ಸುದ್ದಿ

ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಎಲ್ಲರದ್ದು: ಅಮಿತ್ ಶಾ

ನವದೆಹಲಿ: ಬಿಹಾರ ದಲ್ಲಿ ನವೆಂಬರ್ 6 ಮತ್ತು 11 ರಂದು ಚುನಾವಣೆ ನಡೆಯಲಿದ್ದು, 14 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದನ್ನು ಚುನಾವಣಾ ನಂತರದಲ್ಲಿ ಶಾಸಕಾಂಗ ಪಕ್ಷದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಮುಂದಿನ ಚುನಾವಣೆಯನ್ನು ನಿತೀಶ್ ಕುಮಾರ್ ನೇತೃತ್ವದಲ್ಲಿ ನಾವು ಎದುರಿಸಲಿದ್ದೇವೆ ಎಂದು ತಿಳಿಸಿದ್ದಾರೆ. ಬಿಹಾರದ ಈ ಚುನಾವಣೆಯಲ್ಲಿ ಎನ್‌ಡಿಎ ಗೆದ್ದರೆ ನಿತೀಶ್ ಸಿ.ಎಂ. ಆಗುತ್ತಾರೆಯೇ ಎನ್ನುವ ಪ್ರಶ್ನೆಗೆ ಉತ್ತರ […]

ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಎಲ್ಲರದ್ದು: ಅಮಿತ್ ಶಾ Read More »

ಬಾಲಕನಿಗೆ ಸ್ಕೂಟರ್‌ ನೀಡಿದ ವ್ಯಕ್ತಿಗೆ 32 ಸಾವಿರ ರೂ. ದಂಡ

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಕಾರಣಕ್ಕೆ ವಾಹನ ಮಾಲಕನಿಗೆ ಬಂಟ್ವಾಳ ನ್ಯಾಯಾಲಯ 32 ಸಾವಿರ ರೂ. ದಂಡ ವಿಧಿಸಿದೆ. ಕಳೆದ ಸೆಪ್ಟಂಬರ್‌ನಲ್ಲಿ ಪುತ್ತೂರು ಕಡೆಯಿಂದ ವಿಟ್ಲದತ್ತ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕ ಚಲಾಯಿಸುತ್ತಿದ್ದ ಇನ್ನೊಂದು ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯ ವಿಚಾರಣೆ ನಡೆಸಿ ಬಾಲಕ

ಬಾಲಕನಿಗೆ ಸ್ಕೂಟರ್‌ ನೀಡಿದ ವ್ಯಕ್ತಿಗೆ 32 ಸಾವಿರ ರೂ. ದಂಡ Read More »

ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆ

ಪುತ್ತೂರು: ಜಿಡೆಕಲ್ಲಿನಲ್ಲಿರುವ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಂಗಳೂರಿನ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶಗಳ ಸಹಯೋಗದಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆಯ ಒಂದು ದಿನದ ಕಾರ್ಯಕ್ರಮ ನಡೆಯಿತು. ಮಧ್ಯಮ ಮಾರ್ಗಕಾರ್ಯಕ್ರಮವನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ನೀಡಿದ ಖ್ಯಾತ ಆಧ್ಯಾತ್ಮಿಕ, ಸಾಹಿತ್ತಿಕ ಮತ್ತು ಸಾಮಾಜಿಕ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಮಾತನಾಡಿ ಸಾಹಿತ್ಯವು ಜೀವನಕ್ಕೆ ಮಧ್ಯಮ ಮಾರ್ಗವನ್ನು ತೋರಿಸುತ್ತದೆ ಎಂದು ಹೇಳಿ ಇಂದು ವಿದ್ಯಾರ್ಥಿಗಳಲ್ಲಿ ಸಾಹಿತ್ತಿಕ

ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆ Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಕಸಾಯಿಖಾನೆ ಸ್ಥಳಗಳು ಜಪ್ತಿ

