ಸುದ್ದಿ

ಮಂಗಳೂರಿಗೆ ಬೈಪಾಸ್, ತಲಪಾಡಿಯಿಂದ ಕುಂದಾಪುರದವರೆಗೆ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ

ಸಂಸದ ಕ್ಯಾ.ಬ್ರಿಜೇಶ್‌ ಚೌಟ ಪ್ರಯತ್ನಕ್ಕೆ ಸಿಕ್ಕಿದ ಯಶಸ್ಸು ಮಂಗಳೂರು : ಮಂಗಳೂರು ಬೈಪಾಸ್ ಮೂಲಕ ಹಾದು ಹೋಗುವ ಸುರತ್ಕಲ್-ಬಿ.ಸಿ.ರೋಡ್ ಹೆದ್ದಾರಿ ಅಗಲೀಕರಣ ಹಾಗೂ ತಲಪಾಡಿಯಿಂದ ಕುಂದಾಪುರದವರೆಗಿನ ಎನ್‌ಹೆಚ್-66ರ ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಆ ಮೂಲಕ ಕರಾವಳಿ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅವಿರತ ಪರಿಶ್ರಮದಿಂದಾಗಿ ಕರಾವಳಿಯಲ್ಲಿ ಹಾದುಹೋಗುವ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಪ್ರಯತ್ನಕ್ಕೆ ಮೊದಲ ಹಂತದ […]

ಮಂಗಳೂರಿಗೆ ಬೈಪಾಸ್, ತಲಪಾಡಿಯಿಂದ ಕುಂದಾಪುರದವರೆಗೆ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ Read More »

ಶಾಲೆಗಳಲ್ಲಿ ವಾಟರ್‌ ಬೆಲ್‌ ಪದ್ಧತಿ ಅಳವಡಿಸಲು ಆದೇಶ

ಮಕ್ಕಳಿಗೆ ನೀರು ಕುಡಿಯಲು ನೆನಪಿಸುವ ವಾಟರ್‌ ಬೆಲ್‌ ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ಇನ್ಮುಂದೆ `ವಾಟರ್ ಬೆಲ್’ ಸಮಯ ನಿಗದಿ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ. ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಬೇಕೆಂಬ ಅರಿವು ಅಷ್ಟಾಗಿ ಇರುವುದಿಲ್ಲ. ಮಕ್ಕಳ ಬೆಳವಣಿಗೆಗೆ ಮತ್ತು ಆರೋಗ್ಯಕ್ಕೆ ನೀರು ಅತ್ಯವಶ್ಯಕವಾಗಿರುತ್ತದೆ. ದೇಹದ ಉಷ್ಣತೆಯನ್ನು ನಿಯಂತ್ರಿಸುವುದರ ಜೊತೆಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ರಾಜ್ಯದಲ್ಲಿರುವ ಎಲ್.ಕೆ.ಜಿ, ಯು.ಕೆ.ಜಿ ಒಳಗೊಂಡಂತೆ ಸರ್ಕಾರಿ, ಅನುದಾನಿತ

ಶಾಲೆಗಳಲ್ಲಿ ವಾಟರ್‌ ಬೆಲ್‌ ಪದ್ಧತಿ ಅಳವಡಿಸಲು ಆದೇಶ Read More »

ಕಳಪೆ ಬೌಲಿಂಗ್‌, ಫೀಲ್ಡಿಂಗ್‌ನಿಂದ ಸೋತ ಭಾರತ

ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್‌ಗೆ 7 ವಿಕೆಟ್‌ಗಳ ಅಮೋಘ ಜಯ ರಾಜ್‌ಕೋಟ್‌: ರಾಜ್‌ಕೋಟ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಡೇರಿಯಲ್‌ ಮಿಚೆಲ್‌ ಮತ್ತು ವಿಲ್‌ ಯಂಗ್‌ ಶತಕದ ಜೊತೆಯಾಟ ನೆರವಿನಿಂದ ಭಾರತದ ವಿರುದ್ಧ ನ್ಯೂಜಿಲೆಂಡ್‌ 7 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿ 1-1 ರಲ್ಲಿ ಸಮಬಲಗೊಂಡಿದೆ.ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ ಮಾಡಿದ ಭಾರತ ಕೆ.ಎಲ್‌.ರಾಹುಲ್‌ ಅವರ ಶತಕದ ನೆರವಿನಿಂದ 7 ವಿಕೆಟ್‌

