ಸುದ್ದಿ

9 ಪೊಲೀಸರಿಗೆ ಮರಣ ದಂಡನೆ : ದೇಶದ ಇತಿಹಾಸದಲ್ಲೇ ಅತ್ಯಂತ ಮಹತ್ವದ ತೀರ್ಪು

ತಂದೆ-ಮಗನ ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿ ನೀಡಿದ ತೀರ್ಪು ಚೆನ್ನೈ: ತಂದೆ ಹಾಗೂ ಮಗನಿಗೆ ಪೊಲೀಸ್‌ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಅವರ ಸಾವಿಗೆಕಾರಣರಾಗಿದ್ದ ತಮಿಳುನಾಡಿನ 9 ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ನ್ಯಾಯಾಧೀಶರು ಈ ಪ್ರಕರಣವನ್ನು ಅಪರೂಪದಲ್ಲಿ ಅಪರೂಪ ಎಂದು ಉಲ್ಲೇಖಿಸಿದ್ದಾರೆ. ದೇಶಾದ್ಯಂತ ಈ ತೀರು ಭಾರಿ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಜನಸಾಮಾನ್ಯರ ಮೇಲೆ ಅಧಿಕಾರದ ದರ್ಪದಲ್ಲಿ ಎಸಗುವ ಕ್ರೌರ್ಯ ಎಷ್ಟು ಭೀಕರವಾಗಿರುತ್ತದೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ನ್ಯಾಯಾಲಯದ ಈ ತೀರ್ಪು ಭಾರತದ […]

9 ಪೊಲೀಸರಿಗೆ ಮರಣ ದಂಡನೆ : ದೇಶದ ಇತಿಹಾಸದಲ್ಲೇ ಅತ್ಯಂತ ಮಹತ್ವದ ತೀರ್ಪು Read More »

ಧರ್ಮಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ನೇತ್ರಾವತಿ ಬಂಗ್ಲೆಗುಡ್ಡೆಯಲ್ಲಿ ಕಂಡು ಬಂದ ಪುರುಷನ ಮೃತದೇಹ ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ

ಧರ್ಮಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »

ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಹಣ ಪೀಕಿದ್ದ ಸಮೀರ್‌

ಲವ್‌ ಜಿಹಾದ್‌ ಸಂತ್ರಸ್ತೆಯಿಂದಲೇ ಮೋಜುಮಸ್ತಿಗೆ ಹಣ ವಸೂಲಿ ಮಾಡುತ್ತಿದ್ದ ಕಿರಾತಕ ಹುಬ್ಬಳ್ಳಿ: ಲವ್ ಜಿಹಾದ್ ಪ್ರಕರಣದ ಆರೋಪಿ ಜಿಮ್ ಟ್ರೈನರ್‌ ಸಮೀರ್ ಅತ್ಯಾಚಾರದ ಬಳಿಕ ಬೆದರಿಕೆಯೊಡ್ಡಿ 70 ಸಾವಿರ ರೂ.ಗೂ ಅಧಿಕ ಹಣ ಪಡೆದಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸಂತ್ರಸ್ತೆಗೆ ಬೆದರಿಕೆಯೊಡ್ಡಿ ಅತ್ಯಾಚಾರ ಮಾಡಿದ ಬಳಿಕ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದ ಎನ್ನುವುದು ಗೊತ್ತಾಗಿದೆ. ಹಲವು ಬಾರಿ ಅತ್ಯಾಚಾರದ ಬಳಿಕ ಹಣವನ್ನು ಪಡೆದಿದ್ದಾನೆ. 5,000 ರೂ, 20,000 ರೂ, 25,000 ರೂ.ಯಂತೆ 70,000

ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಹಣ ಪೀಕಿದ್ದ ಸಮೀರ್‌ Read More »

ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

ಅಮೆರಿಕ–ಇಸ್ರೇಲ್‌ ನಡೆಸಿದ ಜಂಟಿ ದಾಳಿಗೆ ಬಲಿಯಾದ ಖಾದೇಮಿ ಟೆಹ್ರಾನ್: ಅಮೆರಿಕ – ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ ಎಂದು ಐಆರ್‌ಜಿಸಿ ಅಧಿಕೃತವಾಗಿ ಹೇಳಿಕೊಂಡಿದೆ. ಖಾದೇಮಿ ಸಾವನ್ನಪ್ಪಿದ್ದ ಸ್ಥಳದ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಇರಾನ್‌ ದಾಳಿಗೆ ಪ್ರತೀಕಾರವಾಗಿ ಸೋಮವಾರ ಟೆಹ್ರಾನ್‌ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್‌ ಸತತವಾಗಿ ವಾಯುದಾಳಿ ನಡೆಸುತ್ತಿವೆ. ಇದರಿಂದ ಘರ್ಷಣೆ ತೀವ್ರ ಸ್ವರೂಪ ಪಡೆದುಕೊಂಡಿರುವ ನಡುವೆ ಗುಪ್ತಚರ

ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ Read More »

ಬಾವಿಯೊಳಗೆ 3 ದಿನ ಜೀವನ್ಮರಣ ಹೋರಾಟ ನಡೆಸಿ ಬದುಕುಳಿದ ವೃದ್ಧ

ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಒಂಟಿ ವೃದ್ಧ ಉಡುಪಿ : ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ವೃದ್ಧರೊಬ್ಬರು ಪವಾಡಸದೃಶವಾಗಿ ಬದುಕುಳಿದ ಘಟನೆ ಆದಿ ಉಡುಪಿಯ ಕಂಬಳಕಟ್ಟೆ ಎಂಬಲ್ಲಿ ನಡೆದಿದೆ. ಕಂಬಳಕಟ್ಟೆ ನಿವಾಸಿ ಶ್ರೀನಿವಾಸ ಆಚಾರ್ಯ (62 ವರ್ಷ) ಸುಮಾರು 20 ಅಡಿ ಆಳದ ನೀರಿನ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದಿದ್ದಾರೆ. ಒಂಟಿಯಾಗಿ ವಾಸಿಸುವ ಶ್ರೀನಿವಾಸ ಆಚಾರ್ಯ ಎರಡು ತಿಂಗಳ ಹಿಂದೆ ಆರೋಗ್ಯ

ಬಾವಿಯೊಳಗೆ 3 ದಿನ ಜೀವನ್ಮರಣ ಹೋರಾಟ ನಡೆಸಿ ಬದುಕುಳಿದ ವೃದ್ಧ Read More »

ಇಸ್ರೇಲ್‌ ಮೇಲೆ ಇರಾನ್‌ ಭೀಕರ ದಾಳಿ : ಹಲವು ಸಾವು

15ಕ್ಕೂ ಹೆಚ್ಚು ಕಡೆಗಳಲ್ಲಿ ಸ್ಫೋಟ, ಬಹುಮಹಡಿ ಕಟ್ಟಡಗಳು ಗುರಿ ಟೆಹ್ರಾನ್‌: ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಸಂಭವಿಸಿದ 34 ಮಂದಿ ಸಾವಿಗೆ ಇರಾನ್‌ ಭೀಕರವಾಗಿ ಪ್ರತೀಕಾರ ತೀರಿಸಿಕೊಂಡಿದೆ. ಉತ್ತರ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇಸ್ರೇಲ್‌ನ ಹೈಫಾ ನಗರ ಸೇರಿದಂತೆ ಸುಮಾರು 15 ಕ್ಕೂ ಹೆಚ್ಚು ಕಡೆಗಳಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಹೈಫಾದಲ್ಲಿ ಬಹುಮಹಡಿ ಕಟ್ಟಡಗಳಿಗೆ ಹಾನಿಯಾಗಿದೆ. ಈ ಮಧ್ಯೆ ಕತಾರ್, ಟರ್ಕಿ ಮಧ್ಯಸ್ಥಿಕೆ ತಿರಸ್ಕರಿಸಿದ ಇರಾನ್, ಅಮೆರಿಕ ಜೊತೆ ಮಾತುಕತೆ ಅಗತ್ಯವಿಲ್ಲ. ಯಾರ

