ಪಿಎಂಶ್ರೀ ವೀರಮಂಗಲ ಶಾಲಾ ವಿದ್ಯಾರ್ಥಿಗಳು ನಿತ್ಯ ಚಪಾತಿ ಆಹಾರ ಸಂಸ್ಕರಣಾ ಕೇಂದ್ರ ಮುಕ್ವೆ ಗೆ ಅನುಭವಾತ್ಮಕ ಭೇಟಿ
ವೀರಮಂಗಲ : ಪುತ್ತೂರು ತಾಲೂಕಿನ ನರಿಮೊಗರು,ಮುಕ್ವೆ ಪರಿಸರದಲ್ಲಿರುವ ನಿತ್ಯ ಚಪಾತಿ ಆಹಾರ ಸಂಸ್ಕರಣಾ ಕೇಂದ್ರಕ್ಕೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮಕ್ಕಳು ಅನುಭವಾತ್ಮಕ ಭೇಟಿ ನೀಡಿ ಆಹಾರ ಸಿರಿದಾನ್ಯಗಳಾದ ಶಾಮೆ, ಸಜ್ಜೆ ,ಬರಗು, ರಾಗಿ, ಕೊರಳೆ, ಜೋಳ, ಊದಲು, ನವನೆ, ಹಾರಕ, ಇತ್ಯಾದಿ ಆಹಾರ ವಸ್ತುಗಳಿಂದ ಸಿದ್ಧವಾಗುವ ಚಪಾತಿ, ಪೂರಿ, ಪಾನೀಯ , ಕುಕ್ಕೀಸ್, ಮಾಡುವುದನ್ನು ನೋಡಿ ತಿಳಿದರು. ಸಂಸ್ಥೆಯ ಮುಖ್ಯಸ್ಥರಾದ ರಾಧಾಕೃಷ್ಣ ಹಾಗೂ ಉಮಾವತಿ ಸಮಗ್ರ ಮಾಹಿತಿಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ 40 ವಿದ್ಯಾರ್ಥಿಗಳು ಭಾಗವಹಿಸದರು. […]