ಸುದ್ದಿ

ನ್ಯೂಸ್‍ ಪುತ್ತೂರು ಸಂಪಾದಕರಾಗಿ ಜ್ಯೋತಿ ಪ್ರಕಾಶ್‍ ಪುಣಚ

ಪುತ್ತೂರು : ಪುತ್ತೂರು ಕೇಂದ್ರವಾಗಿರಿಸಿ ಕಳೆದ ಕೆಲವು ವರ್ಷಗಳಿಂದ ಜನಪರ ಸೇವಾಧಾರಿತ ಕಾರ್ಯ ಚಟುವಟಿಗಳನ್ನು ನೀಡುತ್ತಾ ಜನರ ಪ್ರೀತಿ ವಿಶ್ವಾಸಗಳಿಗೆ ಪಾತ್ರವಾಗಿರುವ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನ ವ್ಯಾಪ್ತಿಯಲ್ಲಿ ಜನಮನದ ಪ್ರತಿಧ್ವನಿಯಾಗಿ ಕಾರ್ಯಾಚರಿಸುತ್ತಿರುವ ಸಮಗ್ರ ನೈಜ ಸುದ್ದಿಗಳ ಪ್ರಸರಣದ “ನ್ಯೂಸ್ ಪುತ್ತೂರು” ವಾಹಿನಿಯ ಸಂಪಾದಕರಾಗಿ ಹಿರಿಯ ಅನುಭವಿ ಪತ್ರಕರ್ತ, ಸಾಹಿತಿ ಹಾಗೂ ಲೇಖಕರಾಗಿರುವ  ಜ್ಯೋತಿಪ್ರಕಾಶ್ ಪುಣಚ ಅವರನ್ನು ಸಂಸ್ಥೆ ನೇಮಕ ಮಾಡಿದೆ. ಕರಾವಳಿ ಮಾಧ್ಯಮ ಲೋಕದಲ್ಲಿ ಎರಡನೇಯ ವರ್ಷಕ್ಕೆ ಕಾಲಿಡುತ್ತಿರುವ ನ್ಯೂಸ್ ಪುತ್ತೂರು ಪುತ್ತೂರಿನ ಏಳ್ಮುಡಿಯಲ್ಲಿ ಸುಸಜ್ಜಿತ […]

ನ್ಯೂಸ್‍ ಪುತ್ತೂರು ಸಂಪಾದಕರಾಗಿ ಜ್ಯೋತಿ ಪ್ರಕಾಶ್‍ ಪುಣಚ Read More »

ದೇವಸ್ಥಾನದ ಜಮೀನಿನಲ್ಲಿದ್ದ ಮನೆ ತೆರವು ಪ್ರಕರಣ | ಜಮಾಯಿಸಿದ ಬಿಜೆಪಿ ಕಾರ್ಯಕರ್ತರು | ಸ್ಥಳಕ್ಕಾಗಮಿಸಿದ ಪೊಲೀಸರು

ಪುತ್ತೂರು : ಮುಖ್ಯ ರಸ್ತೆಗೆ ಬದಿಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಮೀನಿನಲ್ಲಿದ್ದ ರಾಜೇಶ್ ಬನ್ನೂರು  ವಾಸಿಸುತ್ತಿದ್ದ  ಮನೆಯನ್ನು ಮಂಗಳವಾರ ತಡ ರಾತ್ರಿ ತೆರವುಗೊಳಿಸಿದ ವಿಚಾರವಾಗಿ ಬುಧವಾರ ಬೆಳಿಗ್ಗೆ ಪೊಲೀಸ್‍  ಠಾಣೆಗೆ ತೆರಳಿ ದೂರು ನೀಡಿದ ಬಳಿಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಸುಮಾರು 2.30ರಿಂದ 3 ಗಂಟೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ದೂರಲಾಗಿದೆ. ಮಂಗಳೂರಿನ ಜಾತ್ರೆಗೆ ತೆರಳಿದ್ದ ವೇಳೆ ಹಿಂಭಾಗದಿಂದ ಜೆಸಿಬಿ ಮೂಲಕ ಮನೆಯನ್ನು ದೂಡಿ ಹಾಕಲಾಗಿದೆ.

