ಸುದ್ದಿ

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ರಾಜಕೀಯ ಪ್ರೇರಿತ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಆರೋಪ ಬೆಂಗಳೂರು : ಕಾಂಗ್ರೆಸ್‌ ಶಾಸಕರ ಆಪ್ತನ ಕಿರುಕುಳದಿಂದ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ನಾಗವಾರದ ಕಚೇರಿಯಲ್ಲೇ ವಿನಯ್ ಸೋಮಯ್ಯ(35) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್​ನೋಟ್ ಪೋಸ್ಟ್ ಮಾಡಿದ್ದ ವಿನಯ್, ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ವಿನಯ್​ ವಾಟ್ಸ್​ಆ್ಯಪ್​ ಗ್ರೂಪ್​​ ಒಂದರ ಅಡ್ಮಿನ್ ಆಗಿದ್ದರು. ಆ ಗ್ರೂಪ್​ನಲ್ಲಿ ಇತ್ತೀಚೆಗೆ ಕಾಂಗ್ರೆಸ್​ ಶಾಸಕರೊಬ್ಬರ […]

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ Read More »

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ

ವಿದೇಶಗಳಿಂದ ಕರೆ ಮಾಡಿ ಬೆದರಿಕೆಯೊಡ್ಡುತ್ತಿರುವ ಕುರಿತು ಪೊಲೀಸ್‌ ಕಮಿಷನರ್‌ಗೆ ದೂರು ಮಂಗಳೂರು: ಸಂಸತ್ತಿನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಪಾಸ್‌ ಆದ ಬೆನ್ನಲ್ಲೇ ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್‌ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎಂದು ಅನ್ವರ್‌ ಮಾಣಿಪ್ಪಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ವರ್ ಮಾಣಿಪ್ಪಾಡಿ ಮಂಗಳೂರಿನಲ್ಲಿ ವಾಸವಾಗಿದ್ದಾರೆ.

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ Read More »

ನೀರಕಟ್ಟೆಯಲ್ಲಿ ಬಸ್‌ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು

12 ಮಂದಿಗೆ ಗಾಯ; ಓರ್ವನಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಉಪ್ಪಿನಂಗಡಿ: ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಇಂದು ಮುಂಜಾನೆ ಖಾಸಗಿ ಬಸ್‌ ಪಲ್ಟಿಯಾಗಿ ಮೃತಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಿದೆ ಎನ್ನಲಾಗಿದೆ. ಬೆಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್‌ ಬೆಳಗ್ಗೆ 5 ಗಂಟೆಗೆ ವೇಳೆಗೆ ನೀರಕಟ್ಟೆಯ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಮೃತಪಟ್ಟವರನ್ನು ಬೆಂಗಳೂರಿನ ಯಡಿಯೂರು ನಿವಾಸಿ ಹರ್ಷ (24) ಎಂದು

ನೀರಕಟ್ಟೆಯಲ್ಲಿ ಬಸ್‌ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು Read More »

ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವು

ಸ್ವಚ್ಛಗೊಳಿಸಲು ಇಳಿದವರು ವಿಷಾನಿಲ ಸೇವಿಸಿ ಮೃತ್ಯು ಹೊಸದಿಲ್ಲಿ: ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವಿಗೀಡಾದ ದಾರುಣ ಘಟನೆ ಮಧ್ಯ ಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಸಂಭವಿಸಿದೆ. ಛಾಯ್‌ಗಾಂವ್‌ ಮಖಾನ ಎಂಬಲ್ಲಿ ಊರಿನ ಉತ್ಸವದ ವಿಗ್ರಹ ವಿಸರ್ಜನೆಗೆ ಮುಂಚಿತವಾಗಿ ಬಾವಿಯ ನೀರನ್ನು ಸ್ವಚ್ಛಗೊಳಿಸುವ ಕೆಲಸ ನಡೆಯುತ್ತಿದ್ದಾಗ ಬಾವಿಯಲ್ಲಿದ್ದವರು ವಿಷಾನಿಲದಿಂದಾಗಿ ಉಸಿರುಕಟ್ಟಿ ಸಾವಿಗೀಡಾಗಿದ್ದಾರೆ. ಮೊದಲು ಓರ್ವ ಕಾರ್ಮಿಕ ಬಾವಿಗಿಳಿದಿದ್ದು, ಅತ ಉಸಿರುಕಟ್ಟಿ ಒದ್ದಾಡುವುದನ್ನು ನೋಡಿ ಉಳಿದವರು ಅವನನ್ನು ರಕ್ಷಿಸಲು ಇಳಿದಿದ್ದರು. ಆದರೆ ಎಲ್ಲರೂ ಉಸಿರುಕಟ್ಟಿ ಮೇಲೆ ಬರಲಾಗದೆ ಸಾವಿಗೀಡಾಗಿದ್ದಾರೆ. ಈ ಬಾವಿ

ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವು Read More »

ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ಮನೋಜ್‌ ಕುಮಾರ್‌ ನಿಧನ

ರಾಷ್ಟ್ರಪ್ರೇಮದ ಚಿತ್ರಗಳಿಂದ ಪ್ರಸಿದ್ಧರಾಗಿದ್ದ ಮನೋಜ್‌ ಕುಮಾರ್‌ ಮುಂಬಯಿ: ಬಾಲಿವುಡ್‌ನ ಹಿರಿಯ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ ಇಂದು ನಸುಕಿನ ವೇಳೆ ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಾ ಇದ್ದರು. ಅವರು ರಾಷ್ಟ್ರಪ್ರೇಮದ ಸಿನಿಮಾಗಳಿಗೆ ಹೆಸರುವಾಸಿಯಾಗಿದ್ದರು. ಈ ಕಾರಣಕ್ಕೆ ಅವರಿಗೆ ‘ಭಾರತ್ ಕುಮಾರ್’ ಎಂಬ ಹೆಸರು ಇತ್ತು.ಮನೋಜ್ ಕುಮಾರ್ ಅವರನ್ನು ಕೆಲ ವಾರಗಳ ಹಿಂದೆ ಮುಂಬಯಿಯ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ

ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ಮನೋಜ್‌ ಕುಮಾರ್‌ ನಿಧನ Read More »

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ

ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಬೆಳ್ತಂಗಡಿ: ವಧಿಸುವ ಸಲುವಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಸುಮಾರು 15 ಗೋವುಗಳನ್ನು ಇಂದು ನಸುಕಿನ ಹೊತ್ತು ಬೆಳ್ತಂಗಡಿ ಸಮೀಪ ರಕ್ಷಿಸಲಾಗಿದೆ. ತರಕಾರಿ ವಾಹನದಲ್ಲಿ ಗೋವು ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕಿ ಹಿಂದು ಸಂಘಟನೆಗಳು ವಾಹನವನ್ನು ಹಿಂಬಾಲಿಸಿ ಕಳಿಯ ನಾಯತರ್ಪು ಸಮೀಪದ ಜಾರಿಗೆಬೈಲಿನಲ್ಲಿ ಅಡ್ಡಗಟ್ಟಿದ್ದಾರೆ. ಆಗ ವಾಹನದಲ್ಲಿ ಸುಮಾರು 15 ಗೋವುಗಳನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ.ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದ ರಾಷ್ಟ್ರೀಯ ಹಿಂದೂ ಜಾರಣ ವೇದಿಕೆಯ ಕಾರ್ಯಕರ್ತರು ಈ

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ Read More »

ನೀರಕಟ್ಟೆಯಲ್ಲಿ ಬಸ್‌ ಪಲ್ಟಿ : ಓರ್ವ ಪ್ರಯಾಣಿಕ ಸಾವು

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಎಂಬಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟ ಘಟನೆ ಏ.4ರಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಜತ್ತೂರು ಸಮೀಪ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.ಮೃತಪಟ್ಟ ಪ್ರಯಾಣಿಕನ ಗುರುತು ಇನ್ನೂ ಪತ್ತಡೆಯಾಗಿಲ್ಲ. ಅಪಘಾತದಲ್ಲಿ ಕೆಲವು ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸನ್ನು ಕ್ರೇನ್‌ ಸಹಾಯದಿಂದ ಮೇಲೆತ್ತಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ನೀರಕಟ್ಟೆಯಲ್ಲಿ ಬಸ್‌ ಪಲ್ಟಿ : ಓರ್ವ ಪ್ರಯಾಣಿಕ ಸಾವು Read More »

