ಸುದ್ದಿ

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ | ಗ್ರಾಮಸ್ಥರ ಪಟ್ಟು : ಅಧಿಕಾರಿಗಳು ಪೆಚ್ಚು

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸರಕಾರ ನೀಡಿದ ಗ್ಯಾರೆಂಟಿ ಕಾರ್ಡ್ ಇದೀಗ ಅಧಿಕಾರಿಗಳನ್ನು ಹೊಸ ಇಕ್ಕಟ್ಟಿಗೆ ಸಿಲುಕಿಸಿದೆ. ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಎಂಬಲ್ಲಿ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಆವಾಜ್ ಹಾಕಿದ್ದು, ಅಧಿಕಾರಿಗಳು ಹ್ಯಾಪ್ ಮೋರೆ ಹಾಕಿಕೊಂಡು ಹಿಂದೆ ಬಂದಿದ್ದಾರೆ. ಚುನಾವಣಾ ಸಂದರ್ಭ ಕಾಂಗ್ರೆಸ್ ನಾಯಕರು ಭರವಸೆ ನೀಡಿದಂತೆ – ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರೆಂಟ್ ಬಿಲ್ ಕಟ್ಟೋದು ಬೇಡ ಎಂದು ಹೇಳಿಕೆ ನೀಡುತ್ತಿದ್ದರು. ಇದರ ಜೊತೆಗೆ ಬಡ ಕುಟುಂಬದ ಮಹಿಳೆಯರಿಗೆ ಮಾಸಿಕ ನೆರವು, ಸಿಲಿಂಡರ್ […]

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ | ಗ್ರಾಮಸ್ಥರ ಪಟ್ಟು : ಅಧಿಕಾರಿಗಳು ಪೆಚ್ಚು Read More »

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿ ಆಗಬೇಕು ಎನ್ನುವುದು ಸಂಪ್ರದಾಯ. ಇದನ್ನು ಮುರಿಯಬಾರದು. ಆದ್ದರಿಂದ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಆಗ್ರಹಿಸಿದ್ದಾರೆ. ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭಾನುವಾರ ನಡೆದ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿದರು. ಹಿಂದಿನಿಂದ ಬಂದ ಸಂಪ್ರದಾಯವನ್ನು ಪಾಲಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಈ ಹಿಂದೆಯೂ ಕಾಂಗ್ರೆಸ್ ಚುನಾವಣೆಯಲ್ಲಿ ಬಹುಮತ ಪಡೆದುಕೊಂಡಾಗ, ಕೆಪಿಸಿಸಿ ಅಧ್ಯಕ್ಷರನ್ನೇ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯ Read More »

ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ

ಹೊಸದಿಲ್ಲಿ: ಕರ್ನಾಟಕ ಕೇಡರ್‌ ನ 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಉನ್ನತ ಮಟ್ಟದ ಆಯ್ಕೆ ಸಮಿತಿಯು ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಸೇವೆ ಸಲ್ಲಿಸುತ್ತಿರುವ ಸೂದ್ ಅವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನೊಳಗೊಂಡ ಆಯ್ಕೆ ಸಮಿತಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರವೀಣ್ ಸೂದ್

ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ Read More »

ಬೆಳ್ತಂಗಡಿ: ಗೆಲುವಿನ ಹಾದಿಯಲ್ಲಿ ಪೂಂಜಾ ಓಟ | 13100 ಮತಗಳ ಮುನ್ನಡೆ

ಪುತ್ತೂರು: ಬೆಳ್ತಂಗಡಿಯ ಅಭಿವೃದ್ಧಿಯ ಹರಿಕಾರ ಎಂದೇ ಕರೆಸಿಕೊಂಡಿರುವ ಹಾಲಿ ಶಾಸಕ ಹರೀಶ್ ಪೂಂಜಾ ಅವರು 74896 ಮತಗಳನ್ನು ಪಡೆದುಕೊಂಡು, 13100 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸಿನ ರಕ್ಷಿತ್ ಶಿವರಾಂ 61734 ಮತ ಪಡೆದುಕೊಂಡು ಎರಡನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಜೆಡಿಎಸ್‍ ನ ಅಶ್ರಫ್ ಆಲಿಕುಂಞಿ 406, ಆಮ್ ಆದ್ಮಿಯ ಜನಾರ್ದನ ಬಂಗೇರ 207, ಅಕ್ಬರ್ ಬೆಳ್ತಂಗಡಿ 1808, ಆದಿತ್ಯ ನಾರಾಯಣ ಕೊಲ್ಲಾಜೆ 296 ಮತ, ಶೈಲೇಶ್ 226, ಮಹೇಶ್ 163 ಹಾಗೂ ನೋಟಾ ಪರವಾಗಿ 685 ಮತ

ಬೆಳ್ತಂಗಡಿ: ಗೆಲುವಿನ ಹಾದಿಯಲ್ಲಿ ಪೂಂಜಾ ಓಟ | 13100 ಮತಗಳ ಮುನ್ನಡೆ Read More »