ದೇವಸ್ಥಾನದ ಜಮೀನಿನಲ್ಲಿದ್ದ ಮನೆ ತೆರವು ಪ್ರಕರಣ | ಜಮಾಯಿಸಿದ ಬಿಜೆಪಿ ಕಾರ್ಯಕರ್ತರು | ಸ್ಥಳಕ್ಕಾಗಮಿಸಿದ ಪೊಲೀಸರು Read More »

ಕಾಂಗ್ರೆಸ್ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್

ವಿಟ್ಲ : ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ತಿಳಿದು ಬಂದಿದೆ ಎಂಬುವುದು ವರದಿಯಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗಿದ್ದು, ಅವರು ಯಾಕೆ ಅಲ್ಲಿ  ಹೋಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿಲ್ಲ. ಆತನ ಗನ್ ನಿಂದ ಮಿಸ್ ಫೈರಿಂಗ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಖಚಿತವಾದ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರು ಖಾಸಗಿ

ಕಾಂಗ್ರೆಸ್ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್ Read More »

ಮಹಾಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಮುಳುಗೆದ್ದ ಮೋದಿ

ಪ್ರಯಾಗ್‌ರಾಜ್‌ : ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡು ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪ್ರಧಾನಿ ಮೋದಿ ಜೊತೆಗಿದ್ದರು. ಬೆಳಗ್ಗೆ ಪ್ರಯಾಗ್‌ರಾಜ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಪ್ರಯಾಗ್‌ರಾಜ್‌ ನದಿ ಬಳಿಗೆ ಸಾಗಿ ದೋಣಿಯಲ್ಲಿ ಹೋಗಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಕಳೆದ ಜ.13ರಂದು ಪ್ರಾರಂಭವಾಗಿರುವ ಮಹಾಕುಂಭಮೇಳಕ್ಕೆ ದೇಶ-ವಿದೇಶಗಳ ಅನೇಕ ಗಣ್ಯರು ಭೇಟಿ ನೀಡಿದ್ದಾರೆ. ಈಗಾಗಲೇ 38 ಕೋಟಿಗೂ ಅಧಿಕ ಜನ

ಮಹಾಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಮುಳುಗೆದ್ದ ಮೋದಿ Read More »

ಕರಾವಳಿಯಲ್ಲಿ ಮತ್ತೆ ಚಿಕಾನ್‍ ಪಾಕ್ಸ್

ಮಂಗಳೂರು : ಕರಾವಳಿಯ ಹಲವೆಡೆ ಚಿಕನ್ ಪಾಕ್ಸ್ ಕಂಡುಬಂದಿದ್ದು, ಇದೀಗ ಕಡಬ ತಾಲೂಕಿನ ವಿವಿಧ ಶಾಲೆಗಳಲ್ಲಿ  21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಕಾಣಿಸಿಕೊಂಡಿದೆ ಎಂಬುವುದು ವರದಿಯಾಗಿದೆ. ಮಾಹಿತಿ ಪ್ರಕಾರ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು 9 ಮಕ್ಕಳಿಗೆ, ಸುಬ್ರಹ್ಮಣ್ಯದಲ್ಲಿ 6 ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು ಮಗುವಿಗೆ, ಲಾವತ್ತಡ್ಕದಲ್ಲಿ ಒಂದು ಮಗುವಿಗೆ, ಗೊಳಿತ್ತೊಟ್ಟುವಿನಲ್ಲಿ ಒಂದು ಮಗುವಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಹರಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕರಾವಳಿಯಲ್ಲಿ ಮತ್ತೆ ಚಿಕಾನ್‍ ಪಾಕ್ಸ್ Read More »

ಬೆಳ್ಳಂಬೆಳಗ್ಗೆ 30 ಕಡೆ ಐಟಿ ದಾಳಿ

ಭಾರಿ ಪ್ರಮಾಣದ ಅಕ್ರಮ ಸಂಪತ್ತಿನ ಶೋಧ ಬೆಂಗಳೂರು: ರಾಜ್ಯದ ಪ್ರಮುಖ ಸರಕಾರಿ ಗುತ್ತಿಗೆದಾರನ ಬಂಗಲೆಯೂ ಸೇರಿದಂತೆ ಸುಮಾರು 30 ಕಡೆ ಇಂದು ಬೆಳ್ಳಂಬೆಳಗ್ಗ ಆದಾಯ ಕರ ಇಲಾಖೆಯ ದಾಳಿ ನಡೆದಿದ್ದು, ಪರಿಶೋಧನೆ ಮುಂದುವರಿದಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಎಂಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಮೂರು ಕಾರುಗಳಲ್ಲಿ ಬಂದ

