ಸುದ್ದಿ

ಮಂಗಳೂರು : ಭೀಕರ ಅಗ್ನಿ ಅವಘಡದಲ್ಲಿ ಫ್ಯಾಕ್ಟರಿ ಸುಟ್ಟು ಭಸ್ಮ

ಸುಗಂಧ್ರ ದ್ರವ್ಯ ತಯಾರಿಸುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ಬೆಂಕಿ ಅನಾಹುತ ಮಂಗಳೂರು: ನಗರದ ಹೊರವಲಯದಲ್ಲಿರುವ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಸುಗಂಧ ದ್ರವ್ಯ ತಯಾರಿಸುವ ಫ್ಯಾಕ್ಟರಿಯೊಂದಕ್ಕೆ ಇಂದು ಮುಂಜಾನೆ ಹೊತ್ತು ಬೆಂಕಿ ಹತ್ತಿಕೊಂಡು ಅಪಾರ ನಾಶ ಸಂಭವಿಸಿದೆ. ಅರೋಮಾಝೆನ್ ಎಂಬ ಸುಗಂಧ ದ್ರವ್ಯ ತಯಾರಿಕಾ ಫ್ಯಾಕ್ಟರಿಗೆ ಬುಧವಾರ ಬೆಳಗ್ಗೆ 5ರ ಸುಮಾರಿಗೆ ಬೆಂಕಿ ತಗುಲಿದೆ‌. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಫ್ಯಾಕ್ಟರಿ ಬಹುತೇಕ ಸುಟ್ಟು ಹೋಗಿದ್ದು, ಅಪಾರ ನಷ್ಟ ಉಂಟಾಗಿದೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ […]

ಮಂಗಳೂರು : ಭೀಕರ ಅಗ್ನಿ ಅವಘಡದಲ್ಲಿ ಫ್ಯಾಕ್ಟರಿ ಸುಟ್ಟು ಭಸ್ಮ Read More »

ಮದ್ದೂರಿನಲ್ಲಿಂದು ಗಣೇಶ ವಿಸರ್ಜನೆ ಬೃಹತ್‌ ಮೆರವಣಿಗೆ

ವಿಜಯೇಂದ್ರ ಸಹಿತ ಹಲವು ಬಿಜೆಪಿ ನಾಯಕರು ಭಾಗಿ ಬೆಂಗಳೂರು: ಭಾನುವಾರ ಗಣೇಶ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಿದ ಘಟನೆಯ ಬಳಿಕ ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯದ ಮದ್ದೂರಿನಲ್ಲಿ ಇಂದು ಮತ್ತೆ ಗಣೇಶ ವಿಸರ್ಜನೆಯ ಬೃಹತ್‌ ಮೆರವಣಿಗೆ ನಡೆಯಲಿದೆ. ಮದ್ದೂರಿನಲ್ಲಿಂದು ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದ್ದು, 28ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ಮೆರವಣಿಗೆಯಲ್ಲಿ ಸಾಗಲಿವೆ. 20 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆಯಿದೆ. ಬೆಳಗ್ಗೆ 10.30ಕ್ಕೆ ಮದ್ದೂರು ಪಟ್ಟಣದಿಂದ ಮೆರವಣಿಗೆ ಆರಂಭವಾಗಿ ಮೂರು ಕಿ.ಮೀ ಸಾಗಿ

ಮದ್ದೂರಿನಲ್ಲಿಂದು ಗಣೇಶ ವಿಸರ್ಜನೆ ಬೃಹತ್‌ ಮೆರವಣಿಗೆ Read More »

