ಸುದ್ದಿ

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಮೋದಿ

ಶಾಂತಿ ನೆಲೆಸಿ, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಹಾರೈಕೆ ನವದೆಹಲಿ : ಜಗತ್ತು 2026ಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ದೇಶದಲ್ಲಿ ಶಾಂತಿ ನೆಲೆಸಿ, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಎಕ್ಸ್‌​​ನಲ್ಲಿ ಸಂದೇಶವನ್ನು ಹಂಚಿಕೊಂಡಿರುವ ಮೋದಿ, ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸು ಪಡೆಯಲಿ ಎಂದು ಹಾರೈಸಿದ್ದಾರೆ. ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು […]

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಮೋದಿ Read More »

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಘಟಾನುಘಟಿ ವಕೀಲರ ಎಂಟ್ರಿ

ದೇವಸ್ಥಾನದ ಪರವಾಗಿ ವಾದ ಮಾಡಲು ನಾಡಿನ ಖ್ಯಾತ ವಕೀಲರಿಂದ ವಕಾಲತ್ತು ಸಲ್ಲಿಕೆ ಬೆಳ್ತಂಗಡಿ: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಷಡ್ಯಂತ್ರ ಪ್ರಕರಣಕ್ಕೆ ದಿಢೀರ್‌ ಎಂದು ತಿರುವು ಸಿಕ್ಕಿದ್ದು, ಧರ್ಮಸ್ಥಳ ದೇವಸ್ಥಾನದ ಪರವಾಗಿ ವಾದಿಸಲು ನಾಡಿನ ಖ್ಯಾತ ವಕೀಲರು ಮುಂದೆ ಬಂದಿದ್ದಾರೆ. ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025ರ ಸಂಬಂಧ ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಪುತ್ತೂರಿನ ಮಹೇಶ್ ಕಜೆ

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಘಟಾನುಘಟಿ ವಕೀಲರ ಎಂಟ್ರಿ Read More »

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ

40ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಶಿಕ್ಷಣ ತಜ್ಞ ಮಂಗಳೂರು : ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಗುರುವಾರ (ಜ.1) ಮುಂಜಾನೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ರಾಜ್ಯದ ಪ್ರಮುಖ ಶಿಕ್ಷಣ ತಜ್ಞರ, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದಾರೆ. ವಿನಯ ಹೆಗ್ಡೆ

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ Read More »

ಸುಳ್ಯ : ರಿಕ್ಷಾ ಚಾಲಕನ ಹತ್ಯೆ ಮಾಡಿದ ಇಬ್ಬರ ಬಂಧನ

ಸುಳ್ಯ: ಆಟೋರಿಕ್ಷಾ ಚಾಲಕ ಅಬ್ದುಲ್ ಜಬ್ಬಾರ್ ಎಂಬವರನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41) ಮತ್ತು ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ.ಎಸ್ ಯಾನೆ ಮನು (42)ಬಂದಿತ ಆರೋಪಿಗಳು. ಅಬ್ದುಲ್ ಜಬ್ಬಾರ್ ಎಂಬವರನ್ನು 2025ರ ಅಕ್ಟೋಬರ್‌ 16ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಬಾಡಿಗೆಯ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ

ಸುಳ್ಯ : ರಿಕ್ಷಾ ಚಾಲಕನ ಹತ್ಯೆ ಮಾಡಿದ ಇಬ್ಬರ ಬಂಧನ Read More »

ಪುತ್ತೂರು : ನಿವೃತ್ತ ಪ್ರಾಂಶುಪಾಲರ ಮನೆಯಲ್ಲಿ ದರೋಡೆಗೆ ಯತ್ನಿಸಿದ ದಂಪತಿ ಬಂಧನ

ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ಮಧ್ಯರಾತ್ರಿ ನುಗ್ಗಿ ದರೋಡೆಗೆ ಯತ್ನಿಸಿ, ದಂಪತಿಯನ್ನು ಬೆದರಿಸಿದ ಪ್ರಕರಣದಲ್ಲಿ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಆರ್ಚಕ ಹಾಗೂ ಆತನ ಪತ್ನಿಯನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಕಾರ್ತಿಕ್ ರಾವ್(31) ಹಾಗೂ ಅವನ ಪತ್ನಿ ಸ್ವಾತಿ ರಾವ್ ಬಂಧಿತ ಆರೋಪಿಗಳು. ಪುತ್ತೂರು ಕಸಬಾ ನಿವಾಸಿ ನಿವೃತ್ತ ಪ್ರಾಂಶುಪಾಲ ಎ.ವಿ.ನಾರಾಯಣ(84) ಅವರು ನೀಡಿದ ದೂರಿನಂತೆ ಡಿ.17ರ ಮಧ್ಯರಾತ್ರಿ ಇಬ್ಬರು ಅಪರಿಚಿತರು ಹೆಲೈಟ್ ಧರಿಸಿಕೊಂಡು ಮುಖಚಹರೆಯನ್ನು ಮರೆಮಾಚಿ ಮನೆ ಹಿಂಬಾಗಿಲಿನಿಂದ ಪ್ರವೇಶಿಸಿ

