ಸುದ್ದಿ

ಸಿಗರೇಟ್ ಸೇವನೆ, ಅಸಭ್ಯ ವರ್ತನೆ: ಆರೋಪಿ ಮೊಸಾದ್ ಪೊಲೀಸ್ ಬಲೆಗೆ

ಪುತ್ತೂರು: ಸಾರ್ವಜನಿಕವಾಗಿ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಿಟ್ಲ ಪಡ್ನೂರಿನ ಮೊಹಮ್ಮದ್ ಮೊಸಾದ್ ಎಸ್ ಎಂದು ಗುರುತಿಸಲಾಗಿದ್ದು, ಆತ ಡ್ರಗ್ಸ್ ಸೇವನೆ ಮಾಡಿರುವ ಸಂಗತಿ ಸಹ ವೈದ್ಯಕೀಯ ಪರೀಕ್ಷೆಯಲ್ಲಿ ಬಯಲಾಗಿದೆ. ಸಾರ್ವಜನಿಕರಿಂದ ಬಂದ ಮಾಹಿತಿಯನ್ವಯ ರೌಂಡ್ಸ್ ವೇಳೆ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.

ಸಿಗರೇಟ್ ಸೇವನೆ, ಅಸಭ್ಯ ವರ್ತನೆ: ಆರೋಪಿ ಮೊಸಾದ್ ಪೊಲೀಸ್ ಬಲೆಗೆ Read More »

ನಂದಿನಿ ಉತ್ಪನ್ನಗಳು ಸುರಕ್ಷಿತವಾಗಿವೆ: KMF ಸ್ಪಷ್ಟನೆ

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದ್ದು, ಅವುಗಳು ಸುರಕ್ಷಿತವಲ್ಲ ಎನ್ನುವ ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಸಂಸ್ಥೆಯು ತಮ್ಮ ಉತ್ಪನ್ನಗಳು ಸುರಕ್ಷಿತವಾಗಿವೆ ಎನ್ನುವುದಾಗಿ ಮಾಹಿತಿ ನೀಡಿದೆ. ಹಾಗೆಯೇ ಸುಳ್ಳು ಆರೋಪಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಹ ಕರ್ನಾಟಕ ಹಾಲು ಒಕ್ಕೂಟ ನೀಡಿದೆ. ನಂದಿನಿ ಉತ್ಪನ್ನಗಳ ವಿಚಾರದಲ್ಲಿ ಸಂಸ್ಥೆಯು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಎಲ್ಲಾ ಸೂಚನೆಗಳನ್ನು, ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿದೆ. ನಂದಿನಿ ಹಾಲು

ನಂದಿನಿ ಉತ್ಪನ್ನಗಳು ಸುರಕ್ಷಿತವಾಗಿವೆ: KMF ಸ್ಪಷ್ಟನೆ Read More »

ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಗುರುವಾರ ಸಂಜೆ ತನಕ ಸರ್ಕಾರಕ್ಕೆ ಡೆಡ್‌ಲೈನ್‌

ಬೃಹತ್‌ ಮುಷ್ಕರಕ್ಕೆ ಸಜ್ಜಾಗುತ್ತಿರುವ ಕೆಎಸ್‌ಆರ್‌ಟಿಸಿ ನೌಕರರು; ಸಂಚಾರ ವ್ಯತ್ಯಯ ಸಾಧ್ಯತೆ ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬೃಹತ್‌ ಮುಷ್ಕರಕ್ಕೆ ಮುಂದಾಗಿದ್ದು, ಗುರುವಾರ ಸಂಜೆ ಬಳಿಕ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ ಕೈಗೊಂಡು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಸಂಜೆ 4 ಗಂಟೆವರೆಗೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಲಾಗಿದೆ. ಬೇಡಿಕೆ

ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಗುರುವಾರ ಸಂಜೆ ತನಕ ಸರ್ಕಾರಕ್ಕೆ ಡೆಡ್‌ಲೈನ್‌ Read More »

