ಸುದ್ದಿ

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ವರದಿ ಮೇಲಿನ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

ಆರು ಮಂದಿಯ ವಿರುದ್ಧ ಎಸ್‌ಐಟಿ ಸಲ್ಲಿಸಿರುವ ವರದಿ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಆರು ಮಂದಿಯ ವಿರುದ್ಧ ಸಲ್ಲಿಸಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ವಿಚಾರಣೆ ನಡೆಸಿ ಮುಂದಿನ ಶನಿವಾರಕ್ಕೆ ವಿಚಾರಣೆ ಮುಂದೂಡಿದೆ‌. ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ನ.20ರಂದು ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ವಿರುದ್ಧ 3,923 ಪುಟಗಳ ವರದಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ […]

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ವರದಿ ಮೇಲಿನ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ Read More »

ಕುಖ್ಯಾತ ಮನೆಗಳ್ಳನ ಬಂಧನ : 65.79 ಲ.ರೂ. ಮೌಲ್ಯದ ಚಿನ್ನಾಭರಣ ವಶ

ಉಡುಪಿ : ಕುಖ್ಯಾತ ಮನೆಕಳ್ಳನೊಬ್ಬನನ್ನು ಬಂಧಿಸಿ, 65,79,720 ರೂ. ಮೌಲ್ಯದ ಕದ್ದ ಚಿನ್ನಾಭರಣಗಳನ್ನು ಉಡುಪಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿ ಸಮೀಪದ ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ(37) ಬಂಧಿತ ಆರೋಪಿ. ಉಡುಪಿಯ 76 ಬಡಗುಬೆಟ್ಟು ಗ್ರಾಮದ ಒಳಕಾಡು ಶಾರದಾಂಬಾ ದೇವಸ್ಥಾನದ ಗೋಪುರದ ರೋಸ್ ವಿಲ್ಲಾದ ಶೈಲಾ ವಿಲ್ಹೆಲ್ಮ್ ಮೀನಾ (53) ಅವರು ನವೆಂಬರ್ 30ರಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿತ್ತು. ಅವರು ಬೆಳಗ್ಗೆ ಚರ್ಚ್‌ಗೆ ಹೋಗುವ ಸಲುವಾಗಿ ಆಭರಣಗಳನ್ನು ಧರಿಸಲು ಮಲಗುವ ಕೋಣೆಯ

ಕುಖ್ಯಾತ ಮನೆಗಳ್ಳನ ಬಂಧನ : 65.79 ಲ.ರೂ. ಮೌಲ್ಯದ ಚಿನ್ನಾಭರಣ ವಶ Read More »

ಇಂದು ಎರಡನೇ ಏಕದಿನ : ಸರಣಿ ಗೆಲುವಿಗೆ ಭಾರತ ಯತ್ನ

ಭಾರತಕ್ಕೆ ಸರಣಿ ಗೆಲುವಿಗೆ ; ದಕ್ಷಿಣ ಆಫ್ರಿಕಾಕ್ಕೆ ಸರಣಿ ಸಮಬಲಗೊಳಿಸಲು ನಿರ್ಣಾಯಕ ಪಂದ್ಯ ರಾಯ್‌ಪುರ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಡಿ.3ರಂದು ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಂಚಿ ಪಂದ್ಯವನ್ನು ಗೆದ್ದ ನಂತರ 1-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲು ಪ್ರಯತ್ನಿಸುತ್ತಿದೆ. ಸುಮಾರು ಮೂರು ವರ್ಷಗಳ ನಂತರ ರಾಯ್‌ಪುರ ಏಕದಿನ ಪಂದ್ಯವನ್ನು ಆಯೋಜಿಸುತ್ತಿದೆ, ಆದ್ದರಿಂದ

ಇಂದು ಎರಡನೇ ಏಕದಿನ : ಸರಣಿ ಗೆಲುವಿಗೆ ಭಾರತ ಯತ್ನ Read More »

