ಸುದ್ದಿ

ಮದರಸಾಗಳಲ್ಲಿ 500ಕ್ಕೂ ಅಧಿಕ ಹಿಂದೂ ಮಕ್ಕಳ ಮತಾಂತರ ಆರೋಪ

ಸರ್ಕಾರಕ್ಕೆ ರಾಷ್ಟ್ರೀಯ ಮಾನವಾಧಿಕಾರಗಳ ಆಯೋಗದಿಂದ ನೋಟಿಸ್‌ ಭೋಪಾಲ್:‌ ಮಧ್ಯಪ್ರದೇಶದಲ್ಲಿ ಹಿಂದೂ ಮಕ್ಕಳನ್ನು ದೊಡ್ಡ ಪ್ರಮಾಣದಲ್ಲಿ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. 27 ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಧಾರ್ಮಿಕ ಮತಾಂತರ ಮಾಡಲಾಗಿದೆಯೆಂದು ದೂರು ನೀಡಲಾಗಿದೆ. ಪ್ರಕರಣ ಸಂಬಂಧ ಮಧ್ಯಪ್ರದೇಶ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗ (NHRC) ನೋಟಿಸ್ ನೀಡಿ 15 ದಿನಗಳಲ್ಲಿ ಈ ಕುರಿತು ವಿವರವಾದ ಮಾಹಿತಿ ನೀಡುವಂತೆ ಸೂಚಿಸಿದೆ. ರಾಜ್ಯದ ಹಲವಾರು ಮದರಸಾಗಳು ಮುಸ್ಲಿಮೇತರ ಮಕ್ಕಳನ್ನು ಕುರಾನ್ ಅಧ್ಯಯನ ಮಾಡಲು ಒತ್ತಾಯಿಸುತ್ತಿವೆ. ಇಸ್ಲಾಂ […]

ಮದರಸಾಗಳಲ್ಲಿ 500ಕ್ಕೂ ಅಧಿಕ ಹಿಂದೂ ಮಕ್ಕಳ ಮತಾಂತರ ಆರೋಪ Read More »

ಉಪ್ಪಿನಂಗಡಿಯ ಶ್ರೀ ಶಾರದೋತ್ಸವದಲ್ಲಿ ಶ್ರೀ ಮಹಾಭಾರತ ಸರಣಿಯ ಶತಕ ಸಂಭ್ರಮಾಚರಣೆ.

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ರಾಮನಗರ ಶಾರದೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟನ ಸ್ವರ್ಣ ಮಹೋತ್ಸವದ ಶ್ರೀ ಮಹಾಭಾರತ ಸರಣಿಯ ನೂರನೇ ಕಾರ್ಯಕ್ರಮದ ಶುಭಾಸಂಶನೆ, ಗೌರವಾರ್ಪಣೆ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಉಮೇಶ ಶೆಣೈ ರಾಮನಗರ ವಹಿಸಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರು ಮತ್ತು ಸಾಹಿತಿಗಳಾದ ಟಿ. ನಾರಾಯಣ ಭಟ್ ರಾಮಕುಂಜ ಮಾತನಾಡಿ ರಾಮಾಯಣ,ಮಹಾಭಾರತದ ಸಂದೇಶಗಳನ್ನು ಜನರು ತಿಳಿದು ಒಳ್ಳೆಯ ಸಂಸ್ಕಾರವನ್ನು ರೂಪಿಸಿಕೊಳ್ಳಲು ಹಿಂದಕ್ಕೆ ಅನುಕೂಲವಿತ್ತು. ಇಂದಿನ ಯುವ ಪೀಳಿಗೆ

ಉಪ್ಪಿನಂಗಡಿಯ ಶ್ರೀ ಶಾರದೋತ್ಸವದಲ್ಲಿ ಶ್ರೀ ಮಹಾಭಾರತ ಸರಣಿಯ ಶತಕ ಸಂಭ್ರಮಾಚರಣೆ. Read More »

ಕರ್ನಾಟಕದ ಶಕ್ತಿ ಯೋಜನೆಗೆ ಇನ್ನೊಂದು ವಿಶ್ವ ದಾಖಲೆಯ ಗರಿ

ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್ ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ಗೆ ಇಂಟರ್​​ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್ ಲಭಿಸಿದೆ. 500 ಕೋಟಿ‌ ಮಹಿಳೆಯರು ಉಚಿತವಾಗಿ ಪ್ರಯಾಣಿಸಿ ಬೆನ್ನಲ್ಲೇ ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ ಆಗಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಸೇರಿದಂತೆ ನಾಲ್ಕು ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರಿಗೆ ಸಚಿವ ರಾಮಲಿಂಗಾ ರೆಡ್ಡಿ ಧನ್ಯವಾದ

ಕರ್ನಾಟಕದ ಶಕ್ತಿ ಯೋಜನೆಗೆ ಇನ್ನೊಂದು ವಿಶ್ವ ದಾಖಲೆಯ ಗರಿ Read More »

ಫಿಲಿಫಿನ್ಸ್‌ನಲ್ಲಿ ಪ್ರಬಲ ಭೂಕಂಪ : 50ಕ್ಕೂ ಅಧಿಕ ಮಂದಿ ಸಾವು

ನಡುರಾತ್ರಿ ಸಂಭವಿಸಿದ ಭೂಕಂಪದಿಂದ ಅಲ್ಲೋಲಕಲ್ಲೋಲ ಮನಿಲಾ: ಫಿಲಿಪಿನ್ಸ್‌ ಪ್ರಾಂತ್ಯದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ 50ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಲವಾರು ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದೆ. ತೀವ್ರ ಕಂಪನದಿಂದಾಗಿ ವಿದ್ಯುತ್ ಕಡಿತಗೊಂಡು ಜನರು ಕತ್ತಲೆಯಲ್ಲೇ ಕಾಲ ಕಳೆಯುವಂತಾಗಿದೆ. ಭೂಮಿಯ ಐದು ಕಿಲೋಮೀಟರ್ ಆಳದಲ್ಲಿ ಭೂಕಂಪವಾಗಿದೆ. ಸೆಬು ಪ್ರಾಂತ್ಯದಲ್ಲಿ ಸುಮಾರು 90,000 ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ನಗರವಾದ ಬೊಗೊದಿಂದ ಸುಮಾರು 19 ಕಿಲೋಮೀಟರ್ ಈಶಾನ್ಯಕ್ಕೆ ಇದರ ಪರಿಣಾಮ ತಟ್ಟಿದೆ. ಬೊಗೊದಲ್ಲಿ ಕನಿಷ್ಠ 14

ಫಿಲಿಫಿನ್ಸ್‌ನಲ್ಲಿ ಪ್ರಬಲ ಭೂಕಂಪ : 50ಕ್ಕೂ ಅಧಿಕ ಮಂದಿ ಸಾವು Read More »

ಎಐಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ

ಎಐಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು Read More »

ವಿದ್ಯುತ್‌ ಸ್ಥಾವರದ ಕಮಾನು ಕುಸಿದು ಬಿದ್ದು 9 ಕಾರ್ಮಿಕರ ಸಾವು

ನಿರ್ಮಾಣ ಹಂತದ ಉಷ್ಣ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ದುರಂತ ಚೆನ್ನೈ : ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ಎನ್ನೋರ್‌ನಲ್ಲಿ ನಿರ್ಮಾಣ ಹಂತದ ಉಷ್ಣ ವಿದ್ಯುತ್ ಸ್ಥಾವರದ ಕಮಾನು ಕುಸಿದು ಬಿದ್ದು ಸಂಭವಿಸಿದ ದುರ್ಘಟನೆಯಲ್ಲಿ 9 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡದಲ್ಲಿ ಮೃತಪಟ್ಟ ಎಲ್ಲ ಕಾರ್ಮಿಕರು ಅಸ್ಸಾಂನವರು. ಈ ಸಂದರ್ಭ ನಿವೇಶನದಲ್ಲಿ ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಡೆಟ್ (ಬಿಎಚ್‌ಇಎಲ್)ನ ಅಧಿಕಾರಿಗಳು ಇದ್ದರು ಎಂದು ತಮಿಳುನಾಡು ಜನರೇಷನ್ ಆ್ಯಂಡ್ ಡಿಸ್ಟ್ರಿಬ್ಯುಷನ್ ಕಾರ್ಪೊರೇಷನ್(ಟಿಎಎನ್‌ಜಿಇಡಿಸಿಒ)ನ ಅಧ್ಯಕ್ಷ ಡಾ. ಜೆ. ರಾಧಾಕೃಷ್ಣನ್ ಹೇಳಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು

