ಸುದ್ದಿ

ನವೆಂಬರ್‌ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮನ

ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲು ಆಗಮನ ಉಡುಪಿ : ಪ್ರಧಾನಿ ನರೇಂದ್ರ ಮೋದಿ ನವೆಂಬರ್​ 28ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮ ಈಗಾಗಲೇ ನಿಗದಿಯಾಗಿದೆ. ಇದರ ಜೊತೆಗೆ ಇನ್ನಿತರ ಕಾರ್ಯಕ್ರಮಗಳಲ್ಲೂ ಭಾಗವಹಿಸುವ ನಿರೀಕ್ಷೆಯಿದೆ. ಮುಖ್ಯವಾಗಿ ಮಂಗಳೂರಿನ ಪಣಂಬೂರಿನಲ್ಲಿ ನಿರ್ಮಾಣವಾಗಿರುವ ಬಂದರು ಕಾರ್ಮಿಕರ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸುವ ಕಾರ್ಯಕ್ರಮದಲ್ಲೂ ಭಾಗವಹಿಸುವ ನಿರೀಕ್ಷೆಯಿದೆ. ಆದರೆ ಈ ಕಾರ್ಯಕ್ರಮ ಇನ್ನೂ ದೃಢಪಟ್ಟಿಲ್ಲ. ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ […]

ನವೆಂಬರ್‌ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮನ Read More »

ಉಚಿತ ಬೃಹತ್ ಆರೋಗ್ಯ ಶಿಬಿರ, ಅಂಚೆ ಜನ ಸಂಪರ್ಕ ಅಭಿಯಾನ

ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ರಿ ಚಂದಳಿಕೆ ವಿಟ್ಲ ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ವಿಟ್ಲ ಇದರ ಆಶ್ರಯದಲ್ಲಿ ಸಮುದಾಯ ಕೇಂದ್ರ ವಿಟ್ಲ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಬೃಹತ್ ಅರೋಗ್ಯ ಶಿಬಿರ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಯೋಗದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ ಆಧಾರ್ ನೋಂದಣಿ ತಿದ್ದುಪಡಿ ಕಾರ್ಯಕ್ರಮವು ಮಂಗಳ ಮಂಟಪ ಶ್ರೀ ರಾಮ ನಗರ ಚಂದಳಿಕೆ ವಿಟ್ಲದಲ್ಲಿ ಜರಗಿತು

ಉಚಿತ ಬೃಹತ್ ಆರೋಗ್ಯ ಶಿಬಿರ, ಅಂಚೆ ಜನ ಸಂಪರ್ಕ ಅಭಿಯಾನ Read More »

ಬೆಳ್ಳಿರಥ ಸಮರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನ

ಪುತ್ತೂರು: ಬೆಂಗಳೂರಿನಲ್ಲಿ ಪ್ರತಿಷ್ಠಿತ ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (Kempegowda Institute of Medical Sciences – KIMS) ಹಾಗೂ ರಾಜ್ಯಾದಾದ್ಯಂತ ವಿವಿಧ ಸಂಸ್ಥೆ ಮತ್ತು ಆಸ್ತಿಗಳನ್ನು ಹೊಂದಿರುವ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಹಾಗೂ ಸುಳ್ಯದಲ್ಲಿ ದಿವಂಗತ ಡಾ. ಕುರುಂಜಿ ವೆಂಕಟ್ರಮಣ ಗೌಡರು ಕಟ್ಟಿ ಬೆಳೆಸಿದ Academy of Liberal Education ಇದರ ಬಿ ಟೀಂನ ಅಧ್ಯಕ್ಷ, ಡಾ. ರೇಣುಕಾಪ್ರಸಾದ್ ಕೆ. ವಿ.ಯವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥದ ದೇವಾರ್ಪಣ ಕಾರ್ಯಕ್ರಮಕ್ಕೆ

ಬೆಳ್ಳಿರಥ ಸಮರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನ Read More »

ಡಿವೈಡರ್‌ಗೆ ಗುದ್ದಿದ ಕಾರು: ಕುದ್ಮಾರಿನ ಯುವಕ ಮೃತ್ಯು

ಬಂಟ್ವಾಳ: ಕಾರ್ ಒಂದು ಪಾಣೆಮಂಗಳೂರು ಫ್ಲೈ ಓವರ್‌ನ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಪುತ್ತೂರಿನ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಕುದ್ಮಾರು ‌ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ಪರಿಣಾಮ ಕಾರ್ತಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

