ಸುದ್ದಿ

ಅಪ್ರಾಪ್ತ ಹುಡುಗನಿಗೆ ಕೋಲಿನಿಂದ ಹೊಡೆದ ವ್ಯಕ್ತಿಯ ವಿರುದ್ಧ ದೂರು

ಸುಬ್ರಹ್ಮಣ್ಯ: ವ್ಯಕ್ತಿಯೋರ್ವ ಅಪ್ರಾಪ್ತ ಹುಡುಗನಿಗೆ ಗದರಿಸಿ, ಕೋಲಿನಿಂದ ಹೊಡೆದಿದ್ದು, ಈ ಘಟನೆ ಬಾಲಕನ ತಾಯಿಯ ಗಮನಕ್ಕೆ ಬಂದ ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ‌ದೂರು ದಾಖಲಿಸಿದ್ದಾರೆ. ಸಂತ್ರಸ್ತ ಬಾಲಕ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು, ಆರೋಪಿ ಚೇತನ್ ಎಂಬಾತ ಹುಡುಗನಿಗೆ ಕೋಲು ಹಿಡಿದು ಹೊಡೆಯುತ್ತಿರುವ ವಿಡಿಯೋ ಮೊಬೈಲಿನಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿರುವುದಾಗಿದೆ.

ಅಪ್ರಾಪ್ತ ಹುಡುಗನಿಗೆ ಕೋಲಿನಿಂದ ಹೊಡೆದ ವ್ಯಕ್ತಿಯ ವಿರುದ್ಧ ದೂರು Read More »

ತಾಯಿಯನ್ನು ತಳ್ಳಿ ಚಪ್ಪಲಿಯಿಂದ ಹಲ್ಲೆ ಮಾಡಿದ ಮಗಳು : ವಿಡಿಯೋ ವೈರಲ್‌

ದೂರು ನೀಡಲು ಬಂದ ತಾಯಿಯ ಮೇಲೆ ಪಂಚಾಯತ್‌ ಕಚೇರಿಯಲ್ಲೇ ದೌರ್ಜನ್ಯ ಮಂಗಳೂರು : ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆ ಗ್ರಾಮ ಪಂಚಾಯತ್ ಆವರಣದಲ್ಲಿ ಮಗಳೇ ತನ್ನ ತಾಯಿಗೆ ಮನಬಂದಂತೆ ಥಳಿಸಿ, ಚಪ್ಪಲಿಯಿಂದ ಹೊಡೆದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಮೂಡುಶೆಡ್ಡೆಯ ಶಿವನಗರದಲ್ಲಿ ವಾಸಿಸುವ ತಾಯಿ ಮತ್ತು ಮಗಳ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈ ಹಿಂದೆ, ತಾಯಿ ಈ ವಿವಾದಗಳ ಕುರಿತು ಕಾವೂರು ಪೊಲೀಸ್

ತಾಯಿಯನ್ನು ತಳ್ಳಿ ಚಪ್ಪಲಿಯಿಂದ ಹಲ್ಲೆ ಮಾಡಿದ ಮಗಳು : ವಿಡಿಯೋ ವೈರಲ್‌ Read More »

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಒಗ್ಗಟ್ಟಿನ ರಾಗ : ಭಿನ್ನಮತ ಇಲ್ಲ ಎಂದು ಸಾರಿದ ಸಿದ್ದರಾಮಯ್ಯ-ಡಿಕೆಶಿ

