ಸುದ್ದಿ

ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

ವೀರಮಂಗಲ  : ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆಯು ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ನಡೆಯಿತು. ದಿ.ರಾಮಚಂದ್ರ ಅರ್ಬಿತ್ತಾಯ ಸಂಸ್ಮರಣೆ ಹಾಗೂ ಸುಶ್ರಾವ್ಯ ಸ್ವರದ ಯಕ್ಷಗಾನ ಭಾಗವತರಾದ ಕು.ರಚನಾ ಚಿದ್ಗಲ್ ಇವರಿಗೆ  ಶ್ರವಣಸ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿಯಾಗಿದ್ದುಕೊಂಡು ಯಕ್ಷಗಾನದಲ್ಲಿ ಸಾಧನೆ ಮಾಡುತ್ತಿರುವ ಕಲಾವಿದರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಆ ಬಳಿಕ ನಡೆದ  ಜಾಂಬವತಿ‌ ಕಲ್ಯಾಣ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು. ಹಿಮ್ಮೇಳದ ಭಾಗವತರಾಗಿ ಆನಂದ ಸವಣೂರು,  ಕು.ರಚನಾ ಹಾಗೂ […]

ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ Read More »

ಕಿರುತೆರೆ ನಟ ಶ್ರೀಧರ ನಾಯಕ್‌ ನಿಧನ

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ (47) ನಿನ್ನೆ ರಾತ್ರಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಲ್ಬಣಗೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತದೇಹ ಇಡಲಾಗಿದೆ. ಗುರುತೇ ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ಶ್ರೀಧರ್ ಅವರಿಗೆ ಅನಾರೋಗ್ಯ ಉಂಟಾದ ವಿಚಾರದ ಬಗ್ಗೆ ಏಪ್ರಿಲ್​ನಲ್ಲಿ

ಕಿರುತೆರೆ ನಟ ಶ್ರೀಧರ ನಾಯಕ್‌ ನಿಧನ Read More »

ಸಾಲದ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ

ಕಾರಿನೊಳಗೆ ಕುಳಿತು ವಿಷ ಸೇವಿಸಿದ ಇಡೀ ಕುಟುಂಬ ಹರ್ಯಾಣ: ಸಾಲ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ. ಡೆಹ್ರಾಡೂನ್​ನ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಜೀವ ಬಿಟ್ಟಿದ್ದಾರೆ. ಸೆಕ್ಟರ್ 27ರಲ್ಲಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಇರುವುದು ಪತ್ತೆಯಾಗಿದೆ. ಕುಟುಂಬವು ಭಾರಿ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ. ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್ ಪಂಚಕುಲದ ಬಾಗೇಶ್ವರ

ಸಾಲದ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ Read More »

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಪ್ರತಿಭಟಿಸಿದವರ ಮೇಲೆ ಕೇಸ್‌

ಬಜ್ಪೆ ಚಲೋ ಆಯೋಜಕರು, ಭಾಷಣಕಾರರ ವಿರುದ್ಧ ಎಫ್‌ಐಆರ್‌ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಸದಸ್ಯರು ನಡೆಸಿದ ಬಜ್ಪೆ ಚಲೋ ಪ್ರತಿಭಟನೆಯ ಆಯೋಜಕರು ಮತ್ತು ಭಾಷಣಕಾರರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ಭಾನುವಾರ ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಬಜ್ಪೆಯ ಶಾರದಾ ಮಂಟಪದ ಬಳಿ ಪ್ರತಿಭಟನೆಯನ್ನು ಪೊಲೀಸರ ಅನುಮತಿಯಿಲ್ಲದೆ ನಡೆಸಲಾಗಿತ್ತು.

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಪ್ರತಿಭಟಿಸಿದವರ ಮೇಲೆ ಕೇಸ್‌ Read More »

ಜೂ.1 : ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-ರಾಷ್ಟ್ರೀಯ ಕಲಾ ಸಮ್ಮೇಳನ

ಎಂಟು ತಂಡಗಳಿಂದ ಯಕ್ಷಗಾನ ಸ್ಪರ್ಧೆ; ಕ್ರಿಕೆಟಿಗ ರೋಹಿತ್‌ ಶರ್ಮ ತಾರಾ ಮೆರುಗು ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಜೂನ್ 1ರಂದು ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್‌ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನ ನಡೆಯಲಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿ ತಿಳಿಸಿದ್ದಾರೆ. ಕಳೆದ ವರ್ಷ ಯಕ್ಷ ಸಂಭ್ರಮಕ್ಕೆ ಜನಪ್ರಿಯ ನಟ ಸುದೀಪ್‌ ತಾರಾ ಮೆರುಗು ನೀಡಿದ್ದರೆ ಈ ವರ್ಷ ಖ್ಯಾತ

