ಸುದ್ದಿ

ನಿದ್ರಿಸುತ್ತಿದ್ದಾತನ ಮೇಲೆ ತ್ಯಾಜ್ಯ ಸುರಿದ ಪೌರ ಕಾರ್ಮಿಕರು : ಉಸಿರುಕಟ್ಟಿ ಸಾವು

ಬರೇಲಿ: ಮರದಡಿ ನಿದ್ದೆ ಮಾಡುತ್ತಿದ್ದ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರ ಮೇಲೆ ಪೌರ ಸಿಬ್ಬಂದಿ ಕಸದ ರಾಶಿ ಸುರಿದ ಪರಿಣಾಮ ಆತ ಕಸದ ರಾಶಿಯಡಿ ಸಿಲುಕಿ ಉಸಿರುಕಟ್ಟೆ ಮೃತಪಟ್ಟ ವಿಚಿತ್ರ ಘಟನೆ ಉತ್ತರ ಪ್ರದೇಶದ ಬರೇಲಿ ನಗರದಲ್ಲಿ ನಡೆದಿದೆ. ಬರೇಲಿ ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಒಳಚರಂಡಿಯಿಂದ ತೆಗೆದಿದ್ದ ಹೂಳು ಮತ್ತು ಕಸವನ್ನು ಟ್ರಾಲಿಯಲ್ಲಿ ತಂದು ಸುನಿಲ್ ಕುಮಾರ್ ಪ್ರಜಾಪತಿ ಎಂಬವರ ಮೇಲೆ ಸುರಿದ ಪರಿಣಾಮ ಈ ದುರಂತ ಸಂಭವಿಸಿದೆ. ತರಕಾರಿ ಮಾರಾಟ ಮಾಡಿ ಕುಟುಂಬ ನಿರ್ವಹಿಸುತ್ತಿದ್ದ ಪ್ರಜಾಪತಿ ಸ್ಥಳದಲ್ಲೇ […]

ನಿದ್ರಿಸುತ್ತಿದ್ದಾತನ ಮೇಲೆ ತ್ಯಾಜ್ಯ ಸುರಿದ ಪೌರ ಕಾರ್ಮಿಕರು : ಉಸಿರುಕಟ್ಟಿ ಸಾವು Read More »

29ರಿಂದ ಮದ್ಯದಂಗಡಿಗಳು ಬಂದ್‌

ಬೆಲೆ ಏರಿಕೆ, ಲೈಸೆನ್ಸ್‌ ಶುಲ್ಕ ವಿರೋಧಿಸಿ ಮುಷ್ಕರ ಹೂಡಲು ಮದ್ಯ ಮಾರಾಟಗಾರರ ತೀರ್ಮಾನ ಬೆಂಗಳೂರು: ನಿರಂತರ ಬೆಲೆ ಏರಿಕೆ ಮತ್ತು ಪರವಾನಗಿ ದರ ಹೆಚ್ಚಳ ವಿರೋಧಿಸಿ ಮೇ 29ರಿಂದ ರಾಜ್ಯದಲ್ಲಿ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ. ‌ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದರೊಂದಿಗೆ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ

29ರಿಂದ ಮದ್ಯದಂಗಡಿಗಳು ಬಂದ್‌ Read More »

ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರ  15ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ | ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಆನೆಗುಂದಿ ಸರಸ್ವತಿ ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 15ನೇ ವರ್ಧಂತ್ಯುತ್ಸವದ ಸಮಾರಂಭದಲ್ಲಿ ಶಿಕ್ಷಣ,ಸಾಹಿತ್ಯ,ಸಂಶೋಧನೆ, ಪಂಚಶಿಲ್ಪಕ್ಷೇತ್ರದ ಕ್ರಿಯಾಶೀಲ ಸಾಧಕರಿಗೆ ಕಟಪಾಡಿ ಪಡುಕುತ್ಯಾರು ಗುರುಪೀಠದಲ್ಲಿ ರಾಷ್ಟ್ರೀಯ ಪ್ರಶಸ್ತಿ ಮತ್ತು ಆನೆಗುಂದಿ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆನೆಗುಂದಿ ಪ್ರತಿಷ್ಠಾನದ ಉಪಾಧ್ಯಕ್ಷ ಕೆ ಪ್ರಭಾಕರ್ ಆಚಾರ್ಯ ಕೋಟೆಕಾರು ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರೆ ಎಸ್ ಕೆ ಎಫ್ ಸಂಸ್ಥೆಯ ಜಿ ರಾಮಕೃಷ್ಣ ಆಚಾರ್, ಮೈಸೂರು ವಿ.ವಿಯ ಡಾ. ಬಿ ಶ್ರೀಕಂಠಚಾರ್, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ

ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರ  15ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ | ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ Read More »

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶಿವಂ’ ಸಭಾಂಗಣ ಉದ್ಘಾಟನೆ | ಸಾಮೂಹಿಕ ಕುಂಕುಮಾರ್ಚನೆ, ಲಲಿತ ಸಸ್ರನಾಮ ಪಾರಾಯಣ

ಪುತ್ತೂರು: ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಶಿವಂ” ಸಭಾಂಗಣದ ಉದ್ಘಾಟನೆ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ ದೇವಾಲಯ ಸಂವರ್ಧನ ಸಮಿತಿ ಶ್ರೀ ಪಾರ್ವತಿ ಬಳಗದಿಂದ ನೆರವೇರಿಸಲಾಯಿತು. ಎಡನೀರು ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಯವರು ಉಪಸ್ಥಿತರಿದ್ದರು. 25 ಮಂದಿ ಮಹಿಳೆಯರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಕೃಷ್ಣ ವೇಣಿ ಪ್ರಸಾದ್ ಮುಳಿಯ ಅವರು ದೇವಿ ಅಪರಾಧ ಕ್ಷಮಾಪಣ ಸ್ತೋತ್ರವನ್ನು ಹೇಳಿಕೊಡುವುದರೊಂದಿಗೆ, ಅರ್ಚನೆಯ ವಿಷೇಶತೆಯನ್ನು ತಿಳಿಸಿದರು, ಪ್ರಭಾವತಿ ಕಾರ್ಯಕ್ರಮ ನಿರ್ವಹಣೆ ಮಾಡಿದರು, 

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶಿವಂ’ ಸಭಾಂಗಣ ಉದ್ಘಾಟನೆ | ಸಾಮೂಹಿಕ ಕುಂಕುಮಾರ್ಚನೆ, ಲಲಿತ ಸಸ್ರನಾಮ ಪಾರಾಯಣ Read More »

ಶ್ರೀ ರಾಘವೇಂದ್ರ ಸ್ಟೋರ್ಸ್‍ ನಲ್ಲಿ ಏಷಿಯನ್ ಪೈಂಟ್ಸ್ ಕಂಪೆನಿಯವರ ‘ಬ್ಯೂಟಿಫುಲ್ ಹೋಮ್ ಪೈಂಟಿಂಗ್ ಸರ್ವಿಸ್’ ನೂತನ ವ್ಯವಸ್ಥೆ ಆರಂಭ

ಪುತ್ತೂರು: ಕಳೆದ 35 ವರ್ಷಗಳಿಂದ ಪೈಂಟ್ ಗಳ ಸೇವೆಯಲ್ಲಿ ಮನೆ ಮಾತಾಗಿರುವ ಏಳ್ಮುಡಿಯಲ್ಲಿರುವ ಶ್ರೀ ರಾಘವೇಂದ್ರ ಸ್ಟೋ ರ್ಸ್‍ ನಲ್ಲಿ ಏಷಿಯನ್ ಪೈಂಟ್ಸ್ ಕಂಪೆನಿಯವರ ‘ಬ್ಯೂಟಿಫುಲ್ ಹೋಮ್ ಪೈಂಟಿಂಗ್ ಸರ್ವಿಸ್’ ಎಂಬ ವಿನೂತನ ವ್ಯವಸ್ಥೆ ಗುರುವಾರ ಪ್ರಾರಂಭಗೊಂಡಿತು. ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಬದಲಾದ ಕಾಲ ಘಟ್ಟದಲ್ಲಿ ಜನರ ಬಳಿಗೆ ಸೇವೆಯನ್ನು ಜನರ ಬಳಿಗೆ ವಿಸ್ತರಿಸಬೇಕಾಗಿರುವುದೇ ಇಂದಿನ ಮಾರುಕಟ್ಟೆಯ ತಂತ್ರವಾಗಿದೆ. ಯಾವುದೇ ಸಾಮಾಗ್ರಿಗಳು ಮನೆ ಬಾಗಿಲಿಗೆ

