ಸುದ್ದಿ

ಕಾಣೆಯಾಗಿದ್ದ ಉಪನ್ಯಾಸಕನ ‌ಶವ ಬಾವಿಯಲ್ಲಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಉಡುಪಿಯ ಸಂಸ್ಕೃತ ಕಾಲೇಜಿನ ಉಪನ್ಯಾಸಕ ಶಿರಸಿಯ ಗಣೇಶ್ ಭಟ್ (55) ಎಂಬವರೇ ಮೃತರು. ಇವರು ಅವಿವಾಹಿತರಾಗಿದ್ದು, ಎಂ.ಜಿ.ಎಂ. ಕಾಲೇಜಿನ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರು ನಾಪತ್ತೆಯಾದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶವವನ್ನು ಅಗ್ನಿಶಾಮಕ ದಳ ಬಾವಿಯಿಂದ ಮೇಲೆತ್ತಿದೆ. ಉಡುಪಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾಣೆಯಾಗಿದ್ದ ಉಪನ್ಯಾಸಕನ ‌ಶವ ಬಾವಿಯಲ್ಲಿ ಪತ್ತೆ Read More »

ವಿದ್ಯುತ್ ತಂತಿ ತಗುಲಿದ ಪರಿಣಾಮ ಬಾಲಕನ ಸಾವು

ಪುತ್ತೂರು: ಬಾಲಕನೊಬ್ಬ ವಿದ್ಯುತ್ ತಂತಿ ತಗುಲಿ ಮೃತಪಟ್ಚ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ಮೃತನನ್ನು ನೇರಳಕಟ್ಟೆ ‌ಕೊಡಾಜೆಯ ಶಹೀರ್(15) ಎಂದು ಗುರುತಿಸಲಾಗಿದೆ. ನೇರಳಕಟ್ಟೆಯ ಗಣೇಶ್ ನಗರದ ಫ್ಲಾಟ್ ಒಂದರಲ್ಲಿ ಬಾಲಕ ಹೆತ್ತವರ ಜೊತೆಗೆ ವಾಸವಾಗಿದ್ದು, ಶಾಲೆಗೆ ರಜೆಯಾದ ಕಾರಣ ಗಡಿಯಾರದಲ್ಲಿರುವ ‌ತನ್ನ ಅಜ್ಜನ ಮನೆಗೆ ತೆರಳಿದ್ದ. ಇಂದು ಬೆಳಗ್ಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಆತ‌ ಸಾವನ್ನಪ್ಪಿದ್ದಾನೆ.

ವಿದ್ಯುತ್ ತಂತಿ ತಗುಲಿದ ಪರಿಣಾಮ ಬಾಲಕನ ಸಾವು Read More »

ಸೋಣಂದೂರಿನ ವ್ಯಕ್ತಿ ನಾಪತ್ತೆ

ಉಪ್ಪಿನಂಗಡಿ: ಕಡಬದ ಶಿರಾಡಿಯ ಸೋಣಂದೂರಿನ 44 ವರ್ಷದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ತಡವಾಗಿ ವರದಿಯಾಗಿದೆ. ನಾಪತ್ತೆಯಾದವರನ್ನು ಜಗದೀಶ್ ಎಸ್. ಎಸ್. ಎಂದು ಗುರುತಿಸಲಾಗಿದೆ. ಸೋಣಂದೂರಿನಲ್ಲಿ ಪ್ರತ್ಯೇಕ ಮನೆಯಲ್ಲಿ ಇವರು ವಾಸವಾಗಿದ್ದರು. ಗಾರೆ ಕೆಲಸ ಮಾಡಿಕೊಂಡಿದ್ದ ಇವರ ಪತ್ನಿ ಮತ್ತು ಮಕ್ಕಳು ಹಾಸನದಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ತಂದೆಯ ಮನೆಯಲ್ಲಿ ಪ್ರತಿನಿತ್ಯ ಅವರು ಊಟ, ಚಹಾ ಸೇವನೆಗೆ ಹೋಗುತ್ತಿದ್ದರು. ಎ. 6 ರಂದು ಬೆಳಗ್ಗೆ 9 ಗಂಟೆಯ ವರೆಗೆ ಮನೆಯಲ್ಲಿ ಇದ್ದ ಅವರು, ಗಂಟೆ 10.30 ಆದರೂ

ಸೋಣಂದೂರಿನ ವ್ಯಕ್ತಿ ನಾಪತ್ತೆ Read More »

