ವಿದ್ಯಾರಶ್ಮಿಯಲ್ಲಿ 11ವರ್ಷ ಕಾಲ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ ಸೀತಾರಾಮ ಕೇವಳ | ಸ್ವಯಂ ಸೇವಾ ನಿವೃತ್ತಿ ಪಡೆದ ಸೀತಾರಾಮ ಕೇವಳ
ಪುತ್ತೂರು : ಸವಣೂರಿನ ವಿದ್ಯಾರಶ್ಮಿಯಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವಾನಿರತರಾಗಿದ್ದ ಇಂಗ್ಲೀಷ್ ಭಾಷಾ ಉಪನ್ಯಾಸಕ ಸೀತಾರಾಮ ಕೇವಳ ಅವರು ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. 1988ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮಾಜ ಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ದ್ವಿತೀಯ rankನೊಂದಿಗೆ ತೇರ್ಗಡೆಯಾದ ಅವರು ಮುಂದೆ ಕುವೆಂಪು ವಿಶ್ವ ವಿದ್ಯಾನಿಲಯದಿಂದ ಇಂಗ್ಲೀಷ್ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದರು. ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿದ್ದ ಅವರು 1990ರಲ್ಲಿ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಅರೆಕಾಲಿಕ […]