ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. 21 ನೇ ಶತಮಾನದಲ್ಲಿ ಸ್ಪರ್ಧಾತ್ಮಕವಾಗಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹಲವು ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ ಉಪಯೋಗಿಸಿ ತಂತ್ರಜ್ಞಾನದಲ್ಲಿ ಕ್ರಾಂತಿ ಯನ್ನು ಸೃಷ್ಟಿಸುತ್ತಿರುವ ಮನುಷ್ಯ ನಿಗೆ ಅಷ್ಟೇ ಸವಾಲುಗಳನ್ನು

ಅಕ್ಷಯ ಕಾಲೇಜಿನಲ್ಲಿ 21 ನೇ ಶತಮಾನದ ಕೌಶಲ್ಯದ ಪ್ರಾವೀಣ್ಯತೆ ಕಾರ್ಯಾಗಾರ Read More »

ಅಕ್ಷಯ ಕಾಲೇಜಿನಲ್ಲಿ FROM CAMPUS TO CAREER ಕಾರ್ಯಾಗಾರ

ಪುತ್ತೂರು: ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ಹಾಗೂ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಯೋಗದಲ್ಲಿ “FROM CAMPUS TO CAREER” ಕಾರ್ಯಗಾರ ನಡೆಯಿತು. ಕಾಲೇಜಿನ ಉಪಪ್ರಾಂಶುಪಾಲ ರಕ್ಷಣಾ ಟಿ ಆರ್ ಅವರು ಮಾತನಾಡಿ, ಕಾಲೇಜಿನಲ್ಲಿ ನಡೆಯುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಉತ್ತೇಜನ ನೀಡಿದರು.ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಮೇಘಶ್ರೀ ಪ್ರಾಸ್ತವಿಕ ಮಾತುಗಳನ್ನಾಡಿ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್‌ನಲ್ಲಿ ನಡೆಯುವ ವಿವಿಧ ರೀತಿಯ ಸ್ಪರ್ಧೆಗಳ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ತನ್ನನ್ನು ತಾನು

ಅಕ್ಷಯ ಕಾಲೇಜಿನಲ್ಲಿ FROM CAMPUS TO CAREER ಕಾರ್ಯಾಗಾರ Read More »

ಅಕ್ಷಯ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ “ಅನ್ವೇಷಣಾ -2” ಪ್ರತಿಭಾನ್ವೇಷಣ ಕಾರ್ಯಕ್ರಮ

ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಲಲಿತ ಕಲಾ ಸಂಘ ಮತ್ತು ಐಕ್ಯೂ ಎಸಿ ಸಹಭಾಗಿತ್ವದಲ್ಲಿ “ಅನ್ವೇಷಣಾ 2” ಇದರ ಉದ್ಘಾಟನೆ ಮತ್ತು ಸಮಾರೋಪ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್, ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ಇಂತಹ ಕಾರ್ಯಕ್ರಮಗಳು ಬಹಳ ಪ್ರಾಮುಖ್ಯತೆಯನ್ನು ಪಡೆಯುತ್ತದೆ ಹಾಗೂ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಹಾರೈಸಿದರು. ಅಧ್ಯಕ್ಷೀಯ ನೆಲೆಯಲ್ಲಿ

ಅಕ್ಷಯ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ “ಅನ್ವೇಷಣಾ -2” ಪ್ರತಿಭಾನ್ವೇಷಣ ಕಾರ್ಯಕ್ರಮ Read More »

ಪಿಎಂಶ್ರೀ ವೀರಮಂಗಲ ಶಾಲೆ ಅತ್ಯುತ್ತಮ‌ ಪಿಎಂಶ್ರೀ ಶಾಲೆಯೆಂದು ದೇಶಕ್ಕೆ ಸಮರ್ಪಣೆ ಮಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಪುತ್ತೂರು: ಪಿಎಂಶ್ರೀ ಕಾರ್ಯಚಟುವಟಿಕೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಉತ್ತಮ ಸಾಧನೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಗೊಂಡ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಅಖಿಲ ಭಾರತೀಯ ಮಂಡಪಮ್, ನವದೆಹಲಿ ಭಾರತೀಯ ಶಿಕ್ಷಾ ಸಮಾಗಮದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇವರು ಅತ್ಯುತ್ತಮ ಪಿಎಂಶ್ರೀ ಶಾಲೆಯೆಂದು ದೇಶಕ್ಕೆ ಸಮರ್ಪಣೆ ಮಾಡಿದರು. ಭಾರತ ಸರ್ಕಾರ ರಾಜ್ಯ ಶಿಕ್ಷಣ ಸಚಿವ ಡಾ. ಸುಕಾಂತ್ ಮಜೂಂಬ್ದಾರ್, ಭಾರತ ಸರಕಾರ ರಾಜ್ಯ ಶಿಕ್ಷಣ ಸಚಿವ

ಪಿಎಂಶ್ರೀ ವೀರಮಂಗಲ ಶಾಲೆ ಅತ್ಯುತ್ತಮ‌ ಪಿಎಂಶ್ರೀ ಶಾಲೆಯೆಂದು ದೇಶಕ್ಕೆ ಸಮರ್ಪಣೆ ಮಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ Read More »