ಕೊಂಬೆಟ್ಟು ರಸ್ತೆಯಲ್ಲಿ ಧರೆಗುರುಳಿದ ಮರ: ವಿದ್ಯುತ್ ಸಂಪರ್ಕ ಕಡಿತ

ಪುತ್ತೂರು: ಇಲ್ಲಿನ ಕೊಂಬೆಟ್ಟು ರಸ್ತೆಯಲ್ಲಿ ಮರವೊಂದು ರಸ್ತೆಗಡ್ಡವಾಗಿ ಧರೆಗುರುಳಿದ್ದು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಇದರಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮರ ರಸ್ತೆಗಡ್ಡವಾಗಿ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಪ್ರಮಾದವಶಾತ್, ಯಾವುದೇ ಅಪಾಯ ಸಂಭವಿಸಿಲ್ಲ. ಈ ಭಾಗದ ಅನೇಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ವಿದ್ಯುತ್ ತಂತಿ ಕಡಿದು ಬಿದ್ದಿದೆ. ಇದರಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಕೊಂಬೆಟ್ಟು ರಸ್ತೆಯಲ್ಲಿ ಧರೆಗುರುಳಿದ ಮರ: ವಿದ್ಯುತ್ ಸಂಪರ್ಕ ಕಡಿತ Read More »

ಬೈಕ್‌ನಲ್ಲಿ ಕದ್ರಿ ದೇವಳಕ್ಕೆ ನುಗ್ಗಿದ ನಾಲ್ವರು ಯುವಕರು | ಯುವಕರ ಉದ್ದೇಶದ ಬಗ್ಗೆ ಹಲವು ಅನುಮಾನ

ಮಂಗಳೂರು: ಮಂಗಳೂರಿನ‌ ಪುರಾಣ ಪ್ರಸಿದ್ಧ ಐತಿಹಾಸಿಕ ಕದ್ರಿ ದೇಗುಲಕ್ಕೆ ಅಪರಿಚಿತರು ಬೈಕ್‌ನೊಂದಿಗೆ ನುಗ್ಗಿರುವ ಘಟನೆ ನಡೆದಿದೆ. ಮೂವರು ಯುವಕರು ಬೈಕ್​ನೊಂದಿಗೆಯೇ ದೇವಾಲಯದ ಆವರಣ ಪ್ರವೇಶಿಸಿದ್ದಾರೆ. ಅನುಮಾನಾಸ್ಪದವಾಗಿ ದೇಗುಲ ಪ್ರವೇಶಿಸಿದವರನ್ನು ಸ್ಥಳೀಯರು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಸೈಗೋಳಿ ನಿವಾಸಿಗಳಾದ ಹಸನ್ ಶಾಹಿನ್‌, ಜಾಫರ್‌, ಫಾರೂಕ್‌ನನ್ನು ಕದ್ರಿ ಪೊಲೀಸರಿಗೆ ಒಪ್ಪಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕದ್ರಿ ಠಾಣೆಯಲ್ಲಿ ವಶಕ್ಕೆ ಪಡೆದಿರುವವರ ತೀವ್ರ ವಿಚಾರಣೆ ನಡೆಯುತ್ತಿದೆ. ಈ ಹಿಂದೆ ಶಂಕಿತ ಉಗ್ರ

ಬೈಕ್‌ನಲ್ಲಿ ಕದ್ರಿ ದೇವಳಕ್ಕೆ ನುಗ್ಗಿದ ನಾಲ್ವರು ಯುವಕರು | ಯುವಕರ ಉದ್ದೇಶದ ಬಗ್ಗೆ ಹಲವು ಅನುಮಾನ Read More »

ಕುಟುಂಬಕ್ಕೆ ಆಧಾರವಾಗಿದ್ದ ಸಹೋದರರಿಗೆ ಅಪಘಾತ | ಚಿಕಿತ್ಸಾ ವೆಚ್ಚ ಭರಿಸಲು ಆರ್ಥಿಕ ಸಹಾಯಕ್ಕೆ ಮೊರೆ

ಪುತ್ತೂರು: ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಟಿಪ್ಪರ್ ಅಪ್ಪಳಿಸಿತ್ತು. ಅಷ್ಟೇ, ಬೈಕಿನಲ್ಲಿದ್ದ ಸಹೋದರರಿಬ್ಬರಿಗೂ ತೀವ್ರ ಸ್ವರೂಪದ ಗಾಯವಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಯಿತು. ನೆರವಿಗೆ ನಿಲ್ಲಬೇಕಿದ್ದ ತಂದೆ ವಿಕಲಚೇತನ. ಸಹಾಯಕ್ಕೆ ನಿಲ್ಲುವವರಾರು? ಕುಟುಂಬದ ಜವಾಬ್ದಾರಿಗೆ ಹೆಗಲು ಕೊಡುವವರಾರು? ಇಂತಹ ದೈನವೀ ಸ್ಥಿತಿಯಲ್ಲಿ ಸಹೋದರರಿಗೆ ನೆರವಾಗುವಂತೆ ತಾಯಿ ಮನವಿ ಮಾಡಿಕೊಂಡಿದ್ದಾರೆ. ಇದು ಕುಟುಂಬವೊಂದರ ಹೃದಯ ವಿದ್ರಾವಕ ಸ್ಥಿತಿ. ಕಡಬ ತಾಲೂಕಿನ ಕುದ್ಮಾರು ಗ್ರಾಮದ ಪದ್ಮಯ್ಯ ಗೌಡ ಪುಷ್ಪಲತಾ ದಂಪತಿ ಪುತ್ರರಾದ ಮಿಥುನ್ ಹಾಗೂ ಚಿಂತನ್ ಅಪಘಾತಕ್ಕೀಡಾದವರು.

