ಸುದ್ದಿ

ಹಿಂದು ಮುಖಂಡರ ಹತ್ಯೆಗೆ ಮುಜಾಹಿದಿನ್‌ ಆರ್ಮಿ ರಚಿಸಿದ ನಾಲ್ವರ ಬಂಧನ

ಆನ್‌ಲೈನ್‌ ಗ್ರೂಪ್‌ಗಳ ಮೂಲಕ ರಹಸ್ಯ ಸಂದೇಶಗಳ ರವಾನೆ ಲಖನೌ: ಹಿಂದೂ ಧಾರ್ಮಿಕ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಮುಜಾಹಿದ್ದೀನ್ ಆರ್ಮಿ ಎಂಬ ಮೂಲಭೂತವಾದಿ ಸಂಘಟನೆಯನ್ನು ರಚಿಸಲು ಯತ್ನಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ನಾಲ್ವರು ವ್ಯಕ್ತಿಗಳನ್ನು ಬಂಧಿಸಿದೆ. ಈ ಗುಂಪು ಹಿಂಸಾತ್ಮಕ ಚಟುವಟಿಕೆಗಳಿಗೆ ತಯಾರಿ ನಡೆಸುತ್ತಿದ್ದು, ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ನೇಮಕ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳ ಕೆಲವು ವ್ಯಕ್ತಿಗಳು ಉಗ್ರಗಾಮಿ […]

ಹಿಂದು ಮುಖಂಡರ ಹತ್ಯೆಗೆ ಮುಜಾಹಿದಿನ್‌ ಆರ್ಮಿ ರಚಿಸಿದ ನಾಲ್ವರ ಬಂಧನ Read More »

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರಿನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು, ಇದರ 2025-26 ಮತ್ತು 2026-27ನೇ ಸಾಲಿನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ 28 ರಂದು ಸಮಾಜದ ಆಡಳಿತ ಮಂಡಳಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀ ಪಳಂಗಪ್ಪ ಪಾಣತ್ತಲೆಯವರು, ಉಪಾಧ್ಯಕ್ಷರಾಗಿ ಶ್ರೀ ನಾಗೇಶ್ ಕುಮಾರ್ ಕಲ್ಲುಮುಟ್ಲುರವರು, ಗೌರವ ಕಾರ್ಯದರ್ಶಿಗಳಾಗಿ ಶ್ರೀ ಸೋಮಣ್ಣ ಕುಂಭಗೌಡನ ರವರು, ಕೋಶಾಧಿಕಾರಿಗಳಾಗಿ ಶ್ರೀ ರಾಧಾಕೃಷ್ಣ ಗುತ್ತಿಗಾರುಮೂಲೆಯವರು, ಜಂಟಿ ಕಾರ್ಯದರ್ಶಿಗಳಾಗಿ ಶ್ರೀ ನಾಗೇಶ್ ಉಳುವಾರು ಬಂಟೋಡಿರವರು ಹಾಗೂ ಶ್ರೀಮತಿ ನೇಹ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರಿನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ Read More »

ದೇವಾಲಯಗಳ ಪ್ರಸಾದ, ಪೂಜೆ ಹೆಸರಿನಲ್ಲಿ ವಂಚನೆ : ಇಬ್ಬರ ಬಂಧನ

ನಕಲಿ ವೆಬ್‌ಸೈಟ್‌ ಮೂಲಕ ಪ್ರಸಿದ್ಧ ದೇವಸ್ಥಾನಗಳ ಹೆಸರಿನಲ್ಲಿ ಮೋಸ ಬೆಂಗಳೂರು: ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಕರ್ನಾಟಕದ ಪ್ರಮುಖ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಗೆ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಪೂಜೆಯ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ತೆಲಂಗಾಣ ಮೂಲದ ಸುದೀಪ್ ಹಾಗೂ ಅನಿಲ್ ಕುಮಾರ್ ಎಂಬವರನ್ನು ಚಿಕ್ಕಮಗಳೂರು

ದೇವಾಲಯಗಳ ಪ್ರಸಾದ, ಪೂಜೆ ಹೆಸರಿನಲ್ಲಿ ವಂಚನೆ : ಇಬ್ಬರ ಬಂಧನ Read More »

