ಸುದ್ದಿ

ರಾಜ್ಯಪಾಲರು, ಲೆಫ್ಟಿನೆಂಟ್‌ ಗವರ್ನರ್‌ಗಳ ಬದಲಾವಣೆ

ರಾಷ್ಟ್ರಪತಿ ಭವನದಿಂದ ನೂತನ ನೇಮಕಾತಿ ಆದೇಶ ನವದೆಹಲಿ : ರಾಷ್ಟ್ರಪತಿ ಭವನ ಶುಕ್ರವಾರದಂದು ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರ ಹಾಗೂ ಲೆಫ್ಟಿನೆಂಟ್ ಗವರ್ನರ್‌ಗಳ ಪುನರ್‌ವ್ಯವಸ್ಥೆಯನ್ನು ಘೋಷಿಸಿದೆ. ದೆಹಲಿ, ಲಡಾಖ್, ತೆಲಂಗಾಣ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಹಿಮಾಚಲ ಪ್ರದೇಶ ಹಾಗೂ ನಾಗಾಲ್ಯಾಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರಪತಿ ಕಚೇರಿ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಲವು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ವರ್ಗಾವಣೆ ಮಾಡಲಾಗಿದ್ದು, ಕೆಲವರನ್ನು ಹೊಸ […]

ರಾಜ್ಯಪಾಲರು, ಲೆಫ್ಟಿನೆಂಟ್‌ ಗವರ್ನರ್‌ಗಳ ಬದಲಾವಣೆ Read More »

ಟಿ20 ವಿಶ್ವಕಪ್‌ ಸೆಮಿಫೈನಲ್‌ : ಕಿರು ಕ್ರಿಕೆಟಿನ ಎಲ್ಲ ರೋಚಕತೆಯನ್ನು ಉಣಬಡಿಸಿದ ಕಾದಾಟ

7 ರನ್‌ನಿಂದ ಆಂಗ್ಲರನ್ನು ಮಣಿಸಿ ಭಾರತ ಫೈನಲ್‌ಗೆ ಮುಂಬೈ: ಇಲ್ಲಿನ ವಾಂಖೇಡೆ ಸ್ಟೇಡಿಯಂನಲ್ಲಿ ನಿನ್ನೆ ರಾತ್ರಿ ಭಾರತ ಮತ್ತು ಇಂಗ್ಲಂಡ್‌ ನಡುವೆ ನಡೆದ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ ಪಂದ್ಯ 20-20 ಪಂದ್ಯದ ಎಲ್ಲ ರೋಚಕತೆಯನ್ನು ಪ್ರೇಕ್ಷಕರಿಗೆ ಉಣಬಡಿಸಿ ನಿಜವಾದ ಅರ್ಥದಲ್ಲಿ ರಣರೋಚಕ ಎನಿಸಿಕೊಂಡಿತು. ಕೊನೆಯ ಎಸೆತದ ತನಕ ಶತಕೋಟಿ ಕ್ರಿಕೆಟ್‌ ಅಭಿಮಾನಿಗಳು ಸೀಟಿನ ತುದಿಯಲ್ಲಿ ಕೂರುವಂತೆ ಮಾಡಿದ ಪಂದ್ಯದಲ್ಲಿ ಭಾರತ 7 ರನ್‌ಗಳ ರೋಚಕ ಗೆಲುವನ್ನು ದಾಖಲಿಸಿ ಫೈನಲ್‌ಗೆ ಪ್ರವೇಶೀಸಿದೆ. ಭಾನುವಾರ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ

ಟಿ20 ವಿಶ್ವಕಪ್‌ ಸೆಮಿಫೈನಲ್‌ : ಕಿರು ಕ್ರಿಕೆಟಿನ ಎಲ್ಲ ರೋಚಕತೆಯನ್ನು ಉಣಬಡಿಸಿದ ಕಾದಾಟ Read More »

ಮದುವೆಯಾಗಲು ನಿರಾಕರಿಸಿದ ಪ್ರೇಮಿ: ಯುವತಿ ಆತ್ಮಹತ್ಯೆ

ತಮಿಳುನಾಡು: ಪ್ರಿಯಕರ ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೇಲಂ‌ನಲ್ಲಿ ನಡೆದಿದೆ. ಪದವಿ ಓದುತ್ತಿದ್ದ ವಿದ್ಯಾರ್ಥಿನಿ ದಿನಗೂಲಿ ನೌಕರ ಕಾರ್ತಿಕೇಯನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆದರೆ ಇವರಿಬ್ಬರ ಜಾತಿ ಬೇರೆಯಾಗಿತ್ತು. ಪ್ರೀತಿ ಮಾಡುವಾಗ ಅಡ್ಡ ಬಾರದ ಜಾತಿ ಯುವಕನಿಗೆ ಮದುವೆಯಾಗುವಂತೆ ಯುವತಿ ಹೇಳಿದಾಗ ಅಡ್ಡ ಬಂದಿದೆ. ಅದೇ ವಿಷಯವನ್ನಿಟ್ಟುಕೊಂಡು ಆತ ವಿವಾಹ ನಿರಾಕರಿಸಿದ್ದಾನೆ. ಇದರಿಂದಾಗಿ ನೊಂದ ಯುವತಿ ಆತ್ಮಹತ್ಯೆಗೆ ಫೆ. 21 ರಂದು ಪ್ರಯತ್ನಿಸಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ

ಮದುವೆಯಾಗಲು ನಿರಾಕರಿಸಿದ ಪ್ರೇಮಿ: ಯುವತಿ ಆತ್ಮಹತ್ಯೆ Read More »

ಪೋಕ್ಸೋ ಆರೋಪಿ ಮಲ್ಲಿಕಾರ್ಜುನ ಮುತ್ಯಾ ವಿಚಾರಣೆಗೆ ಹಾಜರ್

ಯಾದಗಿರಿ: ಬಾಲಕಿಯರ ಜೊತೆ ಅನುಚಿತವಾಗಿ ‌ವರ್ತಿಸಿ ಫೋಕ್ಸೋ ಪ್ರಕರಣದ ಆರೋಪಿಯಾಗಿರುವ ಸ್ವಯಂಘೋಷಿತ ದೇವಮಾನವ ‌ಮಲ್ಲಿಕಾರ್ಜುನ ಮುತ್ಯಾ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾನೆ. ಆತ ಬುಧವಾರ ರಾತ್ರಿ ಶಹಾಪುರ ಸಿಪಿಐ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗಿದ್ದು, ಬುಧವಾರ ಮಧ್ಯಾಹ್ನ 3 ಗಂಟೆಯ ಬಳಿಕವೂ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಆತನಿಗೆ ಸೂಚಿಸಿದ್ದಾರೆ. ಗುರುವಾರದ ವಿಚಾರಣೆಯ ಬಳಿಕ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತದೆ. ತನಿಖೆಗೆ ಸಹಕರಿಸದೇ ಹೋದಲ್ಲಿ ಆತನ ಬಂಧನದ ಸಾಧ್ಯತೆಗಳೂ ಇವೆ. ಆದ್ದರಿಂದಲೇ ಆತ ವಿಚಾರಣೆಗೆ ಹಾಜರಾಗಿದ್ದಾಗಿ ಹೇಳಲಾಗುತ್ತಿದೆ.

ಪೋಕ್ಸೋ ಆರೋಪಿ ಮಲ್ಲಿಕಾರ್ಜುನ ಮುತ್ಯಾ ವಿಚಾರಣೆಗೆ ಹಾಜರ್ Read More »

ಡ್ರಿಂಕ್ ಆ್ಯಂಡ್ ಡ್ರೈವ್ ಕಡಿಮೆ ಮಾಡಲು ಬೆಳಗಾವಿ ಪೊಲೀಸರಿಂದ ಮಾದರಿ ಕ್ರಮ

ಬೆಳಗಾವಿ: ಕಾರುಗಳನ್ನನೇ ಬಾರುಗಳನ್ನಾಗಿ ಮಾಡಿಕೊಂಡು ಮಜಾ ಮಾಡುವವರಿಗೆ ಬೆಳಗಾವಿಯ ಪೊಲೀಸರು ಶಾಕ್ ನೀಡಿದ್ದಾರೆ‌. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾರಿನಲ್ಲಿ ಕುಳಿತು ಮದ್ಯಪಾನ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ನಗರಕ್ಕೆ ಮಾತ್ರವೇ ಸಂಬಂಧಿಸಿದ ಹಾಗೆ ಸುಮಾರು 24 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. 24 ಪ್ರಕರಣಗಳಲ್ಲಿ 36 ಜನರ ಮೇಲೆ ಕೇಸು ಜಡಿದಿದ್ದಾರೆ. ಕಾರಿನಲ್ಲಿ ಕುಳಿತು ಪಾರ್ಟಿ ಮಾಡುವವರಿಗೆ, ರಾತ್ರಿ ಸಮಯದಲ್ಲಿ ಕಾರುಗಳಲ್ಲಿ ಮದ್ಯ ಸೇವಿಸಿ ಮೋಜು ಮಾಡುವವರಿಗೆ ತಪಾಸಣೆಗೆ ಒಳಪಡಿಸಲಾಗಿದೆ. ಡ್ರಿಂಕ್ ಆ್ಯಂಡ್