ಜೂ.1 : ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-ರಾಷ್ಟ್ರೀಯ ಕಲಾ ಸಮ್ಮೇಳನ Read More »

ಭಾರೀ ಮಳೆ ಹಿನ್ನಲೆ | ಪುತ್ತೂರಿಗೆ ಆಗಮಿಸಿದ ಎನ್‍ ಡಿಆರ್ ಎಫ್‍ ತಂಡ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪುತ್ತೂರಿಗೆ 25 ಸದಸ್ಯರನ್ನೊಳಗೊಂಡ ಎನ್‍ ಡಿಆರ್‍ ಎಫ್ ತಂಡ ಆಗಮಿಸಿದೆ. ಸದ್ಯ ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ ಎನ್‍ ಡಿಆರ್ ಎಫ್  ಸದಸ್ಯರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಪುತ್ತೂರು ಕೇಂದ್ರವಾಗಿರಿಸಿ‌ ಕಾರ್ಯಾಚರಣೆ ನಡೆಸಲಿರುವ ತಂಡ, ಮಳೆಯಿಂದ‌ ಹೆಚ್ಚು ಹಾನಿಗೊಳಗಾಗುವ ಬೆಳ್ತಂಗಡಿ, ಕಡಬ, ಬಂಟ್ವಾಳ, ಸುಳ್ಯ ಮತ್ತು ಪುತ್ತೂರು ತಾಲೂಕಿನ ಪರಿಸ್ಥಿತಿ ಅವಲೋಕಿಸಲಿದೆ. ಕಾರ್ಯಾಚರಣೆಯ ವೇಳೆ ಅಪಾಯಕ್ಕೊಳಗಾದ ಜನರನ್ನು ಪತ್ತೆಹಚ್ಚಲು ಬಳಸುವ ಶ್ವಾನ ಕಾರ್ಯಾಚರಣೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳೊಂದಿಗೆ

ಭಾರೀ ಮಳೆ ಹಿನ್ನಲೆ | ಪುತ್ತೂರಿಗೆ ಆಗಮಿಸಿದ ಎನ್‍ ಡಿಆರ್ ಎಫ್‍ ತಂಡ Read More »

ಆಪರೇಷನ್ ಸಿಂದೂರ’ದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪುತ್ತೂರಿನ ಮಳುವೇಲಿನ ಸುಬೇದಾರ್ ಪದ್ಮನಾಭ ಗೌಡರಿಗೆ ಅಭಿನಂದನೆ

ಪುತ್ತೂರು: ಪುತ್ತೂರಿನ ಮಳುವೇಲು ಮನೆಯ ಬಿಎಸ್ಫ್ 148 ಕಂಪೆನಿ ಕಮಾಂಡೆಂಟ್ ಆಗಿದ್ದು 150 ಯೋಧರು ಮತ್ತು ಅಧಿಕಾರಿಗಳನ್ನು ಒಳಗೊಂಡ ಪಡೆಯನ್ನು ಮುನ್ನಡೆಸಿ ಸಮಗ್ರ ಭಾರತವೇ ಹೆಮ್ಮೆ ಪಡುವಂತಹ ಇತ್ತೀಚೆಗೆ ನಡೆದ ‘ಆಪರಷನ್ ಸಿಂಧೂರ’ದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಸುಬೇದಾರ್ ಪದ್ಮನಾಭ ಗೌಡರನ್ನು ಮಳುವೇಲು ಕುಟುಂಬ ಆತ್ಮೀಯವಾಗಿ ಬರಮಾಡಿಕೊಂಡು ಅಭಿನಂದಿಸಿತು. ಮಳುವೇಲು ಚೆನ್ನಪ್ಪ ಮತ್ತು ಉಮ್ಮಕ್ಕ ದಂಪತಿಗಳ ಸುಪುತ್ರನಾಗಿರುವ ಗೌಡರು ಪಾಕಿಸ್ತಾನದ ವಿರುದ್ಧ ಬಾರತ ಹೂಡಿದ್ದ ರಕ್ಷಣಾತ್ಮಕ ಯುದ್ಧ ಚಟುವಟಿಕೆಯಲ್ಲಿ ಭಾಗವಹಿಸಿರುವುದು ಪುತ್ತೂರು ಹೆಮ್ಮೆ ಪಡುವಂತಹ ವಿಚಾರವಾಗಿದೆ. ವಾಘಾ