ಇಸ್ರೇಲ್‌ ಮೇಲೆ ಇರಾನ್‌ ಭೀಕರ ದಾಳಿ : ಹಲವು ಸಾವು Read More »

ವಿಚ್ಛೇದನ ಪಡೆದ ಮಗಳನ್ನು ಬ್ಯಾಂಡ್‌ ವಾದ್ಯದಲ್ಲಿ ಮನೆಗೆ ಕರೆತಂದ ತಂದೆ

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆ ವಿಡಿಯೋ ಲಖನೌ: ನಮ್ಮ ಸಮಾಜ ವಿಚ್ಛೇದನವನ್ನು ಇಂದಿಗೂ ಕಳಂಕ ಎಂಬಂತೆ ನೋಡುತ್ತದೆ. ಆದರೆ ಉತ್ತರ ಪ್ರದೇಶದ ಮೀರತ್‌ನಲ್ಲಿ ವಿಚ್ಛೇದನ ಪಡೆದ ಮಗಳನ್ನು ತಂದೆ ಬ್ಯಾಂಡ್ ವಾದ್ಯದ ಮೆರವಣಿಗೆಯಲ್ಲಿ ಕರೆದುಕೊಂಡು ಬಂದು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಪ್ರಣಿತ ಎಂಬ ಯುವತಿಗೆ ಕೋರ್ಟ್ ವಿಚ್ಛೇದನ ನೀಡಿತ್ತು. ನಿವೃತ್ತ ನ್ಯಾಯಾಧೀಶರಾದ ಅವರ ತಂದೆ ನ್ಯಾಯಾಲಯದ ಸಂಕೀರ್ಣದ ಹೊರಗೆ ಡ್ರಮ್ ನುಡಿಸಿ, ಸಿಹಿ ಹಂಚಿ ಈ ಕ್ಷಣವನ್ನು ಸಂಭ್ರಮಿಸಿದ್ದಾರೆ. ಸಂಬಂಧಿಕರು

ವಿಚ್ಛೇದನ ಪಡೆದ ಮಗಳನ್ನು ಬ್ಯಾಂಡ್‌ ವಾದ್ಯದಲ್ಲಿ ಮನೆಗೆ ಕರೆತಂದ ತಂದೆ Read More »

5 ಕೆಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ಗುರುತಿನ ಚೀಟಿ ತೋರಿಸಿದರೆ ಎಲ್ಲಿ ಬೇಕಾದರೂ ಖರೀದಿಸಬಹುದು ನವದೆಹಲಿ: ಅಮೆರಿಕ ಮತ್ತು ಇರಾನ್‌ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಎಲ್‌ಪಿಜಿ ಕೊರತೆ ಆತಂಕದಲ್ಲಿದ್ದ ಜನಕ್ಕೆ ಕೇಂದ್ರ ಸರ್ಕಾರ ಮತ್ತೆ ಅಭಯ ನೀಡಿದೆ. ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ ಎಂದಿರುವ ಕೇಂದ್ರ ಸರ್ಕಾರ ಕೊರತೆ ನೀಗಿಸಲು 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯನ್ನ ಹೆಚ್ಚಿಸಿದೆ. ಭಾರತದಲ್ಲಿ ಎಲ್‌ಪಿಜಿ ಕೊರತೆಯಿಲ್ಲ, ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. 5 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ಗಳು ಎಲ್ಲ ಏಜೆನ್ಸಿಗಳಲ್ಲೂ ಲಭ್ಯವಿದೆ. ಸೂಕ್ತ ಗುರುತಿನ ಚೀಟಿ