ಗೋಹತ್ಯೆ ನಡೆಸಿದ ಸ್ಥಳಗಳೆಂದು ಗುರುತಿಸಿ ಮುಟ್ಟುಗೋಲು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ ಗ್ರಾಮಾಂತರ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾಗಿರುವ ಜಾನುವಾರು ಹತ್ಯೆ ಪ್ರಕರಣಗಳ ತನಿಖೆಯ ಭಾಗವಾಗಿ ಕಸಾಯಿಖಾನೆಗಳಿದ್ದ ಸ್ಥಳಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಮತ್ತು ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಕೆರೆಬಳಿ ಪ್ರದೇಶದಲ್ಲಿ ಆರೋಪಿಗಳಾದ ನಾಸೀರ್ ಮತ್ತು ಇತರರು ದನವನ್ನು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಕಸಾಯಿಖಾನೆ ಸ್ಥಳಗಳು ಜಪ್ತಿ Read More »

ಉಡುಪಿ: ಮನೆಯಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

ಉಡುಪಿ: ಪ್ರೇಮಿಗಳಿಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ. ಪವಿತ್ರ ಅಜ್ಜರಕಾಡು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ಮೇಲೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ. ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ

ಉಡುಪಿ: ಮನೆಯಲ್ಲೇ ನೇಣಿಗೆ ಶರಣಾದ ಪ್ರೇಮಿಗಳು Read More »

ಡಿಐಜಿ ಮನೆಯಲ್ಲಿತ್ತು 5 ಕೋಟಿ ನಗದು, ಕೆಜಿಗಟ್ಟಲೆ ಚಿನ್ನ

ಭ್ರಷ್ಟ ಅಧಿಕಾರಿಯ ಸಂಪತ್ತು ನೋಡಿ ಸಿಬಿಐ ಅಧಿಕಾರಿಗಳಿಗೆ ಶಾಕ್‌ ಹೊಸದಿಲ್ಲಿ : ಡಿಐಜಿಯೊಬ್ಬರ ಮನೆಯಲ್ಲಿ ಸಂಪತ್ತಿನ ಕೊಪ್ಪರಿಗೆಯೇ ಪತ್ತೆಯಾಗಿದ್ದು, ಇದನ್ನು ನೋಡಿ ಅಧಿಕಾರಿಗಳೇ ದಂಗುಬಡಿದು ಹೋಗಿದ್ದಾರೆ. ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ಚಿನ್ನದ ಆಭರಣಗಳು, ಬೆಲೆಬಾಳುವ ವಾಚ್​​ಗಳು ಸೇರಿದಂತೆ ಸಂಪತ್ತಿನ ಖಜಾನೆಯನ್ನೇ ಸಿಬಿಐ ವಶಕ್ಕೆ ಪಡೆದುಕೊಂಡಿದೆ. 8 ಲಕ್ಷ ರೂ. ಲಂಚ ಪ್ರಕರಣವೊಂದರಲ್ಲಿ ಅಖಾಡಕ್ಕಿಳಿದ ಸಿಬಿಐ ಭ್ರಷ್ಟ ಐಪಿಎಸ್ ಅಧಿಕಾರಿ ಪಂಜಾಬ್‌ನ ರೋಪರ್ ವಲಯ ಡಿಐಜಿ ಹರ್‌ಚರಣ್ ಸಿಂಗ್ ಭುಲ್ಲಾರ್ ಅವರ

ಡಿಐಜಿ ಮನೆಯಲ್ಲಿತ್ತು 5 ಕೋಟಿ ನಗದು, ಕೆಜಿಗಟ್ಟಲೆ ಚಿನ್ನ Read More »

ನಡುರಸ್ತೆಯಲ್ಲೇ ಬಸ್‌ ಬೆಂಕಿಗಾಹುತಿ : 36 ಪ್ರಯಾಣಿಕರು ಪಾರು

ಟಯರ್‌ ಬ್ಲಾಸ್ಟ್‌ ಆಗಿ ಬಸ್‌ ಬೆಂಕಿಗಾಹುತಿ ಬೆಂಗಳೂರು: ಖಾಸಗಿ ಬಸ್‌ಗೆ ನಡುರಸ್ತೆಯಲ್ಲೇ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದಿರುವ ಘಟನೆ ಆಂಧ್ರದ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್‌ ಅನಂತಪುರದ ಬಳಿ ತಲುಪಿದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರುಸುರಕ್ಷಿತವಾಗಿ ಪಾರಾಗಿದ್ದಾರೆ. ಈ ಬಸ್‌ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೋಗುತ್ತಿರುವಾಗ ಟಯರ್‌ ಬ್ಲಾಸ್ಟ್‌ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಟಯರ್‌ ಬ್ಲಾಸ್ಟ್‌ ಆಗುತ್ತಿದ್ದಂತೆ ಪ್ರಯಾಣಿಕರು ತಮ್ಮ ಲಗೇಜ್‌ಗಳನ್ನು