ಬೆಳ್ಳಂಬೆಳಗ್ಗೆ 30 ಕಡೆ ಐಟಿ ದಾಳಿ Read More »

ಬೈಕ್‍ ಸವಾರನ ಮೇಲೆ ಬಿದ್ದ ಮರ | ಸವಾರನಿಗೆ ಗಂಭೀರ ಗಾಯ

ಕಡಬ : ಚಲಿಸುತ್ತಿದ್ದ ಬೈಕ್ ಮೇಲೆ ದೂಪದ ಮರ ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಕಡಬ -ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ ನಡೆದಿದೆ. ಈ ಘಟನೆಯಲ್ಲಿ ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬವರು ಗಾಯಗೊಂಡ ಬೈಕ್‍ ಸವಾರ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕ್ನಿ ಕಲೆಕ್ಟರ್ ಕೆಲಸ ಮಾಡುತ್ತಿದ್ದ ಇವರು, ಕೆಲಸ ಮುಗಿಸಿ ಹಿಂತಿರುಗುವಾಗ ಈ ಘಟನೆ ಸಂಭವಿಸಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ

ಬೈಕ್‍ ಸವಾರನ ಮೇಲೆ ಬಿದ್ದ ಮರ | ಸವಾರನಿಗೆ ಗಂಭೀರ ಗಾಯ Read More »

ಕುದ್ಮಾರು ಶಾಲೆ ಎಸ್ ಡಿ ಎಂ ಸಿ ರಚನೆ | ಅಧ್ಯಕ್ಷರಾಗಿ ದೇವರಾಜ್‍ ನೂಜಿ, ಉಪಾಧ್ಯಕ್ಷರಾಗಿ  ನವ್ಯಾ ಅನ್ಯಾಡಿ ಆಯ್ಕೆ

ಕಾಣಿಯೂರು : ಕುದ್ಮಾರು ನ. ಉ.ಹಿ.ಪ್ರಾ ಶಾಲೆಯ ನೂತನ ಎಸ್ ಡಿ ಎಂ ಸಿಯ ಅಧ್ಯಕ್ಷರಾಗಿ ದೇವರಾಜ್‍ ನೂಜಿ, ಉಪಾಧ್ಯಕ್ಷರಾಗಿ  ನವ್ಯಾ ಅನ್ಯಾಡಿ ಆಯ್ಕೆಯಾಗಿದ್ದಾರೆ. ಕುದ್ಮಾರು ನ. ಉ.ಹಿ.ಪ್ರಾ ಶಾಲೆಯ ನೂತನ ಎಸ್ ಡಿ ಎಂ ಸಿ ರಚನೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ನಾಗರಿಕ ಸೌಲಭ್ಯ ಸಮಿತಿಯ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಭಾಸ್ಕರ ಪೂಜಾರಿ ಕೊಡಂಗೆಯವರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಲೋಹಿತಾಕ್ಷ ಕಡೆಂಜಿಕಟ್ಟ, ಪ್ರವೀಣ್ ಕೆರೆನಾರು, ಹಾಗೂ ಸವಣೂರು ಸಿ.ಆರ್.ಪಿ ಜಯಂತ್

ಕುದ್ಮಾರು ಶಾಲೆ ಎಸ್ ಡಿ ಎಂ ಸಿ ರಚನೆ | ಅಧ್ಯಕ್ಷರಾಗಿ ದೇವರಾಜ್‍ ನೂಜಿ, ಉಪಾಧ್ಯಕ್ಷರಾಗಿ  ನವ್ಯಾ ಅನ್ಯಾಡಿ ಆಯ್ಕೆ Read More »