ವಿದ್ಯುತ್‌ ಸ್ಥಾವರದ ಕಮಾನು ಕುಸಿದು ಬಿದ್ದು 9 ಕಾರ್ಮಿಕರ ಸಾವು Read More »

ಬಂಟ್ವಾಳ : 15 ವರ್ಷದ ಹಿಂದೆ ಮನೆ ಬಿಟ್ಟು ಹೋದ ಮಗನ ಚಿಂತೆಯಲ್ಲಿ ಮಹಿಳೆ ಅತ್ಮಹತ್ಯೆ

ಬಂಟ್ವಾಳ : ಅನಾರೋಗ್ಯದ ಸಮಸ್ಯೆ ಹಾಗೂ ಮಗನ ಚಿಂತೆಯಿದ್ದ ಬಳಲುತ್ತಿದ್ದ ಮಹಿಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ. ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಉಮಾವತಿ (68) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 15 ವರ್ಷಗಳ ಹಿಂದೆ ಉಮಾವತಿಯವರ ಮಗ ಮನೆ ಬಿಟ್ಟು ಹೋಗಿ ಕಾಣೆಯಾಗಿದ್ದಾರೆ. ಅದೇ ಚಿಂತೆಯಲ್ಲಿದ್ದವರಿಗೆ ಮಗನ ಚಿಂತೆಯಿಂದ ರಕ್ತದ ಒತ್ತಡ ಕಾಯಿಲೆಯಿಂದ ಬಳಲುತ್ತಿದ್ದರು. ಹಾಗಾಗಿ ಮಾನಸಿಕವಾಗಿ ನೊಂದುಕೊಂಡು ಜೀವನದಲ್ಲಿ ಜಿಗುಪ್ಪೆ ಹೊಂದಿದ್ದ ಇವರು

ಬಂಟ್ವಾಳ : 15 ವರ್ಷದ ಹಿಂದೆ ಮನೆ ಬಿಟ್ಟು ಹೋದ ಮಗನ ಚಿಂತೆಯಲ್ಲಿ ಮಹಿಳೆ ಅತ್ಮಹತ್ಯೆ Read More »

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರ ಮುಕ್ತಾಯ : ಪರಮೇಶ್ವರ್‌

ಶೀಘ್ರದಲ್ಲೇ ವರದಿ ಕೊಡಲು ಎಸ್‌ಐಟಿಗೆ ಸೂಚನೆ ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ಆದಷ್ಟು ಬೇಗ ಮುಕ್ತಾಯವಾಗಲಿದ್ದು, ಇಡೀ ತನಿಖೆಯನ್ನು ಆದಷ್ಟು ಬೇಗ ಮುಗಿಸಬೇಕು ಎಂದು ಎಸ್‌ಐಟಿಗೆ ತಿಳಿಸಿದ್ದೇವೆ ಎಂಬುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಆದಷ್ಟು ಶೀಘ್ರದಲ್ಲಿ ಎಸ್‌ಐಟಿಯಿಂದ ತನಿಖಾ ವರದಿ ಪಡೆಯಲು ಸರ್ಕಾರ ನಿರ್ಧರಿಸಿದೆ. ಎಫ್‌ಎಸ್‌ಎಲ್ ವರದಿ ಇನ್ನೂ ಬಂದಿಲ್ಲ. ಇತ್ತೀಚಿನ ಸಾಕ್ಷ್ಯಗಳನ್ನು ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ. ಎಲ್ಲವನ್ನೂ ಅಂತಿಮಗೊಳಿಸಿ ವರದಿ ಕೊಡಲು ಎಸ್‌ಐಟಿಗೆ ಹೇಳಿದ್ದೇವೆ. ಆದಷ್ಟು ಶೀಘ್ರದಲ್ಲಿ ಇಡೀ ತನಿಖೆಯನ್ನು ಮುಗಿಸಬೇಕು ಅಂತ