3 ತಿಂಗಳಲ್ಲಿ 49.6 ಕೆಜಿ ಚಿನ್ನ ಸ್ಮಗ್ಲಿಂಗ್‌ ಮಾಡಿದ್ದ ರನ್ಯಾ ರಾವ್‌

ಹವಾಲ ಮೂಲಕ ದುಬೈಗೆ ಕೋಟಿಗಟ್ಟಲೆ ಹಣ ರವಾನೆ ಬೆಂಗಳೂರು : ನಟಿ ರನ್ಯಾ ರಾವ್‌ ಮೂರು ತಿಂಗಳಲ್ಲಿ ಬರೋಬ್ಬರಿ 49.6 ಕೆಜಿ ಚಿನ್ನ ಕಳ್ಳ ಸಾಗಾಟ ಮಾಡಿರುವ ವಿಚಾರ ಬಯಲಾಗಿದೆ. ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನ ಮೂರನೇ ಆರೋಪಿ ಸಾಹಿಲ್ ಜೈನ್ ಡಿಆರ್‌ಐ ಮುಂದೆ ಈ ವಿಚಾರ ಬಾಯಿಬಿಟ್ಟಿದ್ದಾನೆ. ನವಂಬರ್‌ನಿಂದ ರನ್ಯಾ ಬರೋಬ್ಬರಿ 49.6 ಕೆಜಿ ಚಿನ್ನ ಸಾಗಿಸಿದ್ದಾಳೆ. ಈ ಚಿನ್ನವನ್ನೆಲ್ಲ ತಂದು ಸಾಹಿಲ್ ಜೈನ್​ಗೆ ಕೊಟ್ಟಿದ್ದ ರನ್ಯಾ ಅದನ್ನು ಆತನ ಮೂಲಕ ಮಾರಾಟ ಮಾಡಿಸುತ್ತಿದ್ದಳು. ಅಷ್ಟೇ ಅಲ್ಲ

3 ತಿಂಗಳಲ್ಲಿ 49.6 ಕೆಜಿ ಚಿನ್ನ ಸ್ಮಗ್ಲಿಂಗ್‌ ಮಾಡಿದ್ದ ರನ್ಯಾ ರಾವ್‌ Read More »

ರಾಜ್ಯಸಭೆಯಲ್ಲೂ ಪಾಸ್‌ ಆದ ವಕ್ಫ್‌ ಮಸೂದೆ

ಪರವಾಗಿ 138, ವಿರುದ್ಧ 95 ಮತಗಳು ನವದೆಹಲಿ: ರಾಜ್ಯಸಭೆಯಲ್ಲಿಯೂ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್​ಡಿಎ ಸರ್ಕಾರ ಯಶಸ್ವಿಯಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾದವು.ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ. ಅವರು ಅಂಇಕತ ಹಾಕಿದ ಕೂಡಲೇ ಕಾನೂನಿನ ರೂಪ ಪಡೆಯುತ್ತದೆ. ರಾಜ್ಯಸಭೆಗೂ ಮುನ್ನ,ಸರ್ಕಾರ ಬುಧವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿತ್ತು. ಅಲ್ಲಿ ಸುಮಾರು 12 ಗಂಟೆಗಳ ಚರ್ಚೆಯ ನಂತರ

ರಾಜ್ಯಸಭೆಯಲ್ಲೂ ಪಾಸ್‌ ಆದ ವಕ್ಫ್‌ ಮಸೂದೆ Read More »

ರಾಡ್‍ಗಳಿಂದ ಹೊಡೆದಾಡಿಕೊಂಡ ಬಸ್‍ ಸಿಬ್ಬಂದಿಯರು | ಇಬ್ಬರು ಅರೆಸ್ಟ್‍

ಮಣಿಪಾಲ: ಮಣಿಪಾಲದಲ್ಲಿ ಎರಡು ಬಸ್ ಸಿಬ್ಬಂದಿಗಳು ಉಕ್ಕಿನ ರಾಡ್‌ಗಳಿಂದ ಹೊಡೆದಾಡಿಕೊಂಡ ಘಟನೆ ನಡೆದಿದೆ. ರಾಡ್‍ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಜಗಳವಾಡಿದ ಇಬ್ಬರು ಬಸ್‍  ಸಿಬ್ಬಂದಿಯನ್ನು ಬಂಧಿಸಲಾಗಿದೆ. ಬುಧವಾರ ಸಂಜೆ ಮಣಿಪಾಲ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್  ಸಿಬ್ಬಂದಿ ಬೀದಿ ಜಗಳದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ವಾಗ್ವಾದದಲ್ಲಿ ಬಸ್ ಕಂಡಕ್ಷರ್‌ಗಳಾದ ಅಲ್ಪಾಜ್ ಮತ್ತು ವಿಜಯಕುಮಾ‌ರ್ ಅವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಎರಡೂ ಬಸ್‌ಗಳನ್ನು ಮಣಿಪಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಣಿಪಾಲ

ರಾಡ್‍ಗಳಿಂದ ಹೊಡೆದಾಡಿಕೊಂಡ ಬಸ್‍ ಸಿಬ್ಬಂದಿಯರು | ಇಬ್ಬರು ಅರೆಸ್ಟ್‍ Read More »

error: Content is protected !!
Scroll to Top