ಕಾಂಗ್ರೆಸ್‌ ಭವನಗಳಿಗೆ ಸರ್ಕಾರಿ ಜಮೀನು ಅಕ್ರಮವಾಗಿ ಮಂಜೂರು : ಬಿಜೆಪಿ ಆರೋಪ

ಸಂಪುಟ ಸಭೆಯಲ್ಲೇ ಜಮೀನು ಲೂಟಿಯ ನೀಲಿನಕ್ಷೆ ತಯಾರಿ ಎಂದು ಟೀಕೆ ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್‌ ಪಕ್ಷದ ಕಚೇರಿಗಳನ್ನು ಸ್ಥಾಪಿಸಲು 31 ಸರ್ಕಾರಿ ಜಾಗಗಳನ್ನು ಅಕ್ರಮವಾಗಿ ಪಡೆದುಕೊಳ್ಳಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ಮಾತನಾಡಿರುವ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸರ್ಕಾರ ಪಡೆದುಕೊಂಡ ಜಾಗಗಳನ್ನು ಸಂಬಂಧಿಸಿದ ಇಲಾಖೆಗೆ ಹಿಂತಿರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಜನರಿಗಿಲ್ಲದ ಜಾಗ, ಅತ್ಯಂತ ಕಡಿಮೆ ದರದಲ್ಲಿ ಕಾಂಗ್ರೆಸ್ ಭವನಕ್ಕೆ ಹೇಗೆ ಲಭ್ಯ? ಇದು ಜನಕಲ್ಯಾಣ ಸರ್ಕಾರವೋ

ಕಾಂಗ್ರೆಸ್‌ ಭವನಗಳಿಗೆ ಸರ್ಕಾರಿ ಜಮೀನು ಅಕ್ರಮವಾಗಿ ಮಂಜೂರು : ಬಿಜೆಪಿ ಆರೋಪ Read More »

ಕರಾವಳಿಯಲ್ಲಿ ಗುರುವಾರದಿಂದ ರಮ್ಜಾನ್‌ ಉಪವಾಸ ಆರಂಭ

ಮಂಗಳೂರು: ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಗುರುವಾರದಿಂದ ಪವಿತ್ರ ರಮ್ಜಾನ್‌ ಉಪವಾಸ ಆರಂಭವಾಗಲಿದೆ. ಪವಿತ್ರ ರಮ್ಜಾನ್‌ನ ಪ್ರಥಮ ಚಂದ್ರದರ್ಶನ ಮಂಗಳವಾರ ಆಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಗುರುವಾರದಿಂದ ಉಪವಾಸ ವ್ರತ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾನಿ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ. ಚಂದ್ರದರ್ಶನವಾಗದ ಕಾರಣ ಗುರುವಾರದಿಂದ ರಮಝಾನ್ ಪ್ರಾರಂಭ ಎಂದು

ಕರಾವಳಿಯಲ್ಲಿ ಗುರುವಾರದಿಂದ ರಮ್ಜಾನ್‌ ಉಪವಾಸ ಆರಂಭ Read More »

ಟ್ಯಾಕ್ಸಿಯಲ್ಲೇ ಮಗುವನ್ನು ಮರೆತು ಬಿಟ್ಟುಹೋದ ದಂಪತಿ!

ಪೊಲೀಸರ ತಕ್ಷಣದ ಸ್ಪಂದನೆಯಿಂದ ತಾಯಿ ಮಡಿಲು ಸೇರಿದ ಮಗು ಬೆಂಗಳೂರು: ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ತಮ್ಮ ಮಗುವನ್ನೇ ಟ್ಯಾಕ್ಸಿಯಲ್ಲಿ ಮರೆತು ಬಿಟ್ಟುಹೋದ ಘಟನೆ ಬೆಂಗಳೂರಿನ ಹೆಣ್ಣೂರು ಸಮೀಪ ಪೊನ್ನಪ್ಪ ಲೇಔಟ್‌ನಲ್ಲಿ ನಡೆದಿದ್ದು, ಹೊಯ್ಸಳ ಪೊಲೀಸರ ತಕ್ಷಣದ ಸ್ಪಂದನೆಯಿಂದ ಮಗು ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದೆ. ಪೊನ್ನಪ್ಪ ಲೇಔಟ್‌ನ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ದಂಪತಿ ನಾಲ್ಕು ವರ್ಷದ ಮಗುವಿನೊಂದಿಗೆ ಫೆ.14ರಂದು ಹೊರ ಹೋಗಿದ್ದರು. ನಂತರ ಬಾಡಿಗೆ ಕ್ಯಾಬ್‌ನಲ್ಲಿ ಅಪಾರ್ಟ್‌ಮೆಂಟ್‌ಗೆ ವಾಪಸ್‌ ಬಂದಿದ್ದ ದಂಪತಿ, ನಿದ್ದೆ ಮಾಡುತ್ತಿದ್ದ ಮಗುವನ್ನು ಕ್ಯಾಬ್‌ನಲ್ಲೇ ಮರೆತು

