ಸುದ್ದಿ

ಪತಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ ಪತ್ನಿ ಪೊಲೀಸ್‌ ಕಸ್ಟಡಿಗೆ

ಬಿ.ಸಿ.ರೋಡ್‌ ಬಟ್ಟೆ ಮಳಿಗೆಯಲ್ಲಿ ಪತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಪತ್ನಿ ಬಂಟ್ವಾಳ : ಬಿ.ಸಿ.ರೋಡ್‌ನಲ್ಲಿ ಗ್ರಾಹಕಳಂತೆ ಸೋಗುಹಾಕಿ ಬುರ್ಖಾ ಧರಿಸಿಕೊಂಡು ಬಂದು ಕ್ಯಾಶ್‌ ಕೌಂಟರ್‌ನಲ್ಲಿ ಕುಳಿತಿದ್ದ ಅಂಗಡಿಯ ಮಾಲೀಕ ತನ್ನ ಪತಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದ ಪತ್ನಿ ಜ್ಯೋತಿ ಕೆ.ಟಿ.ಯನ್ನು ನ್ಯಾಯಾಲಯ ಪೊಲೀಸ್‌ ಕಸ್ಟಡಿಗೊಪ್ಪಿಸಿದೆ. ಆಕೆ ಪತಿ ಕೃಷ್ಣಕುಮಾರ್ ಸೋಮಯಾಜಿ ಅವರ ತಲೆ, ಎದೆ ಮತ್ತು ಕೈಗಳಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದಳು. ಸೋಮಯಾಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿ.ಸಿ.ರೋಡ್‌ನ ಸೋಮಯಾಜಿ ಟೆಕ್ಸ್‌ಟೈಲ್ಸ್‌ನ ಮಾಲೀಕರಾದ ಕೃಷ್ಣಕುಮಾರ್ ನವೆಂಬರ್ 19ರಂದು […]

ಪತಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ ಪತ್ನಿ ಪೊಲೀಸ್‌ ಕಸ್ಟಡಿಗೆ Read More »

ತಂದೆ-ತಾಯಿ ಕಣ್ಣೆದುರೆ 5 ವರ್ಷದ ಬಾಲಕಿಯನ್ನು ಹೊತ್ತೊಯ್ದು ಸಾಯಿಸಿದ ಚಿರತೆ

ಚಿಕ್ಕಮಗಳೂರು : ತಂದೆ-ತಾಯಿಯ ಕಣ್ಣೆದುರೇ ಐದು ವರ್ಷ ಪ್ರಾಯದ ಬಾಲಕಿಯನ್ನು ಚಿರತೆ ಕೊಂಡೊಯ್ದು ಸಾಯಿಸಿದ ದಾರುಣ ಘಟನೆ ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ಸಂಭವಿಸಿದೆ. ಚಿರತೆ ದಾಳಿಯಿಂದ ಸಾವನ್ನಪ್ಪಿದ ಬಾಲಕಿಯನ್ನು ಸಾನ್ವಿ (5) ಎಂದು ಗುರುತಿಸಲಾಗಿದೆ. ಮನೆಯ ಹಿಂದೆ ಕೊಟ್ಟಿಗೆಯಲ್ಲಿದ್ದ ಮಗುವಿನ ಮೇಲೆ ಚಿರತೆ ದಾಳಿ ಮಾಡಿದೆ. ಈ ವೇಳೆ ಮಗು ಚೀರಾಟ ಕೇಳಿ ತಂದೆ ತಾಯಿ ಬಂದಿದ್ದಾರೆ. ಅವರ ಎದರುರಲ್ಲೇ ಚಿರತೆ ಮಗುವನ್ನು ಕಾಡಿಗೆ ಹೊತ್ತೊಯ್ದಿದೆ. ಬಳಿಕ ಸ್ಥಳಿಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.

ತಂದೆ-ತಾಯಿ ಕಣ್ಣೆದುರೆ 5 ವರ್ಷದ ಬಾಲಕಿಯನ್ನು ಹೊತ್ತೊಯ್ದು ಸಾಯಿಸಿದ ಚಿರತೆ Read More »

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಲಿಟ್ಲ್ ಫ್ಲವರ್ ಶಾಲೆಗೆ ಹಲವು ಬಹುಮಾನಗಳು

ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ, ಪುತ್ತೂರು ಸಹಯೋಗದಲ್ಲಿ, ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ ವಿದ್ಯಾರ್ಥಿಗಳು ಹಲವು ವಿಭಾಗದಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಹಿರಿಯ ವಿಭಾಗದ ಕವನ ವಾಚನ ಆಕಾಶ್ ಡಿ. ಪ್ರಥಮ, ಹಿರಿಯ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ವೀಕ್ಷಾ ಡಿ. ಕೆ. ಪ್ರಥಮ,

