ಸುದ್ದಿ

ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಯುವಕರು ಸಾವು

ಡಿವೈಡರ್‌ ಹಾರಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಕಾರು ಬೆಂಗಳೂರು: ನೆಲಮಂಗಲದ ನವಯುಗ ಟೋಲ್ ಸಮೀಪದ ಫ್ಲೈಓವರ್ ಬಳಿ ಡಿವೈಡರ್‌ಗೆ ಹಾರಿ ಕೆಎಸ್‌ಆರ್‌ಟಿಸಿ ಬಸ್‌ಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಯುವಕರು ಮೃತಪಟ್ಟಿದ್ದಾರೆ. ನಡುರಾತ್ರಿ 12 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಬಸ್ ಡ್ರೈವರ್, ಕಂಡೆಕ್ಟರ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರನ್ನು ದೊಡ್ಡಬಳ್ಳಾಪುರದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಎಂದು ಗುರುತಿಸಲಾಗಿದೆ. ತುಮಕೂರು […]

ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಯುವಕರು ಸಾವು Read More »

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೆೊಂಡ ಹತ್ತು ತಿಂಗಳ ಮಗುವಿನ ಅಂಗಾಂಗ ದಾನ ಮಾಡಿದ ಪೋಷಕರು

ತಿರುವನಂತಪುರಂ: ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ 10 ತಿಂಗಳ ಮಗು ಅಲಿನ್‌ ಮೃತಪಟ್ಟಿದ್ದು, ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಗುವಿನ ಪೋಷಕರು 5 ಜೀವಗಳನ್ನು ಉಳಿಸುವ ಮಹತ್ಕಾರ್ಯವನ್ನು ‌ತಮ್ಮ ನೋವಿನಲ್ಲೂ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಅಲಿನ್ ಪೋಷಕರಾದ ಅರುಣ್ ಮತ್ತು ಶೆರಿನ್ ತಮ್ಮ ಮೃತ ಪುತ್ರಿಯ ಅಂಗಾಂಗಗಳನ್ನು ಕೇರಳದ ವಿವಿಧ ಆಸ್ಪತ್ರೆಗಳಿಗೆ ದಾನ ಮಾಡಿದ್ದು, ಆ ಮೂಲಕ ಐದು ಜೀವಗಳನ್ನು ಉಳಿಸುವ ಮೂಲಕ ಅಲಿನ್‌ನ ನೆನಪುಗಳನ್ನು ಜೀವಂತವಾಗಿರಿಸಿಕೊಂಡಿದ್ದಾರೆ. ಆ ಮೂಲಕ ಅಲಿನ್ ಅತ್ಯಂತ ಕಿರಿಯ

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೆೊಂಡ ಹತ್ತು ತಿಂಗಳ ಮಗುವಿನ ಅಂಗಾಂಗ ದಾನ ಮಾಡಿದ ಪೋಷಕರು Read More »

ಕರ್ನಾಟಕದ ವಿದ್ಯಾರ್ಥಿ ಅಮೆರಿಕದಲ್ಲಿ ನಾಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಿಗೂಢವಾಗಿ ನಾಪತ್ತೆಯಾಗಿರುವ ಸಾಕೇತ್ ಶ್ರೀನಿವಾಸಯ್ಯ ನವದೆಹಲಿ: ಕರ್ನಾಟಕ ಮೂಲದ ವಿದ್ಯಾರ್ಥಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದು, ಕಾಣೆಯಾಗಿರುವ ಬಗ್ಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ದೂತಾವಾಸ ಕಚೇರಿ ಆತಂಕ ವ್ಯಕ್ತಪಡಿಸಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೆಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಫೆ.10ರಂದು ಕ್ಯಾಲಿಫೋರ್ನಿಯಾದ ಬರ್ಕ್ಲೆ ನಗರದ ಡ್ವೈಟ್ ವೇ

ಕರ್ನಾಟಕದ ವಿದ್ಯಾರ್ಥಿ ಅಮೆರಿಕದಲ್ಲಿ ನಾಪತ್ತೆ Read More »

ಫೆ. 15: ಬೆಂಗಳೂರಿನ ಶಿಶುಗೃಹ ಪೂರ್ಣಪ್ರಜ್ಞಾ ಸಾರ್ವಜನಿಕ ಆಟದ ಮೈದಾನದಲ್ಲಿ ಶಿವರಾತ್ರಿ ಮಹೋತ್ಸವ

