ಸುದ್ದಿ

ಫೇಸ್‍ ಬುಕ್‍ನಲ್ಲಿ ಷೇರ್ ಟ್ರೇಡಿಂಗ್‍ ಜಾಹಿರಾತು ಮೂಲಕ ವಂಚನೆ | 38 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಮಂಗಳೂರು: ಷೇರು ಟ್ರೇಡಿಂಗ್ ಕುರಿತಾಗಿ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿದ ವ್ಯಕ್ತಿಯೋರ್ವ 38,53,961 ರೂ. ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್‌ನಲ್ಲಿ ಬಂದ ಲಿಂಕ್‍ ನಲ್ಲಿ ವೈಯಕ್ತಿಕ ಮಾಹಿತಿಯನ್ನು  ತಿಳಿಸಿದ ಬಳಿಕ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ಷೇರು ಟ್ರೇಡಿಂಗ್‌ನಲ್ಲಿ ನೋಂದಣಿ ಮಾಡಲು 21 ಸಾವಿರ ರೂ. ಹಣ ವರ್ಗಾವಣೆ ಮಾಡುವಂತೆ ಹೇಳಿದ್ದಾನೆ. ವಂಚಕ ಕಳುಹಿಸಿದ ಯುಪಿಐ ಐಡಿಗಳಿಗೆ ಹಣವನ್ನು ಪಾವತಿಸಿದ್ದಾನೆ. ಬಳಿಕ ಟ್ರೇಡಿಂಗ್ ಕಂಪೆನಿಯವರು ಕರೆ ಮಾಡಿ […]

ಫೇಸ್‍ ಬುಕ್‍ನಲ್ಲಿ ಷೇರ್ ಟ್ರೇಡಿಂಗ್‍ ಜಾಹಿರಾತು ಮೂಲಕ ವಂಚನೆ | 38 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ Read More »

ಮಾ.27ರಂದು ಸಂಸತ್ತಿನಲ್ಲಿ ಛಾವಾ ಸಿನಿಮಾದ ವಿಶೇಷ ಪ್ರದರ್ಶನ

ಚಿತ್ರ ವೀಕ್ಷಿಸಲಿರುವ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ನವದೆಹಲಿ: ಈಗಾಗಲೇ ಜಾಗತಿಕವಾಗಿ ಭರ್ಜರಿ ಯಶಸ್ಸು ಕಂಡಿರುವ ಹಾಗೂ ಒಂದು ವರ್ಗದ ಆಕ್ರೋಶಕ್ಕೂ ಗುರಿಯಾಗಿರುವ ಹಿಂದಿಯ ಛಾವಾ ಸಿನಿಮಾ ಮಾ.27ರಂದು ಸಂಸತ್ತಿನಲ್ಲಿ ಪ್ರದರ್ಶನಗೊಳ್ಳಲಿದೆ. ಸಂಸತ್ತಿನಲ್ಲಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ವಿಕ್ಕಿ ಕೌಶಲ್ ನಟನೆಯ ಛಾವಾ ಸಿನಿಮಾ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಮರಾಠ ದೊರೆ ಛತ್ರಪತಿ ಶಿವಾಜಿ ಮಹಾರಾಜರ ಪುತ್ರ ಸಂಭಾಜಿ ಮಹಾರಾಜರ ಜೀವನಾಧಾರಿತ ಛಾವಾ ಸಿನಿಮಾವನ್ನು ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿರುವ ಬಾಲಯೋಗಿ ಸಭಾಂಗಣದಲ್ಲಿ

ಮಾ.27ರಂದು ಸಂಸತ್ತಿನಲ್ಲಿ ಛಾವಾ ಸಿನಿಮಾದ ವಿಶೇಷ ಪ್ರದರ್ಶನ Read More »

ಕುಕ್ಕೆಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸಾಮೂಹಿಕ ವಿವಾಹ | ದಾಂಪತ್ಯ ಜೀವನಕ್ಕೆ ಕಾಲಿರಿಸಿದ 10 ನವಜೋಡಿಗಳು

ಕಾಣಿಯೂರು : ಕರ್ನಾಟಕ ಸರಕಾರ, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯಿ ದತ್ತಿ ಇಲಾಖೆ, ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ನಡೆಯಿತು. ಪೂರ್ವಾಹ್ನ ಗಂಟೆ 11ರಿಂದ 12ರ ವೃಷಭ ಲಗ್ನದಲ್ಲಿ ವಿವಾಹ ಮುಹೂರ್ತ ನೆರವೇರಿತು. 10 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಪುರೋಹಿತ ಮಧುಸೂಧನ ಕಲ್ಲೂರಾಯ ಅವರ ನೇತೃತ್ವದಲ್ಲಿ ಅರ್ಚಕ ವರ್ಗದವರು ಧಾರ್ಮಿಕ ವಿಧಿ