ಐದಕ್ಕೂ ಅಧಿಕ ಬೆಟ್ಟಿಂಗ್‌ ವೆಬ್‌ಸೈಟ್‌ಗಳನ್ನು ನಡೆಸುತ್ತಿದ್ದ ಕಾಂಗ್ರೆಸ್‌ ಶಾಸಕ

ಇ.ಡಿ ದಾಳಿಯಲ್ಲಿ ಶಾಸಕನ ಅಪಾರ ಸಂಪತ್ತಿನ ರಹಸ್ಯ ಬಯಲು ಬೆಂಗಳೂರು: ಅಕ್ರಮ ಆನ್‌ಲೈನ್‌ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಚಳ್ಳಕೆರೆಯ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಐದಕ್ಕೂ ಹೆಚ್ಚು ಆನ್‌ಲೈನ್‌ ಬೆಟ್ಟಿಂಗ್‌ ವೆಬ್‌ಸೈಟ್‌ಗಳನ್ನು ನಡೆಸುತ್ತಿದ್ದುದನ್ನು ಜಾರಿ ನಿರ್ದೇಶನಾಲಯ (ಇ.ಡಿ) ಪತ್ತೆಹಚ್ಚಿದೆ. ಕಿಂಗ್ 567, ರಾಜ 567, ಲಯನ್ 567, ಪ್ಲೇ 567, ಪ್ಲೇವಿನ್ 567 ಎನ್ನುವ ಆನ್‌ಲೈನ್ ಬೆಟ್ಟಿಂಗ್ ವೆಬ್‌ಸೈಟ್ ನಡೆಸುತ್ತಿದ್ದರು ಎಂದು ಇ.ಡಿ. ಬಹಿರಂಗಪಡಿಸಿದೆ. ವೀರೇಂದ್ರ ಪಪ್ಪಿ ಆನ್‌ಲೈನ್‌ ಬೆಟ್ಟಿಂಗ್‌

ಐದಕ್ಕೂ ಅಧಿಕ ಬೆಟ್ಟಿಂಗ್‌ ವೆಬ್‌ಸೈಟ್‌ಗಳನ್ನು ನಡೆಸುತ್ತಿದ್ದ ಕಾಂಗ್ರೆಸ್‌ ಶಾಸಕ Read More »

ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ. ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ತಮ್ಮ ಹುದ್ದೆಗೆ ನೀಡಿದ್ದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ‌ರಾಧಾಕೃಷ್ಣನ್ ಅವರು ಸ್ಪಷ್ಟ ಬಹುಮತ ಪಡೆದು ಉಪರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ್ದಾರೆ. ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಧಾಕೃಷ್ಣನ್ ಅವರಿಗೆ 452 ಮತಗಳು ಲಭಿಸಿದ್ದು, ಆವರು ತಮ್ಮ ಪ್ರತಿಸ್ಪರ್ಧಿ ಇಂಡಿ ಒಕ್ಕೂಟದ ಅಭ್ಯರ್ಥಿ, ಸುಪ್ರೀಂ ಕೋರ್ಟ್‌ನ ಮಾಜಿ ಜಡ್ಜ್

ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ Read More »

ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ

ಕಾಠ್ಮಂಡು: ನೇಪಾಳದ ಕಾಠ್ಮಂಡುವಿನಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಪ್ರತಿಭಟನೆಯ ಹಿಂಸಾಚಾರ ಭುಗಿಲೆದ್ದಿದ್ದು, ಇದರ ನಡುವೆಯೇ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ಓಲಿ ದೇಶ ಬಿಟ್ಟು ಪಲಾಯನ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಎರಡನೇಯ ದಿನವೂ ಪ್ರತಿಭಟನೆ ಮುಂದುವರಿದಿದ್ದು ಸೋಮವಾರ 2 0 ಜನರು ಸಾವನ್ನಪ್ಪಿದ್ದು, 250 ಕ್ಕೂ ಹೆಚ್ಚು ಜನರು ಗಾಯಗೊಂಡ ನಂತರ ಪ್ರತಿಭಟನಾಕಾರರು ಓಲಿ ಅವರನ್ನು ಪದಚ್ಯುಿತಗೊಳಿಸುವಂತೆ ಮತ್ತು ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಡ ಹೇರಿದ್ದರು. ಸೇನಾ ಮೂಲಗಳ ಪ್ರಕಾರ, ಓಲಿ ಅವರು

ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ Read More »

