ಸುದ್ದಿ

ಮೂರು ವರ್ಷದ ಬಳಿಕ ಮರಳಿದ ಕೊರೊನ : ಕೇರಳದಲ್ಲಿ ಗರಿಷ್ಠ ಪ್ರಕರಣ

ಮತ್ತೆ ಟೆಸ್ಟಿಂಗ್, ಮಾಸ್ಕ್, ಐಸೋಲೇಷನ್ ನಿಯಮಗಳು ಶುರು ನವದೆಹಲಿ: ಕೊರೊನ ಸೋಂಕು ಮೂರು ವರ್ಷಗಳ ಮತ್ತೆ ದೇಶಕ್ಕೆ ಕಾಲಿಟ್ಟಿದೆ. 2022ರಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಒಮಿಕ್ರಾನ್ ತಳಿಯ ಜೆಎನ್1 ಪ್ರಭೇದ ಮತ್ತೆ ಹಾವಳಿ ಶುರು ಮಾಡಿದೆ. ಜೆಎನ್1 ಉಪ ತಳಿಗಳಾದ ಎನ್‌ಬಿ.1.8.1 ಮತ್ತು ಎಲ್‌ಎಫ್.7 ತಳಿಗಳ ಕಾಟ ಶುರುವಾಗಿದೆ. ಸಿಂಗಾಪುರ, ಹಾಂಕಾಂಗ್, ಥೈಲ್ಯಾಂಡ್‌ ಸೇರಿ ದಕ್ಷಿಣ ಏಷ್ಯಾದಲ್ಲಿ ಕಾಣಿಸಿಕೊಂಡಿರುವ ವೈರಾಣು ಭಾರತಕ್ಕೂ ಕಾಲಿಟ್ಟಿದ್ದು, ಹಲವು ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ನಿಧಾನಗತಿಯಲ್ಲಿ ಏರುತ್ತಿದೆ. ಕರ್ನಾಟಕದಲ್ಲಿ ಒಟ್ಟು 35 ಕೋವಿಡ್ ಸಕ್ರಿಯ […]

ಮೂರು ವರ್ಷದ ಬಳಿಕ ಮರಳಿದ ಕೊರೊನ : ಕೇರಳದಲ್ಲಿ ಗರಿಷ್ಠ ಪ್ರಕರಣ Read More »

ಮಗಳು ಅನ್ಯ ಜಾತಿಯ ಯುವಕನನ್ನು ಮದುವೆಯಾದ ದುಃಖದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಕಾಲುಗಳಿಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿದ ಕುಟುಂಬ ಮೈಸೂರು: ಮಗಳು ಅನ್ಯ ಜಾತಿಯವನನ್ನು ಮದುವೆಯಾದ ಹಿನ್ನೆಲೆಯಲ್ಲಿ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ಮೂವರು ಕಾಲುಗಳಿಗೆ ಹಗ್ಗ ಕಟ್ಟಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಶನಿವಾರ ಮೈಸೂರಿನ ಎಚ್‌.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಕಿರಿಯ ಮಗಳು ಹರ್ಷಿತಾ ಮೃತ ದುರ್ದೈವಿಗಳು. ಮಹದೇವಸ್ವಾಮಿ ಅವರಿಗೆ ಅರ್ಪಿತಾ ಹಾಗೂ ಹರ್ಷಿತಾ ಎಂಬ ಇಬ್ಬರು ಹೆಣ್ಣುಮಕ್ಕಳು. ಮಹದೇವಸ್ವಾಮಿ ಕುಟುಂಬ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಊರು

ಮಗಳು ಅನ್ಯ ಜಾತಿಯ ಯುವಕನನ್ನು ಮದುವೆಯಾದ ದುಃಖದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ Read More »