ಬೆಂಗಳೂರು: ಮಹಾ ಶಿವರಾತ್ರಿಯ ಪ್ರಯುಕ್ತ ಫೆ. 15 ರಂದು ಬೆಂಗಳೂರಿನ ಶಿಶುಗೃಹ ಪೂರ್ಣಪ್ರಜ್ಞಾ ಸಾರ್ವಜನಿಕ ಆಟದ ಮೈದಾನ, H.A.L. ಮೂರನೇ ಹಂತ, ಹೊಸ ತಿಪ್ಪೆಸಂದ್ರದಲ್ಲಿ ಭಾನುವಾರ ಬೆಳಗ್ಗಿನಿಂದ ಸೋಮವಾರ ಬೆಳಗ್ಗಿನ ವರೆಗೆ 6 ನೇ ಮಹಾಶಿವರಾತ್ರಿ ಮಹೋತ್ಸವ ನಡೆಯಲಿದೆ. ಫೆ. 14 ರಂದು 10.30 ಕ್ಕೆ ಉತ್ಸವ ಸ್ಥಳಕ್ಕೆ ಶಿವಲಿಂಗವನ್ನು ಮೆರವಣಿಗೆ ಮೂಲಕ ತರಲಾಗುತ್ತದೆ. ಫೆ. 15 ರ ಶಿವರಾತ್ರಿಯಂದು ಬೆಳಗ್ಗೆ 8 ಗಂಟೆಗೆ ದೇವತಾ ಪ್ರಾರ್ಥನೆ ಗುರುಗಣಪತಿ ಪೂಜೆ, ಪುಣ್ಯಾಹ ವಾಚನ, ಮಹಾಸಂಕಲ್ಪ, ಮಹತೋಭಾರ ಶ್ರೀ

ಫೆ. 15: ಬೆಂಗಳೂರಿನ ಶಿಶುಗೃಹ ಪೂರ್ಣಪ್ರಜ್ಞಾ ಸಾರ್ವಜನಿಕ ಆಟದ ಮೈದಾನದಲ್ಲಿ ಶಿವರಾತ್ರಿ ಮಹೋತ್ಸವ Read More »

ಬೆಳ್ತಂಗಡಿ : ಗ್ಯಾಸ್‌ ಸೋರಿಕೆಯಾಗಿ ಅಂಗಡಿ ಬೆಂಕಿಗಾಹುತಿ

ಬಲೂನ್‌ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆ ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿಹತ್ತಿಕೊಂಡು ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್‌ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್‌ನಲ್ಲಿ ಇಬ್ಬರು ಕೆಲಸದವರು ಫೆ.14ರಂದು ಬೆಳಗ್ಗೆ 7.30ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್‌ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಬೆಳ್ತಂಗಡಿ : ಗ್ಯಾಸ್‌ ಸೋರಿಕೆಯಾಗಿ ಅಂಗಡಿ ಬೆಂಕಿಗಾಹುತಿ Read More »

ಸುಳ್ಯ : ಜನವಸತಿಯಿಲ್ಲದ ಮನೆಯ ಶೌಚಾಲಯದಲ್ಲಿ ಯುವಕನ ಶವಪತ್ತೆ

ಮದ್ಯದ ಅಮಲಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿ ಓಡಿಹೋಗಿದ್ದ ಯುವಕ ಸುಳ್ಯ: ಮನೆಗೆ ಬೆಂಕಿಹಚ್ಚಿ ಓಡಿಹೋಗಿದ್ದ ಯುವಕನ ಮೃತದೇಹ ಜನವಸತಿಯಿಲ್ಲದ ಮನೆಯ ಶೌಚಾಲಯದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುಳ್ಯದ ಗುತ್ತಿಗಾರು ಗ್ರಾಮದ ಅಡ್ಡನಪಾರೆಯಲ್ಲಿ ಗುರುವಾರ ಸಂಭವಿಸಿದೆ. ಅಡ್ಡನಪಾರೆ ಗೋಪಾಲ ನಾಯ್ಕ ಎಂಬವರ ಪುತ್ರ ಮಹಾಬಲ ನಾಯ್ಕ (27) ಮೃತಪಟ್ಟಿರುವ ಯುವಕ. ಮಹಾಬಲ ಕಳೆದ ಫೆ.4ರಂದು ಮದ್ಯದ ಅಮಲಿನಲ್ಲಿ ಬಂದು ತನ್ನ ಮನೆಗೇ ಬೆಂಕಿಹಚ್ಚಿ ಅಲ್ಲಿಂದ ಓಡಿಹೋಗಿದ್ದ. ಮನೆಗೆ ಬೆಂಕಿಹಚ್ಚಿದ ಕುರಿತು ಗೋಪಾಲ ನಾಯ್ಕ ಮಗನ ವಿರುದ್ಧ

ಸುಳ್ಯ : ಜನವಸತಿಯಿಲ್ಲದ ಮನೆಯ ಶೌಚಾಲಯದಲ್ಲಿ ಯುವಕನ ಶವಪತ್ತೆ Read More »

