ಸುದ್ದಿ

ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ

ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ ಯಕ್ಷಗಾನದ ಕಥೆಯೇ ಸಿನಿಮಾ ಆದ ಚಿತ್ರ ಉಡುಪಿ: ಸುಮಾರು ಕಲಾವಿದರು ನಟಿಸಿರುವ, ಹಿರಿಯ ನಟ ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿರುವ ಯಕ್ಷಗಾನವೇ ಕಥಾವಸ್ತು ಆಗಿ ಉಳ್ಳ ಸಿನಿಮಾವೊಂದು ಕನ್ನಡದಲ್ಲಿ ನಿರ್ಮಾಣವಾಗಿದ್ದು, ಏ.18ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು ಯಕ್ಷಗಾನ ಮತ್ತು ಯಕ್ಷಗಾನದ ಪಾತ್ರಗಳನ್ನು ಸಾಂದರ್ಭಿಕವಾಗಿ ಬಳಸಿಕೊಂಡಿರುವ ಅನೇಕ ಚಿತ್ರಗಳು ಬಂದಿವೆ. ಆದರೆ ಯಕ್ಷಗಾನ ಪ್ರಸಂಗವೊಂದನ್ನೇ ಸಿನಿಮಾ ಮಾಡಿ ಅದರಲ್ಲಿ ಯಕ್ಷಗಾನ ಕಲಾವಿದರೇ ನಟಿಸಿದ್ದು, ಇದೇ ಮೊದಲು. ಈ ಚಿತ್ರವನ್ನು ನಿರ್ದೇಶಿಸಿದವರು ಈಗಾಗಲೇ ಕನ್ನಡದಲ್ಲಿ […]

ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ Read More »

ಮಾಟ ತೆಗೆಯುವ ನೆಪದಲ್ಲಿ ಕಿರುಕುಳ : ಆರೋಪಿ ಬಂಧನ

ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಮಾಟಮಂತ್ರ ತೆಗೆಯುವ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಅವರು ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಕೂಳೂರು

ಮಾಟ ತೆಗೆಯುವ ನೆಪದಲ್ಲಿ ಕಿರುಕುಳ : ಆರೋಪಿ ಬಂಧನ Read More »

ನಟಿಗೆ ವಂಚಿಸಿದ ಉದ್ಯಮಿಗೆ 61.50 ಲ.ರೂ. ದಂಡ

ಬೆಂಗಳೂರು : ನಟಿ ಸಂಜನಾ ಗಲ್ರಾನಿಗೆ ವಂಚಿಸಿದ ಉದ್ಯಮಿ ರಾಹುಲ್ ತೋನ್ಸೆಗೆ ನ್ಯಾಯಾಲಯ ಬರೋಬ್ಬರಿ 61.50 ಲಕ್ಷ ರೂಪಾಯಿ ದಂಡ ಹಾಗೂ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 33ನೇ ಎಸಿಜೆಎಂ ನ್ಯಾಯಾಲಯ ಈ ತೀರ್ಪು ನೀಡಿದೆ. ದಂಡದ ಮೊತ್ತದಲ್ಲಿ 10 ಸಾವಿರ ಕೋರ್ಟ್ ಶುಲ್ಕ ಕಡಿತ ಮಾಡಿ ಉಳಿದ ಹಣ ಸಂಜನಾಗೆ ನೀಡಬೇಕು. ನಿಗಧಿತ ಸಮಯದಲ್ಲಿ ದಂಡ ಪಾವತಿಸಿದರೆ ಆರು ತಿಂಗಳ ಶಿಕ್ಷೆ ಮಾಫಿ ಮಾಡಲಾಗುವುದು. ಒಂದು ವೇಳೆ ಪರಿಹಾರ ಮೊತ್ತ ನೀಡದೆ ಜೈಲು ಶಿಕ್ಷೆ

ನಟಿಗೆ ವಂಚಿಸಿದ ಉದ್ಯಮಿಗೆ 61.50 ಲ.ರೂ. ದಂಡ Read More »

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ

ಶಾಶ್ವತ ದೀಪಾಲಂಕಾರಕ್ಕೆ ಚಾಲನೆ-ವಾರದಲ್ಲಿ ಎರಡು ದಿನ ವೀಕ್ಷಣೆಗೆ ಲಭ್ಯ ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧವಿನ್ನು ದೀಪಾಲಂಕಾರದಿಂದ ಜಗಮಗಿಸಲಿದೆ. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗುತ್ತಿತ್ತು. ಈಗ ಸ್ಪೀಕರ್‌ ಯು.ಟಿ.ಖಾದರ್‌ ಮುತುವರ್ಜಿಯಿಂದ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಇನ್ನು ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್​​​​ ದೀಪಗಳಿಂದ ‌ವಿಧಾನಸೌಧ ಕಂಗೊಳಿಸಲಿದೆ. ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾತ್ರಿ ಚಾಲನೆ ನೀಡಿದ್ದಾರೆ. ಯುಟಿ ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ Read More »