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಲಿಟ್ಲ್ ಫ್ಲವರ್ ಶಾಲೆಗೆ ಹಲವು ಬಹುಮಾನಗಳು Read More »

ಪುತ್ತೂರಿನೊಡೆಯನಿಗೆ ವೈಭವದ ಲಕ್ಷದೀಪೋತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ. 19 ರಂದು ವೈಭವದ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಿತು. ಸಾವಿರಾರು ಭಕ್ತರು ದೇವಾಲಯದ ರಥ ಬೀದಿಯ ಉದ್ದಕ್ಕೂ ಸಾಲು ಸಾಲು ಹಣತೆಗಳನ್ನು ಹಚ್ಚಿ ಶ್ರೀ ಮಹಾಲಿಂಗೇಶ್ವರ ದೇವರ ಲಕ್ಷದೀಪ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದುಕೊಟ್ಟರು. ದೇವಸ್ಥಾನದ ತಂತ್ರಿಗಳಾದ ಕುಂಟಾರು ರವೀಶ ತಂತ್ರಿಗಳ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಬ್ರ. ವೇ. ಮೂ. ಗುರು ತಂತ್ರಿ ಅವರು ಲಕ್ಷ ದೀಪೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

ಪುತ್ತೂರಿನೊಡೆಯನಿಗೆ ವೈಭವದ ಲಕ್ಷದೀಪೋತ್ಸವ Read More »

ದಿ. ಡಾ. ಶ್ರೀಧರ ನಾಯ್ಕ್ ಅವರಿಗೆ ವಿವೇಕಾನಂದ ಕಾಲೇಜಿನಲ್ಲಿ ನುಡಿನಮನ

ಪುತ್ತೂರು: ಕೆಲ ದಿನಗಳ ಹಿಂದಷ್ಟೇ ಅನಾರೋಗ್ಯದಿಂದ ನಿಧನರಾದ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ. ಶ್ರೀಧರ ನಾಯ್ಕ್ ಅವರಿಗೆ ಕಾಲೇಜಿನಲ್ಲಿ ನುಡಿ ನಮನ ಸಲ್ಲಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಯಿತು. ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ಇತಿಹಾಸದ ಕುರಿತು ಶ್ರೀಧರ ನಾಯ್ಕ್ ಅವರು ಅಪಾರ ಜ್ಞಾನ ಹೊಂದಿದ್ದರು. ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಆಸೆ ಹೊಂದಿದ್ದವರು.

ದಿ. ಡಾ. ಶ್ರೀಧರ ನಾಯ್ಕ್ ಅವರಿಗೆ ವಿವೇಕಾನಂದ ಕಾಲೇಜಿನಲ್ಲಿ ನುಡಿನಮನ Read More »

ನಡು ಸಮುದ್ರದಲ್ಲಿ ಮುಳುಗಿದ ಮೀನುಗಾರಿಕೆ ಬೋಟ್‌ : ಐವರು ಮೀನುಗಾರರ ರಕ್ಷಣೆ

ಅಡಿ ಭಾಗದ ಫೈಬರ್‌ ಪ್ಲೇಟ್‌ ಒಡೆದು ಒಳನುಗ್ಗಿದ ನೀರು ಉಡುಪಿ : ಮೀನುಗಾರಿಗೆ ತೆರಳಿದ ದೋಣಿಯೊಂದು ಸಮುದ್ರ ಮಧ್ಯದಲ್ಲಿ ಮುಳುಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಸಾಸ್ತಾನಾ ಕೋಡಿಕನ್ಯಾನದ ರವೀಂದ್ರ ಎನ್. ಪೂಜಾರಿ ಅವರಿಗೆ ಸೇರಿದ ‘ವೀರಕಲ್ಕುಡ’ ಎಂಬ ಹೆಸರಿನ ಬೋಟ್‌ ನವೆಂಬರ್ 17ರ ಸಂಜೆ ತಂಡೇಲ್ (ಮುಖಂಡ) ಮತ್ತು ನಾಲ್ವರು ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಹೊರಟಿತ್ತು. ಅವರು ಪಣಂಬೂರು

ನಡು ಸಮುದ್ರದಲ್ಲಿ ಮುಳುಗಿದ ಮೀನುಗಾರಿಕೆ ಬೋಟ್‌ : ಐವರು ಮೀನುಗಾರರ ರಕ್ಷಣೆ Read More »

