ಸುದ್ದಿ

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 16 ಡ್ರಗ್ಸ್ ಪೆಡ್ಲರ್‌ಗಳು ಅಂದರ್

ಬೆಂಗಳೂರು: ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 16 ಮಂದಿ ಮಾದಕ ವಸ್ತು ಮಾರಾಟಗಾರರನ್ನು ಬಂಧಿಸಲಾಗಿದೆ. ಬೆಂಗಳೂರಿನ ವಿವಿಧ ನಗರಗಳ ಪೊಲೀಸರು ಮತ್ತು ಸಿಸಿಬಿ ‌ನಡೆಸಿದ ಕಾರ್ಯಾಚರಣೆಯಲ್ಲಿ ಡ್ರಗ್ಸ್ ಪೆಡ್ಲರ್‌ಗಳು ಬಲೆಗೆ ಬಿದ್ದಿರುವುದಾಗಿದೆ. ಆರೋಪಿಗಳಲ್ಲಿ ವಿದೇಶಿಗರು, ಹೊರ ರಾಜ್ಯದವರು ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಿಂದ 5.24 ಕೋಟಿ ರೂ. ಗಳ ಮೌಲ್ಯದ, ಮೂರು ಸಾವಿರ ಎಂಡಿಎಂ, ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಹಾಗೆಯೇ ಖಚಿತ ಮಾಹಿತಿ ಪಡೆದು ಮೇರೆಗೆ ದಾಳಿ ನಡೆಸಿದ್ದಸಿಸಿಬಿ […]

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 16 ಡ್ರಗ್ಸ್ ಪೆಡ್ಲರ್‌ಗಳು ಅಂದರ್ Read More »

ದ್ವಿತೀಯ ಪಿಯುಸಿ ಪರೀಕ್ಷಾ ಹಿನ್ನೆಲೆ ಪರೀಕ್ಷಾ ಬೋರ್ಡ್‌ನಿಂದ ‌ಕಠಿಣ ಕ್ರಮ

ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ಸಮಯದಲ್ಲಿ ಯಾವುದೇ ಪರೀಕ್ಷಾ ಅಕ್ರಮ ನಡೆಯದಂತೆ ಎಕ್ಸಾಂ ಬೋರ್ಡ್ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷಾ ಬೋರ್ಡ್ ಕೈಗೊಂಡ ಕ್ರಮಗಳ ಪಟ್ಟಿ ಈ ಕೆಳಗಿನಂತಿವೆ:

ದ್ವಿತೀಯ ಪಿಯುಸಿ ಪರೀಕ್ಷಾ ಹಿನ್ನೆಲೆ ಪರೀಕ್ಷಾ ಬೋರ್ಡ್‌ನಿಂದ ‌ಕಠಿಣ ಕ್ರಮ Read More »

ಪತಿ ಮರಣದ ಕೆಲವೇ ದಿನದಲ್ಲಿ ಪತ್ನಿ ಮರು ಮದುವೆ: ಸಂದೇಹದಿಂದ ದೂರು ನೀಡಿದ ಮೃತನ ಸಹೋದರರು

ತುಮಕೂರು: ಪತಿ ಮೃತಪಟ್ಚ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆಯಾಗಿದ್ದು, ಇದರಿಂದ ಅನುಮಾನಗೊಂಡು ‌ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ ಘಟನೆ ದಾಸರಹಳ್ಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯ ಶವವನ್ನು 23 ದಿನಗಳ ಬಳಿಕ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪರಮೇಶ್ (50) ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಇದಾದ ಕೆಲವೇ ದಿನದಲ್ಲಿ ಅವರ ಪತ್ನಿ ಬೇರೊಂದು ಮದುವೆಯಾಗಿದ್ದು, ಕುಟುಂಬಸ್ಥರಲ್ಲಿ ಸಂದೇಹ ಸೃಷ್ಟಿಯಾಗುವಂತೆ ಮಾಡಿದೆ. ಮೃತ ವ್ಯಕ್ತಿಯ ಸಹೋದರರಿಗೆ ತನ್ನ ಅಣ್ಣನಿಗೆ ಹೃದಯಾಘಾತವಾಗಿಲ್ಲ, ಆತನ ಮೂಗಿನ ನಡುವೆ ಗಾಯ ಇತ್ತು.

