ಸುದ್ದಿ

ಯಕ್ಷಗಾನ ಪದವಿ ಪ್ರದಾನ, ಯಕ್ಷ ಸಾಹಿತ್ಯ ಸಾಂಗತ್ಯ ಬಿಡುಗಡೆ ಮತ್ತು ಯಕ್ಷ ನೃತ್ಯ ರೂಪಕ ಸಮಾರಂಭ

ಬೆಂಗಳೂರು:ಹಲವು ಶತಮಾನಗಳ ಇತಿಹಾಸ ಹೊಂದಿರುವ ಯಕ್ಷಗಾನ ಕಲೆಯನ್ನು ನೂರಾರು ಕಲಾವಿದರು ಪ್ರಸಂಗಕರ್ತರ ಆಶಯದಂತೆ ರಂಗದಲ್ಲಿ ಪ್ರದರ್ಶಿಸಿ ಜನಸಾಮಾನ್ಯರಿಗೆ ಪೌರಾಣಿಕ ಜ್ಞಾನವನ್ನು ನೀಡಿದ್ದಾರೆ. ಭಾರತೀಯ ರಂಗಭೂಮಿಯಲ್ಲಿ ವಿಶಿಷ್ಟ ಕಲಾ ಪ್ರಕಾರವೆನಿಸಿದ ಯಕ್ಷಗಾನಕ್ಕೆ ಶೈಕ್ಷಣಿಕ ಚೌಕಟ್ಟನ್ನು ನೀಡುವ ಪ್ರಯತ್ನ ನಡೆದಿದೆಯಾದರೂ ಅದಕ್ಕೊಂದು ಅಂತಿಮ ರೂಪವನ್ನು ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಮಾಡಿರುವುದು ಯಕ್ಷಗಾನದ ಇತಿಹಾಸದಲ್ಲಿ ದಾಖಲಾಗುವ ಘಟನೆಯೆಂದು ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ನಿಕಟಪೂರ್ವ ಕುಲಪತಿ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ತಿಳಿಸಿದರು. […]

ಯಕ್ಷಗಾನ ಪದವಿ ಪ್ರದಾನ, ಯಕ್ಷ ಸಾಹಿತ್ಯ ಸಾಂಗತ್ಯ ಬಿಡುಗಡೆ ಮತ್ತು ಯಕ್ಷ ನೃತ್ಯ ರೂಪಕ ಸಮಾರಂಭ Read More »

ಕೋಮಾ ಸ್ಥಿತಿಯಲ್ಲಿ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ : ಇರಾನ್‌ಗೆ ಮತ್ತೊಂದು ಸಂಕಷ್ಟ

ಇಸ್ರೇಲ್‌ ದಾಳಿಯಲ್ಲಿ ಗಾಯಗೊಂಡ ಬಳಿಕ ಚಿಕಿತ್ಸೆಯಲ್ಲಿರುವ ಖಮೇನಿ ಟೆಹ್ರಾನ್‌: ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಇಸ್ರೇಲ್‌-ಅಮೆರಿಕ ಗುಪ್ತಚರ ಮೂಲಗಳನ್ನಾಧರಿಸಿ ಮಾಧ್ಯಮಗಳು ವರದಿ ಮಾಡಿವೆ. ಮೊಜ್ತಬಾ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಸದ್ಯ ಅವರನ್ನ ಕೋಮ್‌ ನಗರದ ರಹಸ್ಯ ಸ್ಥಳದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೆರಿಕ ದಾಳಿ ಎಚ್ಚರಿಕೆ ನಡುವೆಯೇ ಈ ಘಟನೆ ಸಂಭವಿಸಿದ್ದು, ನಾಯಕತ್ವದ ಬಗ್ಗೆ ಪ್ರಶ್ನೆಗಳೂ ಎದ್ದಿವೆ. ಆದರೆ ಈ ಬಗ್ಗೆ ಇರಾನ್‌ ಸರ್ಕಾರವಾಗಲಿ, ಸೇನೆಯಾಗಲಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಅಮೆರಿಕ ಮತ್ತು

ಕೋಮಾ ಸ್ಥಿತಿಯಲ್ಲಿ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ : ಇರಾನ್‌ಗೆ ಮತ್ತೊಂದು ಸಂಕಷ್ಟ Read More »

ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ : ಅಮೆರಿಕ ಬೆದರಿಕೆಗೆ ಇರಾನ್‌ ಪ್ರತಿತಂತ್ರ

ಮಂಗಳವಾರ ರಾತ್ರಿಯೊಳಗೆ ಇರಾನನ್ನು ಸರ್ವನಾಶ ಮಾಡುವುದಾಗಿ ಎಚ್ಚರಿಸಿರುವ ಟ್ರಂಪ್‌ ಟೆಹ್ರಾನ್‌: ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇಡೀ ಇರಾನ್‌ನನ್ನು ಸರ್ವನಾಶ ಮಾಡುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆದರಿಕೆ ಹಾಕಿದ ಬೆ3ನ್ನಲ್ಲೇ ಇರಾನ್‌ ತನ್ನ ರಕ್ಷಣೆಗೆ ತಂತ್ರ ಹೆಣೆದಿದೆ. ಟ್ರಂಪ್‌ ನೋಡೊದ ಗಡುವು ಸಮೀಪಿಸುತ್ತಿದ್ದಂತೆ ಇರಾನ್‌ ವಿದ್ಯುತ್‌ ಸ್ಥಾವರಗಳ ಸುತ್ತಲೂ ಮಾನವ ಸರಪಳಿ ನಿರ್ಮಿಸುವಂತೆ ಇಡೀ ದೇಶದ ಯುವ ಸಮೂಹಕ್ಕೆ ಕರೆ ಕೊಟ್ಟಿದೆ. ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು ಸೇರಿದಂತೆ ದೇಶಾದ್ಯಂತ ಇರುವ ಯುವಜನರು ಮಂಗಳವಾರ ಮಧ್ಯಾಹ್ನ

ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ : ಅಮೆರಿಕ ಬೆದರಿಕೆಗೆ ಇರಾನ್‌ ಪ್ರತಿತಂತ್ರ Read More »

ಏ.10ರಿಂದ ಟೋಲ್‌ಗೇಟ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ರದ್ದು

ಯುಪಿಐ ಪೇಮೆಂಟ್‌ಗೆ ಶೇ.25 ಹೆಚ್ಚುವರಿ ಶುಲ್ಕ ನವದೆಹಲಿ: ದೇಶದ ಎಲ್ಲಾ ಟೋಲ್ ಗೇಟ್‌ಗಳನ್ನು ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಏಪ್ರಿಲ್ 10 ರಿಂದ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಟೋಲ್ ಪ್ಲಾಜಾ ಹಾದು ಹೋಗಲು ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನಗಳಿಗೆ ಯುಪಿಐ ಮೂಲಕ ಪಾವತಿಸುವ ಪರ್ಯಾಯ ಆಯ್ಕೆ ನೀಡಲಾಗಿದೆ. ಆದರೆ ಈ ಸೌಲಭ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಅಂದರೆ ಯುಪಿಐ ವಹಿವಾಟು ನಡೆಸಿದಲ್ಲಿ ಸಾಮಾನ್ಯ ಟೋಲ್ ಶುಲ್ಕಕ್ಕಿಂತ ಶೇ.25

ಏ.10ರಿಂದ ಟೋಲ್‌ಗೇಟ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ರದ್ದು Read More »