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ : ಉತ್ತೇಜನ – 2025 ಕಾರ್ಯಕ್ರಮ

ಉಡುಪಿ: 2024-25 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನ ‘ಉತ್ತೇಜನ ‘ ಜ್ಞಾನದ ಸಿರಿಗೆ ಸನ್ಮಾನ ಘೋಷ ವಾಕ್ಯದೊಂದಿಗೆ ಆಯೋಜನೆ ಮಾಡಲಾಗಿದೆ. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಶೈಕ್ಷಣಿಕ ಸಂಯೋಜಿತ ಸಂಸ್ಥೆ ಹೈಸ್ಕೂಲ್ ವಿಭಾಗದ 2024 – 25ನೇ ಸಾಲಿನ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಸಂಸ್ಥೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ‘ಉತ್ತೇಜನ’ ಜ್ಞಾನದ ಸಿರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವುದಾಗಿದೆ. ಇದೇ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯ ಸಿದ್ದಾಪುರ ಸಂಸ್ಥೆಯ

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ : ಉತ್ತೇಜನ – 2025 ಕಾರ್ಯಕ್ರಮ Read More »

ಪುಂಜಾಲಕಟ್ಟೆಯಲ್ಲಿ ದಿಶಾ ತರಬೇತಿ ಸಂಪನ್ನ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ಪ್ರಥಮ ವರ್ಷದ ಪದವಿ ತರಗತಿಯ ವಿದ್ಯಾರ್ಥಿಗಳಿಗಾಗಿ ‘ದಿಶಾ’ ತರಬೇತಿ ಕಾರ್ಯಕ್ರಮ ಜುಲೈ 28ರಂದು ನಡೆಯಿತು. ಕಾಲೇಜಿನ ಆಂತರಿಕ ಗುಣಮಟ್ಟ ಖಾತ್ರಿ ಘಟಕ (Internal Quality Assurance Cell) ಮತ್ತು ವಿದ್ಯಾರ್ಥಿ ಕ್ಷೇಮಪಾಲನ ಕಚೇರಿ (Students’ Welfare Office) ಇವುಗಳ ಜಂಟಿ ಆಶ್ರಯದಲ್ಲಿ ‘ Small steps towards big dreams start today’ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮ ಏರ್ಪಾಡಾಗಿತ್ತು. ರಾಷ್ಟ್ರೀಯ ತರಬೇತುದಾರ ಮತ್ತು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್

ಪುಂಜಾಲಕಟ್ಟೆಯಲ್ಲಿ ದಿಶಾ ತರಬೇತಿ ಸಂಪನ್ನ Read More »

ದ್ವಿಶತಕ ದಾಟಿದ ಫಲಾನುಭವಿಗಳ ಸಂಖ್ಯೆ – ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮತ್ತುಕೆವಿಜಿ ವೈದ್ಯಕೀಯ ಮಹಾವಿದ್ಯಾಲಯಗಳ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಒಟ್ಟು ಇನ್ನೂರಕ್ಕೂ ಮಿಕ್ಕಿದ ಸಂಖ್ಯೆಯ ಆರೋಗ್ಯಾಕಾಂಕ್ಷಿಗಳು ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು. ಯಶಸ್ವೀ ಶಿಬಿರಇದೊಂದು ಅತ್ಯಂತ ಪ್ರಯೋಜನಕಾರಿ ಮತ್ತು ಸಕಾಲಿಕವಾದ ಶಿಬಿರವಾಗಿತ್ತು ಎಂದು ಫಲಾನುಭವಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಶಿಬಿರದಲ್ಲಿ ವಿತರಿಸಲಾದ ಆಹಾರದ ಗುಣಮಟ್ಟವು ಅತಿ ಉತ್ತಮವಾಗಿತ್ತು ಎಂದು ಕೆವಿಜಿ ವೈದ್ಯಕೀಯ ಕಾಲೇಜಿನ ವೈದ್ಯರು ಮತ್ತು ಸಿಬ್ಬಂದಿಗಳು ಪ್ರತಿಕ್ರಿಯಿಸಿದ್ದಾರೆ. ಎಲ್ಲವೂ ಉಚಿತರಕ್ತದೊತ್ತಡ ಮತ್ತು

ದ್ವಿಶತಕ ದಾಟಿದ ಫಲಾನುಭವಿಗಳ ಸಂಖ್ಯೆ – ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ Read More »

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವದಲ್ಲಿ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧ ಕುರುಂಜಿ

ಸುಳ್ಯ: ಆಗಸ್ಟ್ 25 ರಂದು ಗೋವಾದಲ್ಲಿ ನಡೆಯಲಿರುವ ಕನಕ ಉಪನ್ಯಾಸ ಉತ್ಸವದಲ್ಲಿ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕದಿಂದ ಡಾ. ಅನುರಾಧ ಕುರುಂಜಿ ಅವರು ಆಯ್ಕೆಯಾಗಿದ್ದಾರೆ. ಇವರು ಸುಳ್ಯದ ನೆಹರೂ ಮೆಮೊರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರಾಗಿದ್ದಾರೆ. ಇವರು 250 ಕ್ಕೂ ಅಧಿಕ ತರಬೇತಿ ಉಪನ್ಯಾಸಗಳನ್ನು ನೀಡಿದ್ದಾರೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿಯೂ ಪ್ರಬಂಧ ಮಂಡನೆ ಮಾಡಿದ್ದಾರೆ. ಇವರು ಪದ್ಮಯ ಗೌಡ ಕುರುಂಜಿ ಮತ್ತು ಸೀತಮ್ಮ ಕುರುಂಜಿ ದಂಪತಿಯ ಪುತ್ರಿ.

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವದಲ್ಲಿ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧ ಕುರುಂಜಿ Read More »

error: Content is protected !!
Scroll to Top