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರ ಮುಕ್ತಾಯ : ಪರಮೇಶ್ವರ್‌ Read More »

ನಾಳೆ ಕಟ್ಟತ್ತಾರಿನಲ್ಲಿ “Future First 2025”

ಪುತ್ತೂರು : ಸಮಸ್ತ ಗಲ್ಫ್ ಬ್ರದರ್ಸ್ ಸಂಸ್ಥೆಯ ವತಿಯಿಂದ “ಫ್ಯೂಚರ್ ಪಸ್ಟ್ 2025” ಪ್ರತಿಯೊಂದು ಮನೆಯಲ್ಲೂ ವೃತ್ತಿಪರರು ಎಂಬ ಧ್ಯೇಯದಡಿ ಅಕ್ಟೋಬರ್ ಒಂದರಂದು ಕಟ್ಟತ್ತಾರ್ ನಲ್ಲಿ ನಡೆಯಲಿದೆ ಕಳೆದ ಆರು ವರ್ಷಗಳಿಂದ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡು ಹಲವಾರು ಜನರ ಜೀವನದಲ್ಲಿ ಬೆಳಕು ತಂದಿದೆ. ಈಗ ಹೊಸ ಶೈಕ್ಷಣಿಕ ಯಾತ್ರೆಗೆ ಕಾಲಿಟ್ಟಿದ್ದಾರೆ—Future First 2025, ಒಂದು ದೀರ್ಘಕಾಲಿಕ ಯೋಜನೆ, ಪ್ರತಿಯೊಂದು ಮನೆಯಲ್ಲೂ ವೃತ್ತಿಪರರನ್ನು ರೂಪಿಸುವ ಮಹತ್ವಾಕಾಂಕ್ಷೆಮನ್ನು ಸಮಸ್ತ ಗಲ್ಫ್ ಬ್ರದರ್ಸ್ ಸಂಸ್ಥೆಯು ಹೊಂದಿದೆ. ಇಂದಿನ ಪರಿಸ್ಥಿತಿಯಲ್ಲಿ ಹಲವರು 8ನೇ,

ನಾಳೆ ಕಟ್ಟತ್ತಾರಿನಲ್ಲಿ “Future First 2025” Read More »

ಇಂಟರ್ ಲಾಕ್ ಫ್ಯಾಕ್ಟರಿಯ ಸಿಸಿ ಕ್ಯಾಮರಾಗಳಿಗೆ ಹಾನಿ

ವಿಟ್ಲ: ಅಪ್ರಾಪ್ತ ಬಾಲಕರಿಬ್ಬರು ಖಾಸಗಿ ಸ್ಥಳದಲ್ಲಿದ್ದ ಇಂಟರ್ ಲಾಕ್ ಘಟಕದಲ್ಲಿರುವ ಸಿಸಿ ಕ್ಯಾಮರಾಗಳಿಗೆ ಹಾನಿ ಮಾಡಿ, ದೇವರ ಫೋಟೋ ಮತ್ತು ಡಿವಿಆರ್ ಅನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಪುಣಚದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಘಟನೆಯಲ್ಲಿ ಭಾಗಿಯಾದ ಇಬ್ಬರು ಅಪ್ರಾಪ್ತರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಪುಣಚ ಗ್ರಾಮದ ಪಾಲಸ್ತಡ್ಕ ನಿವಾಸಿ ಆನಂದ ಗೌಡ ಅವರ ಪತ್ನಿಯ ಹೆಸರಿನಲ್ಲಿರುವ ಇಂಡೆಸ್ಟ್ರೀಸ್ ಇಂಟರ್ ಲಾಕ್ ಘಟಕದಲ್ಲಿ ಸಿಸಿ ಕ್ಯಾಮರವನ್ನು ಅಳವಡಿಸಲಾಗಿತ್ತು. ಸಂಜೆ 6

ಇಂಟರ್ ಲಾಕ್ ಫ್ಯಾಕ್ಟರಿಯ ಸಿಸಿ ಕ್ಯಾಮರಾಗಳಿಗೆ ಹಾನಿ Read More »

error: Content is protected !!
Scroll to Top