ಪತಿ ಮರಣದ ಕೆಲವೇ ದಿನದಲ್ಲಿ ಪತ್ನಿ ಮರು ಮದುವೆ: ಸಂದೇಹದಿಂದ ದೂರು ನೀಡಿದ ಮೃತನ ಸಹೋದರರು Read More »

ಕಳ್ಳತನಕ್ಕೆ ಸಂಬಂಧಿಸಿದ ಅನುಮನಿತ ಆರೋಪಿಯ ಮುಖಚಹರೆ ಪತ್ತೆ

ಬಂಟ್ವಾಳ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಪ್ರಕರಣ ದಾಖಲಾದ ವಿಷಯಕ್ಕೆ ಸಂಬಂಧಿಸಿದ ಹಾಗೆ ಅನುಮಾನಾಸ್ಪದ ಆರೋಪಿಯ ಮುಖಚಹರೆ ಪತ್ತೆಯಾಗಿದೆ. ಈ ಹಿನ್ನೆಲೆ ಆತನ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪ್ರಕರಣದ ತನಿಖಾ ವೇಳೆ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅನುಮಾನಿತ ಆರೋಪಿಯ ಮುಖಚಹರೆ ಪತ್ತೆಯಾಗಿರುವುದಾಗಿದೆ. ಆ ವ್ಯಕ್ತಿಯ ಬಗ್ಗೆ ಯಾವುದೇ ರೀತಿಯ ಮಾಹಿತಿ ಇದ್ದಲ್ಲಿ ಅಥವಾ ಸುಳಿವು ಸಿಕ್ಕಲ್ಲಿ ಪೊಲೀಸರ ಗಮನಕ್ಕೆ ತರುವಂತೆ ಸೂಚಿಸಲಾಗಿದೆ. ಮಾಹಿತಿ ನೀಡುವವರು ಕೆಳಗಿನ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು

ಕಳ್ಳತನಕ್ಕೆ ಸಂಬಂಧಿಸಿದ ಅನುಮನಿತ ಆರೋಪಿಯ ಮುಖಚಹರೆ ಪತ್ತೆ Read More »

ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಎದುರು ನಡೆದಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿವದಾಸ ಗಣಪತಿ ನಾಯ್ಕ್ ಎಂದು ಗುರುತಿಸಲಾಗಿದೆ. ಅವರು ಬೈಕಂಪಾಡಿಯ ಔಷಧ ತಯಾರಿಕಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರಂತ ನಡೆದಿದೆ. ಅಪಘಾತದ ರಭಸಕ್ಕೆ ಅವರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು

ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ಪುತ್ತೂರಿನಲ್ಲಿ ಸೆಂಟ್ರಲ್ ಇಂಟಲಿಜೆನ್ಸ್ ಸಂಸ್ಥೆ ವರ್ಷದೊಳಗೆ ಆರಂಭ: ಅಶೋಕ್ ರೈ