ಡ್ರಿಂಕ್ ಆ್ಯಂಡ್ ಡ್ರೈವ್ ಕಡಿಮೆ ಮಾಡಲು ಬೆಳಗಾವಿ ಪೊಲೀಸರಿಂದ ಮಾದರಿ ಕ್ರಮ Read More »

ಎಲ್ಲಾ ಸಮಸ್ಯೆಗೂ ಮಿಲಿಟರಿ ಸಂಘರ್ಷ ಪರಿಹಾರವಲ್ಲ: ಪ್ರಧಾನಿ ಮೋದಿ

ನವದೆಹಲಿ: ಯಾವ ಸಮಸ್ಯೆಗೂ ಮಿಲಿಟರಿ ಸಂಘರ್ಷವೇ ಪರಿಹಾರ ನೀಡಲಾರದು. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಗಳಿಗೆ ತಕ್ಷಣವೇ ಅಂತ್ಯ ಹಾಡಬೇಕು ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಫಿನ್‍ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಜೊತೆಗೆ ಸುಧೀರ್ಘ ಮಾತುಕತೆ ನಡೆಸಿ ಬಳಿಕ ಈ ಸಂದೇಶವನ್ನು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ನೀಡಿರುವುದಾಗಿದೆ. ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಮತ್ತು ಫಿನ್ಲೆಂಡ್‌ಗಳೆರಡೂ ಕಾನೂನು ಆಡಳಿತ, ಸಂವಾದ, ರಾಜತಾಂತ್ರಿಕತೆಯಲ್ಲಿ ಗಟ್ಟಿಯಾದ ನಂಬಿಕೆ ಇರಿಸಿವೆ. ಸಂಘರ್ಷಗಳಿಗೆ ಇತಿಶ್ರೀ

ಎಲ್ಲಾ ಸಮಸ್ಯೆಗೂ ಮಿಲಿಟರಿ ಸಂಘರ್ಷ ಪರಿಹಾರವಲ್ಲ: ಪ್ರಧಾನಿ ಮೋದಿ Read More »

ಅರಣ್ಯಾಧಿಕಾರಿ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು

ಉಳ್ಳಾಲ: ಅರಣ್ಯಾಧಿಕಾರಿಯ ಬಾಡಿಗೆ ಮನೆಯಿಂದ ಕಳ್ಳರು ನಗ, ನಗದು ದೋಚಿದ ಘಟನೆ ಅಂಬಿಕಾರೋಡ್‌ನ ಕಾಪಿಕಾಡು ಎಂಬಲ್ಲಿ ನಡೆದಿದೆ. ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಕಳ್ಳರು ಹತ್ತೂವರೆ ಲಕ್ಷ ರೂ ಹಣ, 181 ಗ್ರಾಂ ಚಿನ್ನ, ಬೆಳ್ಳಿಯನ್ನು ‌ಮತ್ತು ಒಂದು ಬೈಕ್ ಅನ್ನು ಹೊತ್ತೊಯ್ದಿದ್ದಾರೆ. ಅವರು ತಮ್ಮ ಹುಟ್ಟೂರು ಕೊಪ್ಪಳಕ್ಕೆ ತೆರಳಿದ್ದ ‌ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೆಹಬೂಬ್ ಸಾಬ್ ಇಂದು ತಮ್ಮ ಬಾಡಿಗೆ ಮನೆಗೆ ವಾಪಾಸ್ಸಾದ

ಅರಣ್ಯಾಧಿಕಾರಿ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು Read More »

ಮಧ್ಯಪ್ರಾಚ್ಯ ಬಿಕ್ಕಟ್ಟು: ದುಬೈನಲ್ಲಿ ‌ಸಿಲುಕಿದ್ದ 50 ಮಂದಿ ಕನ್ನಡಿಗರು ಮರಳಿ ತಾಯ್ನೆಲಕ್ಕೆ

ಬೆಂಗಳೂರು: ಮಧ್ಯಪ್ರಾಚ್ಯ ಬಿಕ್ಕಟ್ಟಿಗೆ ಕಾರಣವಾದ ಇಸ್ರೇಲ್, ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದ ಕಾರಣದಿಂದ ದುಬೈ‌ನಲ್ಲಿ ‌ಸಿಲುಕಿ ಸಂಕಷ್ಟದಲ್ಲಿದ್ದ 50 ಮಂದಿ ಕನ್ನಡಿಗರು ಶಾಸಕ ಬಿ. ನಾಗೇಂದ್ರ ಅವರ ಸಹಕಾರದಿಂದ ಮತ್ತೆ ತಾಯ್ನಾಡಿಗೆ ಮರಳುವಂತಾಗಿದೆ. ಬಳ್ಳಾರಿಯ 35 ಮಂದಿ , ಚಿತ್ರದುರ್ಗದ 15 ಜನರು ಸೇರಿ 246 ಮಂದಿ ಕನ್ನಡಿಗರು ಮಾ. 4 ರಂದು ಶಾರ್ಜಾದಿಂದ ಕೊಚ್ಚಿನ್‌ಗೆ ಬಂದಿಳಿದಿದ್ದರು. ರಾಜ್ಯದ 50 ಜನರಿಗೆ ಅಲ್ಲಿಂದ ಬೆಂಗಳೂರಿಗೆ ಬರಲು ನಾಗೇಂದ್ರ ಅವರು ವಿಮಾನದ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದರು. ಬೆಂಗಳೂರಿಗೆ ಅವರೆಲ್ಲರೂ