ಪುತ್ತೂರು : ನಿವೃತ್ತ ಪ್ರಾಂಶುಪಾಲರ ಮನೆಯಲ್ಲಿ ದರೋಡೆಗೆ ಯತ್ನಿಸಿದ ದಂಪತಿ ಬಂಧನ Read More »

ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ : ಪೊಲೀಸರ ಕಣ್ಗಾವಲಿನ ನಡುವೆ ಮೋಜುಮಸ್ತಿ

ಪಟಾಕಿ ಸಿಡಿಸಿ, ಕೇಕ್‌ ಕಟ್‌ ಮಾಡಿ ಸಂಭ್ರಮಿಸಿದ ಜನ ಮಂಗಳೂರು: ಹೊಸ ವರ್ಷವನ್ನು ಇಡೀ ವಿಶ್ವವೇ ಸಂಭ್ರಮದಿಂದ ಸ್ವಾಗತಿಸಿದೆ. ಮಂಗಳೂರು, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಗಡಿಯಾರದ ಮುಳ್ಳು ರಾತ್ರಿ 12ನ್ನು ಸ್ಪರ್ಶಿಸುತ್ತಿದ್ದಂತೆ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಪಟಾಕಿ ಸಿಡಿಸಿ ಜನರು 2026ಕ್ಕೆ ಸ್ವಾಗತ ಕೋರಿದರು. ಮಂಗಳೂರಿನಲ್ಲಿ ಡಿಜೆ ಸಾಂಗ್‍ಗಳ ಜೊತೆಗೆ ಯಕ್ಷಗಾನದ ಹಾಡುಗಳಿಗೆ ನೃತ್ಯ ಮಾಡಿ ಹೊಸ ವರ್ಷವನ್ನು ಜನ ಸ್ವಾಗತಿಸಿದ್ದಾರೆ. ಮಂಗಳೂರಿನ ಕೆಲವೆಡೆ ಖಾಸಗಿಯಾಗಿ ಪಾರ್ಟಿಗಳು ನಡೆದಿವೆ. ಹೋಟೆಲ್‌, ಬಾರ್‌ಗಳಲ್ಲಿ ಮಾಮೂಲಿಗಿಂತ ಹೆಚ್ಚು

ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ : ಪೊಲೀಸರ ಕಣ್ಗಾವಲಿನ ನಡುವೆ ಮೋಜುಮಸ್ತಿ Read More »

ಜಿಡಿಪಿಯಲ್ಲಿ ಜಪಾನನನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ನೆಗೆದ ಭಾರತ

ಈಗ ಭಾರತ ನಾಲ್ಕನೇ ಅತಿದೊಡ್ಡ ಆರ್ಥಿಕತೆ ಹೊಂದಿದ ದೇಶ ನವದೆಹಲಿ: ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಭಾರತ ಹೊರಹೊಮ್ಮಿದೆ. ಆರ್ಥಿಕ ಸುಧಾರಣೆಗಳಿಂದ ಜಪಾನನ್ನು ಹಿಂದಿಕ್ಕಿ ಭಾರತ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಗಾತ್ರವು 4.18 ಟ್ರಿಲಿಯನ್ ಡಾಲರ್‌ಗೆ ಏರಿಕೆಯಾಗಿದೆ. 4.18 ಟ್ರಿಲಿಯನ್ ಡಾಲರ್ ಜಿಡಿಪಿಯೊಂದಿಗೆ ಭಾರತವು ಜಪಾನನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ಮುಂದಿನ 3 ವರ್ಷಗಳಲ್ಲಿ ಜರ್ಮನಿಯನ್ನು ಹಿಂದಿಕ್ಕಲಿದೆ.

ಜಿಡಿಪಿಯಲ್ಲಿ ಜಪಾನನನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ನೆಗೆದ ಭಾರತ Read More »

ಕೋಗಿಲು ಒತ್ತುವರಿ ಕಾರ್ಯಾಚರಣೆ : ಕೇರಳದ ಬಳಿಕ ಮೂಗುತೂರಿಸಿದ ಪಾಕಿಸ್ತಾನ

ಬಿಜೆಪಿ ಕೆಂಡಾಮಂಡಲ; ಕಾಂಗ್ರೆಸ್‌ಗೆ ಗಂಟಲಿನ ಬಿಸಿತುಪ್ಪವಾದ ವಿವಾದ ಬೆಂಗಳೂರು: ನಗರದ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಕೇರಳದ ಬಳಿಕ ಪಾಕಿಸ್ತಾನವೂ ಮೂಗುತೂರಿಸಿರುವುದು ವಿವಾದವನ್ನು ಇನ್ನಷ್ಟು ತೀವ್ರಗೊಳಿಸಿದೆ. ಈ ವಿಚಾರದಲ್ಲಿ ಪಾಕಿಸ್ತಾನ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ಮೇಲೆ ಬಿಜೆಪಿ ಮುಗಿಬಿದ್ದಿದ್ದು, ಕಾಂಗ್ರೆಸ್ ಸರ್ಕಾರ ಒಡೆದು ಆಳುವ ತುಷ್ಟೀಕರಣ ರಾಜಕಾರಣ ಮಾಡುತ್ತಿರುವುದರಿಂದ ಆಡಳಿತ ಹಳ್ಳಹಿಡಿದಿದೆ ಎಂದು ಆರೋಪಿಸಿದೆ. ಅಕ್ರಮವಾಗಿ ನಿರ್ಮಿಸಲಾಗಿದ್ದ ಮುಸ್ಲಿಮರ ಸುಮಾರು 200 ಮನೆಗಳನ್ನು ನೆಲಸಮ ಮಾಡಿದ್ದಕ್ಕೆ ಹೇಳಿಕೆ