ಕಳಪೆ ಬೌಲಿಂಗ್‌, ಫೀಲ್ಡಿಂಗ್‌ನಿಂದ ಸೋತ ಭಾರತ Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಕ್ರಾಂತಿ ಹಬ್ಬ ಇಂದು ರಜೆ ನಾಳೆ

ಜ.15ರಂದು ಸರ್ಕಾರಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಘೋಷಿಸಲಾದ ಸರ್ಕಾರಿ ರಜೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ಜನವರಿ 15ರಂದು ರಜೆ ನೀಡಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಜಿಲ್ಲೆಯಲ್ಲಿ ಜನವರಿ 14ರಂದು ಮಕರ ಸಂಕ್ರಾಂತಿ ಆಚರಿಸಲಾಗುತ್ತಿದ್ದು, ಜನವರಿ 15ರಂದು ಸರ್ಕಾರಿ ರಜೆ ನಿಗದಿಪಡಿಸಿರುವುದಕ್ಕೆ ಆಕ್ಷೇಪಣೆಗಳು ವ್ಯಕ್ತವಾಗಿದ್ದವು. ಸ್ಪೀಕರ್ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ವಿಷಯವನ್ನು ಸರ್ಕಾರದ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಕ್ರಾಂತಿ ಹಬ್ಬ ಇಂದು ರಜೆ ನಾಳೆ Read More »

ವಿಷಪ್ರಾಶನ ಮಾಡಿ 500 ಬೀದಿನಾಯಿಗಳ ಹತ್ಯೆ

ಚುನಾವಣೆ ಸಮಯದಲ್ಲಿ ನೀಡಿದ ಭರವಸೆ ಈಡೇರಿಸಲು ನಾಯಿಗಳನ್ನು ಕೊಂದು ಹಾಕಿದ ದೂರು ದಾಖಲು ಹೈದರಾಬಾದ್: ತೆಲಂಗಾಣದಲ್ಲಿ ಬೀದಿನಾಯಿಗಳ ಸಾಮೂಹಿಕ ಹತ್ಯೆಯ ಆರೋಪಗಳು ಕೇಳಿಬಂದಿದೆ. ಗ್ರಾಮ ಪಂಚಾಯಿತಿ ಚುನಾವಣೆ ಸಮಯದಲ್ಲಿ ನೀಡಿದ್ದ ಭರವಸೆಯಂತೆ ಕಳೆದ ಒಂದು ವಾರದಲ್ಲಿ 500 ನಾಯಿಗಳಿಗೆ ವಿಷಪ್ರಾಶನ ಮಾಡಿ ಕೊಲ್ಲಲಾಗಿದೆ ಎಂದು ಆರೋಪಿಸಲಾಗಿದೆ. ಕಾಮರೆಡ್ಡಿ ಜಿಲ್ಲೆಯ ಭವಾನಿಪೇಟ್, ಪಲ್ವಂಚ, ಫರೀದ್‌ಪೇಟ್, ವಾಡಿ ಮತ್ತು ಬಂಡರಾಮೇಶ್ವರಪಲ್ಲಿ ಸೇರಿದಂತೆ ಹಳ್ಳಿಗಳಲ್ಲಿ ಬೀದಿನಾಯಿಗಳನ್ನು ವ್ಯವಸ್ಥಿತವಾಗಿ ಕೊಲ್ಲಲಾಗಿದೆ ಎಂದು ಪ್ರಾಣಿ ಕಲ್ಯಾಣ ಕಾರ್ಯಕರ್ತ ಅದುಲಪುರಂ ಗೌತಮ್ (35) ಜನವರಿ 12ರಂದು

ವಿಷಪ್ರಾಶನ ಮಾಡಿ 500 ಬೀದಿನಾಯಿಗಳ ಹತ್ಯೆ Read More »