ಡಿವೈಡರ್‌ಗೆ ಗುದ್ದಿದ ಕಾರು: ಕುದ್ಮಾರಿನ ಯುವಕ ಮೃತ್ಯು Read More »

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಜನೋತ್ಸವ

ಮಾಣಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವದ ಅಂಗವಾಗಿ ಮಾಣಿ ವಲಯದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಕಾಶ್ ಭಟ್ ರವರು ದೀಪ ಬೆಳಗುವುದರೊಂದಿಗೆ ಚಾಲನೆ ನೀಡಿದರು. ವಲಯದ 7 ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಜನಜಾಗೃತಿ ವಲಯಾಧ್ಯಕ್ಷ ರಾಜಾರಾಮ ಶೆಟ್ಟಿ, ಸದಸ್ಯರಾದ ಬಾಲಕೃಷ್ಣ ಆಳ್ವ, ತನಿಯಪ್ಪಗೌಡ, ವೇಣು ಗೋಪಾಲ್, ಸುರೇಶ್ ಮುಕ್ಕುಡ

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಜನೋತ್ಸವ Read More »

ಕಸಾಯಿಖಾನೆಗೆ ದಾಳಿ : ಇಬ್ಬರ ಬಂಧನ; 91 ಕೆಜಿ ಗೋಮಾಂಸ ವಶ

ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ರಬ್ಬರ್‌ ತೋಟದೊಳಗಿದ್ದ ಕಸಾಯಿಖಾನೆ ಬೆಳ್ತಂಗಡಿ : ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್‌ನೊಳಗೆ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 91 ಕೆಜಿ ಗೋಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸುತ್ತಿದ್ದ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟುವಿನ ಅಬ್ದುಲ್ ನಝೀರ್ (36) ಮತ್ತು ಮಿತ್ತಬಾಗಿಲು ಗ್ರಾಮದ ಝಕಾರಿಯಾ (36) ಎಂದು ಗುರುತಿಸಲಾಗಿದೆ.ನಿರೀಕ್ಷಕ ಸುಬ್ಬಪುರಮಠ ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ

ಕಸಾಯಿಖಾನೆಗೆ ದಾಳಿ : ಇಬ್ಬರ ಬಂಧನ; 91 ಕೆಜಿ ಗೋಮಾಂಸ ವಶ Read More »

ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗಿನಿಂದ ಉದ್ಯಮಿಯ ಹತ್ಯೆ

ಹಫ್ತಾ ಹಣ ಕೊಡದ ಕಾರಣಕ್ಕೆ ಗುಂಡಿಕ್ಕಿ ಕೊಲೆ ಒಟ್ಟಾವ: ಕುಖ್ಯಾತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಕೆನಡಾದಲ್ಲಿ ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿಯೊಬ್ಬರನ್ನು ಹತ್ಯೆ ಮಾಡಿದೆ ಮತ್ತು ಪಂಜಾಬಿ ಗಾಯಕನ ಮನೆಯ ಮೇಲೆ ಗುಂಡು ಹಾರಿಸಿದೆ. ರಾಜಸ್ಥಾನದ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾನನ್ನು ಅಮೆರಿಕದಲ್ಲಿ ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಎರಡು ದಾಳಿಗಳು ನಡೆದಿವೆ. ಬಿಷ್ಣೋಯ್ ಗ್ಯಾಂಗ್ ಸದಸ್ಯ ಗೋಲ್ಡಿ ಧಿಲ್ಲೋನ್, ಭಾರತೀಯ ಮೂಲದ ಕೈಗಾರಿಕೋದ್ಯಮಿ ದರ್ಶನ್ ಸಿಂಗ್ ಸಹಸಿ

ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗಿನಿಂದ ಉದ್ಯಮಿಯ ಹತ್ಯೆ Read More »

