ಸುದ್ದಿ

ಗೂಡ್ಸ್‌ ರೈಲುಗಳ ಡಿಕ್ಕಿ : ಮೂವರು ಸಾವು

ಗುದ್ದಿದ ಬೆನ್ನಿಗೆ ಬೆಂಕಿ ಹತ್ತಿಕೊಂಡು ಇಂಜಿನ್‌ ಸುಟ್ಟು ಕರಕಲು ರಾಂಚಿ: ಜಾರ್ಖಂಡ್‌ನ ಸಾಹಿಬ್‌ಗಂಜ್‌ನಲ್ಲಿ ಎರಡು ಗೂಡ್ಸ್‌ ರೈಲುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ರೈಲುಗಳ ಇಂಜಿನ್‌ಗೆ ಬೆಂಕಿಹತ್ತಿಕೊಂಡು ಹೊತ್ತಿ ಉರಿದು ಇಬ್ಬರು ಲೋಕೊಪೈಲಟ್‌ ಸೇರಿದಂತೆ ಮೂವರು ಸಿಬ್ಬಂದಿ ಸಾವಿಗೀಡಾಗಿದ್ದಾರೆ. ಅಪಘಾತದ ಬಿರುಸಿಗೆ ರೈಲುಗಳ ಇಂಜಿನ್‌ಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರ ಸಾವಾಗಿದೆ. ಅವಘಡದಲ್ಲಿ ಮೂವರು ಸಿಐಎಸ್‌ಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಫರಕ್ಕಾದಿಂದ ಲಾಲ್ಮಾಟಿಯಾಗೆ ಹೋಗುತ್ತಿದ್ದ ಗೂಡ್ಸ್ ರೈಲು ಬರ್ಹೆತ್‌ನಲ್ಲಿ ನಿಂತಿದ್ದ ಇನ್ನೊಂದು […]

ಗೂಡ್ಸ್‌ ರೈಲುಗಳ ಡಿಕ್ಕಿ : ಮೂವರು ಸಾವು Read More »

ಯಕ್ಷ ಭಾರತಿಯಿಂದ ಮಧೂರಿನಲ್ಲಿ  ದೇವದರ್ಶನ ತಾಳಮದ್ದಳೆ

ಮಧೂರು : ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಮಧೂರು ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವಾಗಿ  ಯಕ್ಷ ಭಾರತಿ ರಿ. ಬೆಳ್ತಂಗಡಿ ತಂಡದಿಂದ ಮದವೂರ ವಿಘ್ನೇಶ  ವೇದಿಕೆಯಲ್ಲಿ ದೇವ ದರ್ಶನ ತಾಳಮದ್ದಳೆ ಜರಗಿತು.  ಭಾಗವತರಾಗಿ ನಾರಾಯಣ ಶರ್ಮ ಕಾಟುಕುಕ್ಕೆ,ಹಿಮ್ಮೇಳದಲ್ಲಿ ಲಕ್ಷ್ಮೀಶ ಬೆಂಗರೋಡಿ, ರಾಜೇಂದ್ರ ಪ್ರಸಾದ್  ಪುಂಡಿಕಾಯಿ, ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ , ಅರ್ಥದಾರಿಗಳಾಗಿ ವಾಸುದೇವ ರಂಗಾಭಟ್ ಮಧೂರು (ಬಲರಾಮ ), ಗುರುರಾಜ ಹೊಳ್ಳ ಬಾಯಾರು (ನಾರದ ),  ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ಕೃಷ್ಣ ),

ಯಕ್ಷ ಭಾರತಿಯಿಂದ ಮಧೂರಿನಲ್ಲಿ  ದೇವದರ್ಶನ ತಾಳಮದ್ದಳೆ Read More »