ಶ್ರೀ ರಾಘವೇಂದ್ರ ಸ್ಟೋರ್ಸ್‍ ನಲ್ಲಿ ಏಷಿಯನ್ ಪೈಂಟ್ಸ್ ಕಂಪೆನಿಯವರ ‘ಬ್ಯೂಟಿಫುಲ್ ಹೋಮ್ ಪೈಂಟಿಂಗ್ ಸರ್ವಿಸ್’ ನೂತನ ವ್ಯವಸ್ಥೆ ಆರಂಭ Read More »

ಜೂ.1 : ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಮಹಾ ಅಧಿವೇಶನ, ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು: ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರುಗಳ ಪ್ರಥಮ ಮಹಾ ಅಧಿವೇಶನ ಹಾಗೂ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ ಜೂ.1 ಭಾನುವಾರ ಪುತ್ತೂರಿನ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ. ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ 2024 ರ ಆಗಸ್ಟ್ ನಲ್ಲಿ ನೋಂದಾವಣೆಗೊಂಡು ಅಸ್ತಿತ್ವಕ್ಕೆ ಬಂದಿದೆ. ನೋಂದಾವಣೆಗೊಂಡು ಒಂದು ವರ್ಷದ

ಜೂ.1 : ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಮಹಾ ಅಧಿವೇಶನ, ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ Read More »

ಯುವಕನಿಗೆ  ಜಾತಿ ನಿಂದನೆ ಜೀವ ಬೆದರಿಕೆ ಪ್ರಕರಣ | ಇಬ್ಬರು ಆರೋಪಿಗಳು ಬಂಧನ

ಬೆಳ್ತಂಗಡಿ : ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ಶಿಬಾಜೆಯಲ್ಲಿ ನಡೆದಿದೆ. ಘಟನಾ ಕುರಿತು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಬಂಧಿತ ಆರೋಪಿಗಳಾಗಿದ್ದಾರೆ. ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ಧಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು

ಯುವಕನಿಗೆ  ಜಾತಿ ನಿಂದನೆ ಜೀವ ಬೆದರಿಕೆ ಪ್ರಕರಣ | ಇಬ್ಬರು ಆರೋಪಿಗಳು ಬಂಧನ Read More »

ನೀರು ಕೊಡದಿದ್ದರೆ ಉಸಿರು ನಿಲ್ಲಿಸುತ್ತೇವೆ : ಪಾಕ್‌ ಮಿಲಿಟರಿ ವಕ್ತಾರನ ಗೊಡ್ಡು ಬೆದರಿಕೆ

ಸಿಂಧು ನದಿ ನೀರಿಗಾಗಿ ಪರಿತಪಿಸುತ್ತಿರುವ ಪಾಕಿಸ್ಥಾನ ಇಸ್ಲಾಮಾಬಾದ್:‌ ಕದನ ವಿರಾಮಕ್ಕೆ ಅಂಗಲಾಚಿದ್ದ ಪಾಕಿಸ್ತಾನ ಪರಿಸ್ಥಿತಿ ತುಸು ಸಹಜ ಸ್ಥಿತಿ ಬರುತ್ತಿರುವಂತೆಯೇ ತನ್ನ ಕಂತ್ರಿ ಬುದ್ಧಿ ತೋರಿಸಲಾರಂಭಿಸಿದೆ. ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಯೋತ್ಪಾದಕ ಹಫೀಜ್ ಸಯೀದ್‌ನಂತೆ ಭಾರತಕ್ಕೆ ಬೆದರಿಕೆ ಹಾಕಿದ್ದಾನೆ. ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ ಭಾರತ ನೀರು ನೀಡದಿದ್ದರೆ ನಾವು ಅವರ ಉಸಿರು ನಿಲ್ಲಿಸುತ್ತೇವೆ ಎಂಬ ಗೊಡ್ಡು ಬೆದರಿಕೆ ಹಾಕಿದ್ದಾನೆ. ಪಾಕಿಸ್ತಾನದ ವಿಶ್ವವಿದ್ಯಾಲಯವೊಂದರಲ್ಲಿ

