ಸುದ್ದಿ

ತಪ್ಪು ಮಾಹಿತಿ ಪ್ರಸಾರ: ಜಯಂತ್ ಟಿ. ವಿರುದ್ಧ ಸುಮೋಟೋ ಪ್ರಕರಣ ದಾಖಲು

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡೀಪಾರು ಮಾಡಿದ ಆದೇಶ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಮೂಲಕ ಜನರಿಗೆ ತಪ್ಪು ಮಾಹಿತಿ ರವಾನೆ ಮಾಡಿದ ಆರೋಪದಲ್ಲಿ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ಪೊಲೀಸರ ಮನವಿಯ ಮೇರೆಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಅವರು ಸೆ. 18 ರಿಂದ ಒಂದು ವರ್ಷಗಳ ಕಾಲ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶದ ಎಲ್ಲಾ ಅಂಶಗಳು […]

ತಪ್ಪು ಮಾಹಿತಿ ಪ್ರಸಾರ: ಜಯಂತ್ ಟಿ. ವಿರುದ್ಧ ಸುಮೋಟೋ ಪ್ರಕರಣ ದಾಖಲು Read More »

RSS ಸಂಸ್ಕಾರ ಕಲಿಸುತ್ತದೆ: ಜನಾರ್ದನ ರೆಡ್ಡಿ

ಕೊಪ್ಪಳ: ಸಿ ಎಂ ಸಿದ್ದರಾಮಯ್ಯ ಅವರಿಗೆ RSS ಬಗ್ಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಸದ್ಯ ಜೋಕರ್‌ನಂತೆ ‌ಆಗಿದ್ದಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಈ ಪ್ರಕರಣದ ಬಗ್ಗೆ ನಮ್ಮ ಪಕ್ಷದ ಹಿರಿಯರೆಲ್ಲರೂ ಮಾತನಾಡಿದ್ದಾರೆ. ಪ್ರಿಯಾಂಕ್ ಖರ್ಗೆ‌ಗೆ ಏನು ಮಾತನಾಡಬೇಕು. ಏನು ಮಾತನಾಡಬಾರದು ಎನ್ನುವುದೇ ಗೊತ್ತಿಲ್ಲ. RSS ದೇಶದ ಸುರಕ್ಷತೆಗಾಗಿ ಸ್ಥಾಪನೆಯಾಗಿದ್ದು, ಇದು ಮಗುವಿಗೆ ಸಂಸ್ಕಾರ ಕಲಿಸುವ ಕೆಲಸವನ್ನು ಮಾಡುತ್ತದೆ. ಅಂತಹ ರಾಷ್ಟ್ರ ಭಕ್ತ ಸಂಘಟನೆಯ ಬಗ್ಗೆ ಮಾತನಾಡಿದ್ದಾರೆ ಪ್ರಿಯಾಂಕ್ ಖರ್ಗೆ‌. ಅವರು

RSS ಸಂಸ್ಕಾರ ಕಲಿಸುತ್ತದೆ: ಜನಾರ್ದನ ರೆಡ್ಡಿ Read More »

ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು, ಮಲ್ಪೆಯಲ್ಲಿ ಪ್ರವಾಸಿಗ ಜಲಸಮಾಧಿ

ಮೀನು ಹಿಡಿಯಲು ಹೋದ ಮಕ್ಕಳ ದುರಂತ ಅಂತ್ಯದಿಂದ ಇಡೀ ಗ್ರಾಮಕ್ಕೆ ಶೋಕ ಉಡುಪಿ: ನಿನ್ನೆ ಒಂದೇ ದಿನ ಮಲ್ಪೆ ಮತ್ತು ಬೈಂದೂರಲ್ಲಿ ಸಮುದ್ರದಲ್ಲಿ ಮುಳುಗಿ ನಾಲ್ಕು ಮಂದಿ ಸಾವಿಗೀಡಾಗಿರುವ ದಾರುಣ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕಡಲ ಕಿನಾರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಮಕ್ಕಳು ನೀರುಪಾಲಾಗಿದ್ದಾರೆ. ಕಿರಿಮಂಜೇಶ್ವರ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ 15 ವರ್ಷ ವಯಸ್ಸಿನ ಆಶಿಶ್ ದೇವಾಡಿಗ, ಕಿರಿ ಮಂಜೇಶ್ವರ ಹೈಸ್ಕೂಲ್‌ನಲ್ಲಿ 10ನೇ ತರಗತಿ ಓದುತ್ತಿದ್ದ 16 ವರ್ಷ ವಯಸ್ಸಿನ

ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು, ಮಲ್ಪೆಯಲ್ಲಿ ಪ್ರವಾಸಿಗ ಜಲಸಮಾಧಿ Read More »