ನಟ ರಜನೀಕಾಂತ್‌ ಮನೆಗೆ ಬಾಂಬ್‌ ಬೆದರಿಕೆ

ಪೊಲೀಸ್ ಮಹಾನಿರ್ದೇಶಕರಿಗೆ ಬಂದಿತ್ತು ಬಾಂಬ್‌ ಬೆದರಿಕೆಯ ಇ-ಮೇಲ್‌ ಚೆನ್ನೈ : ತಮಿಳಿನ ಖ್ಯಾತ ನಟರಾದ ರಜನಿಕಾಂತ್ ಹಾಗೂ ಧನುಷ್ ಅವರ ಮನೆಗೆ ಬಾಂಬ್ ಇಟ್ಟಿರುವ ಬಗ್ಗೆ ತಮಿಳುನಾಡು ಪೊಲೀಸ್ ಮಹಾನಿರ್ದೇಶಕರಿಗೆ ಇ-ಮೇಲ್​ ಸಂದೇಶ ಬಂದ ಬಳಿಕ ಕೊಂಚ ಹೊತ್ತು ಆತಂಕದ ಪರಿಸ್ಥಿತಿ ಉಂಟಾಗಿತ್ತು. ಬಾಂಬ್ ಸ್ಕ್ವಾಡ್ ನಟರ ಮನೆಗೆ ತೆರಳಿ ತಪಾಸಣೆ ನಡೆಸಿದ್ದು, ಯಾವುದೇ ಬಾಂಬ್ ಸ್ಫೋಟಕ ಪತ್ತೆ ಆಗಿಲ್ಲ. ಇದು ಹುಸಿ ಬಾಂಬ್ ಕರೆ ಎಂಬುದು ಗೊತ್ತಾಗಿದೆ. ನಟ ರಜನಿಕಾಂತ್, ಧನುಷ್ ಹಾಗೂ ತಮಿಳು ನಾಡು

ನಟ ರಜನೀಕಾಂತ್‌ ಮನೆಗೆ ಬಾಂಬ್‌ ಬೆದರಿಕೆ Read More »

ಪುಂಜಾಲಕಟ್ಟೆಯಲ್ಲಿ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ

ಪುಂಜಾಲಕಟ್ಟೆ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಅರ್ಥಪೂರ್ಣವಾಗಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಇದರ ನಿರ್ದೇಶಕರಾದ ಪ್ರೊ. ಸೀತಾರಾಮ ಕೇವಳ ಇವರು ಮಾತನಾಡಿ “ಮಕ್ಕಳ ಜೀವನವನ್ನು ರೂಪಿಸುವಲ್ಲಿ ಪೋಷಕರ ಪಾತ್ರ” ಹಾಗೂ “ಸಹಕಾರದಿಂದಲೇ ಸಾಧನೆ” ಎಂದು ಪೋಷಕರ ಮನಮುಟ್ಟುವ ಪ್ರೇರಣಾದಾಯಿ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷರಾದ ಪ್ರೊ. ಮಾಧವ ಅವರು ಕಾಲೇಜಿನ ಅಭಿವೃದ್ಧಿಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಹಕಾರವನ್ನು ಉಲ್ಲೇಖಿಸಿ, ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಸ್ವಾಗತಿಸಿದರು.

ಪುಂಜಾಲಕಟ್ಟೆಯಲ್ಲಿ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ Read More »

ಧರ್ಮಸ್ಥಳ ಪ್ರಕರಣ : ಸೌಜನ್ಯಾ ತಾಯಿ ಸಹಿತ 20 ಮಂದಿ ವಿರುದ್ಧ ಕೇಸ್‌

ಅಕ್ರಮವಾಗಿ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಪ್ರಕರಣ ಬೆಳ್ತಂಗಡಿ: ಅನುಮತಿಯಿಲ್ಲದೆ ಪೊಲೀಸರ‌ ಸೂಚನೆಯನ್ನು ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿವಿಧಾನ ಸೌಧದ ಎದುರು ಸೋಮವಾರ ಅಕ್ರಮ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟುಮಾಡಿದ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ ಸೌಜನ್ಯ ಪರ ಹೋರಾಟಗಾರರಾದ ಅನಿಲ್ ಅಂತರ, ಪ್ರಸನ್ನ ರವಿ ಸೇರಿದಂತೆ 20ಮಂದಿ ಹಾಗೂ ಇತರರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎ.ಎಸ್.ಐ. ದುರ್ಗಾದಾಸ್ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಅ.27ರಂದು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ

ಧರ್ಮಸ್ಥಳ ಪ್ರಕರಣ : ಸೌಜನ್ಯಾ ತಾಯಿ ಸಹಿತ 20 ಮಂದಿ ವಿರುದ್ಧ ಕೇಸ್‌ Read More »

error: Content is protected !!
Scroll to Top