ಕಾಂಗ್ರೆಸ್‌ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ

ಕಚ್ಚಾಟ, ವಿವಾದ, ಸಂಘರ್ಷದ ಸುಳಿಯಲ್ಲೇ ಕಳೆದು ಹೋದ ಸಾವಿರ ದಿನಗಳು ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆಯಲ್ಲಿದೆ. 2023ರಲ್ಲಿ ಗ್ಯಾರಂಟಿ ಬಲದಿಂದ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದ ಸರ್ಕಾರ ಆರಂಭದ ದಿನದಿಂದಲೂ ಸಂಘರ್ಷದಲ್ಲೇ ಕಳೆದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ಮೊದಲ ದಿನದಿಂದ ಶುರುವಾದ ಕುರ್ಚಿ ಕಿತ್ತಾಟ ಈಗಲೂ ಮುಂದುವರಿದಿದೆ ಮಾತ್ರವಲ್ಲದೆ ಸಾವಿರ ದಿನ ಪೂರೈಸುವ ಸಂದರ್ಭದಲ್ಲೇ ತಾರಕ್ಕೇರಿರುವುದು ಗಮನಾರ್ಹ. ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವಲ್ಲಿ ಕೆಪಿಸಿಸಿ ಅಧ್ಯಕ್ಷನಾಗಿ ತನ್ನ ಪಾತ್ರವೇ

ಕಾಂಗ್ರೆಸ್‌ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ Read More »

ಸರಕಿನಂತೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಪ್ರಕರಣ : ಚಾಲಕರ ವಿರುದ್ಧ ಕೇಸ್‌ ದಾಖಲು

ಬಳೆಂಜ ಶಾಲೆಯ ಮಕ್ಕಳನ್ನು ಟಿಪ್ಪರ್‌, ಪಿಕಪ್‌ನಲ್ಲಿ ಪ್ರವಾಸಕ್ಕೆ ಕರೆದೊಯ್ದಿದ್ದ ಶಿಕ್ಷಕರು ಬೆಳ್ತಂಗಡಿ: ಟಿಪ್ಪರ್‌ನಲ್ಲಿ ಶಾಲಾ ಮಕ್ಕಳನ್ನು ಸರಕು ಸಾಗಿಸುವ ವಾಹನಗಳಲ್ಲಿ ಅಧ್ಯಯನ ಪ್ರವಾಸಕ್ಕೆ ಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಿದ ಬಳಿಕ ಇದೀಗ ಟಿಪ್ಪರ್ ಹಾಗೂ ಪಿಕಪ್ ವಾಹನ ಚಾಲಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಳೆದ ಗುರುವಾರ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ಜೇನು ಕೃಷಿ ಅಧ್ಯಯನ ಪ್ರವಾಸಕ್ಕೆ ಶಾಲಾ ಮಕ್ಕಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್‌ನಲ್ಲಿ ಅಪಾಯಕಾರಿ ರೀತಿ ಕರೆದೊಯ್ಯಲಾಗಿತ್ತು. ಬಳೆಂಜ ಗ್ರಾಮದ ಹಿರಿಯ

ಸರಕಿನಂತೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಪ್ರಕರಣ : ಚಾಲಕರ ವಿರುದ್ಧ ಕೇಸ್‌ ದಾಖಲು Read More »

ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

ಕ್ರಿಕೆಟ್‌ ಅಭಿಮಾನಿಗಳ ಉತ್ಸಾಹಕ್ಕೆ ತಣ್ಣೀರು ಎರಚಿದ ಮುನ್ಸೂಚನೆ ಕೊಲಂಬೊ: ಹಲವು ಅಡ್ಡಿಗಳ ಬಳಿಕ ಕೊನೆಗೂ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಆಡಲು ಪಾಕಿಸ್ತಾನ ಒಪ್ಪಿಕೊಂಡಿದೆ. ಭಾನುವಾರ ಶ್ರೀಲಂಕಾದಲ್ಲಿ ನಡೆಯಲಿರುವ ಈ ಹೈ ವೋಲ್ಟೇಜ್‌ ಪಂದ್ಯವನ್ನು ನೋಡಲು ಕ್ರಿಕೆಟ್‌ ಅಭಿಮಾನಗಳು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಿರುವಾಗ ಅವರ ಕುತೂಹಲಕ್ಕೆ ತಣ್ಣೀರು ಎರಚುವ ಸುದ್ದಿಯ್ನು ಹವಾಮಾನ ಇಲಾಖೆ ನೀಡಿದೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಭಾನುವಾರ ನಡೆಯುವ ರಣರೋಚಕ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ Read More »

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆ ವಿವಾದ : ಸಿಎಂ ಸ್ಪಷ್ಟನೆ

ಡಿಎಚ್‌ಒವನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಿದ ಪತ್ರದಿಂದ ಭಾರಿ ವಿವಾದ ಬೆಂಗಳೂರು : ಆರೋಗ್ಯ ಇಲಾಖೆ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೊಳಗಾಗಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆ ವಿವಾದ : ಸಿಎಂ ಸ್ಪಷ್ಟನೆ Read More »

error: Content is protected !!
Scroll to Top