ಗಾಂಜಾ ಸೇವಿಸಿ ತೂರಾಡುತ್ತಿದ್ದ ಹನೀಫ್ ಪೊಲೀಸರ ವಶಕ್ಕೆ

ಮಂಗಳೂರು: ಗಾಂಜಾ ಸೇವಿಸಿ ಕುದ್ರೋಳಿಯ ಗ್ರೀನ್ ಪಾರ್ಕ್ ಸಮೀಪ ತೂರಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂದರು ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂದರು ಅನ್ಸಾರಿ ರೋಡ್ ನಿವಾಸಿ ಮಹಮ್ಮದ್ ಹನೀಫ್ (42) ಎಂಬಾತನೇ ಬಂಧಿತ ಆರೋಪಿ. ಗಾಂಜಾ ಸೇವಿಸಿ ತೂರಾಡಿಕೊಂಡು ಹೋಗುತ್ತಿದ್ದ ಅವನನ್ನು ಗಸ್ತು ಪೊಲೀಸರು ಗಮನಿಸಿ, ವಶಕ್ಕೆ ಪಡೆದಿರುವುದಾಗಿದೆ. ಆತನನ್ನು ವಿಚಾರಣೆ ನಡೆಸಿದಾಗ ಆತ ಗಾಂಜಾ ಸೇವಿಸಿರುವುದು ‌ದೃಢಪಟ್ಟಿದೆ. ಆರೋಪಿಯ ವಿರುದ್ಧ NDPS ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಸೇವಿಸಿ ತೂರಾಡುತ್ತಿದ್ದ ಹನೀಫ್ ಪೊಲೀಸರ ವಶಕ್ಕೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಪುತ್ತೂರೊಡೆಯನಿಗೆ ಕಾಣಿಕೆ ಸಮರ್ಪಣೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇಗುಲಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ಬೆಲ್ಲ, ಅಕ್ಕಿ, ಕಡ್ಲೆ ಬೇಳೆ, ತೊಗರಿ ಬೇಳೆ ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಹರಿಪ್ರಸಾದ್ ನೆಲ್ಲಿಕಟ್ಟೆ ಅವರು ಮಾತನಾಡಿ, ಕೆಲವು ಲೋಪ ದೋಷಗಳು ಕಂಡು ಬಂದಾಗ ಅದನ್ನು ಸರಿಪಡಿಸುವ ಕೆಲಸವನ್ನು ಮಾಡುತ್ತಾ ಬಂದೆವು. ಅವೆಲ್ಲವೂ ದೇವರ ಕೃಪೆಯಿಂದ ಸರಿಯಾಗುತ್ತಾ ಬಂತು. ಹಾಗೆಯೇ ಸಮಿತಿಯ ವತಿಯಿಂದ ದೇವರಿಗೆ ಕಾಣಿಕೆ ಸಲ್ಲಿಸುವ ಸಂಕಲ್ಪ ಮಾಡಿದೆವು. ಅದರಂತೆ ಈಗ ಮೂರನೇ ಬಾರಿಗೆ ಕಾಣಿಕೆ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಪುತ್ತೂರೊಡೆಯನಿಗೆ ಕಾಣಿಕೆ ಸಮರ್ಪಣೆ Read More »

ದೈವಕ್ಕೆ ಅಪಚಾರ : ಕ್ಷಮೆ ಯಾಚಿಸಿದ ನಟ ರಣವೀರ್‌ ಸಿಂಗ್‌

ಕಾಂತಾರ ಹೊಗಳುವ ಭರದಲ್ಲಿ ದೈವವನ್ನು ಅಣಕಿಸಿದ್ದ ಬಾಲಿವುಡ್‌ ನಟ ಮುಂಬೈ : ಕಾಂತಾರ ಚಿತ್ರವನ್ನು ಹೊಗಳುವ ಭರದಲ್ಲಿ ದೈವಕ್ಕೆ ಅಪಚಾರ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ತನ್ನ ತಪ್ಪಿಗೆ ಬೇಷರತ್‌ ಕ್ಷಮೆ ಯಾಚಿಸಿ ವಿವಾದ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ. ತಾನು ನಟಿಸಿದ ‘ಧುರಂಧರ್’ ಸಿನಿಮಾ ಬಿಡುಗಡೆಯಾಗುವ ಸಂದರ್ಭದಲ್ಲಿ ಈ ಅನಪೇಕ್ಷಿತ ವಿವಾದ ಭುಗಿಲೆದದ್ದು ಅವರಿಗೆ ಹಿನ್ನಡೆಯಾಗಿತ್ತು. ಗೋವಾದ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಕಾಂತಾರ’ ಚಿತ್ರ ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳುವ ಭರದಲ್ಲಿ ಅವರು ದೈವವನ್ನು

ದೈವಕ್ಕೆ ಅಪಚಾರ : ಕ್ಷಮೆ ಯಾಚಿಸಿದ ನಟ ರಣವೀರ್‌ ಸಿಂಗ್‌ Read More »

ದಂಪತಿ ಜಗಳ: ಗಂಡ ಆತ್ಮಹತ್ಯೆ

ಕಾರ್ಕಳ: ದಂಪತಿ ಮಧ್ಯೆ ನಡೆದ ಜಗಳ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಪೋಸ್ಟ್‌ಮ್ಯಾನ್ ಒಬ್ಬರು ದಂಪತಿ ಮನೆಗೆ ಪತ್ರ ನೀಡಲು ಬಂದಿದ್ದಾಗ ಪತ್ನಿ ಶಕುಂತಲಾ ಅವರು ಗಾಯಗೊಂಡು ಕಂಡುಬಂದಿದೆ. ತಕ್ಷಣವೇ ಪೋಸ್ಟ್‌ಮ್ಯಾನ್ ಅವರು ಶಕುಂತಲಾ ಅವರ ಪುತ್ರ ಸಾಯಿಕಿರಣ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಪುತ್ರ ಮನೆಗೆ ಬಂದು ತಾಯಿಯನ್ನು ವಿಚಾರಿಸಿದಾಗ ತಂದೆ ಕೋಲಿನಿಂದ ಹಲ್ಲೆ ಮಾಡಿರುವುದು ತಿಳಿದು ಬಂದಿದೆ. ತಂದೆ ಕೋಣೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು, ಬಾಗಿಲು ಬಡಿದರೂ ತೆರೆದಿಲ್ಲ. ಈ ವೇಳೆ