ನೀರು ಕೊಡದಿದ್ದರೆ ಉಸಿರು ನಿಲ್ಲಿಸುತ್ತೇವೆ : ಪಾಕ್‌ ಮಿಲಿಟರಿ ವಕ್ತಾರನ ಗೊಡ್ಡು ಬೆದರಿಕೆ Read More »

ದೇಶದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌ : ಮಾಸ್ಕ್‌ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ಆಂಧ್ರ, ಕೇರಳ, ಗುಜರಾತ್‌ನಲ್ಲಿ ಪಾಸಿಟಿವ್‌ ಪ್ರಕರಣಗಳ ಏರಿಕೆ ನವದೆಹಲಿ: ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಿದೆ.ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ದೇಶದಲ್ಲಿ ಈಗ ನಿಧಾನಗತಿಯಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಾಣುತ್ತಿವೆ. ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 19 ಪಾಸಿಟಿವ್‌ ಕೇಸ್‌ ದಾಖಲಾಗಿದೆ. ಗುಜರಾತ್‌ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನೆರೆ ರಾಜ್ಯ ಕೇರಳ ಒಂದರಲ್ಲೇ 186 ಕೇಸ್

ದೇಶದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌ : ಮಾಸ್ಕ್‌ ಕಡ್ಡಾಯಗೊಳಿಸಿ ಸರ್ಕಾರ ಆದೇಶ Read More »

ಮಂಗಳೂರು : ಮದುವೆ ತಕರಾರಿನ ಹಿನ್ನೆಲೆಯಲ್ಲಿ ಇರಿದು ಕೊಲೆ

ಇಬ್ಬರು ಮಕ್ಕಳಿಗೂ ಚೂರಿ ಇರಿತದ ಗಾಯ ಮಂಗಳೂರು: ಮಂಗಳೂರಿನ ಬಳಿ ಮತ್ತೊಂದು ಕೊಲೆ ನಡೆದಿದೆ. ಮದುವೆ ವಿಚಾರಕ್ಕೆ ನಡೆದ ಗಲಾಟೆ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ಗುರುವಾರ ತಡರಾತ್ರಿ ಚಾಕುವಿನಿಂದ ಇರಿದು ವಾಮಂಜೂರು ನಿವಾಸಿ ಸುಲೈಮಾನ್‌ (50) ಎಂಬವರನ್ನು ಅವರ ಸಂಬಂಧಿ ಮುಸ್ತಾಫ ಎಂಬಾತ ಕೊಲೆ ಮಾಡಿದ್ದಾನೆ. ಅಷ್ಟೇ ಅಲ್ಲದೆ ಸುಲೈಮಾನ್‌ರ ಇಬ್ಬರ ಪುತ್ರರಾದ ರಿಯಾಬ್​, ಸಿಯಾಬ್​​ ಮೇಲೂ ಹಲ್ಲೆ ನಡೆಸಿ ಮುಸ್ತಾಫ ಪರಾರಿ ಆಗಿದ್ದಾನೆ. ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ

ಮಂಗಳೂರು : ಮದುವೆ ತಕರಾರಿನ ಹಿನ್ನೆಲೆಯಲ್ಲಿ ಇರಿದು ಕೊಲೆ Read More »

error: Content is protected !!
Scroll to Top