ಬೆಂಗಳೂರಲ್ಲೇ ಇತ್ತು ಸೈಬರ್‌ ಖದೀಮರ ಡಿಜಿಟಲ್‌ ಅರೆಸ್ಟ್‌ ಕಂಪನಿ

ಡಿಜಿಟಲ್‌ ಅರೆಸ್ಟ್‌ ಮಾಡಿ ಕೋಟಿಗಟ್ಟಲೆ ಹಣ ಸುಲಿಯುತ್ತಿದ್ದ ಆಫೀಸ್‌ ಮೇಲೆ ದಾಳಿ ಬೆಂಗಳೂರು : ದೇಶ ವಿದೇಶಗಳ ಅಮಾಯಕ ಜನರನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಕೋಟಿಗಟ್ಟಲೆ ಹಣ ದೋಚುತ್ತಿದ್ದ ಸೈಬರ್‌ ಖದೀಮರ ಕಚೇರಿ ಬೆಂಗಳೂರಿನಲ್ಲೇ ಇತ್ತು ಎಂಬುದು ಈಗ ಬಯಲಾಗಿದೆ. ಹಲವು ಐಟಿ ಕಂಪನಿಗಳಿರುವ ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದ ಸೈಬರ್ ಕಂಪನಿ ಕೂಡ ಪತ್ತೆಯಾಗಿದೆ. ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಜನರಲ್ಲಿ ಭಯ ಹುಟ್ಟಿಸಿ ಹಣ ವಸೂಲಿ ಮಾಡುತ್ತಿದ್ದ ಪ್ರಕರಣಗಳು ಈ ಕಚೇರಿಗೆ ಜೊತೆಗೆ ನಂಟು ಹೊಂದಿರುವ

ಬೆಂಗಳೂರಲ್ಲೇ ಇತ್ತು ಸೈಬರ್‌ ಖದೀಮರ ಡಿಜಿಟಲ್‌ ಅರೆಸ್ಟ್‌ ಕಂಪನಿ Read More »

ಉದ್ಯಮಗಳು ಕರ್ನಾಟಕವನ್ನೇ ನಿಷೇಧಿಸುತ್ತಿವೆ : ಆರ್‌. ಅಶೋಕ್‌ ವ್ಯಂಗ್ಯ

ಕೈತಪ್ಪಿದ ಗೂಗಲ್‌ AI-ಹಬ್‌ ಹಿನ್ನೆಲೆಯಲ್ಲಿ ಟೀಕೆ ಬೆಂಗಳೂರು: ಇಲ್ಲಿ ಕಾಂಗ್ರೆಸ್ ನಾಯಕರು ಆರ್‌ಎಸ್‌ಎಸ್‌ ನಿಷೇಧ ಮಾಡುವ ಚಿಂತೆಯಲ್ಲಿದ್ದರೆ, ಅಲ್ಲಿ ಉದ್ಯಮಗಳು ಕರ್ನಾಟಕವನ್ನೇ ನಿಷೇಧ ಮಾಡುತ್ತಿವೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಭಾರತದಲ್ಲಿ ಮೊದಲ AI-ಹಬ್‌ಗಾಗಿ Google ಬರೊಬ್ಬರಿ 15 ಶತಕೋಟಿ ಡಾಲರ್ ಹೂಡಿಕೆ ಮಾಡಲಿದ್ದು, ಈ ಬೃಹತ್ ಯೋಜನೆ ಆಂಧ್ರಪ್ರದೇಶದ ಪಾಲಾಗಿದೆ, ಇದರಿಂದ ರಾಜ್ಯಕ್ಕೆ 10,000 ಕೋಟಿ ರೂ ಆದಾಯ ಹಾಗೂ 30,000 ಉದ್ಯೋಗ ಕೈತಪ್ಪಿದಂತಾಗಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ

ಉದ್ಯಮಗಳು ಕರ್ನಾಟಕವನ್ನೇ ನಿಷೇಧಿಸುತ್ತಿವೆ : ಆರ್‌. ಅಶೋಕ್‌ ವ್ಯಂಗ್ಯ Read More »

ಒಂದೇ ಕಡೆ ಹತ್ತು ಶವ ಹೂತ ಹೊಸ ಕಥೆ : ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌

ಎಸ್‌ಐಟಿಗೆ ತಿಳಿಸದ ವಿಚಾರವನ್ನು ನ್ಯಾಯಾಲಯಕ್ಕೆ ಹೇಳಿದ ಆರೋಪಿ ಚಿನ್ನಯ್ಯ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣದ ತನಿಖೆ ಒಂದು ಹಂತಕ್ಕೆ ಬಂತು ಎನ್ನುವಾಗಲೇ ಆರೋಪಿ ಚಿನ್ನಯ್ಯ ಮಂಗಳವಾರ ಹೊಸ ಕಥೆ ಹೇಳಿ ಇಡೀ ಪ್ರಕರಣಕ್ಕೆ ಟ್ವಿಸ್ಟ್‌ ನೀಡಿದ್ದಾನೆ. ಕೋರ್ಟ್‌ ಮುಂದೆ ಚಿನ್ನಯ್ಯ ತಾನು ಒಂದೇ ಜಾಗದಲ್ಲಿ ಹತ್ತು ಮೃತದೇಹ ಹೂತಿದ್ದಾಗಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾನೆ. ಆದರೆ, ಯಾವ ಜಾಗದಲ್ಲಿ, ಎಲ್ಲಿ, ಯಾವಾಗ ಎಂದು ಮಾತ್ರ ಹೇಳಿಲ್ಲ. ಎಸ್‌ಐಟಿ ಮುಂದೆ ಇಷ್ಟರ ತನಕ ಕೊಡದ ಈ ಮಾಹಿತಿಯನ್ನು ಕೋರ್ಟ್‌ ಮುಂದೆ