ಉದ್ಯಮಿಗೆ ಹನಿಟ್ರ್ಯಾಪ್‌ : ಶಿಕ್ಷಕಿ ಸಹಿತ ಮೂವರು ಸೆರೆ

ವಿದ್ಯಾರ್ಥಿಗಳ ತಂದೆಯನ್ನೇ ಬಲೆಗೆ ಕೆಡವಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದ ಟೀಚರ್‌ ಬೆಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಿ ಲಕ್ಷಗಟ್ಟಲೆ ಹಣ ವಸೂಲು ಮಾಡಿದ ಶಿಕ್ಷಕಿ ಮತ್ತು ಆಕೆಯ ಇಬ್ಬರು ಸಹಚರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ ಹನಿಟ್ರ್ಯಾಪ್ ಮಾಡಿದ ಶಿಕ್ಷಕಿ. ತನ್ನ ಶಾಲೆಗೆ ಬರುತ್ತಿದ್ದ ಮಕ್ಕಳ ತಂದೆಯನ್ನೇ ಬಲೆಗೆ ಕೆಡವಿಕೊಂಡು ಶ್ರೀದೇವಿ ಬ್ಲ್ಯಾಕ್‌ಮೇಲ್‌ ಮಾಡಿದ್ದಳು. ರಾಕೇಶ್ ಎಂಬ ಉದ್ಯಮಿಯ ಮಕ್ಕಳು ಶ್ರೀದೇವಿ ಕಲಿಸುತ್ತಿದ್ದ ಪ್ರೀಸ್ಕೂಲ್‌ಗೆ ಬರುತ್ತಿದ್ದರು.

ಉದ್ಯಮಿಗೆ ಹನಿಟ್ರ್ಯಾಪ್‌ : ಶಿಕ್ಷಕಿ ಸಹಿತ ಮೂವರು ಸೆರೆ Read More »

ಏ.10-20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಜಾತ್ರೋತ್ಸವಕ್ಕೆ ನಡೆಯಿತು ಗೊನೆ ಮುಹೂರ್ತ

ಪುತ್ತೂರು : ಏ.10 ರಿಂದ 20 ರ ತನಕ ವೈಭವದಿಂದ ನಡೆಯಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಮಂಗಳವಾರ ಬೆಳಿಗ್ಗೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಗರ್ಭಗುಡಿಯಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ವಾದ್ಯದೊಂದಿಗೆ ಸ್ಥಳೀಯ ತೋಟವೊಂದರಲ್ಲಿ ವೆ.ಮೂರ್ತಿ ವಿ.ಎಸ್.ಭಟ್ ಗೊನೆ ಕಡಿಯುವ ಮೂಲಕ ಗೊನೆಮುಹೂರ್ತಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಶಾಸಕ ಅಶೋಕ್ ಕುಮಾರ್ ರೈ,

ಏ.10-20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಜಾತ್ರೋತ್ಸವಕ್ಕೆ ನಡೆಯಿತು ಗೊನೆ ಮುಹೂರ್ತ Read More »

ಗ್ಯಾಸ್‌ ಸಿಲಿಂಡರ್‌ ಸ್ಫೋಟ : 7 ಮಂದಿ ಸಾವು

ಪಟಾಕಿಯ ಕಿಡಿ ತಗಲಿ ಸ್ಫೋಟಿಸಿದ ಸಿಲಿಂಡರ್‌ ಕೋಲ್ಕತ್ತಾ : ಪಶ್ಚಿಮ ಬಂಗಾಳದ ದಕ್ಷಿಣ ಪರಗಣ ಜಿಲ್ಲೆಯ ದೋಲಾಹಾತ್‌ ಎಂಬಲ್ಲಿ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಪಟಾಕಿ ಯಿಂದ ಸಿಡಿದ ಕಿಡಿ ಸಿಲಿಂಡರ್​ಗೆ ತಗಲಿ ಬೆಂಕಿಹತ್ತಿಕೊಂಡು ಸ್ಫೋಟಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡ ಬೆಂಕಿಗಾಹುತಿಯಾಗಿದೆ. ಬೆಂಕಿ ಅವಘಡದ ಬಳಿಕ ನಾಲ್ವರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮನೆಯಲ್ಲಿ ಪಟಾಕಿ ತಯಾರಿಸಲಾಗುತ್ತಿತ್ತು, ಈ