ದಂಪತಿ ಜಗಳ: ಗಂಡ ಆತ್ಮಹತ್ಯೆ Read More »

ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯಗೆ ನಾಟಿಕೋಳಿ ಸಾರು, ಬಿಸಿಬಿಸಿ ಇಡ್ಲಿ ಬ್ರೇಕ್‌ಫಾಸ್ಟ್‌

ಸಿಎಂಗೆ ನಾನ್‌ವೆಜ್‌ ತಿನ್ನಿಸಿ ತಾನು ವೆಜ್‌ ಮಾತ್ರ ತಿಂದ ಡಿಕೆಶಿ ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ನಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವಣ ‘ಬ್ರೇಕ್​ಫಾಸ್ಟ್ ಮೀಟಿಂಗ್’ ಮುಂದುವರಿದಿದೆ. ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿದರು. ಜತೆಗೆ ಮಾತುಕತೆಯೂ ನಡೆಯಿತು. ಆದರೆ ಡಿ.ಕೆ ಶಿವಕುಮಾರ್ ಮಾತ್ರ ಉಪಾಹಾರ ಕೂಟದಲ್ಲಿ ನಾನ್‌ವೆಜ್ ಸೇವಿಸಲಿಲ್ಲ. ಕಾವೇರಿ ನಿವಾಸದಿಂದ

ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯಗೆ ನಾಟಿಕೋಳಿ ಸಾರು, ಬಿಸಿಬಿಸಿ ಇಡ್ಲಿ ಬ್ರೇಕ್‌ಫಾಸ್ಟ್‌ Read More »

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ವಿಮಾ ಪರಿಹಾರ ಪಾವತಿ ವಿಳಂಬ: ಶೀಘ್ರ ಪರಿಹಾರಕ್ಕೆ ಕ್ಯಾ. ಚೌಟ ಸೂಚನೆ

ಮಂಗಳೂರು: ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ವಿಮಾ ಪರಿಹಾರ ಪಾವತಿ ವಿಳಂಬವಾಗಿದ್ದು ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಬಂಧಿಸಿದ ಅಧಿಕಾರಿಗಳ ಜೊತೆ ಸಭೆ ನಡೆಸಿ ಶೀಘ್ರ ವಿಮಾ ಮೊತ್ತ ಪಾವತಿಗೆ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ. ಕಳೆದ ವಾರ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು, ಕೃಷಿ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ವಿಳಂಬಕ್ಕೆ ‌ಕಾರಣ ಏನು ಎಂಬುದರ ಬಗ್ಗೆ ಪರಾಮರ್ಶಿಸಿದ್ದರು. ಹಾಗೆಯೇ ತುರ್ತಾಗಿ ವಿಮಾ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ವಿಮಾ ಪರಿಹಾರ ಪಾವತಿ ವಿಳಂಬ: ಶೀಘ್ರ ಪರಿಹಾರಕ್ಕೆ ಕ್ಯಾ. ಚೌಟ ಸೂಚನೆ Read More »

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ‌ಸಿದ್ದರಾಮಯ್ಯ ಗರಂ: ಯಾಕೆ ಗೊತ್ತಾ?

ಬೆಂಗಳೂರು: ಮಹಿಳೆಯರು ಮತ್ತು ಬಡವರ ಪರ ಕಾಳಜಿ ವಹಿಸಿ ಹಲವಾರು ಯೋಜನೆಗಳನ್ನು ಜಾರಿಗೆ ತಂದದ್ದು ‌ನಮ್ಮ ಕಾಂಗ್ರೆಸ್ ಸರ್ಕಾರ. ಆದರೂ ಜನರು ಮೋದಿ ಮೋದಿ ಎಂದೇ ಕೂಗುತ್ತಾರೆ ಎಂದು ಸಿಎಂ ‌ಸಿದ್ದರಾಮಯ್ಯ ಅವರು ಅಸಮಾಧಾನ ಹೊರಹಾಕಿದ್ದಾರೆ. ಗಾಂಧಿ ಗ್ರಾಮ ಪುರಸ್ಕಾರಕ್ಕೆ ‌ಚಾಲನೆ ನೀಡಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಯೋಜನೆಗೆ ಕೇಂದ್ರ ಸರ್ಕಾರ ಏನನ್ನೂ ನೀಡಿಲ್ಲ. ನಾವೇ ಹೆಚ್ಚು ಅನುದಾನ ನೀಡಿದವರು. ಸಾರ್ವಜನಿಕರು ಅವರ ಮೇಲೆ ಒತ್ತಡ ಹಾಕುವುದೇ ಇಲ್ಲ. ಕಬ್ಬಿಗೆ ಎಫ್‌ಆರ್‌ಪಿ, ಸಕ್ಕರೆಗೆ ಎಂಎಸ್‌ಪಿ,

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ‌ಸಿದ್ದರಾಮಯ್ಯ ಗರಂ: ಯಾಕೆ ಗೊತ್ತಾ? Read More »

error: Content is protected !!
Scroll to Top