ಸುದ್ದಿ

ಸಿಡಿಲು ಬಡಿದು ಮೃತಪಟ್ಟ ‌ವ್ಯಕ್ತಿಯ ಕುಟುಂಬಕ್ಕೆ ನರಿಮೊಗರು ಬಿಜೆಪಿ ಶಕ್ತಿ ಕೇಂದ್ರದಿಂದ ನೆರವಿನ ಹಸ್ತ

ಪುತ್ತೂರು: ಇತ್ತೀಚೆಗೆ ಸಿಡಿಲು ಬಡಿದು ಮೃತರಾದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ವಾಮನ ಅವರ ಕುಟುಂಬಕ್ಕೆ ನರಿಮೊಗರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಹಾಯ ಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ನರಿಮೊಗರು ಶಕ್ತಿ ಕೇಂದ್ರದ ಪ್ರಮುಖ ಲಕ್ಷ್ಮಿ ಪ್ರಸಾದ್, ಶಾಂತಿಗೋಡು ಶಕ್ತಿ ಕೇಂದ್ರ ಪ್ರಮುಖ ವಿಶ್ವನಾಥ ಬಲ್ಲ್ಯಾಯ, ನರಿಮೊಗರು ಸಿಎ ಬ್ಯಾಂಕಿನ ಅಧ್ಯಕ್ಷ ನವೀನ್ ಡಿ. ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ರೈ ಶಿಬರ, ದಿನೇಶ್ ಆನಡ್ಕ , ತಾರಾನಾಥ, ಮತ್ತು ಪದ್ಮಯ ಗೌಡ ಹಾಗೂ ಪಕ್ಷದ ಕಾರ್ಯಕರ್ತರು […]

ಸಿಡಿಲು ಬಡಿದು ಮೃತಪಟ್ಟ ‌ವ್ಯಕ್ತಿಯ ಕುಟುಂಬಕ್ಕೆ ನರಿಮೊಗರು ಬಿಜೆಪಿ ಶಕ್ತಿ ಕೇಂದ್ರದಿಂದ ನೆರವಿನ ಹಸ್ತ Read More »

ಉದ್ಯಮಿ ಕಿರಣ್ ಮಜುಂದಾರ್ ಶಾ – ಡಿ ಕೆ ಶಿವಕುಮಾರ್ ಭೇಟಿ

ಬೆಂಗಳೂರು: ಬೆಂಗಳೂರಿನ ಅವ್ಯವಸ್ಥೆಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ದ ಟ್ವೀಟ್ ವಾರ್ ನಡೆಸಿದ್ದ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಕಸದ ಸಮಸ್ಯೆ, ರಸ್ತೆ ಹೊಂಡ ಗುಂಡಿಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಸಂಬಂಧಿಸಿದ ಹಾಗೆ ಕಿರಣ್ ಮಜುಂದಾರ್ ಶಾ ಅವರು ಟ್ವೀಟ್ ಮೂಲಕ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಶಾ ಅವರ ಟ್ವೀಟ್‌ಗಳ ಹಿಂದೆ ಇನ್ಯಾವುದೋ ಅಜೆಂಡಾ ಇದೆ ಎಂಬುದಾಗಿ

ಉದ್ಯಮಿ ಕಿರಣ್ ಮಜುಂದಾರ್ ಶಾ – ಡಿ ಕೆ ಶಿವಕುಮಾರ್ ಭೇಟಿ Read More »