ದೇಶದಲ್ಲಿ ಮಾಂಸಾಹಾರ ಸೇವನೆ ನಿಷೇಧವಾಗಲಿ : ಅಚ್ಚರಿ ಹೇಳಿಕೆ ನೀಡಿದ ಟಿಎಂಸಿ ಸಂಸದ

ಸಮಾನ ನಾಗರಿಕ ಸಂಹಿತೆ ಜಾರಿ ಪರ ಬ್ಯಾಟ್‌ ಬೀಸಿದ ವಿಪಕ್ಷದ ಪ್ರಮುಖ ನಾಯಕ ಹೊಸದಿಲ್ಲಿ : ದೇಶದಲ್ಲಿ ಗೋಮಾಂಸ ಸೇವನೆ ಮಾತ್ರವಲ್ಲ ಎಲ್ಲ ರೀತಿಯ ಮಾಂಸಾಹಾರವನ್ನು ನಿಷೇಧಿಸಬೇಕು ಎನ್ನುವ ಮೂಲಕ ತೃಣಮೂಲ ಕಾಂಗ್ರೆಸ್‌ ಸಂಸದ, ಹಿರಿಯ ನಟ ಶತ್ರುಘ್ನ ಸಿನ್ಹ ಅಚ್ಚರಿ ಹುಟ್ಟಿಸಿದ್ದಾರೆ. ಅವರ ಪಕ್ಷ ಮತ್ತು ಅದರೊಂದಿಗಿರುವ ಇಂಡಿ ಮಿತ್ರಕೂಟದ ಎಲ್ಲ ಪಕ್ಷಗಳು ಗೋಮಾಂಸ ನಿಷೇಧವನ್ನೇ ವಿರೋಧಿಸುತ್ತಿರುವಾಗ ಸಿನ್ಹ ಈ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ. ಇಷ್ಟು ಮಾತ್ರವಲ್ಲದೆ ಉತ್ತರಖಂಡದ ಬಿಜೆಪಿ ಸರಕಾರ ರಾಜ್ಯದಲ್ಲಿ ಸಮಾನ ನಾಗರಿಕ

ದೇಶದಲ್ಲಿ ಮಾಂಸಾಹಾರ ಸೇವನೆ ನಿಷೇಧವಾಗಲಿ : ಅಚ್ಚರಿ ಹೇಳಿಕೆ ನೀಡಿದ ಟಿಎಂಸಿ ಸಂಸದ Read More »

ಮಹಾಕುಂಭಮೇಳ : ಇಂದು ಪ್ರಧಾನಿ ಮೋದಿ ಪುಣ್ಯಸ್ನಾನ

ಪ್ರಯಾಗ್‌ರಾಜ್‌ : ಮಹಾಕುಂಭಮೇಳದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪುಣ್ಯಸ್ನಾನ ಮಾಡಲಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಮುಳುಗೇಳುವ ಸಲುವಾಗಿ ಮೋದಿ ಇಂದು ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ.ಮಹಾಕುಂಭಮೇಳಕ್ಕೆ ಆಗಮಿಸುವವರಿಗೆ ಕಲ್ಪಿಸಿರುವ ವ್ಯವಸ್ಥೆಗಳನ್ನು ಪರಿಶೀಲಿಸಲಿರುವ ಪ್ರಧಾನಿ ಬಳಿಕ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪ್ರಧಾನಿ ಜೊತೆಗಿರುತ್ತಾರೆ. ಕೆಲವು ಪ್ರಮುಖ ಅಖಾಡಗಳ ಸಾಧು ಸಂತರೊಂದಿಗೂ ಮೋದಿ ಸಂವಾದ ನಡೆಸಲಿದ್ದಾರೆ.ಬೆಳಗ್ಗೆ 10 ಗಂಟೆಗೆ ಪ್ರಯಾಗ್‌ರಾಜ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಮೋದಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಅರೈಲ್‌ಘಾಟ್‌ಗೆ ಆಗಮಿಸಿ ಅಲ್ಲಿಂದ ಬೋಟ್‌ ಮೂಲಕ

ಮಹಾಕುಂಭಮೇಳ : ಇಂದು ಪ್ರಧಾನಿ ಮೋದಿ ಪುಣ್ಯಸ್ನಾನ Read More »

error: Content is protected !!
Scroll to Top