ಬೆಂಗಳೂರಿನ ಹುಡುಗಿಯನ್ನು ವರಿಸಿದ ಕುಂಭಮೇಳದ ಐಐಟಿ ಬಾಬಾ

ಕುಂಭಮೇಳದಲ್ಲಿ ಐಐಟಿ ಬಾಬಾ ಎಂದು ವೈರಲ್‌ ಆಗಿದ್ದ ಬಾಬಾ ಬೆಂಗಳೂರು : ಮಹಾಕುಂಭ ಮೇಳದ ಸಂದರ್ಭದಲ್ಲಿ ‘ಐಐಟಿ ಬಾಬಾ’ ಎಂದು ಜನಪ್ರಿಯರಾಗಿದ್ದ ನಾಗಸಾಧು ಅಭಯ್ ಸಿಂಗ್‌ ಬೆಂಗಳೂರಿನ ಯುವತಿಯನ್ನು ಮದುವೆಯಾಗಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಕುಂಭಮೇಳದಲ್ಲಿ ಐಐಟಿಯಂಥ ಉನ್ನತ ಶಿಕ್ಷಣ ಪಡೆದಿದ್ದರೂ ಕೂಡ ನಾಗಸಾಧುವಾಗಿದ್ದ ಕಾರಣಕ್ಕೆ ಹರಿಯಾಣದ ಜಜ್ಝರ್ ಮೂಲದವರಾದ ಅಭಯ್ ಮಹಾಕುಂಭದಲ್ಲಿ ವೈರಲ್ ಆಗಿದ್ದರು. ಈಗ ಮದುವೆಯ ನಂತರ ಪತ್ನಿ ಪ್ರೀತಿಕ್ ಜೊತೆ ತಮ್ಮ ಊರಿಗೆ ಬಂದಿದ್ದಾರೆ. ಅವರು ಬರುತ್ತಿದ್ದಂತೆ, ಅವರನ್ನು ನೋಡಲು, ಸೆಲ್ಫಿ ತೆಗೆದುಕೊಳ್ಳಲು ಜನ

ಬೆಂಗಳೂರಿನ ಹುಡುಗಿಯನ್ನು ವರಿಸಿದ ಕುಂಭಮೇಳದ ಐಐಟಿ ಬಾಬಾ Read More »

ಬೆಳ್ತಂಗಡಿ : ಮನೆಯಿಂದ 19 ಲ.ರೂ. ಚಿನ್ನಾಭರಣ, ನಗದು ಕಳವು

ಮನೆಯವರು ಜಾತ್ರೆಗೆ ಹೋದಾಗ ಹೊಂಚು ಹಾಕಿ ಕಳ್ಳತನ ಬೆಳ್ತಂಗಡಿ : ಮಚ್ಚಿನ ಗ್ರಾಮದಲ್ಲಿ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ಸುಮಾರು 13 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 6 ಲಕ್ಷ ನಗದು ಹಣ ಕಳ್ಳತನ ಮಾಡಿರುವ ಘಟನೆ ನಡೆದಿದ್ದು ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಚ್ಚಿನ ಗ್ರಾಮದ ಬಳ್ಳಮಂಜ ಹೊಸಮನೆ ನಿವಾಸಿ ಡಿ. ಮುರಳಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಏ.5ರಂದು ಬಳ್ಳಮಂಜ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಜಾತ್ರಾ ಕಾರ್ಯಕ್ರಮಕ್ಕೆ ಮನೆಯವರೆಲ್ಲರೂ ಮನೆಗೆ ಬೀಗ ಹಾಕಿ ತೆರಳಿದ್ದರು.

ಬೆಳ್ತಂಗಡಿ : ಮನೆಯಿಂದ 19 ಲ.ರೂ. ಚಿನ್ನಾಭರಣ, ನಗದು ಕಳವು Read More »

ಕಡಬ: ಮಹಿಳೆ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ

ಕಡಬ: ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಹಿಳೆ ಕಳೆದ ಸುಮಾರು 3 ವರ್ಷಗಳಿಂದ ಗಂಡನಿಂದ ಪ್ರತ್ಯೇಕವಾಗಿ ಮಗಳೊಂದಿಗೆ ವಾಸವಾಗಿದ್ದರು. ಈ ನಡುವೆ ಆರೋಪಿ ಪ್ರಭಾಕರ ಪಿ. ಅವರೊಂದಿಗೆ ಪರಿಚಯವಾಗಿ ಆತ್ಮೀಯತೆ ಬೆಳೆದಿತ್ತು ಎನ್ನಲಾಗಿದೆ. ಏ.3ರಂದು ರಂದು ಮಹಿಳೆ ಆರೋಪಿಯೊಂದಿಗೆ ಮಾತನಾಡಲು ಅವರ ಮನೆಗೆ ತೆರಳಿದ ವೇಳೆ ಆರೋಪಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ

ಕಡಬ: ಮಹಿಳೆ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ Read More »