ಟ್ಯಾಕ್ಸಿಯಲ್ಲೇ ಮಗುವನ್ನು ಮರೆತು ಬಿಟ್ಟುಹೋದ ದಂಪತಿ! Read More »

ಮಗನ ಸಾವಿನ ದುಃಖದಲ್ಲಿ 6 ಕೋಟಿ ರೂ. ಮೌಲ್ಯದ ಕಾರನ್ನೇ ಸಮಾಧಿ ಮಾಡಿದ ತಂದೆ

ಗುಂಡಿ ತೋಡಿ ಕಾರನ್ನು ಸಮಾಧಿ ಮಾಡಿ ಕಾಂಕ್ರೀಟ್‌ ಹಾಕಿದ ಮುಚ್ಚಿದ ತಂದೆ ಮಾಸ್ಕೊ: ಪುತ್ರನ ಸಾವಿನ ಶೋಕದಲ್ಲಿದ್ದ ತಂದೆ ಮಗನಿಗೆ ಬರ್ತ್‌ಡೇ ಗಿಫ್ಟ್‌ ಆಗಿ ನೀಡಿದ್ದ 6 ಕೋಟಿ ರೂ. ಮೌಲ್ಯದ ಬಿಎಂಡಬ್ಲ್ಯೂ ಕಾರನ್ನು ಸಮಾಧಿ ಮಾಡಿರುವ ಘಟನೆ ರಷ್ಯಾದ ಮಾಸ್ಕೊದಲ್ಲಿ ನಡೆದಿದೆ. ಈ ಭಾವನಾತ್ಮಕ ದೃಶ್ಯದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ವ್ಯಕ್ತಿಯ ಈ ನಿರ್ಧಾರದ ಬಗ್ಗೆ ಪರ-ವಿರೋಧದ ಕಾಮೆಂಟ್‌ಗಳು ಹರಿದುಬರುತ್ತಿವೆ. ತಂದೆ ತನ್ನ ಮಗನಿಗೆ ಬರ್ತ್‌ಡೇ ಗಿಫ್ಟ್‌ ಆಗಿ ಬಿಎಂಡಬ್ಲ್ಯೂ ಕಾರು ನೀಡಿದ್ದರು.

ಮಗನ ಸಾವಿನ ದುಃಖದಲ್ಲಿ 6 ಕೋಟಿ ರೂ. ಮೌಲ್ಯದ ಕಾರನ್ನೇ ಸಮಾಧಿ ಮಾಡಿದ ತಂದೆ Read More »

ನೌಕಾ ನೆಲೆಯ ರಹಸ್ಯ ಮಾಹಿತಿ ರವಾನೆ : ಇನ್ನೋರ್ವ ಆರೋಪಿ ಸೆರೆ

ಕೇರಳದ ವಯನಾಡಿನಲ್ಲಿ ಆರೋಪಿಯನ್ನು ಬಂಧಿಸಿ ಕರೆತಂದ ಪೊಲೀಸರು ಉಡುಪಿ: ನೌಕಾ ನೆಲೆಯ ರಹಸ್ಯ ಮಾಹಿತಿಗಳನ್ನು ವಿದೇಶಕ್ಕಡ ರವಾನಿಸಿದ ಇನ್ನೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಕೇರಳದ ವಯನಾಡಿನಲ್ಲಿ ಬಂಧಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ರವಾನಿಸಿದ ಪ್ರಕರಣದಲ್ಲಿ ಸೆರೆಯಾಗಿರುವ ಐದನೇ ಆರೋಪಿ ಈತ. ಬಂಧಿತ ಆರೋಪಿಯನ್ನು ದಿ.ಇಜಾಜುಲ್ ಇಸ್ಲಾಂ ಎಂಬವರ ಪುತ್ರ ಅಲಿಫ್ ಇಸ್ಲಾಂ (21) ಎಂದು ಗುರುತಿಸಲಾಗಿದೆ. ಮೂಲತಃ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಬರ್ಗರಿಯಾ ಗ್ರಾಮದ ನಿವಾಸಿಯಾಗಿದ್ದ ಈತ ಪ್ರಸ್ತುತ