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕ್‌ಗೆ ಜೈಕಾರ: FIR ದಾಖಲು

ಶಿವಮೊಗ್ಗ: ಭದ್ರಾವತಿಯ ಈದ್ ಮಿಲಾದ್ ಆಚರಣೆಯ ಸಂದರ್ಭದಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಜೈಕಾರ ಹಾಕಿದ ಘಟನೆ ನಡೆದಿದೆ. ಸೋಮವಾರ ರಾತ್ರಿ ಮುಸ್ಲಿಮರು ಈದ್ ಮಿಲಾದ್ ಮೆರವಣಿಗೆ ನಡೆಸಿದ್ದು, ಅದರಲ್ಲಿ ಪಾಲ್ಗೊಂಡವವರು ತರೀಕೆರೆ ರಸ್ತೆಯ ಗಾಂಧಿ ವೃತ್ತದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಭದ್ರಾವತಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿಡಿಯೋ‌ವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವುದಾಗಿಯೂ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ತನಿಖೆಗಾಗಿ ಮೂರು ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕ್‌ಗೆ ಜೈಕಾರ: FIR ದಾಖಲು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಅಡ್ಯನಡ್ಕ ಒಕ್ಕೂಟದ ಕ್ರೀಡಾಕೂಟ, ವಾರ್ಷಿಕೋತ್ಸವ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡ್ಯನಡ್ಕ ಒಕ್ಕೂಟದ ಕ್ರೀಡಾಕೂಟ ಹಾಗೂ ವಾರ್ಷಿಕೋತ್ಸವದ ಕಾರ್ಯಕ್ರಮ ಜನತಾ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಧ್ಯೇಯಗೀತೆಯೊಂದಿಗೆ ಪ್ರಾರಂಭಗೊಂಡ ಈಕಾರ್ಯಕ್ರಮವನ್ನು ಈ ವಿದ್ಯಾಸಂಸ್ಥೆಯ ಸಂಚಾಲಕಿ ಡಾ.ಅಶ್ವಿನಿ ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಚೆಲ್ಲಡ್ಕ ಪುಷ್ಪಾಕರ ರೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುದ್ದುಪದವು ಶಾಲೆಯ ಶಿಕ್ಷಕ ವಿಠಲ ಜಿ., ವಲಯ ಮೇಲ್ವಿಚಾರಕ ಚಂದ್ರಶೇಖರ್ ಉಪಸ್ಥಿತರಿದ್ದರು. ಅಪರಾಹ್ನ ನಡೆದ ಸಮರೂಪ ಸಮಾರಂಭದ ಅಧ್ಯಕ್ಷತೆಯನ್ನು ಗಣೇಶ್ ಮೈರುಗ ವಹಿಸಿದ್ದರು. ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಅಡ್ಯನಡ್ಕ ಒಕ್ಕೂಟದ ಕ್ರೀಡಾಕೂಟ, ವಾರ್ಷಿಕೋತ್ಸವ Read More »

ಹಿರಿಯರನ್ನು ಸ್ಮರಿಸುವುದು ನಮ್ಮ ಸಂಸ್ಕೃತಿ : ಭಾಸ್ಕರ ರೈ ಕುಕ್ಕುವಳ್ಳಿ

ಕಲೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ನಮ್ಮ ಹಿರಿಯರು ಮಾಡಿರುವ ಸಾಧನೆಗಳಿಂದ ನಾವು ಸಾಮಾಜಿಕವಾಗಿ ಒಗ್ಗೂಡುವಂತಾಗಿದೆ. ಹಿರಿಯರ ಸಂಸ್ಮರಣೆಯಿಂದ ಈ ವಿಚಾರಧಾರೆಯು ಮುಂದಿನ ಪೀಳಿಗೆಗೆ ಆದರ್ಶವಾಗಿ ದಾರಿದೀಪವಾಗುತ್ತದೆಯೆಂದು ಮಂಗಳೂರು ಯಕ್ಷಾಂಗಣದ ಅಧ್ಯಕ್ಷ, ಅರ್ಥದಾರಿ ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದರು. ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿದ ಶ್ರೀ ಕಾಳಿಕಾಂಬಾ ಯಕ್ಷ ಕಲಾ ಟ್ರಸ್ಟಿನ 50ನೇ ವರ್ಷದ ನಿಮಿತ್ತ ನಡೆಸುತ್ತಿರುವ ಮಹಾಭಾರತ ಸರಣಿಯ ತಾಳ ಮದ್ದಳೆ, ಪ್ರಶಸ್ತಿ ಪ್ರದಾನ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ

ಹಿರಿಯರನ್ನು ಸ್ಮರಿಸುವುದು ನಮ್ಮ ಸಂಸ್ಕೃತಿ : ಭಾಸ್ಕರ ರೈ ಕುಕ್ಕುವಳ್ಳಿ Read More »

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ “ಒತ್ತಡ ನಿರ್ವಹಣೆಯ “ಬಗ್ಗೆ ಕಾರ್ಯಾಗಾರ

ಪುತ್ತೂರಿನ ಅಕ್ಷಯ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ‘ಒತ್ತಡ ನಿರ್ವಹಣೆ’ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ  ಅಕ್ಷಯ ಪದವಿ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ರಶ್ಮಿ.ಕೆ ಭಾಗವಹಿಸಿದ್ದರು. ಮಾನಸಿಕ ಅಥವಾ ದೈಹಿಕ ಒತ್ತಡಗಳು  ಯಾವುದೇ ಕಾರಣಗಳಿಂದ ಉಂಟಾದರೂ ನಿಯಮಿತವಾದ ದೈಹಿಕ ಚಟುವಟಿಕೆ, ಉತ್ತಮ ಆಹಾರ ಸೇವನೆ ಮತ್ತು ಮಾನಸಿಕ  ವಿಶ್ರಾಂತಿಗಳಿಂದ ಒತ್ತಡ  ರಹಿತ ಸಮತೋಲನದ ಬದುಕು ನಡೆಸಬಹುದು; ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದ ಗುರಿಯನ್ನು ಆಯ್ಕೆಮಾಡಿ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕು

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ “ಒತ್ತಡ ನಿರ್ವಹಣೆಯ “ಬಗ್ಗೆ ಕಾರ್ಯಾಗಾರ Read More »

ವಿಷ ಕೊಡಿ ಎಂದು ಜಡ್ಜ್‌ ಎದುರು ಅಂಗಲಾಚಿದ ದರ್ಶನ್‌

ಜೈಲು ವಾಸದಿಂದ ಕಂಗೆಟ್ಟು ಹೋಗಿರುವ ನಟ ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಇಂದು ಜಡ್ಜ್‌ ಎದುರು ನನಗೆ ವಿಷವನ್ನಾದರೂ ಕೊಡಿ ಎಂದು ಅಂಗಲಾಚಿದ ಘಟನೆ ಸಂಬವಿಸಿದೆ. ದರ್ಶನ್‌ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸವಲತ್ತು ಸಿಗುತ್ತಿಲ್ಲ. ಇದರಿಂದ ಅವರು ಹೈರಾಣವಾಗಿ ಹೋಗಿದ್ದಾನೆ. ಈ ಕಾರಣದಿಂದ ‘ನನಗೆ ವಿಷ ನೀಡಲು ಆದೇಶಿಸಿ’ ಎಂದು ಜಡ್ಜ್ ಎದುರೇ ಕೇಳಿದ್ದಾನೆ. ದರ್ಶನ್ ಬೇಡಿಕೆ ಕೇಳಿ ಜಡ್ಜ್ ಒಮ್ಮೆ ಶಾಕ್ ಆಗಿ ‘ಹಾಗೆಲ್ಲ ಕೇಳಬಾರದು’ ಎಂದು ಜಡ್ಜ್

ವಿಷ ಕೊಡಿ ಎಂದು ಜಡ್ಜ್‌ ಎದುರು ಅಂಗಲಾಚಿದ ದರ್ಶನ್‌ Read More »

error: Content is protected !!
Scroll to Top