ಪುತ್ತೂರು: ಒಂದು ವರ್ಷದೊಳಗಾಗಿ ಪುತ್ತೂರಿನಲ್ಲಿ ಕೇಂದ್ರ ಸರ್ಕಾರದ ಅಧೀನಕ್ಕೆ ಒಳಪಡುವ ಸೆಂಟ್ರಲ್ ಇಂಟಲಿಜೆನ್ಸ್ ಸಂಸ್ಥೆ ಕಚೇರಿ ಆರಂಭವಾಗಲಿದೆ. ಇದಕ್ಕಾಗಿ ನಿವೇಶನ ಮಂಜೂರು ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ಮಾಹಿತಿ ನೀಡಿದ್ದಾರೆ. ಇದಕ್ಕಾಗಿ ಪಡ್ನೂರಿನಲ್ಲಿ 0.44 ಸೆಂಟ್ಸ್ ಸ್ಥಳ ಮಂಜೂರಾಗಿದೆ. ಕಳೆದ ಎರಡು ತಿಂಗಳ ಹಿಂದೆ ತಮ್ಮ ಬಳಿ ಇಂಟಲಿಜೆನ್ಸ್ ಎಸ್.ಪಿ. ಅವರು ನಿವೇಶನಕ್ಕಾಗಿ ‌ಮನವಿ ಮಾಡಿದ್ದರು. ಅದರಂತೆ ಪಡ್ನೂರಿನಲ್ಲಿ ಜಾಗ ಮಂಜೂರು ಮಾಡಲಾಗಿದೆ. ಈ ಸಂಸ್ಥೆ ಆರಂಭಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ

ಪುತ್ತೂರಿನಲ್ಲಿ ಸೆಂಟ್ರಲ್ ಇಂಟಲಿಜೆನ್ಸ್ ಸಂಸ್ಥೆ ವರ್ಷದೊಳಗೆ ಆರಂಭ: ಅಶೋಕ್ ರೈ Read More »

ಮಹಿಳಾ‌‌ ಕಾಲೇಜು ಪ್ರಾಂಶುಪಾಲರ ಅಮಾನತು: ಶಾಸಕ ಅಶೋಕ್ ರೈ ವಿರುದ್ಧ ಮಾಜಿ ಶಾಸಕ ಮಠಂದೂರು ಗರಂ

ಪುತ್ತೂರು: ಪುತ್ತೂರು ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲರ ಅಮಾನತ್ತಿಗೆ ಸಂಬಂಧಿಸಿದ ಹಾಗೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ಸೇಡಿಗೆ ‌ಉದ್ದೇಶಪೂರ್ವಕವಾಗಿ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಕಾಲೇಜಿನ ವಿದ್ಯಾರ್ಥಿನಿಯರು ತಮಗಾಗುತ್ತಿರುವ ಅನ್ಯಾಯಕ್ಕೆ ಪ್ರತಿಭಟನೆ ನಡೆಸಿದ್ದರು. ಈ ಕಾರಣಕ್ಕಾಗಿ ತಮ್ಮ ಸೇಡು ತೀರಿಸಿಕೊಳ್ಳಲು ಸರ್ಕಾರಕ್ಕೆ ಪತ್ರ ಬರೆದು ಪ್ರಾಂಶುಪಾಲರನ್ನೇ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ಪ್ರಬುದ್ಧರು. ಅವರ ಹಕ್ಕುಗಳನ್ನು ಕೇಳುವ ಸ್ವಾತಂತ್ರ್ಯ ಅವರಿಗೆ ಇದೆ.

ಮಹಿಳಾ‌‌ ಕಾಲೇಜು ಪ್ರಾಂಶುಪಾಲರ ಅಮಾನತು: ಶಾಸಕ ಅಶೋಕ್ ರೈ ವಿರುದ್ಧ ಮಾಜಿ ಶಾಸಕ ಮಠಂದೂರು ಗರಂ Read More »

ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮ: ಜಯಂತ್ ನಡುಬೈಲು ಅವರಿಗೆ ಸನ್ಮಾನ

ಮಂಗಳೂರು: ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮವು ಮಂಗಳೂರು ಬಳಿಯ ಮರೋಳಿ ಸೂರ್ಯವುಡ್ಸ್‌ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರಿನ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ್ ನಡುಬೈಲು ಅವರನ್ನು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಗಾಗಿ ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗಪೂರಕ ಹಾಗೂ ಆಧುನಿಕ ಶಿಕ್ಷಣ ಒದಗಿಸುವ ಉದ್ದೇಶದಿಂದ 2019ರಲ್ಲಿ ಅಕ್ಷಯ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ಅಕ್ಷಯ ಕಾಲೇಜು ಸ್ಥಾಪಿಸಿದ ಅವರು,

ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮ: ಜಯಂತ್ ನಡುಬೈಲು ಅವರಿಗೆ ಸನ್ಮಾನ Read More »

ಡಿಪ್ಲೊಮಾ ವಿದ್ಯಾರ್ಥಿ ಆತ್ಮಹತ್ಯೆ

ತುಮಕೂರು: ನಾನು ಈ ಜಗತ್ತನ್ನೇ ಬಿಟ್ಟು ಹೋಗುತ್ತೇನೆ, ನೀನು ಚೆನ್ನಾಗಿರು ಎಂದು ಸ್ಟೇಟಸ್ ಹಾಕಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ತುರುವೇಕೆರೆಯಲ್ಲಿ ಡಿಪ್ಲೋಮಾ ಓದುತ್ತಿದ್ದ ವಿದ್ಯಾರ್ಥಿ, ಗೋಪ್ಪೇನಹಳ್ಳಿ ಗ್ರಾಮದ ಧನುಷ್(19) ಮೃತ ಯುವಕ. ಈತ ದ್ವಿತೀಯ ವರ್ಷದ ಡಿಪ್ಲೊಮಾ ವಿದ್ಯಾರ್ಥಿ. ಕಾಲೇಜಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದ ಧನುಷ್ ಎಷ್ಟು ಹೊತ್ತಾದರೂ ಮನೆಗೆ ಬಂದಿಲ್ಲ. ಮನೆಯಿಂದ ಫೋನ್ ಮಾಡಿದಾಗಲೂ ಅದಕ್ಕೆ ಉತ್ತರಿಸಿಲ್ಲ. ಇದರಿಂದ ಗಾಬರಿಯಾದ ಮನೆಯವರು ಹುಡುಕಾಟ ನಡೆಸಿದ್ದಾರೆ. ಈತ ತನ್ನ ಮೊಬೈಲ್‌ನಲ್ಲಿ ನಾನು

ಡಿಪ್ಲೊಮಾ ವಿದ್ಯಾರ್ಥಿ ಆತ್ಮಹತ್ಯೆ Read More »

ಸಿ ಎಂ ವಿಷಯದಲ್ಲಿ ತೀರ್ಮಾನ ಹೈಕಮಾಂಡ್‌ನದ್ದು: ಡಾ. ಜಿ. ಪರಮೇಶ್ವರ್

ಬೆಂಗಳೂರು: ಸಿ ಎಂ ಆಯ್ಕೆ ವಿಷಯ ಹೈಕಮಾಂಡ್‌ಗೆ ಬಿಟ್ಟಿದ್ದು. ಅದರಲ್ಲಿ ಯಾವುದೇ ರೀತಿಯಲ್ಲಿ ತಾವು ಲಾಬಿ ನಡೆಸಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸಿ ಎಂ ಆಗಬೇಕು ಎನ್ನುವ ಅಭಿಮಾನಿಗಳು ಕೂಗುತ್ತಿರುವ ಘೋಷಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಷಯದಲ್ಲಿ ಯಾವ ಗೊಂದಲಕ್ಕೂ ಒಳಗಾಗಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ನವದೆಹಲಿಗೆ ಹೋಗಿ ನಾನು ಯಾರನ್ನೂ ಭೇಟಿ ಮಾಡಿಲ್ಲ. ಕೆಲವರು ವ್ಯಕ್ತಪಡಿಸುವ ಅಭಿಪ್ರಾಯಗಳಿಗೆ ತಾವೇನೂ ಮಾಡಲು ಸಾಧ್ಯವಿಲ್ಲ. ಇಂತಹ ಚರ್ಚೆಗೆ ನಾನು

ಸಿ ಎಂ ವಿಷಯದಲ್ಲಿ ತೀರ್ಮಾನ ಹೈಕಮಾಂಡ್‌ನದ್ದು: ಡಾ. ಜಿ. ಪರಮೇಶ್ವರ್ Read More »

error: Content is protected !!
Scroll to Top