5 ಕೆಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ Read More »

ಹುಬ್ಬಳ್ಳಿ ಲವ್‌ ಜಿಹಾದ್‌ ಪ್ರಕರಣ : ಇನ್ನಷ್ಟು ವಿಡಿಯೋಗಳು ಬಹಿರಂಗ

ಜಿಮ್‌ ಟ್ರೈನಿಂಗ್‌ ನೆಪದಲ್ಲಿ ಹರಡಿದ ಜಿಹಾದ್‌ನ ಕಬಂಧ ಬಾಹು ಬೆಂಗಳೂರು : ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ವಿಡಿಯೋ ಬಹಿರಂಗವಾಗುತ್ತಿದೆ. ಇದೀಗ ಮತ್ತೆರಡು ವಿಡಿಯೋಗಳನ್ನು ಯುವತಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್​​​​ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಮತ್ತೊಮ್ಮೆ ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿ ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋಗಳ ಸತ್ಯಾಸತ್ಯತೆಯನ್ನು ಅವರು ಬಿಚ್ಚಿಟ್ಟಿದ್ದಾರೆ.

ಹುಬ್ಬಳ್ಳಿ ಲವ್‌ ಜಿಹಾದ್‌ ಪ್ರಕರಣ : ಇನ್ನಷ್ಟು ವಿಡಿಯೋಗಳು ಬಹಿರಂಗ Read More »

ಇರಾನ್‌ ಪರ್ವತದಲ್ಲಿ ಸಿಕ್ಕಿಬಿದ್ದಿದ್ದ ಅಮೆರಿಕದ ಪೈಲಟ್‌ ರಕ್ಷಣೆ

ಧ್ವಂಸಗೊಂಡಿದ್ದ ಎಫ್‌-15 ಈಗಲ್‌ ಸ್ಟ್ರೈಕ್‌ ಯುದ್ಧ ವಿಮಾನದ ಪೈಲಟ್‌ ಟೆಹ್ರಾನ್‌: ಇರಾನ್‌ನಲ್ಲಿ ಧ್ವಂಸಗೊಂಡಿದ್ದ ಎಫ್‌-15 ಈಗಲ್‌ ಸ್ಟ್ರೈಕ್‌ ಯುದ್ಧ ವಿಮಾನದ ಪೈಲಟ್‌ ಅನ್ನು ಶನಿವಾರ ರಾತ್ರಿ ನಡೆಸಿದ ಸಾಹಸಮಯ ಕಾರ್ಯಾಚರಣೆಯಲ್ಲಿ ಅಮೆರಿಕ ರಕ್ಷಣೆ ಮಾಡಿದೆ. ಇರಾನ್‌ ನೈರುತ್ಯ ಪ್ರಾಂತ್ಯದಲ್ಲಿ ‘ಸಾವು-ಬದುಕು’ ಮಿಷನ್‌ ಹೆಸರಿನಡಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಕಾರ್ಯಾಚರಣೆಗೆ ಇಳಿದ ಅಮೆರಿಕದ ಹತ್ತಾರು ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ಗಳು, ಸರಕು ಸಾಗಣೆ ವಿಮಾನಗಳು, ನೂರಾರು ಯೋಧರ ಮೂಲಕ ಪೈಲಟ್‌ ಅನ್ನು ರಕ್ಷಿಸಲಾಗಿದೆ. ಶನಿವಾರ ರಾತ್ರಿ ಶತ್ರು ಪ್ರದೇಶದೊಳಗೆ ನುಗ್ಗಿದ

ಇರಾನ್‌ ಪರ್ವತದಲ್ಲಿ ಸಿಕ್ಕಿಬಿದ್ದಿದ್ದ ಅಮೆರಿಕದ ಪೈಲಟ್‌ ರಕ್ಷಣೆ Read More »

error: Content is protected !!
Scroll to Top