ಸುದ್ದಿ

ರಾಜ್ಯದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತ

ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಆಯುಷ್ಮಾನ್‌ನಡಿ ಉಚಿತ ಚಿಕಿತ್ಸೆ ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತವಾಗಿ ನೀಡಲು ಸರಕಾರ ನಿರ್ಧರಿಸಿದೆ. ಮೂಳೆ ಕ್ಯಾನ್ಸರ್, ಥಲಸ್ಸೆಮಿಯಾ, ಅಪ್ಲಾಸ್ಟಿಕ್ ರಕ್ತಹೀನತೆ ಮತ್ತು ಇತರ ಎಂಟೋಲಾಜಿಕಲ್ ಸಂಬಂಧಿತ ಅಸ್ವಸ್ಥತೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಮೂಳೆ ಅಸ್ಥಿಮಜ್ಜೆ (bone marrow transplant (BMT) ಕಸಿ ಅಗತ್ಯವಿದೆ. ಪ್ರಸ್ತುತ ಈ ಚಿಕಿತ್ಸೆ ಬಹಳ ದುಬಾರಿಯಾಗಿದ್ದು, ಬಡವರ ಕೈಗೆಟುಕುವುದಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 20-40 ಲಕ್ಷ […]

ರಾಜ್ಯದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತ Read More »

ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ

ಯಲ್ಲಾಪುರದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಯಲ್ಲಾಪುರ: ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿರುವ ಭೀಕರ ಅಪಘಾತ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಮುಂಜಾನೆ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ

ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 21ನೇ ಆರೋಪಿ ಸೆರೆ

ಪಿಎಫ್ಐ ಸೀಕ್ರೆಟ್‌ ಸರ್ವಿಸ್ ಟೀಮ್ ಸದಸ್ಯ ಬೆಂಗಳೂರು : ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ನಿಷೇಧಿತ ಪಿಎಫ್ಐ ಸದಸ್ಯನಾಗಿದ್ದ ಅತೀಕ್ ಅಹ್ಮದ್ ಎಂಬಾತನನ್ನು ಎನ್‌ಐಎ ನಿನ್ನೆ ಬಂಧಿಸಿದೆ. ಪ್ರವೀಣ್ ನೆಟ್ಟಾರು ಕೊಲೆ ಕೇಸ್​​ಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21ನೇ ಆರೋಪಿ ಅತೀಕ್. ಈತ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಎನ್ನಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಸದಸ್ಯನಾಗಿದ್ದ ಅತೀಕ್ ಕೊಲೆ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 21ನೇ ಆರೋಪಿ ಸೆರೆ Read More »

ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ನರಿಮೊಗರು ಗ್ರಾಮದ ಕೈಪಂಗಳ ಬಾರಿಕೆಯಲ್ಲಿ ಫೆ. 12 ರಿಂದ ಫೆ. 13ರ ವರೆಗೆ 44ನೇ ವರ್ಷದ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ನಡೆಯಲಿದೆ.   ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ಪ್ರಯುಕ್ತ ಜ.17 ರಂದು ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿದೆ. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ವೇದನಾಥ ಸುವರ್ಣ, ಕಾರ್ಯದರ್ಶಿ ವಸಂತ ಗೌಡ ಕೆಬ್ಬಾರ್, ಮೊಕ್ತೇಸರರಾದ ಮೋನಪ್ಪ ಕುಲಾಲ್ ಬಾರಿಕೆ, ಕೋಶಾಧಿಕಾರಿ ಶುಭಾಕರ ಕುಲಾಲ್, ಸದಸ್ಯರಾದ ಗಣೇಶ್ ನಾಲ್ಯಾನ್ ದೋಳ, ಹರೀಶ್ ದೋಳ, ಬಾಳಪ್ಪ ಗೌಡ ಕೆದ್ಮಾರ್, ಮೋಹನ್

ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ತಾಲೂಕು ಯುವ ಸಾಧಕ ಪ್ರಶಸ್ತಿಗೆ ಭಾಜನರಾದ  ಪ್ರಣವ್ ಭಟ್

ಪುತ್ತೂರು :  ಪುತ್ತೂರಿನ ಯುವ ಪ್ರತಿಭೆ ಪ್ರಣವ್‍ ಭಟ್‍ ತಾಲೂಕು ಯುವ ಸಾಧಕ ಪ್ರಶಸ್ತಿಗೆ  ಆಯ್ಕೆಯಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ  ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ  ನಡೆಸಲ್ಪಡುವ ‘ಕನ್ನಡದಲ್ಲೂ ಐ.ಎ.ಎಸ್ ಬರೆಯಿರಿ’ ಅಭಿಯಾನದಲ್ಲಿ ಐ.ಎ.ಎಸ್- ಐ.ಪಿ.ಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಮಾಹಿತಿಯನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಾ ಬಂದಿರುವ ಯುವ ಪ್ರೇರಕ ಭಾಷಣಗಾರ ಪ್ರಣವ್ ಭಟ್  ಯುವ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈಗಾಗಲೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 

ತಾಲೂಕು ಯುವ ಸಾಧಕ ಪ್ರಶಸ್ತಿಗೆ ಭಾಜನರಾದ  ಪ್ರಣವ್ ಭಟ್ Read More »

ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ

ಎರಡೂ ದರೋಡೆ ಕೃತ್ಯಗಳಲ್ಲಿವೆ ಕೆಲವು ಸಾಮ್ಯತೆ ಮಂಗಳೂರು: ಕೆ.ಸಿ ರೋಡ್‌ನ ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಕೃತ್ಯವನ್ನು ನಾಲ್ಕೇ ದಿನಗಳಲ್ಲಿ ಭೇದಿಸಲು ಪೊಲೀಸರಿಂದ ಸಾಧ್ಯವಾಗಿದೆ. ಆದರೆ ವಿಟ್ಲ ಸಮೀಪ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಇದೇ ರೀತಿ ನಡೆದ ದರೋಡೆ ಪ್ರಕರಣವನ್ನು ಯಾಕೆ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎನ್ನುವುದು ಜನಸಾಮಾನ್ಯರ ಮನಸ್ಸಿನಲ್ಲಿ ಸುಳಿದಾಡುತ್ತಿರುವ ಪ್ರಶ್ನೆ.ಜ.3ರಂದು ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿಯ ಮನೆಗೆ ಬಂದಿದ್ದ ಏಳು ದರೋಡೆಕೋರರ ತಂಡ

ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ Read More »

ಜ.25 : ಪ್ರತಿಷ್ಠಿತ ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿಗೆ ಚುನಾವಣೆ | ನನ್ನ ಸ್ವಂತ ನಿರ್ಧಾರದಿಂದ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ : ಸದಾಶಿವ ಪೈ

ಪುತ್ತೂರು : ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿಗೆ ಜ.25 ಶನಿವಾರ ಚುನಾವಣೆ ನಡೆಯಲಿದ್ದು, ಕಳೆದ 20 ವರ್ಷಗಳಿಂದ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡ ನನಗೆ ಈ ಬಾರಿ ಸಹಕಾರ ಭಾರತಿಯಿಂದ ಅವಕಾಶ ವಂಚಿತನಾಗಿದ್ದು, ಈ ನಿಟ್ಟಿನಲ್ಲಿ ಈ ಬಾರಿ ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ. ಮತದಾರರು ನನ್ನನ್ನು ಗೆಲ್ಲಿಸಬೇಕಾಗಿ ಪಕ್ಷೇತರ ಅಭ್ಯರ್ಥಿ ಸದಾಶಿವ ಪೈ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೆಲವೊಂದು ಆಂತರಿಕ ಕಾರಣ ಸಹಿತ ಅವಕಾಶವಾದಿಗಳ ಕಾರಣದಿಂದ ನನಗೆ