ಬಾರ್ಯ ಕ್ಷೇತ್ರದಲ್ಲಿ ಪತ್ತನಾಜೆ ತಂಬಿಲ ಸೇವೆ

ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಪರಿವಾರ ದೈವಗಳಾದ ಗ್ರಾಮ ದೈವ ಪಂಜುರ್ಲಿ , ಮರುಳು ಧೂಮಾವತಿ ಮತ್ತು ರಾಜನ್ ದೈವಗಳಿಗೆ ವಾರ್ಷಿಕ ತಂಬಿಲ ಸೇವೆ ಸಂಪ್ರದಾಯದಂತೆ ಪತ್ತನಾಜೆಯಂದು ಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರದ ಆಡಳಿತ ಟ್ರಸ್ಟಿನ ಅಧ್ಯಕ್ಷ ಮತ್ತು ದೈವದ ಗುರಿಕ್ಕಾರ ಭಾಸ್ಕರ ನೂರಿತ್ತಾಯ ಬಾರ್ಯ ನೇತೃತ್ವದಲ್ಲಿ ನಡೆದ ತಂಬಿಲ ಸೇವೆಯಲ್ಲಿ ಅರ್ಚಕ ಗುರುಪ್ರಸಾದ್ ನೂರಿತ್ತಾಯರು ಸಹಕರಿಸಿದರು . ದೇವಳದ ಆಡಳಿತ ಟ್ರಸ್ಟಿನ ಪದಾಧಿಕಾರಿಗಳಾದ ಶೇಷಪ್ಪ ಸಾಲಿಯಾನ್, ಪ್ರಶಾಂತ ಪೈ ಬಾರ್ಯ, ನಾರಾಯಣಗೌಡ ,

ಬಾರ್ಯ ಕ್ಷೇತ್ರದಲ್ಲಿ ಪತ್ತನಾಜೆ ತಂಬಿಲ ಸೇವೆ Read More »

ಅಮಿತ್‌ ಷಾ ನಿಂದನೆ : ರಾಹುಲ್‌ ಗಾಂಧಿಗೆ ಜಾಮೀನು ರಹಿತ ವಾರಂಟ್‌ ಜಾರಿ

ಹೊಸದಿಲ್ಲಿ: ಕಾಂಗ್ರೆಸ್ ಸಂಸದ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೆ ಕಾನುನಿನ ಉರುಳಿನಲ್ಲಿ ಸಿಲುಕಿದ್ದಾರೆ. ಕೆಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ನಿಂದಿಸಿದ ಪ್ರಕರಣದಲ್ಲಿ ಸಂಕಷ್ಟಕ್ಕೆ ಗುರಿಯಾಗಿದ್ದು, ಜಾರ್ಖಂಡ್‌ನ ಚೈಬಸ ಸಂಸದ-ಶಾಸಕರ ನ್ಯಾಯಾಲಯ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವುದರಿಂದ ರಾಹುಲ್ ಗಾಂಧಿಗೆ ವಿನಾಯಿತಿ ನೀಡಬೇಕು ಎಂಬ ಅವರ ಪರ ವಕೀಲರ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಜೂನ್ 16ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಬೇಕು ಎಂದು ರಾಹುಲ್ ಗಾಂಧಿ ಅವರಿಗೆ

ಅಮಿತ್‌ ಷಾ ನಿಂದನೆ : ರಾಹುಲ್‌ ಗಾಂಧಿಗೆ ಜಾಮೀನು ರಹಿತ ವಾರಂಟ್‌ ಜಾರಿ Read More »

