ಸುದ್ದಿ

ನೇಣು ಬಿಗಿದು ‌ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಮನೆಯ ಕೊಟ್ಟಿಗೆಯ ‌ಪಕ್ಕಾಸಿಗೆ ನೇಣು ಹಾಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರೋಡಿ ‌ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್(54) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಯಾವುದೋ ಕಾರಣಕ್ಕೆ ಮನ ನೊಂದು ಅಶೋಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ಗೋಪಾಲ ಪೂಜಾರಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ನೇಣು ಬಿಗಿದು ‌ವ್ಯಕ್ತಿ ಆತ್ಮಹತ್ಯೆ Read More »

ನಾಳೆ ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯನವರಿಗೆ ಬ್ರೇಕ್‌ಫಾಸ್ಟ್‌

ರಾಜ್ಯ ರಾಜಕೀಯದಲ್ಲೀಗ ಬ್ರೇಕ್‌ಫಾಸ್ಟ್‌ ಕುತೂಹಲದ ಕೇಂದ್ರ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮಾಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದೀಗ ಮಂಗಳವಾರ ತನ್ನ ಮನೆಗೆ ಸಿದ್ದರಾಮಯ್ಯ ಅವರನ್ನು ಬ್ರೇಕ್‌ಫಾಸ್ಟ್‌ಗೆ ಆಹ್ವಾನಿಸಿದ್ದಾರೆ. ಬ್ರೇಕ್‌ಫಾಸ್ಟ್‌ದ ಮೀಡಿಂಗ್‌ನಲ್ಲಿ ಇಬ್ಬರ ನಡುವಿನ ಕುರ್ಚಿ ಕಿತ್ತಾಟ ಸದ್ಯಕ್ಕೆ ಶಮನಗೊಂಡಿರುವಂತೆ ಕಾಣಿಸುತ್ತಿದ್ದರೂ ನಾಳಿನ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮತ್ತೊಂದು ಸುತ್ತಿನ ಕುತೂಹಲಕ್ಕೆ ಕಾರಣವಾಗಿದೆ. ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತುಸುಮಟ್ಟಿನ ಶಮನ ದೊರೆತಿದ್ದರೂ ದೆಹಲಿ ಮಟ್ಟದಲ್ಲಿ ಮಾತುಕತೆ ಮುಂದುವರಿದಿದೆ. ಶನಿವಾರ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ‘ಬ್ರೇಕ್​ಫಾಸ್ಟ್ ಮೀಟಿಂಗ್’ ನಡೆದಿತ್ತು.

ನಾಳೆ ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯನವರಿಗೆ ಬ್ರೇಕ್‌ಫಾಸ್ಟ್‌ Read More »

ಅಡುಗೆ ಗ್ಯಾಸ್‌ ಬೆಲೆ ತುಸು ಇಳಿಕೆ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರಸ್ತುತ ಕಡಿಮೆಯಾದ ಪರಿಣಾಮವಾಗಿ ಅದರ ಉಪಉತ್ಪನ್ನವಾದ ದ್ರವೀಕೃತ ಪೆಟ್ರೋಲಿಯಂ ಅನಿಲದ (ಎಲ್‌ಪಿಜಿ) ಬೆಲೆ ಸಹ ಕಡಿಮೆಯಾಗುತ್ತಿವೆ. ಹೀಗಾಗಿ ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆಯನ್ನು ತುಸು ಕಡಿಮೆ ಮಾಡಿವೆ. 19 ಕೆಜಿ ವಾಣಿಜ್ಯ ಸಿಲಿಂಡರ್‌ ಬೆಲೆ 10 ರೂಪಾಯಿಗಳಷ್ಟು ಕಡಿಮೆ ಆಗಿದೆ. ಹೊಸ ಬೆಲೆ ಡಿಸೆಂಬರ್ 1ರಿಂದಲೇ ಜಾರಿಗೆ ಬಂದಿದೆ. ಒಂದು ತಿಂಗಳ ಹಿಂದೆ, ಬೆಲೆಯನ್ನು 5 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿತ್ತು. ಸರ್ಕಾರಿ

ಅಡುಗೆ ಗ್ಯಾಸ್‌ ಬೆಲೆ ತುಸು ಇಳಿಕೆ Read More »

ಪುತ್ತೂರು : ಚಿಕನ್‌ ಅಂಗಡಿಯ ನೌಕರ ನಾಪತ್ತೆ

ಪುತ್ತೂರು: ನಗರದ ಪಡೀಲ್‌ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿ.ಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಜಿಂದಗಿ ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ಹೋಗಿದ್ದ ಎನ್ನಲಾಗಿದೆ. ಆ ಬಳಿಕ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ ಹೋಗದೆ, ಮನೆಗೂ