ಗ್ಯಾಸ್‌ ಸಿಲಿಂಡರ್‌ ಸ್ಫೋಟ : 7 ಮಂದಿ ಸಾವು Read More »

ಇಂದಿನಿಂದ ಬೆಲೆ ಏರಿಕೆ ಬಿಸಿ : ಜನಸಾಮಾನ್ಯರ ಪಾಲಿಗೆ ಬದುಕು ಬಲು ದುಬಾರಿ

ಹಾಲು, ಮೊಸರು, ವಿದ್ಯುತ್‌, ಟೋಲ್‌…ಹೆಚ್ಚಳ ಇಂದಿನಿಂದ ಜಾರಿ ಬೆಂಗಳೂರು : ಇಂದಿನಿಂದಲೇ ಕರ್ನಾಟಕದ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಹಾಲು, ಮೊಸರು, ವಿದ್ಯುತ್‌, ಟೋಲ್‌…ಹೀಗೆ ಅನೇಕ ವಸ್ತು ಮತ್ತು ಸೇವೆಗಳ ಪರಿಷ್ಕೃತ ದರ ಇಂದಿನಿಂದ ಜಾರಿಗೆ ಬರಲಿದ್ದು, ಜನಸಾಮಾನ್ಯರ ಜೇಬಿಗೆ ಹೊರೆ ಬೀಳಲಿದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಕಸ ಸಂಗ್ರಹ ಸೆಸ್ ಕೂಡ ಜಾರಿಯಾಗುತ್ತಿದೆ.ಇಂದಿನಿಂದ ನಂದಿನಿ ಹಾಲಿನ ಎಲ್ಲ ಮಾದರಿಯ ಪ್ಯಾಕೆಟ್​ ದರ ಪ್ರತಿ ಲೀಟರ್​ಗೆ 4 ರೂಪಾಯಿ ಏರಿಕೆಯಾಗಿದೆ. ಜೊತೆಗೆ ಮೊಸರಿನ ದರವೂ ಪ್ರತಿ ಲೀಟರ್​​ಗೆ

ಇಂದಿನಿಂದ ಬೆಲೆ ಏರಿಕೆ ಬಿಸಿ : ಜನಸಾಮಾನ್ಯರ ಪಾಲಿಗೆ ಬದುಕು ಬಲು ದುಬಾರಿ Read More »

ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ : ಮಹಿಳೆ ಸಹಿತ ನಾಲ್ವರು ವಶ

ಆಡಿಯೋ ಬಹಿರಂಗವಾದ ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು ಬೆಂಗಳೂರು: ಸಚಿವ ಕೆ.ಎನ್‌. ರಾಜಣ್ಣ ಅವರ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ತುಣುಕೊಂದು ಬಹಿರಂಗವಾದ ಬೆನ್ನಿಗೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆಡಿಯೋದಲ್ಲಿದ್ದ ಪುಷ್ಪಾ ಎಂಬ ಮಹಿಳೆಯ ಸಹಿತ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಪಡೆದುಕೊಂಡಿದ್ದ ಎನ್ನಲಾದ ರೌಡಿಶೀಟರ್‌ ಸೋಮು ಎಂಬಾತನ ಕುರಿತು ರಾಕಿ ಹಾಗೂ ಪುಷ್ಪಾ ಎಂಬವರು ಮಾತುಕತೆ ನಡೆಸಿದ್ದ 18 ನಿಮಿಷದ

ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ : ಮಹಿಳೆ ಸಹಿತ ನಾಲ್ವರು ವಶ Read More »

ಬೆಲೆ ಏರಿಕೆ ವಿರುದ್ಧ ಬಿಜೆಪಿ ರಣಕಹಳೆ : ನಾಳೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ

ಏ.9ರಂದು ಮಂಗಳೂರು, 10ರಂದು ಉಡುಪಿಯಲ್ಲಿ ಜನಾಕ್ರೋಶ ಹೋರಾಟ ಬೆಂಗಳೂರು : ಬೆಲೆಯೇರಿಕೆ ಖಂಡಿಸಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ಬಿಜೆಪಿ ಮುಂದಾಗಿದ್ದು, ಏಪ್ರಿಲ್‌ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುವುದರೊಂದಿಗೆ ಬಿಜೆಪಿಯ ಹೋರಾಟ ಪ್ರಾರಂಭವಾಗಲಿದೆ.ಏಪ್ರಿಲ್​ 2ರಿಂದ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ನಮ್ಮ ಪಕ್ಷದ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರು ಅಹೋರಾತ್ರಿ ಧರಣಿಯಲ್ಲಿ ಭಾಗಿಯಾಗುತ್ತಾರೆ. ಏಪ್ರಿಲ್​ 5ರಂದು ಎಲ್ಲ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಧರಣಿ ಮಾಡುತ್ತೇವೆ

ಬೆಲೆ ಏರಿಕೆ ವಿರುದ್ಧ ಬಿಜೆಪಿ ರಣಕಹಳೆ : ನಾಳೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 41 ರೂ. ಇಳಿಕೆ

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್ ಸಿಲಿಂಡರ್ ಬೆಲೆಯಲ್ಲಿ 41 ರೂ. ಇಳಿಕೆ ಮಾಡಿವೆ. ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಕಡಿತ ಘೋಷಿಸಿದ್ದು, ಅಡುಗೆ ಇಂಧನವನ್ನು ಅವಲಂಬಿಸಿರುವ ವ್ಯವಹಾರಗಳು ಮತ್ತು ಕೈಗಾರಿಕೆಗಳಿಗೆ ಇದರಿಂದ ಅನುಕೂಲವಾಗಲಿದೆ. ತಕ್ಷಣದಿಂದ ಜಾರಿಗೆ ಬರುವಂತೆ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 41 ರೂ. ಕಡಿಮೆ ಮಾಡಲಾಗಿದೆ. ದೆಹಲಿಯಲ್ಲಿ ಪರಿಷ್ಕೃತ ಚಿಲ್ಲರೆ ಮಾರಾಟ ಬೆಲೆ ಈಗ ಪ್ರತಿ ಸಿಲಿಂಡರ್‌ಗೆ 1,762 ರೂ. ಆಗಿದೆ.

ಗ್ಯಾಸ್‌ ಸಿಲಿಂಡರ್‌ ಬೆಲೆ 41 ರೂ. ಇಳಿಕೆ Read More »

ತಾಯಿಯನ್ನು ನೆನೆದು ಯುವಕನೋರ್ವ ಆತ್ಮಹತ್ಯೆಗೆ ಶರಣು

ಬೆಂಗಳೂರು:  ತಾಯಿ ಸಾವನ್ನಪ್ಪಿದ್ದರಿಂದ ಮಗ ಮನನೊಂದು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ. ನೇಣಿಗೆ ಶರಣಾದ ಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ಎಂದು ಪತ್ತೆಹಚ್ಚಲಾಗಿದೆ. ಮೃತರ ತಾಯಿ ಚಂದ್ರಿಕಾ ಸಹ ಕಳೆದ ಒಂದೂವರೆ ತಿಂಗಳ ಹಿಂದೆ ಸಾಲಭಾದೆಯಿಂದ ಮನೆಯಲ್ಲಿಯೇ ನೇ‌ಣಿಗೆ ಶರಣಾಗಿದ್ದರು. ಈತ ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಕುರಿತಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್

ತಾಯಿಯನ್ನು ನೆನೆದು ಯುವಕನೋರ್ವ ಆತ್ಮಹತ್ಯೆಗೆ ಶರಣು Read More »

error: Content is protected !!
Scroll to Top