ಲಂಡನ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ

ಗಾಂಧಿ ಜಯಂತಿಗೆ ಎರಡು ದಿನ ಮೊದಲು ನಡೆದ ಕೃತ್ಯಕ್ಕೆ ಭಾರತ ಖಂಡನೆ ಲಂಡನ್ : ಗಾಂಧಿ ಜಯಂತಿಗೆ ಕೇವಲ ಎರಡು ದಿನಗಳ ಮೊದಲು ಲಂಡನ್ ವಿಶ್ವವಿದ್ಯಾಲಯದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಭಾರತದ ಹೈಕಮಿಷನ್ ಈ ಘಟನೆಯನ್ನು ಬಲವಾಗಿ ಖಂಡಿಸಿದ್ದು, ಇದನ್ನು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕರೆದಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಧ್ಯಾನಸ್ಥ ಭಂಗಿಯಲ್ಲಿ

ಲಂಡನ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ Read More »

ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪ ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಶಾಸಕ ರಾಜೇಗೌಡ, ಪತ್ನಿ‌ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಟಿ.ಡಿ.ರಾಜೇಗೌಡ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಆಸ್ತಿ

ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ Read More »

ಸರ್ಕಾರಕ್ಕೆ 80 ಪರ್ಸೆಂಟ್‌ ಕಮಿಷನ್‌ ಕಂಟಕ : ಗುತ್ತಿಗೆದಾರರ ಸಂಘದ ಪತ್ರದಿಂದ ಮುಜುಗರ

33 ಸಾವಿರ ಕೋಟಿ ಬಿಲ್‌ ಬಾಕಿ; ನಿಷ್ಪ್ರಯೋಜಕ ಸರ್ಕಾರ ಎಂದು ಹೇಳಿದ ಸಂಘ ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದರ ದುಪ್ಪಟ್ಟು ಆಗಿದ್ದು, ಬಾಕಿ ಬಿಲ್ ಪಾವತಿಯಾಗಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘ ಆರೋಪಿಸಿ ಬರೆದಿರುವ ಪತ್ರ ಭಾರಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ಜೆಡಿಎಸ್‌ ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ಮುಗಿಬಿದ್ದಿದೆ. ಹಿಂದೆ ಬಿಜೆಪಿ ಸರ್ಕಾರದ ಮೇಲೆ ಶೇ.40 ಕಮಿಷನ್‌ ಸುಳ್ಳು ಆರೋಪ ಹೊರಿಸಿದವರೇ ಇಂದು ನಿರ್ಲಜ್ಜವಾಗಿ ಶೇ.80 ಕಮಿಷನ್‌ ಕಬಳಿಸುತ್ತಿದ್ದಾರೆ ಎಂದು

ಸರ್ಕಾರಕ್ಕೆ 80 ಪರ್ಸೆಂಟ್‌ ಕಮಿಷನ್‌ ಕಂಟಕ : ಗುತ್ತಿಗೆದಾರರ ಸಂಘದ ಪತ್ರದಿಂದ ಮುಜುಗರ Read More »

ನೇರ ನೇಮಕಾತಿ ಉದ್ಯೋಗಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಯುವ ಜನತೆಗೆ ರಾಜ್ಯ ಸರ್ಕಾರದಿಂದ ದಸರಾ ಗಿಫ್ಟ್‌ ಬೆಂಗಳೂರು: ಸಿವಿಲ್ ನೇರ ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಮಹತ್ವದ ಆದೇಶ ಹೊರಡಿಸುವ ಮೂಲಕ ಸರ್ಕಾರಿ ಉದ್ಯೋಗಾಕಾಂಕ್ಷಿ ಯುವಕರಿಗೆ ಸರ್ಕಾರ ದಸರಾ ಗಿಫ್ಟ್ ನೀಡಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಧಾರವಾಡದಲ್ಲಿ ಯುವ ಸಮೂಹ 5 ವರ್ಷಗಳ ವಯೋಮಿತಿ ಸಡಿಲಿಕೆ ಹಾಗೂ ಪಿಎಸ್‌ಐ/ಕಾನ್‌ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ ಆದೇಶಕ್ಕೆ

ನೇರ ನೇಮಕಾತಿ ಉದ್ಯೋಗಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ Read More »

ಬೆಂಕಿ ಅವಘಡ : ಲಕ್ಷಾಂತರ ರೂ. ಬೆಲೆಬಾಳುವ ಬಟ್ಟೆಬರೆ ನಾಶ

ಮಂಗಳೂರು: ನಗರದ ಹಂಪನಕಟ್ಟೆಯ ಟೋಕಿಯೊ ಮಾರ್ಕೆಟ್ ಬಳಿಯ ಬಟ್ಟೆ ಅಂಗಡಿಯೊಂದರಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಬಟ್ಟೆಬರೆಗಳು ಅಗ್ನಿಗೆ ಆಹುತಿಯಾಗಿವೆ. ಕಟ್ಟಡವೊಂದರ ಮೇಲಿನ ಮಹಡಿಯಲ್ಲಿನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿಯನ್ನು ನಂದಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿ ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ.