ದೀಪಾವಳಿ ಸಂದರ್ಭದಲ್ಲಿ ದೇಶದ ಜನತೆಗೆ ಮೋದಿ ಭಾವನಾತ್ಮಕ ಪತ್ರ

ಸಹಕಾರ, ಸಕಾರಾತ್ಮಕತೆಯ ದೀಪಗಳನ್ನು ಬೆಳಗಿಸೋಣ ಎಂದು ಹಾರೈಕೆ ನವದೆಹಲಿ : ದೀಪಾವಳಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಭಾವನಾತ್ಮಕ ಪತ್ರವೊಂದನ್ನು ಬರೆದು ಹಬ್ಬದ ಆಶಯದೊಂದಿಗೆ ದೇಶ ಹೇಗೆ ಮುನ್ನಡೆಯುತ್ತಿದೆ ಎಂಬುದನ್ನು ವಿವರಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ನಡೆಸಲಾದ ಆಪರೇಷನ್ ಸಿಂದೂರ ಸಮಯದಲ್ಲಿ ಭಾರತ ಸದಾಚಾರವನ್ನು ಎತ್ತಿಹಿಡಿಯಿತು ಮಾತ್ರವಲ್ಲದೆ ಅನ್ಯಾಯಕ್ಕೆ ಪ್ರತೀಕಾರ ತೀರಿಸಿಕೊಂಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಪತ್ರದಲ್ಲಿ ತಿಳಿಸಿದ್ದಾರೆ. ಜಾಗತಿಕ ಸಂಘರ್ಷಗಳು ನಡೆಯುತ್ತಿರುವ ಹೊರತಾಗಿಯೂ ದೇಶವು ಸ್ಥಿರತೆ ಮತ್ತು ಸೂಕ್ಷ್ಮತೆಯ

ದೀಪಾವಳಿ ಸಂದರ್ಭದಲ್ಲಿ ದೇಶದ ಜನತೆಗೆ ಮೋದಿ ಭಾವನಾತ್ಮಕ ಪತ್ರ Read More »

ವಿಷ ಸೇವಿಸಿದ್ದ ವ್ಯಕ್ತಿ ಮೃತ್ಯು

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ‌ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಮೃತ ವ್ಯಕ್ತಿಯಾಗಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಈತ ಅ.17ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿದ್ದು ಆತನನ್ನು ಕೂಡಲೇ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆಗೆ ಸ್ಪಂದಿಸದೆ ಅ18ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತನ ಸಹೋದರ ಬಾಬು ನೀಡಿರುವ ದೂರಿನಂತೆ‌ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ವಿಷ ಸೇವಿಸಿದ್ದ ವ್ಯಕ್ತಿ ಮೃತ್ಯು Read More »

ದೀಪಾವಳಿ ಬೋನಸ್‌ ಕೊಡದ ಮಾಲೀಕ : ಟೋಲ್‌ಗೇಟ್‌ ತೆರೆದಿಟ್ಟು ಪ್ರತಿಭಟಿಸಿದ ನೌಕರರು

ಇಡೀ ದಿನ ಟೋಲ್‌ ಸಂಗ್ರಹಿಸದೆ ಕಂಪನಿಗೆ ಲಕ್ಷಾಂತರ ರೂ. ನಷ್ಟ ಮಾಡಿ ಸೇಡು ತೀರಿಸಿಕೊಂಡ ನೌಕರರು ನವದೆಹಲಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಲೀಕರು ಕೊಡುವ ಬೋನಸ್‌ ಮತ್ತು ಉಡುಗೊರೆಗಾಗಿ ನೌಕರರು ಚಾತಕ ಪಕ್ಷಿಗಳಂತೆ ಕಾದು ಕುಳಿತಿರುತ್ತಾರೆ. ಸಾಮಾನ್ಯವಾಗಿ ಎಲ್ಲ ಸಂಸ್ಥೆಗಳು ದೀಪಾವಳಿ ಹಬ್ಬದ ಸಂದರ್ಭದಲ್ಲಿ ನೌಕರರಿಗೆ ಬೋನಸ್‌ ಮತ್ತು ಉಡುಗೊರೆ ಕೊಡುತ್ತವೆ. ಆದರೆ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಫತೇಬಾದ್‌ನಲ್ಲಿರುವ ಟೋಲ್‌ ಗೇಟ್‌ ಸಿಬ್ಬಂದಿಗೆ ಮಾಲೀಕರು ಈ ವರ್ಷ ಅತ್ಯಲ್ಪ ಮೊತ್ತ ಬೋನಸ್‌ ನೀಡಿದ್ದರು. ಇದರಿಂದ ಕೆರಳಿದ ಸಿಬ್ಬಂದಿ