ಆಪರೇಷನ್ ಸಿಂದೂರ’ದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪುತ್ತೂರಿನ ಮಳುವೇಲಿನ ಸುಬೇದಾರ್ ಪದ್ಮನಾಭ ಗೌಡರಿಗೆ ಅಭಿನಂದನೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್  (ರಿ )  ವಿಟ್ಲ ತಾಲೂಕಿನ  ಅಳಿಕೆ ವಲಯದಿಂದ   ಮಕ್ಕಳಿಗೆ ಉಚಿತ ಪುಸ್ತಕ  ವಿತರಣೆ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್  (ರಿ )  ವಿಟ್ಲ ತಾಲೂಕಿನ  ಅಳಿಕೆ ವಲಯದ   ಅಳಿಕೆ ಕಾರ್ಯ ಕ್ಷೇತ್ರದ ಒಕ್ಕೂಟ ಸಭೆಯಲ್ಲಿ  ಗ್ರಾಮದ ಮಕ್ಕಳಿಗೆ ಉಚಿತ ಪುಸ್ತಕ  ವಿತರಣೆ ಕಾರ್ಯಕ್ರಮ ನಡೆಯಿತು. ಒಕ್ಕೂಟದ  ನಿಕಟ ಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿಯವರ ನೇತೃತ್ವದಲ್ಲಿ ಉಚಿತ ಪುಸ್ತಕವನ್ನು ಮಕ್ಕಳಿಗೆ   ವಿತರಿಸಲಾಯಿತು. ಕಾರ್ಯಕ್ರಮದ  ಅಧ್ಯಕ್ಷತೆಯನ್ನು  ಒಕ್ಕೂಟದ  ಅಧ್ಯಕ್ಷರಾದ  ರವೀಶ್ ರವರು ವಹಿಸಿದರು. ಕಾರ್ಯಕ್ರಮದಲ್ಲಿ  ಅಳಿಕೆ ಪಂಚಾಯತ್ ಅಧ್ಯಕ್ಷರಾದ  ಪದ್ಮನಾಭ ಪೂಜಾರಿ ಹಾಗೂ ಶಾಲಾ ಮುಖೋಪಾಧ್ಯಾಯ  ಈಶ್ವರ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್  (ರಿ )  ವಿಟ್ಲ ತಾಲೂಕಿನ  ಅಳಿಕೆ ವಲಯದಿಂದ   ಮಕ್ಕಳಿಗೆ ಉಚಿತ ಪುಸ್ತಕ  ವಿತರಣೆ Read More »

ವಾಗೀಶ್ ವಿ 68 ಅಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ  ಟೈಟಲ್ ಪೋಸ್ಟರ್  ಬಿಡುಗಡೆ

ಬೆಳ್ತಂಗಡಿ : ವಾಗೀಶ್ ವಿ 68 ಆಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ  ಟೈಟಲ್ ಪೋಸ್ಟರ್  ಮೇ. 25 ಭಾನುವಾರ ಬಿಡುಗಡೆಯಾಗಿದೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಕೆ ವಿಟ್ಲ ಇವರು  ಮೋಕೆದ ತಿರ್ಲ್ ಕಿರು ಸಸ್ಪೆನ್ಸ್ ಲವ್ ಸ್ಟೋರಿಯ ಟೈಟಲ್ ಬಿಡುಗಡೆ ಮಾಡಿದ್ದಾರೆ.  ಹಾಗೆಯೆ ಮೋಕೆದ ತಿರ್ಲ್ [True love (Fake love) =? ಎಂಬ ಕುತೂಹಲಕಾರಿಯಾದ ಸಿನಿಮಾ ಇದಾಗಿದೆ. ಈ ಸಸ್ಪೆನ್ಸ್ ತುಳು ಲವ್ ಸ್ಟೋರಿಯ ಟ್ರೈಲರ್ ಅತಿ ಶೀಘ್ರದಲ್ಲಿ

ವಾಗೀಶ್ ವಿ 68 ಅಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ  ಟೈಟಲ್ ಪೋಸ್ಟರ್  ಬಿಡುಗಡೆ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸತ್ತಿಕಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

error: Content is protected !!
Scroll to Top