ಬಂಟ್ವಾಳ : ಸ್ಕೂಟರ್‌ ಕಳ್ಳರ ಬಂಧನ

ಬಂಟ್ವಾಳ : ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 21ರಂದು ಪರ್ಲಿಯಾದಲ್ಲಿರುವ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರನ್ನು ಕಳವು ಮಾಡಲಾಗಿತ್ತು. ಬಂಟ್ವಾಳದ ಸಜೀಪ್ ಮುನ್ನೂರು ನಿವಾಸಿ ಹಸನ್ ಬಾವ (55) ಮತ್ತು ಬಂಟ್ವಾಳದ ಬಿಮೂಡ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಕದ್ದ ಸ್ಕೂಟರ್ ಸುಮಾರು 50,000 ರೂ. ಮೌಲ್ಯದ್ದಾಗಿದ್ದು, ಆರೋಪಿಗಳಿಂದ ಅದನ್ನು ವಶಪಡಿಸಿಕೊಳ್ಳಲಾಗಿದೆ.

ಬಂಟ್ವಾಳ : ಸ್ಕೂಟರ್‌ ಕಳ್ಳರ ಬಂಧನ Read More »

ಒಂದೇ ರಾತ್ರಿಯಲ್ಲಿ ಇರಾನ್‌ ಸರ್ವನಾಶ : ಟ್ರಂಪ್‌ ಕೊನೆಯ ಎಚ್ಚರಿಕೆ

ಆ ರಾತ್ರಿ ಮಂಗಳವಾರವೇ ಆಗಿರಬಹುದು ಎಂದ ಟ್ರಂಪ್‌ ವಾಷಿಂಗ್ಟನ್‌: ಅಮೆರಿಕ ಒಂದೇ ರಾತ್ರಿಯಲ್ಲಿ ಇಡೀ ಇರಾನ್ ದೇಶವನ್ನು ನಾಶಪಡಿಸಬಹುದು. ಅದು ಮಂಗಳವಾರ ರಾತ್ರಿ ಆಗಿರಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಎಚ್ಚರಿಸಿದ್ದಾರೆ.‌ ಶ್ವೇತಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಟ್ರಂಪ್, ಇಡೀ ದೇಶ ರಾತ್ರೋರಾತ್ರಿ ನಾಶವಾಗಬಹುದು ಮತ್ತು ಆ ರಾತ್ರಿ ಮಂಗಳವಾರವೇ ಆಗಿರಬಹುದು ಎಂದಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ ಈ ಹೇಳಿಕೆ ಬಂದಿದೆ. ಟ್ರಂಪ್ ಮಂಗಳವಾರ ರಾತ್ರಿ 8 ಗಂಟೆಯವರೆಗೆ ಇರಾನ್​ಗೆ

ಒಂದೇ ರಾತ್ರಿಯಲ್ಲಿ ಇರಾನ್‌ ಸರ್ವನಾಶ : ಟ್ರಂಪ್‌ ಕೊನೆಯ ಎಚ್ಚರಿಕೆ Read More »

ಇಂದು ಪ್ರಕಟವಾಗುವುದಿಲ್ಲ ದ್ವಿತೀಯ ಪಿಯುಸಿ ಫಲಿತಾಂಶ

ಮೌಲ್ಯಮಾಪನ ಪ್ರಕ್ರಿಯೆ ಬಾಕಿ ಇರುವುದರಿಂದ ವಿಳಂಬ ಬೆಂಗಳೂರು : ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏ.7ರಂದು ಪ್ರಕಟವಾಗುವುದಿಲ್ಲ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೇ ಸುದ್ದಿಗೋಷ್ಠಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಫಲಿತಾಂಶ ನೀಡುವುದಾಗಿ ಘೋಷಿಸಿದ್ದರು. ಆದರೆ ಇಂದು ದ್ವಿತೀಯ ಪಿಯುಸಿ ರಿಸಲ್ಟ್ ಅನೌನ್ಸ್ ಆಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು ಸ್ಪಷ್ಟಪಡಿಸಿದ್ದಾರೆ. ಬಹಳ ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳು

ಇಂದು ಪ್ರಕಟವಾಗುವುದಿಲ್ಲ ದ್ವಿತೀಯ ಪಿಯುಸಿ ಫಲಿತಾಂಶ Read More »

error: Content is protected !!
Scroll to Top