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌

ರಾಜಕೀಯದಲ್ಲಿ ಹೀರೊ ಝೀರೊ ಆಗುತ್ತಾನೆ, ಝೀರೊ ಹೀರೊ ಆಗುತ್ತಾನೆ ಎಂದು ಅಚ್ಚರಿಯ ಹೇಳಿಕೆ ಕಾಸರಗೋಡು: ರಾಜಕೀಯದಲ್ಲಿ ಯಾರು, ಯಾರಿಗೆ, ಯಾವಾಗ ಮಿತ್ರರಾಗುತ್ತಾರೆ, ಯಾವಾಗ ಶತ್ರುವಾಗುತ್ತಾರೆ ಎನ್ನುವುದನ್ನು ಊಹಿಸಿವುದು ಕೂಡ ಕಷ್ಟ. ಇದಕ್ಕೆ ತಾಜಾ ಉದಾಹರಣೆಯೆಂದರೆ ಉಪಮುಖ್ಯಮಂತ್ರಿ ಡಿ.ಕೆ.ಶೀವಕುಮಾರ್‌ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು. ನಿನ್ನೆ ವೇದಿಕೆಯೊಂದರಲ್ಲಿ ಕಟೀಲು ಪರವಾಗಿ ಡಿಕೆಶಿ ಭರ್ಜರಿಯಾಗಿ ಬ್ಯಾಟಿಂಗ್‌ ಮಾಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ. ಕಾಸರಗೋಡಿನ ಪ್ರಸಿದ್ಧ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌ Read More »

ಕಳ್ಳತನ ಮಾಡಿದ ಬಾಲಕರನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ

ಬೆಂಗಳೂರು: ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್​ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಚಿತ್ರಹಿಂಸೆ ನೀಡಿರುವ ವೀಡಿಯೊ ವೈರಲ್ ಆಗಿದೆ. ಪೊಲೀಸರು 9 ಜನರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಸುಭಾಷ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿಪಿಕ್ಕಿ

ಕಳ್ಳತನ ಮಾಡಿದ ಬಾಲಕರನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ Read More »

ಡೀಸೆಲ್‌ ಬೆಲೆ ಏರಿಕೆಗೆ ಪ್ರತಿಭಟನೆ : ಏ.14ರಿಂದ ಲಾರಿ ಮುಷ್ಕರ

ಗೂಡ್ಸ್ ವಾಹನಗಳು, ಟ್ಯಾಕ್ಸಿ ಸೇರಿ 6 ಲಕ್ಷಕ್ಕೂ ವಾಹನಗಳ ಸಂಚಾರ ಸ್ಥಗಿತ ಬೆಂಗಳೂರು: ರಾಜ್ಯದಲ್ಲಿ ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಏ.14ರಿಂದ ಮುಷ್ಕರ ಹೂಡಲು ಲಾರಿ ಮಾಲೀಕರು ತೀರ್ಮಾನಿಸಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಮತ್ತು ಟೋಲ್ ದರ ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್​ 14ರ ಮಧ್ಯರಾತ್ರಿಯಿಂದ ಲಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

ಡೀಸೆಲ್‌ ಬೆಲೆ ಏರಿಕೆಗೆ ಪ್ರತಿಭಟನೆ : ಏ.14ರಿಂದ ಲಾರಿ ಮುಷ್ಕರ Read More »

ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಇಂದು ಮೋದಿಯಿಂದ ಉದ್ಘಾಟನೆ

ತಮಿಳುನಾಡಿನ ರಾಮೇಶ್ವರಂನಲ್ಲಿ ನಿರ್ಮಿಸಿದ ಪಂಬನ್‌ ಸೇತುವೆ ನವದೆಹಲಿ: ರಾಮನವಮಿ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು ತಮಿಳುನಾಡಿನ ರಾಮೇಶ್ವರಂನಲ್ಲಿ ಉದ್ಘಾಟಿಸಲಿದ್ದಾರೆ. ಪಂಬನ್ ಎಂದು ಕರೆಯಲ್ಪಡುವ ಈ ರೈಲು ಸೇತುವೆಯನ್ನು 550 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.‌ಮಧ್ಯಾಹ್ನ 12 ಗಂಟೆಗೆ ಪಂಬನ್ ಮತ್ತು ರಾಮೇಶ್ವರಂ ನಡುವಿನ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು ಮೋದಿ ಉದ್ಘಾಟಿಸಲಿದ್ದಾರೆ. ಆ ಮೂಲಕ ಅವರು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗು ಸಂಚಾರಕ್ಕೆ

ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಇಂದು ಮೋದಿಯಿಂದ ಉದ್ಘಾಟನೆ Read More »

ವಕ್ಫ್‌ ಮಸೂದೆಗಿನ್ನು ಸುಪ್ರೀಂ ಕೋರ್ಟ್‌ ಅಗ್ನಿಪರೀಕ್ಷೆ

ಅಂಕಿತ ಹಾಕಿದ ರಾಷ್ಟ್ರಪತಿ ದ್ರೌಪದಿ ಮುರ್ಮು ನವದೆಹಲಿ : ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಬೀಳೂವುದರೊಂದಿಗೆ ಅದು ಈಗ ಕಾಯಿದೆಯಾಗಿ ಮಾರ್ಪಟ್ಟಿದೆ. ರಾಷ್ಟ್ರಪತಿಗಳ ಅಂಕಿತ ಪಡೆಯುವ ಮೊದಲು ವಕ್ಫ್ ಮಸೂದೆಯನ್ನು ಎರಡೂ ಸದನಗಳು ಅಂಗೀಕರಿಸಿದ್ದವು. ಆಡಳಿತ ಮತ್ತು ವಿರೋಧ ಪಕ್ಷದ ನಡುವೆ ಬಿಸಿ ವಾಗ್ವಾದ ನಡೆದ ಸುದೀರ್ಘ ಚರ್ಚೆಯ ನಂತರ ಶುಕ್ರವಾರ ಬೆಳಗ್ಗೆ ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲಾಯಿತು. ರಾಜ್ಯಸಭೆಯಲ್ಲಿ ಸುಮಾರು 14 ಗಂಟೆಗಳ ಕಾಲ ಈ ಮಸೂದೆಯ ಬಗ್ಗೆ ಚರ್ಚೆ

ವಕ್ಫ್‌ ಮಸೂದೆಗಿನ್ನು ಸುಪ್ರೀಂ ಕೋರ್ಟ್‌ ಅಗ್ನಿಪರೀಕ್ಷೆ Read More »

ಟಾರ್ಗೆಟ್‌ ರೀಚ್‌ ಮಾಡದ ನೌಕರನಿಗೆ ನಾಯಿಯಂತೆ ನಡೆಯುವ ಶಿಕ್ಷೆ

ಖಾಸಗಿ ಕಂಪನಿ ನೀಡಿದ ಶಿಕ್ಷೆಯ ವೀಡಿಯೊ ವೈರಲ್‌ ಕೊಚ್ಚಿ: ಟಾರ್ಗೆಟ್‌ ರೀಚ್‌ ಮಾಡಲು ಸಾಧ್ಯವಾಗದ ಉದ್ಯೋಗಿಗಳನ್ನು ಕತ್ತಿಗೆ ಸರಪಳಿ ಬಿಗಿದು ನಾಯಿಯಂತೆ ನಡೆಸಿಕೊಂಡು ಹೋದ ಘಟನೆಯೊಂದು ಕೇರಳದಲ್ಲಿ ಸಂಭವಿಸಿದ್ದು, ಕೃತ್ಯದ ವೀಡಿಯೊ ಭಾರಿ ವೈರಲ್‌ ಆಗಿ ಆಕ್ರೋಶಕ್ಕೆ ಗುರಿಯಾಗಿದೆ.ಕೊಚ್ಚಿಯಲ್ಲಿರುವ ಮಾರ್ಕೆಟಿಂಗ್‌ ಕಂಪನಿಯೊಂದು ತನ್ನ ನೌಕರರಿಗೆ ಈ ಶಿಕ್ಷೆ ನೀಡಿದೆ ಎನ್ನಲಾಗಿದೆ. ಕಂಪನಿಯ ಮಾಜಿ ಮ್ಯಾನೇಜರ್‌ ಈ ವೀಡಿಯೊವನ್ನು ಬಹಿರಂಗಪಡಿಸಿದ ಬಳಿಕ ಸರಕಾರದ ಗಮನಕ್ಕೂ ಬಂದಿದೆ. ಟಾರ್ಗೆಟ್‌ ರೀಚ್‌ ಮಾಡಲಾಗದ ನೌಕರರಿಗೆ ಈ ಕಂಪನಿಯ ಮಾಲೀಕ ಈ ರೀತಿಯ

ಟಾರ್ಗೆಟ್‌ ರೀಚ್‌ ಮಾಡದ ನೌಕರನಿಗೆ ನಾಯಿಯಂತೆ ನಡೆಯುವ ಶಿಕ್ಷೆ Read More »

error: Content is protected !!
Scroll to Top