ಒಂದೇ ಕಡೆ ಹತ್ತು ಶವ ಹೂತ ಹೊಸ ಕಥೆ : ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ Read More »

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಮೆಕ್ಯಾನಿಕ್‌ ಸಾವು

ಬಂಟ್ವಾಳ : ಬಿ.ಸಿ.ರೋಡ್ ಬಳಿಯ ಗಾಣದಪಡ್ಪು ಎಂಬಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೆದ್ದಾರಿ ಬದಿಯಲ್ಲಿ ಕಾರು ದುರಸ್ತಿ ಮಾಡುತ್ತಿದ್ದ ಮೆಕ್ಯಾನಿಕ್‌ ಮತ್ತೊಂದು ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಬೋಳಾರ್ಂತೂರು ನಿವಾಸಿ ಜಬ್ಬಾರ್ (33) ಎಂದು ಗುರುತಿಸಲಾಗಿದೆ. ಅವರು ಅವಿವಾಹಿತರಾಗಿದ್ದು, ಗಾಣದಪಡ್ಪುವಿನ ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಆಟೋ ಇಲೆಕ್ಟ್ರಿಕಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಜಬ್ಬಾರ್ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಹಾರ್ನ್ ಅಳವಡಿಸುತ್ತಿದ್ದಾಗ ವೇಣೂರಿನ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಮತ್ತೊಂದು ಕಾರು ಬಂಟ್ವಾಳ ಬೈಪಾಸ್ ಕಡೆಯಿಂದ

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಮೆಕ್ಯಾನಿಕ್‌ ಸಾವು Read More »

ಬೆಂಗಳೂರಿನಲ್ಲಿ ಕಂಬಳ ನಡೆಸಲು ಹೈಕೋರ್ಟ್‌ ಅನುಮತಿ

ಕರಾವಳಿಯಿಂದ ಹೊರಗೆ ಕಂಬಳ ನಡೆಸಲು ಇದ್ದ ಅಡ್ಡಿ ನಿವಾರಣೆ ಮಂಗಳೂರು : ಕರಾವಳಿಯಿಂದ ಹೊರಗೆ ಕಂಬಳ ನಡೆಸುವುದಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದೆ. ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋಟ್೯ ನಿನ್ನೆ ಅನುಮತಿ ನೀಡಿದೆ. ಪುತ್ತೂರು ಶಾಸಕ ಅಶೋಕ್‌ ರೈಯವರು ಬೆಂಗಳೂರಿನಲ್ಲಿ ಕಂಬಲ ಆಯೋಜಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಆದರೆ ಅದರ ಮರುವರ್ಷ ಬೆಂಗಳೂರಿನಲ್ಲಿ ಮತ್ತೆ ಕಂಬಳ ನಡೆಸಲು ಮುಂದಾದಾಗ ಪೆಟಾ ತಕರಾರು ತೆಗೆದು

ಬೆಂಗಳೂರಿನಲ್ಲಿ ಕಂಬಳ ನಡೆಸಲು ಹೈಕೋರ್ಟ್‌ ಅನುಮತಿ Read More »

ಸುಳ್ಯ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ಸುಳ್ಯ : ಕಳೆದ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೇರಳದ ತ್ರಿಶ್ಶೂರ್‌ ಜಿಲ್ಲೆಯ ನಾಟಿ ಮನೆಯ ಬಾಲನ್(73) ಎಂದು ಗುರುತಿಸಲಾಗಿದೆ. 1990ರಲ್ಲಿ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ಎಂಬವರಿಗೆ ತಲ್ವಾರ್‌ನಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಕೃತ್ಯಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್‌ ರಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಈತನನ್ನು ಕೇರಳ ರಾಜ್ಯದ ತ್ರಿಶ್ಶೂರ್‌ನಿಂದ ಅ.13ರಂದು

ಸುಳ್ಯ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ Read More »

ಅ.22ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ

ತುಲಾ ಮಾಸದ ಕೊನೆಯ ದಿನ ವಿಶೇಷ ಪೂಜೆ ಸಲ್ಲಿಸಲಿರುವ ರಾಷ್ಟ್ರಪತಿ ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ತುಲಾ ಮಾಸ ಪೂಜೆಯ ಕೊನೆಯ ದಿನವಾದ ಅ.22ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ಮೂಲಕ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ ಭಾರತದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅ.21ರಂದು ಸಂಜೆ 6.20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.22ರಂದು ತಿರುವನಂತಪುರದಿಂದ ಹೆಲಿಕಾಪ್ಟರ್ ಮೂಲಕ ನೀಲಕ್ಕಲ್‌ಗೆ ಆಗಮಿಸಿ

ಅ.22ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ Read More »

error: Content is protected !!
Scroll to Top