ಕೋಗಿಲು ಒತ್ತುವರಿ ಕಾರ್ಯಾಚರಣೆ : ಕೇರಳದ ಬಳಿಕ ಮೂಗುತೂರಿಸಿದ ಪಾಕಿಸ್ತಾನ Read More »

ಒಡಹುಟ್ಟಿದ ಸಹೋದರನ ಮಗನ ಜೊತೆ ಮಗಳ ಮದುವೆ ನೆರವೇರಿಸಿದ ಪಾಕ್‌ ದಂಡನಾಯಕ ಮುನೀರ್‌

ತೀರಾ ಖಾಸಗಿಯಾಗಿ ನಡೆದ ಕಾರ್ಯಕ್ರಮ; ಕೆಲವೇ ಗಣ್ಯರು ಭಾಗಿ ರಾವಲ್ಪಿಂಡಿ: ಪಾಕಿಸ್ತಾನ ಸೇನೆಯ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಕೆಲ ದಿನಗಳ ತನ್ನ ಮಗಳ ವಿವಾಹ ನೆರವೇರಿಸಿದ್ದಾರೆ. ತನ್ನ ಸ್ವಂತ ತಮ್ಮನ ಮಗ ಖಾಸಿಮ್ ಮುನೀರ್‌ಗೆ ಮಗಳನ್ನು ಕೊಟ್ಟು ಮದುವೆ ಮಾಡಿದ್ದಾರೆ. ಡಿಸೆಂಬರ್ 26ರಂದು ರಾವಲ್ಪಿಂಡಿಯಲ್ಲಿ ಈ ಮದುವೆ ಕಾರ್ಯಕ್ರಮ ನಡೆದಿದೆ. ಮುನೀರ್ ತನ್ನ ಮೂರನೇ ಮಗಳನ್ನು ತನ್ನ ಸಹೋದರನ ಮಗ ಕ್ಯಾಪ್ಟನ್ ಅಬ್ದುಲ್ ರೆಹ್ಮಾನ್‌ಗೆ ಕೊಟ್ಟು ವಿವಾಹ ಮಾಡಿಸಿದ್ದಾರೆ. ಹಿಂದೆ ಪಾಕಿಸ್ತಾನ ಸೇನೆಯಲ್ಲಿ ಕ್ಯಾಪ್ಟನ್

ಒಡಹುಟ್ಟಿದ ಸಹೋದರನ ಮಗನ ಜೊತೆ ಮಗಳ ಮದುವೆ ನೆರವೇರಿಸಿದ ಪಾಕ್‌ ದಂಡನಾಯಕ ಮುನೀರ್‌ Read More »

ಕಾರ್ಕಳ : ರೋಗಿಯ ಸಾವಿಗೆ ಕಾರಣರಾದ ಮೂವರು ವೈದ್ಯರ ವಿರುದ್ಧ ಪೊಲೀಸ್‌ ಕೇಸ್‌

ಆಪರೇಷನ್‌ ಮಾಡುವಾಗ ಮುನ್ನೆಚ್ಚರಿಕೆ ವಹಿಸದ ಕಾರಣ ಮೃತಪಟ್ಟಿರುವ ರೋಗಿ ಕಾರ್ಕಳ : ಕಾರ್ಕಳದ ಖಾಸಗಿ ಆಸ್ಪತ್ರೆಯೊಂದರ ಮೂವರು ವೈದ್ಯರ ವಿರುದ್ಧ ರೋಗಿಯ ಸಾವಿಗೆ ಕಾರಣರಾದ ಪ್ರಕರಣ ದಾಖಲಾಗಿದೆ. ವೈದ್ಯರ ನಿರ್ಲಕ್ಷ್ಯದ ಕುರಿತು ಉಡುಪಿ ಜಿಲ್ಲಾ ಸರ್ಜನ್ ನೀಡಿದ ವರದಿಯ ಆಧಾರದಂತೆ ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣಕ್ಕೆ ಝುಬೈದ(52) ಎಂಬವರು ಕಳೆದ ಮೇ 10ರಂದು ಕಾರ್ಕಳ ಸ್ಪಂದನಾ ಆಸ್ಪತ್ರೆಗೆ ಹೋಗಿದ್ದರು.

ಕಾರ್ಕಳ : ರೋಗಿಯ ಸಾವಿಗೆ ಕಾರಣರಾದ ಮೂವರು ವೈದ್ಯರ ವಿರುದ್ಧ ಪೊಲೀಸ್‌ ಕೇಸ್‌ Read More »

error: Content is protected !!
Scroll to Top