ಎರಡೂವರೆ ವರ್ಷದ ಅಧಿಕಾರ ಕಚ್ಚಾಟಕ್ಕೆ ಸದ್ಯ ತೆರೆ ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡೂವರೆ ವರ್ಷದಿಂದ ನಡೆಯುತ್ತಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವಿನ ಅಧಿಕಾರ ಕಚ್ಚಾಟಕ್ಕೆ ಸದ್ಯ ತೆರೆ ಬಿದ್ದಂತೆ ಕಾಣುತ್ತದೆ. ಇಂದು ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಇಬ್ಬರೂ ಒಗ್ಗಟ್ಟಿನ ರಾಗ ಹಾಡಿದ್ದಾರೆ. ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್‌ ಹೇಳಿದಂತೆ ಕೇಳುತ್ತೇವೆ. ಪಕ್ಷವನ್ನ ಇನ್ನಷ್ಟು ಶಕ್ತಿಶಾಲಿಗೊಳಿಸಿ 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಒಗ್ಗಟ್ಟಿನ ರಾಗ : ಭಿನ್ನಮತ ಇಲ್ಲ ಎಂದು ಸಾರಿದ ಸಿದ್ದರಾಮಯ್ಯ-ಡಿಕೆಶಿ Read More »

ಧರ್ಮಸ್ಥಳ ಪ್ರಕರಣ : ತನಿಖೆ ಮುಂದುವರಿಸಲು ಎಸ್‌ಐಟಿಗೆ ಹೈಕೋರ್ಟ್‌ ಸೂಚನೆ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಈಗ ನಡೆಯುತ್ತಿರುವ ಎಸ್.ಐ.ಟಿ ತನಿಖೆ ಮುಂದುವರಿಯಲಿ, ಅರ್ಜಿದಾರರಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಕಿರುಕುಳ ನೀಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯ ಸೂಚನೆ ನೀಡಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ. ಶುಕ್ರವಾರ ಎಸ್‌.ಐ.ಟಿ ತನಿಖೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗರೀಶ್ ಮಟ್ಟಣ್ಣನವರ್, ಜಯಂತ್ ಟಿ, ವಿಠಲ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದೂರುದಾರರ ಪರವಾದ ವಾದಗಳನ್ನು ಆಲಿಸಿದ ಬಳಿಕ ಎಸ್.ಐ.ಟಿ ತನಿಖೆ ಮುಂದುವರಿಯಲಿ ಎಂದು ಸೂಚಿಸಿದೆ. ಈ ಹಿಂದೆ

ಧರ್ಮಸ್ಥಳ ಪ್ರಕರಣ : ತನಿಖೆ ಮುಂದುವರಿಸಲು ಎಸ್‌ಐಟಿಗೆ ಹೈಕೋರ್ಟ್‌ ಸೂಚನೆ Read More »

ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿ ಸಿಬ್ಬಂದಿ ಮೇಲೆ ಹಲ್ಲೆ

ಪುತ್ತೂರು : ಕ್ಲಿನಿಕ್‌ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕ್ಲಿನಿಕ್‌ ಒಳಗೆ ದಾಂಧಲೆ ಎಸಗಿದ ಘಟನೆ ಶನಿವಾರ ಬೆಳಗ್ಗೆ ಪುತ್ತೂರಿನಲ್ಲಿ ಸಂಭವಿಸಿದೆ. ನಗರದ ದರ್ಬೆಯ ಗಣೇಶ್‌ ಕಾಂಪ್ಲೆಕ್ಸ್‌ನಲ್ಲಿರುವ ಡಾ.ರಾಮ್‌ಮೋಹನ್‌ ಎಂಬವರ ಕ್ಲಿನಿಕ್‌ನಲ್ಲಿ ಈ ಘಟನೆ ನಡೆದಿದೆ. ದಿನವಡೀ ರೋಗಿಗಳಿಂದ ತುಂಬಿರುವ ಈ ಕ್ಲಿನಿಕ್‌ನಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಟೋಕನ್‌ ನೀಡುವ ವ್ಯವಸ್ಥೆಯಿದೆ. ಇಂದು ಬೆಳಗ್ಗೆ 6.30ರ ವೇಳೆಗೆ ಕ್ಲಿನಿಕ್‌ ಮುಂಭಾಗದ ರಸ್ತೆಯ ಪಾರ್ಕಿಂಗ್‌ ಶುಲ್ಕ ಸಂಗ್ರಹಿಸುವ ವ್ಯಕ್ತಿ ಬಂದು ತನ್ನ ಪರಿಚಯದವರಿಗೆ ಬೇಗ ಹೋಗುವ ಟೋಕನ್‌ ನೀಡದಿರುವ

ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿ ಸಿಬ್ಬಂದಿ ಮೇಲೆ ಹಲ್ಲೆ Read More »

ಕಾರುಗಳ ಡಿಕ್ಕಿ : ಒಂದೇ ಕುಟುಂಬದ ಐದು ಮಂದಿ ಸಾವು

ಮಂತ್ರಾಲಯಕ್ಕೆ ಹೊರಟಿದ್ದವರ ಕಾರು ಭೀಕರ ಅಪಘಾತ ಬೆಂಗಳೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯ ಕೊಟೆಕಲ್‌ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 164ರಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಇದರಲ್ಲಿ ಇಬ್ಬರು ಪುಟ್ಟ ಮಕ್ಕಳೂ ಇದ್ದಾರೆ. ಮತ್ತೊಂದು ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬಸ್ಥರು ಒಂದೇ ಕಾರಿನಲ್ಲಿ

ಕಾರುಗಳ ಡಿಕ್ಕಿ : ಒಂದೇ ಕುಟುಂಬದ ಐದು ಮಂದಿ ಸಾವು Read More »

ವಿಟ್ಲ : ಎಟಿಎಂ ಕಾರ್ಡ್‌ ಪಡೆದು ಮಹಿಳೆಗೆ ಲಕ್ಷಕ್ಕೂ ಅಧಿಕ ವಂಚನೆ

ವಿಟ್ಲ : ಅಪರಿಚಿತ ವ್ಯಕ್ತಿಗಳಿಬ್ಬರು ಮಹಿಳೆಯೊಬ್ಬರಿಂದ ಎಟಿಎಂ ಕಾರ್ಡ್‌ ಪಡೆದು ಲಕ್ಷಾಂತರ ರೂ. ವಂಚಿಸಿದ ಘಟನೆ ವಿಟ್ಲದಲ್ಲಿ ಶುಕ್ರವಾರ ನಡೆದಿದೆ. ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ಮಹಿಳೆ ವಿಟ್ಲಕಸಬಾ ಗ್ರಾಮದ ಫಾತಿಮ ಬಿಲ್ಡಿಂಗ್‌ನಲ್ಲಿರುವ ಎಸ್‌ಬಿಐ ಎಟಿಎಂ ಕೇಂದ್ರಕ್ಕೆ ತೆರಳಿ 6,000 ರೂ. ಡ್ರಾ ಮಾಡಿ ಹೊರಗಡೆ ಬರುತ್ತಿದ್ದ ಸಂದರ್ಭ ಎಟಿಎಂ ಕೇಂದ್ರದ ಒಳಗಡೆಯಿದ್ದ ಅಪರಿಚಿತ ವ್ಯಕ್ತಿಗಳು ಮಹಿಳೆಯನ್ನು ಕರೆದು ಎಟಿಎಂ ಅನ್ನು ಸರಿಯಾಗಿ ಮುಚ್ಚಬೇಕೆಂದು ಹೇಳಿದ್ದಾರೆ. ಅದರಂತೆ ಮಹಿಳೆ ಕೇಂದ್ರದ ಒಳಗೆ ಹೋಗಿ ನೋಡಿ ಹೊರಗಡೆ ಬರುವಾಗ

ವಿಟ್ಲ : ಎಟಿಎಂ ಕಾರ್ಡ್‌ ಪಡೆದು ಮಹಿಳೆಗೆ ಲಕ್ಷಕ್ಕೂ ಅಧಿಕ ವಂಚನೆ Read More »

ಉಪ್ಪಿನಂಗಡಿ : ಪಲ್ಟಿಯಾಗಿ ಬಸ್ಸಿಗೆ ಡಿಕ್ಕಿ ಹೊಡೆದ ಟೆಂಪೊ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಪರಿಸರದ ಕೆಂಪುಹೊಳೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ. ಈ ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಉಪ್ಪಿನಂಗಡಿ : ಪಲ್ಟಿಯಾಗಿ ಬಸ್ಸಿಗೆ ಡಿಕ್ಕಿ ಹೊಡೆದ ಟೆಂಪೊ Read More »

