ಶೈಕ್ಷಣಿಕ

ಮಂಗಳೂರಿನಲ್ಲಿ ಮೆರಿಟೈಮ್ ವಿವಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ನಗರದಲ್ಲಿ ಕೇಂದ್ರೀಯ ಮೆರಿಟೈಮ್ ‌ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಸಚಿವ ಸರ್ಬಾನಂದ್ ‌ಸೋನೋವಾಲ್ ಅವರಿಗೆ ಮನವಿ ಮಾಡಿದ್ದು, ಇದನ್ನು ಪರಿಶೀಲನೆ ನಡೆಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾಗಿ ತಿಳಿದು ಬಂದಿದೆ. ಮಂಗಳೂರು ವಿಶಾಲವಾದ ಕಡಲ ತೀರ ಹೊಂದಿದ್ದು, ಈ ಭಾಗದಲ್ಲಿ ಮೆರಿಟೈಮ್ ‌ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದರಿಂದ ಕಡಲ ಕ್ಷೇತ್ರದ ಬಗ್ಗೆ ಅಧ್ಯಯನ,‌ ಸಂಶೋಧನೆಗೆ ಹೆಚ್ಚು ಅವಕಾಶ ದೊರೆಯಲಿದೆ. ಈ ಭಾಗದಲ್ಲಿ ಪ್ರಮುಖ ಬಂದರುಗಳನ್ನು ಒಳಗೊಂಡಂತೆ ಎಲ್ಲಾ ರೀತಿಯ ಭೌಗೋಳಿಕ ಅನುಕೂಲಗಳನ್ನು […]

ಮಂಗಳೂರಿನಲ್ಲಿ ಮೆರಿಟೈಮ್ ವಿವಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 25 ರಂದು ಶಾಲಾ ಕಾಲೇಜುಗಳಿಗೆ ರಜೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನಾರ್ಭಟ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಜುಲೈ 25 ರಂದು ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ‌ ಹಿನ್ನೆಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ತಿಳಿಸಿದೆ.

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 25 ರಂದು ಶಾಲಾ ಕಾಲೇಜುಗಳಿಗೆ ರಜೆ Read More »

ಲಂಡನ್ ಯೂನಿವರ್ಸಿಟಿ ಮುಂಭಾಗ ತುಳು ಧ್ವಜ ಹಿಡಿದು ತನ್ನ ಶೈಕ್ಷಣಿಕ ಸಾಧನೆ ಸಂಭ್ರಮಿಸಿದ ಪುತ್ತೂರಿನ ಗಾಯಕ್

ಪುತ್ತೂರು: ಲಂಡನ್‌ ಯೂನಿವರ್ಸಿಟಿಯಲ್ಲಿ ಕನ್ಸ್ಟ್ರಕ್ಷನ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಗಾಯಕ್ ಜಿ. ಎನ್. ಅವರು ಯೂನಿವರ್ಸಿಟಿ ಮುಂಭಾಗದಲ್ಲಿ ತುಳುನಾಡಿನ ಧ್ವಜವನ್ನು ಪ್ರದರ್ಶಿಸುವ ಮೂಲಕ ನಾಡಿಗೆ ಹಿರಿಮೆ ತಂದು ಕೊಟ್ಟಿದ್ದಾರೆ. ಗಾಯಕ್ ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಸ್ಥೆಗಳಲ್ಲಿ ಹೈಸ್ಕೂಲ್, ಪಿಯುಸಿ ವಿದ್ಯಾಭ್ಯಾಸ ಮಾಡಿದ್ದು, ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ಇಂಜಿನಿಯರಿಂಗ್ ಪದವಿ ಪಡೆದುಕೊಂಡಿರುತ್ತಾರೆ. ಗಾಯಕ್ ಅವರು ಹಾರಾಡಿಯ ಗಣೇಶ್ ನಂದಿಲ ಮತ್ತು ನಗರಸಭಾ ಸದಸ್ಯೆ ಪ್ರೇಮಲತಾ ನಂದಿಲ ಅವರ ಪುತ್ರ. ಇವರ ತಮ್ಮ

ಲಂಡನ್ ಯೂನಿವರ್ಸಿಟಿ ಮುಂಭಾಗ ತುಳು ಧ್ವಜ ಹಿಡಿದು ತನ್ನ ಶೈಕ್ಷಣಿಕ ಸಾಧನೆ ಸಂಭ್ರಮಿಸಿದ ಪುತ್ತೂರಿನ ಗಾಯಕ್ Read More »

ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ NEET, CET  /JEE ಫೌಂಡೇಶನ್‍ ತರಬೇತಿ ಆರಂಭ

ಪುತ್ತೂರು: ಏಳ್ಮುಡಿಯಲ್ಲಿರುವ ಪ್ರಭು ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ NEET, CET, JEE ಫೌಂಡೇಶನ್‍ ತರಬೇತಿ ಆರಂಭಗೊಂಡಿದೆ. ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೋರ್ಸ್ ನ ಸದುಪಯೋಗ ಪಡೆದುಕೊಳ್ಳಬಹುದು. ನುರಿತ, ಅನುಭವಿ ಅಧ್ಯಾಪಕರಿಂದ ತರಬೇತಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ‘ಪ್ರೇರಣಾ’, ಮೊದಲ ಮಹಡಿ, ಪ್ರಭು ಬಿಲ್ಡಿಂಗ್‍, ಕೆನರಾ ಬ್ಯಾಂಕ್‍ ಬಳಿ, ಅರುಣಾ ಥಿಯೇಟರ್ ಎದುರು, ಮುಖ್ಯ ರಸ್ತೆ ಪುತ್ತೂರು.  8904877721, 7204977721 ಹಾಗೂ 08251-200721 ನಂಬರನ್ನು ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ NEET, CET  /JEE ಫೌಂಡೇಶನ್‍ ತರಬೇತಿ ಆರಂಭ Read More »

ಭಾರಿ ಮಳೆ : ಮಂಗಳೂರು, ಬಂಟ್ವಾಳ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಬಂಟ್ವಾಳ : ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಮತ್ತು ಮಂಗಳೂರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜು.19ರಂದು ಎಲ್ಲ ಅಂಗನವಾಡಿ, ಸರ್ಕಾರ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆವರೆಗೆ ರಜೆ ನೀಡಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಮಂಗಳೂರು ತಾಲೂಕಿನಲ್ಲಿ ಪದವಿಪೂರ್ವ ತರಗತಿಗಳಿಗೂ ರಜೆ ನೀಡಲಾಗಿದೆ.