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಾಸ್ತಾನು ಪೊಲೀಸ್ ವಶಕ್ಕೆ

ಕೊಪ್ಪಳ: ಜಮೀನೊಂದರ ಗೋದಾಮಿನಲ್ಲಿ ಅನ್ನ ಭಾಗ್ಯ ಯೋಜನೆಯ ಸುಮಾರು 150 – 200 ಟನ್ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಘಟನೆ ಕೂಕನಹಳ್ಳಿಯಲ್ಲಿ ನಡೆದಿದ್ದು, ಇದನ್ನು ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಳೆಪ್ಪ ಎಂಬವರ ಜಮೀನಿನ ಗೋದಾಮಿನಲ್ಲಿ ಅಕ್ರಮವಾಗಿ ಅನ್ನ ಭಾಗ್ಯ ಯೋಜನೆಯ ಅಕ್ಕಿ ದಾಸ್ತಾನಿಡಲಾಗಿದೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿರುವುದಾಗಿದೆ. ಸುಮಾರು ಸಾವಿರಕ್ಕೂ ಅಧಿಕ ಪಡಿತರ ತುಂಬಿದ ಗೋಣಿಗಳು ಪೊಲೀಸರ ವಶಕ್ಕೆ ಸಿಕ್ಕಿದೆ‌. ಆಹಾರ ಇಲಾಖೆಯ ಅಧಿಕಾರಗಳು ಸಹ ಸ್ಥಳದಲ್ಲಿ ಸಿಕ್ಕಿರುವ ಅಕ್ಕಿಯನ್ನು

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಾಸ್ತಾನು ಪೊಲೀಸ್ ವಶಕ್ಕೆ Read More »

ಜನಿವಾರ ತೆಗೆಸಿದ ಪ್ರಕರಣ : ಕಾಲೇಜಿಗೆ 25 ಲ.ರೂ. ದಂಡ ಹಾಕಲು ಒತ್ತಾಯ

ಸಿಇಟಿ ಪರೀಕ್ಷೆ ವೇಳೆ ವಿದಾರ್ಥಿಗಳ ಜನಿವಾರ ತೆಗೆಸಿದ ಕಾಲೇಜು ಸಿಬ್ಬಂದಿ ಬೆಂಗಳೂರು: ಬೆಂಗಳೂರಿನ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ ವೇಳೆ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಕ್ರೋಶ ವ್ಯಕ್ತಪಿಸಿದ್ದು, ಮುಖ್ಯಮಂತ್ರಿಗೆ ಈ ಕುರಿತು ಪತ್ರ ಬರೆದು ಜನಿವಾರ ತೆಗೆಸಿದ ಕಾಲೇಜಿನ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಿದೆ. ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕೆಂದು ಒತ್ತಾಯಿಸಿದೆ. ಸಿಇಟಿ ಪರೀಕ್ಷಾರ್ಥಿಗಳ ಜನಿವಾರ

ಜನಿವಾರ ತೆಗೆಸಿದ ಪ್ರಕರಣ : ಕಾಲೇಜಿಗೆ 25 ಲ.ರೂ. ದಂಡ ಹಾಕಲು ಒತ್ತಾಯ Read More »

ದೈವದ ಭಂಡಾರ ಹೋಗುತ್ತಿದ್ದಾಗ ಮುರಿದು ಬಿದ್ದ ಕಾಲು ಸಂಕ: ಹಲವರಿಗೆ ಗಾಯ

ಮೂಡಬಿದ್ರೆ: ದೈವದ ಭಂಡಾರ ಆಗಮನದ ವೇಳೆ ಕಾಲು ಸಂಕ ಮುರಿದು ಬಿದ್ದ ಪರಿಣಾಮ ಅವಘಡ ಸಂಭವಿಸಿದ ಘಟನೆ ಪುಚ್ಚೆಮೊಗರು ಗ್ರಾಮದ ಬಾವದಬೈಲಿನಲ್ಲಿ ‌ನಡೆದಿದೆ. ಈ ದುರಂತದಲ್ಲಿ ಎಂಟು ಮಂದಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸಾ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಕೋಡೆ ಬರ್ಕೆ ಧರ್ಮ ನೇಮದ ಹಿನ್ನೆಲೆ ಪಲ್ಲಕ್ಕಿಯಲ್ಲಿ ಹೊತ್ತು ದೈವದ ಭಂಡಾರವನ್ನು ಮೆರವಣಿಗೆಯ ಮೂಲಕ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಕಾಲು ಸಂಕ ಮುರಿದು ಬಿದ್ದಿದ್ದು, ಪಲ್ಲಕ್ಕಿ ಸಮೇತ ಭಂಡಾರ ತರುತ್ತಿದ್ದ ಭಕ್ತರು ಮುರಿದ ಸಂಕದ ಕೆಳಕ್ಕೆ ಬಿದ್ದಿದ್ದಾರೆ.

ದೈವದ ಭಂಡಾರ ಹೋಗುತ್ತಿದ್ದಾಗ ಮುರಿದು ಬಿದ್ದ ಕಾಲು ಸಂಕ: ಹಲವರಿಗೆ ಗಾಯ Read More »

ಬಿಜೆಪಿಗೆ ಆಸ್ತಿಯಾಗುತ್ತಾರಾ ರಾಘವ್‌ ಚಡ್ಡಾ?

ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಬಿಜೆಪಿಯಲ್ಲಿ ಅವರ ಪಾತ್ರದ ಬಗ್ಗೆ ಚರ್ಚೆ ಹೊಸದಿಲ್ಲಿ : ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಸೇರಿ ಆಪ್‌ನ ಏಳು ರಾಜ್ಯಸಭಾ ಸದಸ್ಯರು ಬಿಜೆಪಿ ಸೇರ್ಪಡೆಯಾಗಿರುವುದು ಆಮ್‌ ಆದ್ಮಿ ಪಾರ್ಟಿಗೆ (ಆಪ್‌) ಆಗಿರುವ ಭಾರಿ ಹಿನ್ನಡೆ ಎಂದು ಭಾವಿಸಲಾಗಿದೆ. ರಾಜ್ಯಸಭೆಯಲ್ಲಿ ಆಮ್‌ ಆದ್ಮಿ ಪಾರ್ಟಿಯ ನಾಯಕರಾಗಿದ್ದ ರಾಘವ್‌ ಚಡ್ಡಾ ಬಿಜೆಪಿ ಸೇರುವ ಸುಳಿವು ಮೊದಲೇ ಇತ್ತು. ಆದರೆ ಅವರು ತನ್ನೊಂದಿಗೆ ಇನ್ನೂ ಆರು ಮಂದಿಯನ್ನು ಕರೆದುಕೊಂಡು ಹೋಗುತ್ತಾರೆ ಎಂದು ಆಪ್‌ ಪರಮೋಚ್ಚ ನಾಯಕ ಅರವಿಂದ

ಬಿಜೆಪಿಗೆ ಆಸ್ತಿಯಾಗುತ್ತಾರಾ ರಾಘವ್‌ ಚಡ್ಡಾ? Read More »

ಅಮೆರಿಕ-ಇರಾನ್‌ ಇನ್ನೊಂದು ಸುತ್ತಿನ ಮಾತುಕತೆಗೆ ತಯಾರಿ

ಇಸ್ಲಾಮಾಬಾದ್‌ಗೆ ಬಂದ ಇರಾನ್‌ ರಾಜತಾಂತ್ರಿಕರ ನಿಯೋಗ ಇಸ್ಲಾಮಾಬಾದ್‌: ಇರಾನ್‌- ಅಮೆರಿಕ ಮಧ್ಯೆ ಎರಡನೇ ಸುತ್ತಿನ ಶಾಂತಿ ಮಾತುಕತೆಗೆ ಕೌಂಟ್‌ಡೌನ್‌ ಆರಂಭವಾಗಿದೆ. ಸಂಧಾನ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ನೇತೃತ್ವದ ನಿಯೋಗ ಪಾಕಿಸ್ತಾನಕ್ಕೆ ಆಗಮಿಸಿದೆ. ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಗೆ ಶುಕ್ರವಾರ ತಡರಾತ್ರಿ ಆಗಮಿಸಿದ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರನ್ನು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಷಾಕ್ ದಾರ್, ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ಪಾಕಿಸ್ತಾನದ

ಅಮೆರಿಕ-ಇರಾನ್‌ ಇನ್ನೊಂದು ಸುತ್ತಿನ ಮಾತುಕತೆಗೆ ತಯಾರಿ Read More »

ಕಲ್ಲು ತೂರಾಟ ಮಾಡಿದವರನ್ನು ಬಿಡುಗಡೆ ಮಾಡಲು ಖಾದರ್‌ ಪತ್ರ : ಹಿಂದೂ ಮುಖಂಡರ ಆಕ್ರೋಶ

ಆಳಂದದಲ್ಲಿ ಹಿಂದೂ ಮುಖಂಡರು, ಡಿಸಿ, ಎಸ್ಪಿ ಮೇಲೆ ಕಲ್ಲು ತೂರಿದ ಪ್ರಕರಣ ಬೆಂಗಳೂರು: ಕಲಬುರಗಿಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಸ್ಲಿಂ ಯುವಕರನ್ನು ಬಿಡುಗಡೆ ಮಾಡುವಂತೆ ಸ್ಪೀಕರ್‌ ಯು.ಟಿ. ಖಾದರ್ ಗೃಹ ಸಚಿವ ಜಿ.ಪರಮೇಶ್ವರ್​ಗೆ ಬರೆದಿರುವ ಪತ್ರ ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಪೀಕರ್ ಅವರ ಈ ನಡೆಯನ್ನು ಹಿಂದೂ ಸಂಘಟನೆಗಳು, ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿವೆ. ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು

ಕಲ್ಲು ತೂರಾಟ ಮಾಡಿದವರನ್ನು ಬಿಡುಗಡೆ ಮಾಡಲು ಖಾದರ್‌ ಪತ್ರ : ಹಿಂದೂ ಮುಖಂಡರ ಆಕ್ರೋಶ Read More »

ಮೇ 1ರಿಂದ ಮದ್ಯದ ಬೆಲೆ ಏರಿಕೆ?

ಅಲ್ಕೋಹಾಲ್‌ ಪ್ರಮಾಣದ ಆಧಾರದಲ್ಲಿ ಬೆಲೆ ನಿರ್ಧರಿಸಲು ಅಧಿಸೂಚನೆ ಬೆಂಗಳೂರು: ಸರ್ಕಾರ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ

ಮೇ 1ರಿಂದ ಮದ್ಯದ ಬೆಲೆ ಏರಿಕೆ? Read More »

error: Content is protected !!
Scroll to Top