ರಸ್ತೆ ಕಾಮಗಾರಿಯ ವಾಹನದಡಿಗೆ ಬಿದ್ದು ವೃದ್ಧ ಸಾವು

ಬೆಳ್ತಂಗಡಿ: ಮದ್ದಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕಾಮಗಾರಿಯ ವಾಹನದ ಅಡಿಗೆ ಸಿಲುಕಿ ವೃದ್ಧರೊಬ್ಬರು ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿ ಬಂಗಾಡಿ ನಿವಾಸಿ ಎಂದು ತಿಳಿದು ಬಂದಿದೆ. ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ವೃದ್ಧ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಮಗಾರಿಯ ಯಂತ್ರವೊಂದನ್ನು ಚಲಾಯಿಸುತ್ತಾ ಬಂದ ಚಾಲಕ ವೃದ್ಧನನ್ನು ಗಮನಿಸದೆ ವಾಹನ ಚಲಾಯಿಸಿದ್ದು ವೃದ್ಧ ವಾಹನದ ಅಡಿಗೆ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆ ಕಾಮಗಾರಿಯ ವಾಹನದಡಿಗೆ ಬಿದ್ದು ವೃದ್ಧ ಸಾವು Read More »

ಧರ್ಮಸ್ಥಳ ಪ್ರಕರಣ : ಎಸ್‌ಐಟಿಯಿಂದ ಕೋರ್ಟ್‌ಗೆ ವರದಿ ಸಲ್ಲಿಕೆ

ಸುಳ್ಳು ಸಾಕ್ಷಿ ಕುರಿತು ತನಿಖೆಯಿಂದ ಕಂಡುಕೊಂಡ ಮಾಹಿತಿಗಳ ವರದಿ ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ.20 ರಂದು ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಗಳ ಬಗ್ಗೆ ವರದಿಯನ್ನು ಸಲ್ಲಿಸಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್

ಧರ್ಮಸ್ಥಳ ಪ್ರಕರಣ : ಎಸ್‌ಐಟಿಯಿಂದ ಕೋರ್ಟ್‌ಗೆ ವರದಿ ಸಲ್ಲಿಕೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ಗೆ ಪ್ರತಿಭಾ ಪ್ರಶಸ್ತಿಗಳು

ಪುತ್ತೂರು: ಇಂದು, 20 ನವೆಂಬರ್ 2025 ನೇ ಗುರುವಾರದಂದು ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾಯಿ ಇಲ್ಲಿ ನಡೆದ ಕೋಡಿಂಬಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎವಿಜಿ ಶಾಲೆಯ ವಿದ್ಯಾರ್ಥಿಗಳು ಅನೇಕ ಬಹುಮಾನಗಳನ್ನು8 ತಮ್ಮದಾಗಿಸಿಕೊಂಡಿದ್ದಾ ರೆ. ಅದ್ವಿತಿ ಬಂಜನ್, 3ನೇ ತರಗತಿ,ಕಥೆ ಹೇಳುವುದು ( ದ್ವಿತೀಯ) ಮತ್ತುಆಶುಭಾಷಣ (ತೃತಿಯ), ಎ.ಎನ್. ಜೋತ್ಸ್ನಾ ಗೌಡ, 4ನೇ ತರಗತಿ,ಸಂಸ್ಕೃತ ಧಾರ್ಮಿಕ ಪಠಣ (ದ್ವಿತೀಯ), ಅದ್ವಿಕ್ ಎಸ್. ಆಚಾರ್ಯ, 5 ನೇ ತರಗತಿ, ಭಕ್ತಿ ಗೀತೆ (ತೃತೀಯ) ಮತ್ತು ಚೇತನ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ಗೆ ಪ್ರತಿಭಾ ಪ್ರಶಸ್ತಿಗಳು Read More »

ಜ್ಯೂಸ್ ಬಾಟಲಿ ತುಂಬಿದ್ದ ಲಾರಿ ಪಲ್ಟಿ: ಚಾಲಕ ಅಪಾಯದಿಂದ ಪಾರು

ಸುಳ್ಯ: ಜ್ಯೂಸ್ ಬಾಟಲಿಗಳನ್ನು ತುಂಬಿಕೊಂಡು ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಘಟನೆ ದೇವರಕೊಲ್ಲಿ ಫಾಲ್ಸ್ ಸಮೀಪ ನಡೆದಿದೆ. ಘಟನೆಯಲ್ಲಿ ಲಾರಿಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಜ್ಯೂಸ್ ಬಾಟಲಿ ತುಂಬಿದ್ದ ಲಾರಿ ಪಲ್ಟಿ: ಚಾಲಕ ಅಪಾಯದಿಂದ ಪಾರು Read More »

error: Content is protected !!
Scroll to Top