ದೀಪಾವಳಿ ಬೋನಸ್‌ ಕೊಡದ ಮಾಲೀಕ : ಟೋಲ್‌ಗೇಟ್‌ ತೆರೆದಿಟ್ಟು ಪ್ರತಿಭಟಿಸಿದ ನೌಕರರು Read More »

ಶಾಲಾ ಆವರಣಗಳಲ್ಲಿ ಕಾರ್ಯಕ್ರಮ ನಿಷೇಧಿಸಲು ಜಗದೀಶ್‌ ಶೆಟ್ಟರ್‌ ಸುತ್ತೋಲೆ ಹೊರಡಿಸಿದ್ದಕ್ಕೆ ಸಾಕ್ಷಿ ಇಲ್ಲ : ಆರ್‌. ಅಶೋಕ್‌

ಕಾಂಗ್ರೆಸ್‌ ಸರ್ಕಾರದಿಂದ ರೌಡಿಯಿಸಂ, ಬೆದರಿಕೆ ತಂತ್ರ ಎಂದು ಆರೋಪ ಬೆಂಗಳೂರು : ಶಾಲಾ ಆವರಣದಲ್ಲಿ ಹೊರಗಿನ ಸಂಘಟನೆಗಳಿಂದ ಕಾರ್ಯಕ್ರಮ ಮಾಡುವುದನ್ನು ನಿಷೇಧಿಸುವ ಬಗ್ಗೆ ಹಿಂದಿನ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಆದೇಶ ಮಾಡಿರುವುದಕ್ಕೆ ಸಾಕ್ಷಿ ಇಲ್ಲ. ಇದು ಅಂದಿನ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಚರ್ಚೆಯಾಗಿರಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಾರೆ. ಚಾಮರಾಜಪೇಟೆಯ ಒಂದು ಶಾಲೆಗೆ ಸಂಬಂಧಿಸಿದಂತೆ ಒಂದು ಆದೇಶವಾಗಿತ್ತು. ಇದನ್ನು ಎಲ್ಲದ್ದಕ್ಕೂ ಅನ್ವಯಿಸಿ ಮಾರ್ಪಾಡು ಮಾಡಿ ಈಗಿನ ಸರ್ಕಾರ ಆದೇಶ ಮಾಡಿದೆ. ಜಗದೀಶ್‌ ಶೆಟ್ಟರ್‌ ಅಥವಾ

ಶಾಲಾ ಆವರಣಗಳಲ್ಲಿ ಕಾರ್ಯಕ್ರಮ ನಿಷೇಧಿಸಲು ಜಗದೀಶ್‌ ಶೆಟ್ಟರ್‌ ಸುತ್ತೋಲೆ ಹೊರಡಿಸಿದ್ದಕ್ಕೆ ಸಾಕ್ಷಿ ಇಲ್ಲ : ಆರ್‌. ಅಶೋಕ್‌ Read More »

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ಮಲತಂದೆ ಬಂಧನ

ಐದು ವರ್ಷ ಸತತವಾಗಿ ಲೈಂಗಿಕ ದೌರ್ಜನ್ಯಕ್ಕೊಳಪಡಿಸಿ ಪೀಡಿಸಿದ್ದ ತಂದೆ ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಆಕೆಯ ಮಲತಂದೆಯೇ ಹಲವು ವರ್ಷಗಳಿಂದ ಅತ್ಯಾಚಾರಗೈದ ಆಘಾತಕಾರಿ ಘಟನೆ ಉಳ್ಳಾಲದಲ್ಲಿ ಬೆಳಕಿಗೆ ಬಂದಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯ ತಂದೆ ಮೃತಪಟ್ಟ ಬಳಿಕ ಆಕೆಯ ತಾಯಿ ಅಮೀರ್ ಎಂಬಾತನ ಜೊತೆ ವಿವಾಹವಾಗಿ ಕುಂಪಲದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಈ ಮಧ್ಯೆ ತಾಯಿ