ಭಾರಿ ಮಳೆ : ಮಂಗಳೂರು, ಬಂಟ್ವಾಳ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ Read More »

ಇನ್ನುಮುಂದೆ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ

ಡ್ರಗ್ಸ್‌, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿರ್ಧಾರ ಬೆಂಗಳೂರು: ಕಾಲೇಜುಗಳಲ್ಲಿ ಡ್ರಗ್ಸ್‌, ರ‍್ಯಾಗಿಂಗ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕ್ಯಾಂಪಸ್‌ಗಳಲ್ಲಿ ಸಿಸಿಟಿವಿ ಅಳವಡಿಸಲು ಸರ್ಕಾರ ಆದೇಶ ಮಾಡಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಾಲೇಜು, ವಿವಿ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್,

ಇನ್ನುಮುಂದೆ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ Read More »

ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ

ಬಡ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ಸರ್ಕಾರದ ಮಹತ್ವದ ನಿರ್ಧಾರ ಬೆಂಗಳೂರು: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳ ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು

ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ Read More »

ಭಾರತೀಯ ಚಾರ್ಟರ್ಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ) 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಮುಹಮ್ಮದ್ ಇಯಾಸ್‍ ಉತ್ತೀರ್ಣ

ಪುತ್ತೂರು: ಭಾರತೀಯ ಚಾರ್ಟರ್ಡ್‍ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ)ಯು 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಮುಹಮ್ಮದ್ ಇಯಾಸ್ ರವರು ಮೊದಲ ಪ್ರಯತ್ನದಲ್ಲಿಯೇ ಗ್ರೂಪ್ ಒಂದು ಮತ್ತು ಗ್ರೂಪ್  ಎರಡರಲ್ಲೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಪೆರ್ನೆ ನಿವಾಸಿ ಇಸ್ಮಾಯಿಲ್ ಮತ್ತು ರುಖ್ಯಾ ದಂಪತಿಯ ಕಿರಿಯ ಪುತ್ರನಾಗಿರುವ ಮುಹಮ್ಮದ್ ಇಯಾಸ್ ರವರು ಸಿಎ ಗಣೇಶ್ ರಾವ್ ಪಿ. ಅವರ ಮಾರ್ಗದರ್ಶನದಲ್ಲಿ ಕಳೆದ ಮೇ ತಿಂಗಳು ನಡೆದ ಸಿಎ ಅಂತಿಮ ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ. ಮುಹಮ್ಮದ್ ಇಯಾಸ್

ಭಾರತೀಯ ಚಾರ್ಟರ್ಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ) 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಮುಹಮ್ಮದ್ ಇಯಾಸ್‍ ಉತ್ತೀರ್ಣ Read More »

ರಾಜ್ಯ ಪಠ್ಯಕ್ರಮದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೂ ಸಿಬಿಎಸ್‌ಇ ಮಾದರಿ ಪರೀಕ್ಷೆ

ಪರೀಕ್ಷಾ ಪದ್ಧತಿಯಲ್ಲಿ ಸಮಗ್ರ ಬದಲಾವಣೆಗೆ ಸಮಿತಿ ಶಿಫಾರಸು ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಮಕ್ಕಳಿಗೂ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸುವ ಪ್ರಸ್ತಾವವೊಂದನ್ನು ಸರ್ಕಾರದ ಮುಂದಿಡಲಾಗಿದೆ. ಸಿಬಿಎಸ್‌ಇ ಪಠ್ಯಕ್ರಮದ ಪ್ರಕಾರ ಲಿಖಿತ ಪರೀಕ್ಷೆ ಹಾಗೂ ಆಂತರಿಕ ಅಂಕಗಳೂ ಸೇರಿ 100ಕ್ಕೆ ಕನಿಷ್ಠ 33 ಅಂಕ ಪಡೆದವರು ಉತ್ತೀರ್ಣರಾಗಲಿದ್ದಾರೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

ರಾಜ್ಯ ಪಠ್ಯಕ್ರಮದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೂ ಸಿಬಿಎಸ್‌ಇ ಮಾದರಿ ಪರೀಕ್ಷೆ Read More »

ವಾರದ ಆರು ದಿನ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಸೋಮವಾರ, ಶನಿವಾರ ಮೊಟ್ಟೆ ಕೊಡದ ಕುರಿತು ದೂರು ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ ನಿವಾರಿಸುವ ಉದ್ದೇಶದಿಂದ 1ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಸರ್ಕಾರ ಘೋಷಣೆ ಮಾಡಿದೆ. ಕೆಲವು ಶಾಲೆಗಳಲ್ಲಿ ಎಸ್‌ಡಿಎಂಸಿ ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುತ್ತಿದ್ದಾರೆ. ಸೋಮವಾರ ಮತ್ತು ಶನಿವಾರ

ವಾರದ ಆರು ದಿನ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ Read More »

error: Content is protected !!
Scroll to Top