ಬೆಂಕಿ ಅವಘಡ : ಲಕ್ಷಾಂತರ ರೂ. ಬೆಲೆಬಾಳುವ ಬಟ್ಟೆಬರೆ ನಾಶ Read More »

ಅಪ್ರಾಪ್ತ ವಯಸ್ಸಿನ ಬಾಲಕನೇ ಚಿನ್ನದ ಗಟ್ಟಿ ದರೋಡೆಯ ಸೂತ್ರಧಾರ

ಮಂಗಳೂರಿನಲ್ಲಿ ನಡೆದ ದರೋಡೆ ಕೃತ್ಯ ಭೇದಿಸಿದ ಪೊಲೀಸರು, 5 ಮಂದಿ ಸೆರೆ ಮಂಗಳೂರು : ಹಂಪನಕಟ್ಟೆಯ ಚಿನ್ನದ ಅಂಗಡಿಯೊಂದರ ಕೆಲಸಗಾರ ಮುಸ್ತಾಫ ಎಂಬವವರನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1,650 ಗ್ರಾಂ ಚಿನ್ನದ ಗಟ್ಟಿ ದರೋಡೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿ ಐವರು ಆರೋಪಿಗಳನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಈ ಬಾಲಕನೇ ಇಡೀ ದರೋಡೆ ಕೃತ್ಯದ ಸೂತ್ರಧಾರಿ ಎಂಬ ಆಘಾತಕಾರಿ ವಿಚಾರ ತನಿಖೆಯಿಂದ ತಿಳಿದುಬಂದಿದೆ. ಉಳ್ಳಾಲದ ಕೋಟೆಕಾರು ಕೆ.ಸಿ.ರೋಡ್ ನಿವಾಸಿ ಫಾರಿಶ್(18),

ಅಪ್ರಾಪ್ತ ವಯಸ್ಸಿನ ಬಾಲಕನೇ ಚಿನ್ನದ ಗಟ್ಟಿ ದರೋಡೆಯ ಸೂತ್ರಧಾರ Read More »

ಧರ್ಮಸ್ಥಳಕ್ಕೆ ಭಕ್ತರು ಬರುವುದನ್ನು ತಡೆಯಲು ಸಂಚು ರೂಪಿಸಲಾಗಿತ್ತು : ಡಾ.ವೀರೇಂದ್ರ ಹೆಗ್ಗಡೆ

ಎಸ್‌ಐಟಿ ರಚನೆಯಿಂದ ಸತ್ಯ ಹೊರಬಂತು ಎಂದ ಧರ್ಮಾಧಿಕಾರಿ ಮಂಗಳೂರು: ಧರ್ಮಸ್ಥಳಕ್ಕೆ ಭಕ್ತರು ಭೇಟಿ ನೀಡುವುದನ್ನು ತಡೆಯುವ ಸಂಚುಕೋರರ ಉದ್ದೇಶ ಎಸ್ಐಟಿಯಿಂದ ಬಹಿರಂಗವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭಾನುವಾರ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಚಂಡಿಕಾ ಹೋಮ ನಡೆದ ನಂತರ ಬೆಳ್ತಂಗಡಿ ತಾಲ್ಲೂಕಿನ 81 ಗ್ರಾಮಸ್ಥರು ಆಯೋಜಿಸಿದ್ದ ಸತ್ಯ ದರ್ಶನ ಸಮಾವೇಶದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಸ್‌ಐಟಿ ರಚಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಎಸ್ಐಟಿ ರಚನೆಯಾಗಿರದಿದ್ದರೆ, ಸತ್ಯ ಹೊರಬರುತ್ತಿರಲಿಲ್ಲ. ಮೊದಲ ದಿನವೇ ಎಸ್‌ಐಟಿ

ಧರ್ಮಸ್ಥಳಕ್ಕೆ ಭಕ್ತರು ಬರುವುದನ್ನು ತಡೆಯಲು ಸಂಚು ರೂಪಿಸಲಾಗಿತ್ತು : ಡಾ.ವೀರೇಂದ್ರ ಹೆಗ್ಗಡೆ Read More »

error: Content is protected !!
Scroll to Top