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ಮಲತಂದೆ ಬಂಧನ Read More »

26,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯಾದ್ಯಂತ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ನೇಮಕಾತಿ ಸಂಬಂಧ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಅ. 23 ರಿಂದ ನ. 9 ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ. ಡಿ. 7 ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಶೀಘ್ರವೇ ಅನುದಾನಿತ ಶಾಲಾ ಶಿಕ್ಷಕರ ನೇಮಕಾತಿಯನ್ನೂ ಸರ್ಕಾರ ಹೊರಡಿಸಲಿದೆ. ಹೊಸದಾಗಿ ರಾಜ್ಯದಲ್ಲಿ 800 ಕೆಪಿಎಸ್ ‌ಶಾಲೆಗಳನ್ನೂ ಆರಂಭ ಮಾಡಲಾಗುತ್ತದೆ. ಆರನೇ

26,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ Read More »

ಅಡಿಕೆ ಮೇಲೆ ಮತ್ತೆ ವಕ್ರದೃಷ್ಟಿ ಬೀರಿದ ವಿಶ್ವ ಆರೋಗ್ಯ ಸಂಸ್ಥೆ

ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬ ನೆಪದಲ್ಲಿ ನಿಷೇಧಿಸಲು ಕರೆ ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆ (WHO) ಅಡಿಕೆ ಮೇಲೆ ಮತ್ತೆ ವಕ್ರದೃಷ್ಟಿ ಬೀರಿದೆ. ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬ ನೆಪವೊಡ್ಡಿ ಅಡಿಕೆ ನಿಷೇಧ ಮಾಡಲು ಕರೆ ನೀಡಿದೆ. ಶ್ರೀಲಂಕಾದಲ್ಲಿ ನಡೆದ ಆಗ್ನೇಯ ಒಕ್ಕೂಟದೊಂದಿಗಿನ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಿಕೆಯ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಅಡಿಕೆ ಮೇಲೆ ಅಪವಾದ ಹೊರಿಸುತ್ತಿರುವದು ಇದೇ ಮೊದಲಲ್ಲ. ಕಳೆದ ಸುಮಾರು ಒಂದೂವರೆ ದಶಕದಿಂದ ಅಡಿಕೆಯಿಂದ

ಅಡಿಕೆ ಮೇಲೆ ಮತ್ತೆ ವಕ್ರದೃಷ್ಟಿ ಬೀರಿದ ವಿಶ್ವ ಆರೋಗ್ಯ ಸಂಸ್ಥೆ Read More »

ರಾಷ್ಟ್ರಪತಿ, ಪ್ರಧಾನಿಯಿಂದ ಜನತೆಗೆ ದೀಪಾವಳಿ ಶುಭಾಶಯ

ಸ್ವದೇಶಿ ಉತ್ಪನ್ನಗಳನ್ನು ಖರೀದಿಸಿ ಹಬ್ಬವನ್ನು ಸಂಭ್ರಮಿಸಿ ಎಂದು ಕರೆ ನೀಡಿದ ಮೋದಿ ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಈ ಬೆಳಕಿನ ಹಬ್ಬವು ಜನರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಲಿ ಎಂದು ದೀಪಾವಳಿ ಶುಭಾಶಯ ಕೋರಿ ಹಾರೈಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಶುಭಕೋರಿರುವ ಮೋದಿ, ಈ ಬೆಳಕಿನ ಹಬ್ಬವು ನಮ್ಮೆಲ್ಲರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಿಸಲಿ. ನಮ್ಮ ಸುತ್ತಲೂ ಸಕಾರಾತ್ಮಕತೆಯ ಮನೋಭಾವ ಮೇಲುಗೈ

ರಾಷ್ಟ್ರಪತಿ, ಪ್ರಧಾನಿಯಿಂದ ಜನತೆಗೆ ದೀಪಾವಳಿ ಶುಭಾಶಯ Read More »

error: Content is protected !!
Scroll to Top