ನಡುರಸ್ತೆಯಲ್ಲೇ ಬಸ್‌ ಬೆಂಕಿಗಾಹುತಿ : 36 ಪ್ರಯಾಣಿಕರು ಪಾರು Read More »

ಸಿಎಂ ಮನೆಯಲ್ಲೂ ನಡೆಯಿತು ಜಾತಿ ಗಣತಿ

ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ ಸಿದ್ದರಾಮಯ್ಯ ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಗಳ ಕಾಲ ಸಮಾಧಾನದಿಂದ ಗುರುವಾರ ಉತ್ತರ ನೀಡಿದರು. ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರು ಗಣತಿದಾರರಿಗೆ ಮಾಹಿತಿ ನೀಡಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು. ಮನೆ ಸಮೀಕ್ಷೆ ಬಳಿಕ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, ಸಮೀಕ್ಷೆಗಾಗಿ ನನ್ನ ಮನೆಗೆ

ಸಿಎಂ ಮನೆಯಲ್ಲೂ ನಡೆಯಿತು ಜಾತಿ ಗಣತಿ Read More »

ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತ ದಾಳಿ

ಪ್ರಾಣಿಗಳ ಆಹಾರ ಪೂರೈಕೆ ಸಹಿತ ವಿವಿಧ ವ್ಯವಹಾರಗಳಲ್ಲಿ ಲೋಪದೋಷದ ಆರೋಪ ಮಂಗಳೂರು : ನಗರದ ಹೊರವಲಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ಡಾರೆ. ಡಿವೈಎಸ್‌ಪಿ ಡಾ.ಗಾನ ಪಿ ಕುಮಾರ್ ನೇತೃತ್ವದ ತಂಡ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದೆ. ಅನುದಾನ ದುರುಪಯೋಗ, ಆದಾಯ ಮತ್ತು ವೆಚ್ಚದ ಬಗ್ಗೆ ಪರಿಶೀಲನೆ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ,

ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತ ದಾಳಿ Read More »

ಬಿಹಾರ ಚುನಾವಣೆಗೆ ಹಣ ಹೊಂದಿಸಲು ಸಿ ಎಂ ಸಿದ್ದರಾಮಯ್ಯ ಔತಣಕೂಟ: ಜಗದೀಶ್ ಶೆಟ್ಟರ್

ಬೆಂಗಳೂರು: ಮುಂದಿನ ಬಿಹಾರ ಚುನಾವಣೆಗೆ ಹಣ ಸಂಗ್ರಹ ಮಾಡುವ ಉದ್ದೇಶದಿಂದ ಸಿ ಎಂ ಸಿದ್ದರಾಮಯ್ಯ ಅವರು ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜನೆ ಮಾಡಿದ್ದರು ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಎಟಿಎಂ ಕರ್ನಾಟಕ ಎಂಬಂತಾಗಿದೆ. ಆಡಳಿತದಲ್ಲೂ ನಿರಾಸಕ್ತಿ ಹೊಂದಿರುವ ಸಿದ್ದರಾಮಯ್ಯ ಅವರು ಸಿ ಎಂ ಆಗಿ ಕಾರ್ಯ ನಿರ್ವಹಣೆ ಮಾಡುವಲ್ಲಿಯೂ ವಿಫಲರಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಬಿಹಾರದ ಮುಂದಿನ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹ ಮಾಡಲು ಕಾಂಗ್ರೆಸ್ ಸಿದ್ದರಾಮಯ್ಯ ಅವರಿಗೆ ಹೇಳಿದೆ. ಹಾಗಾಗಿ ಅವರು ಸಹೋದ್ಯೋಗಿಗಳಿಗೆ ಔತಣ

ಬಿಹಾರ ಚುನಾವಣೆಗೆ ಹಣ ಹೊಂದಿಸಲು ಸಿ ಎಂ ಸಿದ್ದರಾಮಯ್ಯ ಔತಣಕೂಟ: ಜಗದೀಶ್ ಶೆಟ್ಟರ್ Read More »

error: Content is protected !!
Scroll to Top