ಪುತ್ತೂರು : ಚಿಕನ್‌ ಅಂಗಡಿಯ ನೌಕರ ನಾಪತ್ತೆ Read More »

ಇಬ್ಬರು ಆನ್‌ಲೈನ್‌ ವಂಚಕರ ಸೆರೆ : 6.15 ಲಕ್ಷ ರೂ. ವಶ

ಫ್ರಾಂಚೈಸಿ ಕೊಡುವ ನೆಪದಲ್ಲಿ ಉದ್ಯಮಿಗೆ ವಂಚಿದ್ದ ಚೋರರು ಉಡುಪಿ: ಆನ್‌ಲೈನ್‌ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000 ರೂ. ಮೌಲ್ಯದ ನಗದು, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಹಾರದ ಪಾಟ್ನಾ ಜಿಲ್ಲೆಯ ದೇವ್ ಹರ್ಷ(20) ಹಾಗೂ ಬಿಹಾರ ನಳಂದಾ ಜಿಲ್ಲೆಯ ಚಂದನ ಕುಮಾರ್(29) ಬಂಧಿತ ಆರೋಪಿಗಳು. ಇವರಿಂದ 97 ಸಾವಿರ ರೂ. ಮೌಲ್ಯದ 10 ಮೊಬೈಲ್ ಫೋನ್, 68,000 ರೂ. ಮೌಲ್ಯದ

ಇಬ್ಬರು ಆನ್‌ಲೈನ್‌ ವಂಚಕರ ಸೆರೆ : 6.15 ಲಕ್ಷ ರೂ. ವಶ Read More »

ಕೋಳಿ ಅಂಕಕ್ಕೆ ದಾಳಿ : ಮೂವರು ಪೊಲೀಸ್‌ ವಶ

ಬಂಟ್ವಾಳ : ವೀರಕಂಭ ಗ್ರಾಮದ ಪಾತ್ರತೋಟ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ಮೂವರನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ. ಇಡ್ಕಿದು ನಿವಾಸಿ ಉಮೇಶ (38), ಅನಂತಾಡಿ ನಿವಾಸಿ ಅಣ್ಣು (38), ವೀರಕಂಭ ನಿವಾಸಿ ಉಮೇಶ್ (30) ಎಂಬವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ಅಕ್ರಮವಾಗಿ ಕೋಳಿಅಂಕದಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಬಿ.ಎಸ್ ನಾಯಕ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ.

ಕೋಳಿ ಅಂಕಕ್ಕೆ ದಾಳಿ : ಮೂವರು ಪೊಲೀಸ್‌ ವಶ Read More »

ದೈವದ ಅಣಕ : ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ದೈವಾರಾಧಕರ ಆಕ್ರೋಶ

ಹೊಗಳುವ ಭರದಲ್ಲಿ ಅಣಕಿಸಿ ವಿವಾದ ಮೈಮೇಲೆ ಎಳೆದುಕೊಂಡ ನಟ ಮಂಗಳೂರು: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಾಂತಾರ – ಚಾಪ್ಟರ್‌ 1 ಸಿನೆಮಾವನ್ನು ಹೊಗಳುವ ಭರದಲ್ಲಿ ದೈವವನ್ನು ದೆವ್ವ ಎಂದು ಕರೆದಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ಕರಾವಳಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ಕೆಲವರು ಇದಕ್ಕೆಲ್ಲ ಅವಕಾಶ ಮಾಡಿಕೊಟ್ಟದ್ದು ರಿಷಬ್‌ ಶೆಟ್ಟಿ ಎಂದು ದೂಷಿಸುತ್ತಿದ್ದಾರೆ. ವೇದಿಕೆಯಲ್ಲಿ ದೈವಗಳನ್ನು ವಿಕೃತವಾಗಿ ಅನುಕರಣೆ ಮಾಡಿದ ನಟ ರಣ್‍ವೀರ್ ಸಿಂಗ್ ವಿರುದ್ಧ ದೈವಾರಾಧಕರು

ದೈವದ ಅಣಕ : ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ದೈವಾರಾಧಕರ ಆಕ್ರೋಶ Read More »

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್‌ ಬಿರುಗಾಳಿ ಎಬ್ಬಿಸುವ ನಿರೀಕ್ಷೆ