ಜ.25 : ಪ್ರತಿಷ್ಠಿತ ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿಗೆ ಚುನಾವಣೆ | ನನ್ನ ಸ್ವಂತ ನಿರ್ಧಾರದಿಂದ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ : ಸದಾಶಿವ ಪೈ Read More »

ಚಾರ್ಮಾಡಿಯ ಗುಡ್ಡ ಪ್ರದೇಶದಲ್ಲಿ ಬೆಂಕಿ ಅನಾಹುತ | ನೂರಾರು ಎಕರೆ ಅರಣ್ಯ ನಾಶ

ಚಾರ್ಮಾಡಿ ಘಾಟ್ : ಚಾರ್ಮಾಡಿಯ ಗುಡ್ಡದ ತುದಿಯಲ್ಲಿ ಕಾಡ್ಲಿಚ್ಚು ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿದೆ ಎಂಬುವುದಾಗಿ ಶಂಕೆ ವ್ಯಕ್ತವಾಗಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ದ.ಕ. ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಹತ್ತಿರವಿದ್ದು ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ. ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ

ಚಾರ್ಮಾಡಿಯ ಗುಡ್ಡ ಪ್ರದೇಶದಲ್ಲಿ ಬೆಂಕಿ ಅನಾಹುತ | ನೂರಾರು ಎಕರೆ ಅರಣ್ಯ ನಾಶ Read More »

ಎನ್‌ಕೌಂಟರ್‌ನಲ್ಲಿ 12 ನಕ್ಸಲರ ಹತ್ಯೆ

1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್‌ ಮುಖಂಡನೂ ಬಲಿ ಭುವನೇಶ್ವರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲರು ಹತರಾಗಿದ್ದಾರೆ. ಸೋಮವಾರ ಮತ್ತು ಮಂಗಳವಾರ ಕಾರ್ಯಾಚರಣೆ ನಡೆಸಲಾಗಿದ್ದು, ಇಬ್ಬರು ಮಹಿಳಾ ನಕ್ಸಲರನ್ನು ಕೂಡ ಹತ್ಯೆ ಮಾಡಲಾಗಿದೆ. ಓರ್ವ ಕೋಬ್ರಾ ಯೋಧ ಗಾಯಗೊಂಡಿದ್ದಾರೆ.ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿರುವ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲಾ

ಎನ್‌ಕೌಂಟರ್‌ನಲ್ಲಿ 12 ನಕ್ಸಲರ ಹತ್ಯೆ Read More »

ಬಾವಿಗೆ ಹಾರಿ ಯುವಕ  ಆತ್ಮಹತ್ಯೆ

ಕಾರ್ಕಳ : ಕಾರ್ಕಳದ ಕಸಬಾ ಗ್ರಾಮದಲ್ಲಿ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಸಬಾ ಗ್ರಾಮದ ಮೀನಗುಂಡಿ ಕಂಪೌಂಡ್‌ನ ಕೆ. ವೆಂಕಟೇಶ ಹೆಗ್ಡೆ (22) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತ ಕೆ. ವೆಂಕಟೇಶ ಹೆಗ್ಡೆ ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸ ಮುಂದುವರೆಸಲು ಕಷ್ಟವಾಗುತ್ತಿದೆ ಎಂದು ತಂದೆಯ ಬಳಿ ಹೇಳಿಕೊಂಡಿದ್ದನು ಎನ್ನಲಾಗಿದೆ. ಸುಮಾರು 10 ದಿನಗಳಿಂದ ಮೌನವಾಗಿದ್ದ ಈತ ಇದೇ ಕಾರಣದಿಂದ ಮನನೊಂದು ಮನೆಯ ಹಿಂಬದಿಯ

ಬಾವಿಗೆ ಹಾರಿ ಯುವಕ  ಆತ್ಮಹತ್ಯೆ Read More »

error: Content is protected !!
Scroll to Top