ಸಮುದ್ರದಲ್ಲಿ ಹಡಗು ಅವಘಡ : ನೀರುಪಾಲಾದ ಅಪಾಯಕಾರಿ ಬೃಹತ್‌ ಕಂಟೇನರ್‌ಗಳು

ಕರಾವಳಿ ಜನರಿಗೆ ಎಚ್ಚರಿಕೆ ನೀಡಿದ ನೈಸರ್ಗಿಕ ವಿಕೋಪ ನಿರ್ವಹಣೆ ಪ್ರಾಧಿಕಾರ ತಿರುನಂತಪುರಂ: ಕೊಚ್ಚಿಗೆ ಬರುತ್ತಿದ್ದ ಸರಕು ಸಾಗಣೆ ಹಡಗು ಅವಘಡಕ್ಕೀಡಾಗಿ ಅದರಲ್ಲಿದ್ದ ತೈಲ ತುಂಬಿದ ಕಂಟೇನರ್‌ಗಳು ಸಮುದ್ರ ಪಾಲಾಗಿದ ಘಟನೆ ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ್ದು, ಈ ಕಂಟೇನರ್‌ಗಳು ದಡಕ್ಕೆ ಬಂದರೆ ಹತ್ತಿರ ಹೋಗದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಸುಮಾರು 10 ದೊಡ್ಡ ಕಂಟೇನರ್‌ಗಳು ಸಮುದ್ರ ಪಾಲಾಗಿದ್ದು, ಮೀನುಗಾರರಲ್ಲಿ ಆತಂಕ ಸೃಷ್ಟಿಯಾಗಿದೆ. ಕಂಟೇನರ್‌ಗಳು ದಡಕ್ಕೆ ಬಂದರೆ ಅವುಗಳ ಬಳಿ ತೆರಳದಂತೆ ಕೇರಳ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಪ್ರಾಧಿಕಾರ

ಸಮುದ್ರದಲ್ಲಿ ಹಡಗು ಅವಘಡ : ನೀರುಪಾಲಾದ ಅಪಾಯಕಾರಿ ಬೃಹತ್‌ ಕಂಟೇನರ್‌ಗಳು Read More »

ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು | ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ | ದಿನಪತ್ರಿಕೆ ಓದುವುದನ್ನು ತಪ್ಪದೇ ರೂಢಿಸಿಕೊಳ್ಳಿ : ಬಿ.ವಿ.ಸೂರ್ಯನಾರಾಯಣ

ಬೆಳ್ಳಾರೆ : ವಿದ್ಯಾರ್ಥಿ ಜೀವನದಲ್ಲಿ ಉದ್ಯೋಗಕ್ಕೆ ಪೂರಕವಾಗಿ ಸುತ್ತಮುತ್ತಲಿನ ಆಗು ಹೋಗುಗಳನ್ನು ಸದಾ ಗಮನಿಸುತ್ತಿರಬೇಕು. ಆ ಗಮನ ಹರಿಸುವಿಕೆಯ ಚಟುವಟಿಕೆಯಲ್ಲಿ ದಿನಪತ್ರಿಕೆ ಓದುವುದು ಮುಖ್ಯವಾದದು ಎಂದು ವಿಶ್ರಾಂತ ಪ್ರಾಂಶುಪಾಲ‌ ಬಿ.ವಿ.ಸೂರ್ಯನಾರಾಯಣ ಹೇಳಿದರು. ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಮೇ 24 ರಂದು ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಅವರು ಉಪನ್ಯಾಸ ನೀಡಿದರು. ಉದ್ಯೋಗ ಸಂಬಂಧಿತ ಅವಕಾಶಗಳ ಬಗ್ಗೆ ದಿನಪತ್ರಿಕೆಗಳು

ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು | ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ | ದಿನಪತ್ರಿಕೆ ಓದುವುದನ್ನು ತಪ್ಪದೇ ರೂಢಿಸಿಕೊಳ್ಳಿ : ಬಿ.ವಿ.ಸೂರ್ಯನಾರಾಯಣ Read More »

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ | ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಮತ್ತೆ ಕೊರೊನಾ’ ಎಂಬ ಮಾತು ಕೇಳಿಬರುತ್ತಿದ್ದು, ಇದೀಗ ಜನರಲ್ಲಿ ಸಾಕಷ್ಟು ಆತಂಕ ಮೂಡಿದೆ. ಕೊರೊನಾದಿಂದ ಜಾಗೃತ ವಹಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ಈ ನಿಯಮಗಳನ್ನು ವಾಲಿಸುವಂತೆ ಸೂಚನೆ ನೀಡಲಾಗಿದೆ. ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ – 19 ಪ್ರಕರಣಗಳು ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. 2025 ನೇ ಸಾಲಿನಲ್ಲಿ ರವರೆಗೆ

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ | ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ Read More »

ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಮರ |   ಚಾಲಕನಿಗೆ ಗಾಯ

ಅನಂತಾಡಿ: ದಕ್ಷಿಣ ಕನ್ನಡದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅನೇಕ ಅವಘಡವಾಗುತ್ತಿದ್ದು, ಇದೀಗ ಅನಂತಾಡಿ ಗೋಳಿಕಟ್ಟೆಯಲ್ಲಿ ಜೋರಾದ ಗಾಳಿ, ಮಳೆಗೆ ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಬಿದ್ದ ದುರ್ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ. ಆಟೋ ಚಾಲಕರಾದ ಪ್ರಕಾಶ್ ಅವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಟೋರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ವಿಟ್ಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು. ಹೆಚ್ಚಿನ ವಿವರಗಳನ್ನು ಕಲೆಹಾಕುತ್ತಿದ್ದಾರೆ.

ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಮರ |   ಚಾಲಕನಿಗೆ ಗಾಯ Read More »

ಮೆಡಿಕಲ್‌ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ

ಸ್ನೇಹಿತರೇ ಎಸಗಿದ ದುಷ್ಕೃತ್ಯ ಬೆಂಗಳೂರು: ಬೆಳಗಾವಿಯ ಎಂಬಿಬಿಎಸ್‌ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಆಕೆಯ ಮೂವರು ಸ್ನೇಹಿತರೇ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ನೇಹಿತರ ಮೇಲೆ ನಂಬಿಕೆಯಿಟ್ಟು 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಮೇ 18ರಂದು ರಾತ್ರಿ ಸಿನಿಮಾ ನೋಡಲು ತೆರಳಿದ್ದರು. ಸಿನಿಮಾ ಮುಗಿದ ಬಳಿಕ ತನ್ನೊಂದಿಗೆ ವ್ಯಾಸಂಗ ಮಾಡುತ್ತಿದ್ದ ಸ್ನೇಹಿತನೊಬ್ಬನ ಮನೆಗೆ ಮೂವರೂ ಹೋಗಿದ್ದರು. ಈ ವೇಳೆ ಯುವಕರು, ಆಕೆಗೆ ತಿಳಿಯದಂತೆ ತಂಪು ಪಾನೀಯದಲ್ಲಿ ಪ್ರಜ್ಞೆ ತಪ್ಪುವ ಮಾತ್ರೆ

ಮೆಡಿಕಲ್‌ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ Read More »

24 ತಾಸಿನೊಳಗೆ ಕೇರಳ ಪ್ರವೇಶಿಸಲಿದೆ ಮುಂಗಾರು

16 ವರ್ಷಗಳ ಬಳಿಕ ಬೇಗನೇ ಶುರುವಾಗುತ್ತಿದೆ ಮಳೆಗಾಲ ಮಂಗಳೂರು : ಕರಾವಳಿಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿರುವಂತೆಯೇ ಅಧಿಕೃತವಾಗಿ ಮುಂಗಾರು ಆಗಮನಕ್ಕೂ ವೇದಿಕೆ ಸಿದ್ಧವಾಗಿದೆ. ಹವಾಮಾನ ಇಲಾಖೆ ನೀಡಿದ ಹೊಸ ಮುನ್ಸೂಚನೆಯಂತೆ ಇನ್ನು 24 ತಾಸಿನೊಳಗೆ ಮುಂಗಾರು ಕೇರಳ ಪ್ರವೇಶಿಸಲಿದೆ. ಕಳೆದ 16 ವರ್ಷಗಳ ಬಳಿಕ ಮುಂಗಾರು ಇಷ್ಟು ಬೇಗ ಬರುತ್ತಿರುವುದು ಇದೇ ಮೊದಲು. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಒತ್ತಡ ಕುಸಿತ ಪರಿಸ್ಥಿತಿಯಿಂದಾಗಿ ಕಳೆದ 5-6 ದಿನಗಳಿಂದ ಕೇರಳ, ಕರ್ನಾಟಕ ಸೇರಿದಂತೆ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ಪೂರ್ವ

24 ತಾಸಿನೊಳಗೆ ಕೇರಳ ಪ್ರವೇಶಿಸಲಿದೆ ಮುಂಗಾರು Read More »

error: Content is protected !!
Scroll to Top