ಮಧ್ಯಪ್ರಾಚ್ಯ ಬಿಕ್ಕಟ್ಟು: ದುಬೈನಲ್ಲಿ ‌ಸಿಲುಕಿದ್ದ 50 ಮಂದಿ ಕನ್ನಡಿಗರು ಮರಳಿ ತಾಯ್ನೆಲಕ್ಕೆ Read More »

ಮೌಲ್ವಿಗಳ ಮೇಲೆ ಹಲ್ಲೆ, ಉದ್ರಿಕ್ತರಿಂದ ಪೊಲೀಸ್ ಠಾಣೆಗೆ ಕಲ್ಲು ತೂರಾಟ: ಆರೋಪಿಗಳಲ್ಲಿ ಕೆಲವರು ಅಂದರ್

ಬೀದರ್: ಅನ್ಯ ಕೋಮಿನ ವ್ಯಕ್ತಿಗಳು ಮೌಲ್ವಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ 49 ಜನರ ಮೇಲೆ ಪ್ರಕರಣ ದಾಖಲಾಗಿದ್ದು ಅವರಲ್ಲಿ 10 ಮಂದಿಯನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಡೆದಾಗ ಬಸವ ಕಲ್ಯಾಣ ಪೊಲೀಸ್ ಠಾಣೆಯ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು, ಘಟನೆ ಎಷ್ಟು ಭೀಕರತೆಯಿಂದ ಕೂಡಿದೆ ಎಂಬುದಕ್ಕೆ ಸಾಕ್ಷ್ಯ ಹೇಳುವಂತಿತ್ತು. ಕಲ್ಲು ತೂರಾಟದ ಕಾರಣಕ್ಕೆ ಪೊಲೀಸ್ ವಾಹನ ಸಹ ಹಾನಿಗೊಳಗಾಗಿದೆ. ಅಕ್ರಮ ಆಸ್ತಿ ಪಾಸ್ತಿ ಹಾಗೂ ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ

ಮೌಲ್ವಿಗಳ ಮೇಲೆ ಹಲ್ಲೆ, ಉದ್ರಿಕ್ತರಿಂದ ಪೊಲೀಸ್ ಠಾಣೆಗೆ ಕಲ್ಲು ತೂರಾಟ: ಆರೋಪಿಗಳಲ್ಲಿ ಕೆಲವರು ಅಂದರ್ Read More »

ನಾಳೆ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ

ಅನುದಾನ, ಅಭಿವೃದ್ಧಿಗಾಗಿ ಕಾದು ಕುಳಿತಿದ್ದಾರೆ ಕರುನಾಡ ಜನ ಬೆಂಗಳೂರು : ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಗ್ಯಾರಂಟಿಯಿಂದ ಸದುರಾಗಿರುವ ಆರ್ಥಿಕ ಸವಾಲುಗಳ ನಡುವೆ ತನ್ನ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈಗಾಗಲೇ ಅನೇಕ ವಸ್ತು ಮತ್ತು ಸೇವೆಗಳ ಬೆಲೆ ಏರಿಕೆ ಮಾಡಿ ಭಾರಿ ಟೀಕೆಗೆ ಗುರಿಯಾಗಿರುವ ಸಿದ್ದರಾಮಯ್ಯನವರು ದಾಖಲೆಯ 17ನೇ ಬಜೆಟ್‌ನಲ್ಲಿ ಯಾವ ಕರಾಮತ್ತು ತೋರಿಸಲಿದ್ದಾರೆ ಎಂಬ ನಿರೀಕ್ಷೆ ಬಹಳ ಇದೆ. ಒಂದೆಡೆ ಗ್ಯಾರಂಟಿಯಿಂದಾಗಿ ಬೊಕ್ಕಸ ಬರಿದಾಗಿದೆ ಎಂಬ ಟೀಕೆ, ಇನ್ನೊಂದೆಡೆ ಅಭಿವೃದ್ಧಿ

ನಾಳೆ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ Read More »

error: Content is protected !!
Scroll to Top