ನೌಕಾ ನೆಲೆಯ ರಹಸ್ಯ ಮಾಹಿತಿ ರವಾನೆ : ಇನ್ನೋರ್ವ ಆರೋಪಿ ಸೆರೆ Read More »

ಮೀಟರ್‌ ರೀಡರ್‌ ಸಿಬ್ಬಂದಿ ಮೇಲೆ ನಾಯಿ ದಾಳಿ : ಆಸ್ಪತ್ರೆಗೆ ದಾಖಲು

ಬಂಟ್ವಾಳ : ಮೆಸ್ಕಾಂ ಮೀಟರ್‌ ರೀಡರ್‌ ಮಾಡುವ ವ್ಯಕ್ತಿಯ ಮೇಲೆ ಮನೆಯ ಅಕುನಾಯಿ ದಾಳಿ ಮಾಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಹೊರಗುತ್ತಿಗೆ ಆಧಾರದಲ್ಲಿ ಮೀಟರ್‌ ರೀಡಿಂಗ್‌ ಮಾಡುವ ಸಂಪತ್‌ ದಾಳಿಗೊಳಗಾದ ವ್ಯಕ್ತಿ. ಗಂಭೀರವಾಗಿ ಗಾಯಗೊಂಡಿರುವ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ತಾಲೂಕಿನ ಮೂಲೂರು ಇರಾ ನಿವಾಸಿ ಸಂಪತ್ ಎಂಬವರ ಮೇಲೆ ನಾಯಿ ದಾಳಿ ಮಾಡಿದೆ. ಸಂಪತ್ ಬಂಟ್ವಾಳ ಮೆಸ್ಕಾಂ ಇಲಾಖೆಯ ಹೊರಗುತ್ತಿಗೆಯಲ್ಲಿ ಸೂಪರ್‌ವೈಸರ್ ವೃತ್ತಿಯಲ್ಲಿದ್ದಾರೆ. ಆದರೆ ಕಳೆದ ಹತ್ತು ತಿಂಗಳಿನಿಂದ ಮೀಟರ್ ರೀಡಿಂಗ್

ಮೀಟರ್‌ ರೀಡರ್‌ ಸಿಬ್ಬಂದಿ ಮೇಲೆ ನಾಯಿ ದಾಳಿ : ಆಸ್ಪತ್ರೆಗೆ ದಾಖಲು Read More »

ಕುರ್ಚಿ ಕಿತ್ತಾಟದ ಮಧ್ಯೆ ವಿದೇಶಕ್ಕೆ ಹಾರಿದ ಶಾಸಕರು

ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸಕ್ಕೆ ನಾನಾ ಅರ್ಥ ಬೆಂಗಳೂರು : ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ತೀವ್ರಗೊಂಡಿರುವಾಗಲೇ ಕೆಲವು ಶಾಸಕರು ಮತ್ತು ಎಂಎಲ್‌ಸಿಗಳು ವಿದೇಶಕ್ಕಡಡ ಹಾರಿದ್ದಾರೆ. ಇವರೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದವರು ಎನ್ನುವುದು ಗಮನಾರ್ಹ. ಮೊದಲು ಸರ್ಕಾರಿ ಪ್ರಾಯೋಜಿತ ಎಂದು ಹೇಳಲಾಗಿದ್ದ ಈ ಟೂರ್, ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಖಾಸಗಿ ಟ್ರಿಪ್ ಎಂದು ಬದಲಾಗಿದೆ. ಮಂಗಳವಾರ ಮಧ್ಯರಾತ್ರಿ 12.20ರ ವಿಮಾನದಲ್ಲಿ 11 ಶಾಸಕರು, ಎಂಎಲ್​ಸಿಗಳು ವಿದೇಶಕ್ಕೆ ಹಾರಿದ್ದಾರೆ. ಶಾಸಕರಾದ ದೇವೇಂದ್ರಪ್ಪ, ಎಚ್.ಡಿ ತಮ್ಮಯ್ಯ, ಹಂಪನಗೌಡ ಬಾದರ್ಲಿ,

ಕುರ್ಚಿ ಕಿತ್ತಾಟದ ಮಧ್ಯೆ ವಿದೇಶಕ್ಕೆ ಹಾರಿದ ಶಾಸಕರು Read More »

error: Content is protected !!
Scroll to Top