ಧನು ಪೂಜೆಗೆಂದು ತೆರಳಿದ ಬಾಲಕ ನಾಪತ್ತೆ

ಮಡಂತ್ಯಾರು: ಬೆಳಗ್ಗೆ ಧನು ಪೂಜೆಗೆಂದು ಹೋದ 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಒಡಿಲ್ನಾಳ ಗ್ರಾಮದ ಸಂಭೋಳ್ಯದಲ್ಲಿ ನಡೆದಿದೆ. ಸುಮಂತ್ (16) ಎಂಬವನೇ ನಾಪತ್ತೆಯಾದ ವಿದ್ಯಾರ್ಥಿ. ಪ್ರತಿದಿನವೂ ಗೆಳೆಯರ ಜೊತೆಗೆ ಹೋಗುತ್ತಿದ್ದ ಬಾಲಕ ಇಂದು ಬಂದಿಲ್ಲ ಎನ್ನುವ ಮಾಹಿತಿ ಸ್ನೇಹಿತರಿಂದ ದೊರೆತಿದ್ದು, ಈ ವೇಳೆ ನಾಪತ್ತೆಯಾಗಿರುವ ವಿಚಾರ ತಿಳಿದಿದೆ. ತೋಟದ ಬದಿಯ ಪ್ರದೇಶದಲ್ಲಿ ರಕ್ತದ ಕಲೆಗಳು ಕಂಡು ಬಂದಿದ್ದು, ಚಿರತೆಗಳು ಓಡಾಡುತ್ತಿವೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ಬಾಲಕ ನಾಪತ್ತೆಗೆ ಸಂಬಂಧಿಸಿದ ಹಾಗೆ ಅನುಮಾನ ವ್ಯಕ್ತವಾಗಿದೆ. ಬೆಳ್ತಂಗಡಿ

ಧನು ಪೂಜೆಗೆಂದು ತೆರಳಿದ ಬಾಲಕ ನಾಪತ್ತೆ Read More »

ಪವರ್ ಟಿವಿ ರಾಕೇಶ್ ಶೆಟ್ಟಿಗೆ ‌ಮೂರು ತಿಂಗಳ ಜೈಲು ಶಿಕ್ಷೆ

ಬೆಂಗಳೂರು: ಖಾಸಗಿ ವಾಹಿನಿ ಪವರ್ ಟಿವಿಯ ಎಂಡಿ ರಾಕೇಶ್ ಶೆಟ್ಟಿಗೆ ಮೂರು ತಿಂಗಳ ಜೈಲು ಶಿಕ್ಷೆ ಪ್ರಕಟಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಅವರು ರಾಕೇಶ್ ಶೆಟ್ಟಿ ಮತ್ತು ‘ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಸಿವಿಲ್‌ ವ್ಯಾಜ್ಯವೊಂದನ್ನು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯವು ಮಧ್ಯಂತರ ಆದೇಶವೊಂದನ್ನು ನೀಡಿತ್ತು. ಆದರೆ, ಈ ಆದೇಶವನ್ನು ಪ್ರತಿವಾದಿ ರಾಕೇಶ್ ಶೆಟ್ಟಿ ಅವರು

ಪವರ್ ಟಿವಿ ರಾಕೇಶ್ ಶೆಟ್ಟಿಗೆ ‌ಮೂರು ತಿಂಗಳ ಜೈಲು ಶಿಕ್ಷೆ Read More »

ಮಹಿಳೆಗೆ ಲೈಂಗಿಕ ಕಿರುಕುಳ, ಲಕ್ಷಾಂತರ ರೂ. ಪಂಗನಾಮ: ಆರೋಪಿ ಹನೀಫ್ ಬಂಧನ

ಬೆಂಗಳೂರು: ಪತಿಯಿಂದ ಮೋಸಕ್ಕೊಳಗಾದ ಮಹಿಳೆಗೆ ನ್ಯಾಯ ಕೊಡಿಸುವುದಾಗಿ ಹೇಳಿ ಆಕೆ ಯಿಂದ 16 ಲಕ್ಷ ರೂ. ದೋಚಿದ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಕರುನಾಡು ಎಂಬ ಖಾಸಗಿ ಚಾನಲ್‌ನ ಎಂಡಿಯನ್ನು ಡಿಸಿಆರ್‌ಇ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹನೀಫ್ ಎಂದು ಗುರುತಿಸಲಾಗಿದೆ. ಬಿಟಿಎಂ ಲೇಔಟ್ ನಿವಾಸಿ ಮಹಿಳೆಯಿಂದ 16 ಲಕ್ಷ ರೂ. ಪಡೆದು ವಂಚಿಸಿದಲ್ಲದೆ, ಆಕೆಯ ಜಾತಿ ಬಗ್ಗೆ ಅಸಭ್ಯವಾಗಿ ನಿಂದಿಸಿದ್ದ. ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಸಿ ಎಸ್ಟಿ