ಕುಟುಂಬಕ್ಕೆ ಆಧಾರವಾಗಿದ್ದ ಸಹೋದರರಿಗೆ ಅಪಘಾತ | ಚಿಕಿತ್ಸಾ ವೆಚ್ಚ ಭರಿಸಲು ಆರ್ಥಿಕ ಸಹಾಯಕ್ಕೆ ಮೊರೆ Read More »

ಮತ ಎಣಿಕೆಯಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿವರೆಗೆ 144 ಸೆಕ್ಷನ್

ಪುತ್ತೂರು: ಮತ ಎಣಿಕೆ ಕಾರ್ಯ ನಡೆಯುವ ಮೇ 13ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಆದೇಶಿಸಿದ್ದಾರೆ. ಮೇ 13ರ ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು

ಮತ ಎಣಿಕೆಯಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿವರೆಗೆ 144 ಸೆಕ್ಷನ್ Read More »

ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆ ಆನೆ ಶಿಬಿರದಲ್ಲಿ ಸಾವು

ಸುಳ್ಯ: ಕೆರೆಗೆ ಬಿದ್ದು ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆ ದುಬಾರೆಯ ಆನೆ ಶಿಬಿರದಲ್ಲಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಸುಳ್ಯದ ಅಜ್ಜಾವರದಲ್ಲಿ ಏಪ್ರಿಲ್ 13ರಂದು ನಾಲ್ಕು ಆನೆಗಳು ಕೆರೆಗೆ ಬಿದ್ದಿದ್ದವು. ಇದರಲ್ಲಿ ಮೂರು ಆನೆಗಳನ್ನು ಮೆಲಕ್ಕೆತ್ತಲಾಗಿತ್ತು. ಮರಿಯಾನೆ ಮಾತ್ರ ಕೆರೆಯಲ್ಲೇ ಬಾಕಿಯಾಗಿದ್ದು, ಸ್ಥಳೀಯರು ರಕ್ಷಿಸಿದ್ದರು. ಆ ವೇಳೆ ಆನೆಗಳ ಹಿಂಡು ಮುಂದಕ್ಕೆ ಸಾಗಿದ್ದರಿಂದ, ಮರಿಯಾನೆ ಬಾಕಿಯಾಗಿತ್ತು. ಮರಿಯಾನೆಯನ್ನು ತನ್ನ ಗುಂಪಿಗೂ ಆನೆಗಳು ಸೇರಿಸಿಕೊಳ್ಳಲಿಲ್ಲ. ತಜ್ಞರ ಅಭಿಪ್ರಾಯದಂತೆ, ಮರಿಯಾನೆಯನ್ನು ದುಬಾರೆ ಆನೆ ಶಿಬಿರಕ್ಕೆ ಕಳುಹಿಸಿಕೊಡಲಾಗಿತ್ತು. ಶಿಬಿರದಲ್ಲಿ ಮರಿಯಾನೆ ಚುರುಕಾಗಿಯೇ ಇತ್ತು. ಆದರೆ

ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆ ಆನೆ ಶಿಬಿರದಲ್ಲಿ ಸಾವು Read More »

ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ

ಚುನಾವಣಾ ಪ್ರಚಾರದಲ್ಲಿ ಕೇಂದ್ರದ ನಾಯಕರು ಭಾಗಿ ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕೇಂದ್ರ ಸಚಿವರು ಮತ್ತು ಬಿಜೆಪಿಯ ಪ್ರಮುಖ ನಾಯಕರ ದಂಡೇ ರಾಜ್ಯಕ್ಕೆ ಆಗಮಿಸುತ್ತಿದೆ. ವಿವಿಧ ರಾಜ್ಯಗಳ ಸಿಎಂ, ಡಿಸಿಎಂ ಮತ್ತು ಕೇಂದ್ರ ಸಚಿವರು ಆಗಮಿಸುತ್ತಿದ್ದಾರೆ. ಇಂದು ಮಂಡ್ಯ ಮತ್ತು ವಿಜಯಪುರ ಜಿಲ್ಲೆಗೆ ಹಿಂದೂ ಫಯರ್​ ಬ್ರ್ಯಾಂಡ್​ ಲೀಡರ್‌ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಆಗಮಿಸಲಿದ್ದಾರೆ.ಲಖನೌನಿಂದ ಮೈಸೂರಿಗೆ ಆಗಮಿಸುವ ಯೋಗಿ ಆದಿತ್ಯನಾಥ್​​ 11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್​​ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ.

ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ Read More »

error: Content is protected !!
Scroll to Top