ರಾಮ-ಲಕ್ಷ್ಮಣರನ್ನು ಕ್ರೂರಿಗಳು ಎಂದ ಲಲಿತಾ ನಾಯ್ಕ್‌ ವಿರುದ್ಧ ಕೇಸ್‌

ಸಂವಾದ ಕಾರ್ಯಕ್ರಮದಲ್ಲಿ ಹಿಂದುಗಳ ದೇವತೆಗಳನ್ನು ಅವಮಾನಿಸಿದ್ದ ಮಾಜಿ ಸಚಿವೆ ಬೆಂಗಳೂರು: ರಾಮ-ಲಕ್ಷ್ಮಣರನ್ನು ಕ್ರೂರಿಗಳು ಎಂದು ಕರೆದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಆರೋಪದ ಮೇಲೆ ಬಂಡಾಯ ಸಾಹಿತಿ ಹಾಗೂ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯ್ಕ್‌ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನ.23ರಂದು ದಾವಣಗೆರೆ ನಗರದ ಎವಿಕೆ ಕಾಲೇಜಿನಲ್ಲಿ‌ ನಡೆದ ಸಂವಾದದಲ್ಲಿ ಲಲಿತಾ ನಾಯ್ಕ್‌ “ರಾಮಾಯಣದಲ್ಲಿರುವ ಶ್ರೀರಾಮ, ಲಕ್ಷ್ಮಣ, ರಾವಣರು ಆದರ್ಶರಲ್ಲ ಅವರು ಕ್ರೂರಿಗಳು” ಎಂಬ ಹೇಳಿದ್ದರು. ಭಕ್ತಿಯ ಜೊತೆಗೆ ಬೆರೆತ ಮೌಢ್ಯ ಜನರ ವಿಚಾರ ಶಕ್ತಿಯನ್ನು

ರಾಮ-ಲಕ್ಷ್ಮಣರನ್ನು ಕ್ರೂರಿಗಳು ಎಂದ ಲಲಿತಾ ನಾಯ್ಕ್‌ ವಿರುದ್ಧ ಕೇಸ್‌ Read More »

ಕುರ್ಚಿ ಕಚ್ಚಾಟ : ಇಂದು ಸಿದ್ದರಾಮಯ್ಯ-ಡಿಕೆಶಿ ನೇರ ಮಾತುಕತೆ

ಮುಖ್ಯಮಂತ್ರಿ ನಿವಾಸದಲ್ಲಿ ಸಿಎಂ-ಡಿಸಿಎಂ ನಡುವೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬೆಂಗಳೂರು: ಅಧಿಕಾರ ಹಂಚಿಕೆ ಗುದ್ದಾಟದ ನಡುವಯೇ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ನೇರ ಮಾತುಕತೆ ನಡೆಯಲಿರುವುದು ಕುತೂಹಲ ಕೆರಳಿಸಿದೆ. ಕುರ್ಚಿ ಕಚ್ಚಾಟ ಶುರುವಾದ ಬಳಿಕ ಬಹಳ ಸಮಯದ ಬಳಿಕ ಹೀಗೆ ಸಿಎಂ ಮತ್ತು ಡಿಸಿಎಂ ಮುಖಾಮುಖಿಯಾಗುತ್ತಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಬೆಳಗ್ಗೆ 9.30ಕ್ಕೆ ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್‌ ಮೀಟಿಂಗ್ ನಡೆಯಲಿದೆ ಎನ್ನಲಾಗಿದೆ. ಮೊದಲು ನೀವಿಬ್ಬರು ಮಾತನಾಡಿಕೊಂಡು ಸ್ಪಷ್ಟತೆಗೆ ಬನ್ನಿ, ಯಾವುದೇ ಗೊಂದಲ

ಕುರ್ಚಿ ಕಚ್ಚಾಟ : ಇಂದು ಸಿದ್ದರಾಮಯ್ಯ-ಡಿಕೆಶಿ ನೇರ ಮಾತುಕತೆ Read More »

error: Content is protected !!
Scroll to Top