ಮಹಿಳೆಗೆ ಲೈಂಗಿಕ ಕಿರುಕುಳ, ಲಕ್ಷಾಂತರ ರೂ. ಪಂಗನಾಮ: ಆರೋಪಿ ಹನೀಫ್ ಬಂಧನ Read More »

ರಬ್ಬರ್‌ ತೋಟದಲ್ಲಿ ಮೂರು ಮರಿಗಳೊಂದಿಗೆ ಚಿರತೆ ಠಿಕಾಣಿ

ಬೆಳ್ತಂಗಡಿ: ತಾಲೂಕಿನ ಮುಂಡಾಜೆಯ ಮಚ್ಚಿಮಲೆ ಅನಂತ ಭಟ್ ಎಂಬವರ ರಬ್ಬರ್ ತೋಟದಲ್ಲಿ ಮೂರು ಮರಿಗಳೊಂದಿಗೆ ತಾಯಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಟ್ಯಾಪಿಂಗ್ ಕೆಲಸದವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಕೆಲಸದವರು ಬೆಳಗ್ಗೆ ತೋಟಕ್ಕೆ ಹೋದಾಗ ಚಿರತೆಗಳು ಕಾಣಿಸಿರುವುದಾಗಿ ತಿಳಿದು ಬಂದಿದೆ. ಅವರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಮುಂಡಾಜೆ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಓಡಾಟದ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದರು.‌ ಇಲ್ಲೇ ಸಮೀಪದ ಕಾಯರ್ತೋಡಿಯಲ್ಲಿ ನದಿಬದಿಯಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಸ್ಥಳೀಯ ಜನರು ಮಾಹಿತಿ ನೀಡಿದ್ದಾರೆ. ಮರಿಗಳೊಂದಿಗೆ

ರಬ್ಬರ್‌ ತೋಟದಲ್ಲಿ ಮೂರು ಮರಿಗಳೊಂದಿಗೆ ಚಿರತೆ ಠಿಕಾಣಿ Read More »

ಕೊನೆಗೂ ಫಲಿಸುತ್ತಾ ಡಿಕೆಶಿ ಪ್ರಾರ್ಥನೆ?

ಟ್ವೀಟ್‌ನಲ್ಲಿ ಕೊಟ್ಟರು ಡಿ.ಕೆ.ಶಿವಕುಮಾರ್‌ ದೊಡ್ಡದೊಂದು ಸುಳಿವು ಬೆಂಗಳೂರು : ಸಂಕ್ರಾಂತಿ ದಿನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪಾಲಿಗೆ ಶುಭದಿನವಾಗುತ್ತಾ? ಹೀಗೊಂದು ಕುತೂಹಲ ರಾಜ್ಯದ ರಾಜಕೀಯ ವಲಯದಲ್ಲಿ ಹುಟ್ಟಿಕೊಂಡಿದೆ. ಇದಕ್ಕೆ ಕಾರಣವಾಗಿರುವುದು ಡಿಕೆಶಿ ಇಂದು ಮಾಡಿರುವ ಒಂದು ಟ್ವೀಟ್‌. ಬುಧವಾರ ಬೆಳಗ್ಗೆಯೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ಡಿ.ಕೆ ಶಿವಕುಮಾರ್ “ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿದ ಬಳಿಕ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಮತ್ತೊಮ್ಮೆ ಊಹಾಪೋಹಗಳು ದಟ್ಟವಾಗಿದ್ದು,

ಕೊನೆಗೂ ಫಲಿಸುತ್ತಾ ಡಿಕೆಶಿ ಪ್ರಾರ್ಥನೆ? Read More »

error: Content is protected !!
Scroll to Top