10 ಮಸೂದೆ ಮಂಡನೆಗೆ ಸರ್ಕಾರ ಸಜ್ಜು; ವಿಪಕ್ಷದ ಬತ್ತಳಿಕೆಯಲ್ಲಿದೆ ಹಲವು ಅಸ್ತ್ರ ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮತದಾರರ ಪಟ್ಟಿಗೆ ವಿಶೇಷ ತಿದ್ದುಪಡಿಗಳನ್ನು ಸೂಚಿಸುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರದಲ್ಲಿ ಸರ್ಕಾರವನ್ನು ಸಿಲುಕಿಸಲು ವಿರೋಧ ಪಕ್ಷಗಳು ಸಂಪೂರ್ಣವಾಗಿ ಸಿದ್ಧವಾಗಿವೆ. ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಎಸ್​ಐಆರ್ ಕುರಿತು ಚರ್ಚಿಸದಿದ್ದರೆ ಅಧಿವೇಶನ ನಡೆಸಲು ಅವಕಾಶ ನೀಡುವುದಿಲ್ಲ ಎಂದು ವಿರೋಧ ಪಕ್ಷಗಳು ಹೇಳಿವೆ. ಈ ವಿಷಯದ ಬಗ್ಗೆ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ವರ್ತಿಸುತ್ತಿರುವಂತೆ ಮೇಲ್ನೋಟಕ್ಕೆ

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್‌ ಬಿರುಗಾಳಿ ಎಬ್ಬಿಸುವ ನಿರೀಕ್ಷೆ Read More »

ಮೈಸೂರಿನಲ್ಲಿ ಮಿಂಚಿದ ಪುತ್ತೂರಿನ ಬಾಲಪ್ರತಿಭೆ – ಸೋನಿಕಾ ಜನಾರ್ದನ್

ಮೈಸೂರು: ಮೈಸೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಮೈಸೂರು ವಕೀಲರ ಸಂಘ(ರಿ )ದ ವತಿಯಿಂದ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರಿನ ಬಾಲ ಕಲಾವಿದೆ ಸೋನಿಕಾ ಜನಾರ್ದನ್ ಕನ್ನಡ ಗೀತೆಯನ್ನು ಹಾಡುವುದರ ಮೂಲಕ ನೆರೆದವರ ವಿಶೇಷ ಮೆಚ್ಚುಗೆಗೆ ಪಾತ್ರಳಾದಳು. ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಉಷಾರಾಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಮರ್ ನಾಥ್, ಮೈಸೂರು ವಕೀಲರ ಸಂಘದ ಅಧ್ಯಕ್ಷ ಲೋಕೇಶ್, ಹಿರಿಯ ಸಮಿತಿ ಸದಸ್ಯ

ಮೈಸೂರಿನಲ್ಲಿ ಮಿಂಚಿದ ಪುತ್ತೂರಿನ ಬಾಲಪ್ರತಿಭೆ – ಸೋನಿಕಾ ಜನಾರ್ದನ್ Read More »

ಜಮೀರ್‌ ಸೋಷಿಯಲ್‌ ಮೀಡಿಯಾ ಖಾತೆ ಸೌದಿಯಿಂದ ನಿರ್ವಹಣೆ : ಕುಟುಕಿದ ಬಿಜೆಪಿ

ಸಚಿವಾಲಯವನ್ನು ನಿಯಂತ್ರಿಸುವುದು ಟರ್ಕಿಯೋ, ಪ್ಯಾಲೇಸ್ತೀನೋ? ಎಂದು ಪ್ರಶ್ನೆ ಬೆಂಗಳೂರು: ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರ ಸೋಷಿಯಲ್‌ ಮೀಡಿಯಾ ಖಾತೆಗಳ ಮೂಲ ವಿದೇಶಗಳಲ್ಲಿರುವುದು ಬಹಿರಂಗವಾದ ಬೆನ್ನಿಗೆ ಇದೀಗ ರಾಜ್ಯದ ಪ್ರಭಾವಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಕೂಡ ಇದೇ ಆರೋಪಕ್ಕೆ ಸಿಲುಕಿದ್ದಾರೆ. ಜಮೀರ್‌ ಅಹ್ಮದ್‌ ಖಾನ್‌ ಅವರ ಸೋಷಿಯಲ್‌ ಮೀಡಿಯಾ ಖಾತೆಗಳು ಸೌದಿಯಿಂದ ನಿರ್ವಹಣೆಯಾಗುತ್ತಿರುವುದು ಈಗ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಜಮೀರ್‌ ಅವರನ್ನು ಕುಟುಕಿರುವ ಬಿಜೆಪಿ ಸೋಷಿಯಲ್‌ ಮೀಡಿಯಾ ಖಾತೆ ವಿದೇಶದಿಂದ ನಿರ್ವಹಣೆಯಾಗುತ್ತಿರುವದು ಲೋಕಸತ್ಯ, ಜಮೀರ್‌ ನಿರ್ವಹಿಸುವ ಸಚಿವಾಲಯವನ್ನು

ಜಮೀರ್‌ ಸೋಷಿಯಲ್‌ ಮೀಡಿಯಾ ಖಾತೆ ಸೌದಿಯಿಂದ ನಿರ್ವಹಣೆ : ಕುಟುಕಿದ ಬಿಜೆಪಿ Read More »

error: Content is protected !!
Scroll to Top