ಕುಕ್ಕೆಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸಾಮೂಹಿಕ ವಿವಾಹ | ದಾಂಪತ್ಯ ಜೀವನಕ್ಕೆ ಕಾಲಿರಿಸಿದ 10 ನವಜೋಡಿಗಳು Read More »

ಬೆಕ್ಕುಗಳಿಗೆ ಹರಡುತ್ತಿದೆ ಮರಣಾಂತಿಕ ವೈರಸ್‌ ಸೋಂಕು : ಮುನ್ನೆಚ್ಚರಿಕೆ ವಹಿಸಲು ಸೂಚನೆ

ಕೆಲವೇ ಸೆಕೆಂಡುಗಳಲ್ಲಿ ಹರಡಿ ಬೆಕ್ಕುಗಳನ್ನು ಸಾಯಿಸುವ ವೈರಾಣು ಬೆಂಗಳೂರು: ಹಕ್ಕಿಜ್ವರದ ಹಾವಳಿಯ ಬೆನ್ನಿಗೆ ಈಗ ರಾಜ್ಯದ ಕೆಲವೆಡೆಗಳಲ್ಲಿ ಬೆಕ್ಕುಗಳಿಗೆ ವೈರಸ್‌ ಸೋಂಕು ತಗಲಿದ್ದು, ಬೆಕ್ಕುಗಳು ಹಠಾತ್‌ ಸಾವಿಗೀಡಾಗುತ್ತಿವೆ. ಬೆಕ್ಕುಗಳಿಗೆ ಬಂದಿರುವ ಮರಣಾಂತಿಕ ರೋಗಕ್ಕೆ ಎಫ್​ಪಿವಿ ವೈರಸ್ ಕಾರಣ ಎಂದು ಗುರುತಿಸಲಾಗಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಈ ವೈರಸ್ ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪುತ್ತಿವೆ. ಅಲ್ಲದೆ ರಾಜ್ಯದ ವಿವಿಧೆಡೆ ವೈರಸ್ ಸೋಂಕು ಹರಡುತ್ತಿದೆ. ರಾಯಚೂರಿನಲ್ಲಿ ಕಳೆದ

ಬೆಕ್ಕುಗಳಿಗೆ ಹರಡುತ್ತಿದೆ ಮರಣಾಂತಿಕ ವೈರಸ್‌ ಸೋಂಕು : ಮುನ್ನೆಚ್ಚರಿಕೆ ವಹಿಸಲು ಸೂಚನೆ Read More »

ಏಪ್ರಿಲ್ 11 ರಿಂದ 15 : ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’

ಪುತ್ತೂರು: ಕೆನರಾ ಬ್ಯಾಂಕ್ ಬಳಿ ಮುಖ್ಯರಸ್ತೆಯಲ್ಲಿರುವ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ಏಪ್ರಿಲ್ 11 ರಿಂದ 15 ರ ತನಕ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಎದುರು ಇರುವ ಒಕ್ಕಲಿಗ ಸೌಧ ಸಭಾಭವನದಲ್ಲಿ ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ನಲ್ಲಿ ವಿವಿಧ ಚಟುವಟಿಕೆಗಳಾದ ಒರಿಗಾಮಿ, ಸ್ಪೀಚ್ & ಆ್ಯಂಕರಿಂಗ್, ಆರ್ಟಿಸ್ಟಿಕ್ ಆರ್ಟ್, ಕಾಸ್ಟ್ ಆರ್ಟ್, ಫಿಂಗರ್ ಪಪ್ಪೆಟ್, ಫೇಸ್ ಮಾಸ್ಕ್, ಮಾರ್ಬಲ್ ಆರ್ಟ್

ಏಪ್ರಿಲ್ 11 ರಿಂದ 15 : ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’ Read More »

ಶ್ರೀಶೈಲಂ ಸುರಂಗ ಕುಸಿತ : ಒಂದು ತಿಂಗಳಾದರೂ ಮುಗಿಯದ ರಕ್ಷಣಾ ಕಾರ್ಯಾಚರಣೆ

ಇನ್ನೊಂದು ಶವಪತ್ತೆ; ಮೃತರ ಸಂಖ್ಯೆ 2ಕ್ಕೇರಿಕೆ, ಒಳಗೆ ಸಿಲುಕಿದ್ದಾರೆ ಇನ್ನೂ ಆರು ಕಾರ್ಮಿಕರು ಹೈದರಾಬಾದ್‌ : ತೆಲಂಗಾಣದ ನಾಗಕರ್ನೂಲ್‌ ಜಿಲ್ಲೆಯಲ್ಲಿ ಸಂಭವಿಸಿದ ಸುರಂಗ ಕುಸಿತದ ರಕ್ಷಣಾ ಕಾರ್ಯಾಚರಣೆ ಒಂದು ತಿಂಗಳಾದರೂ ಮುಗಿದಿಲ್ಲ. ನಿನ್ನೆ ಸುರಂಗದೊಳಗೆ ಇನ್ನೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಇದರೊಂದಿಗೆ ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಅಧಿಕೃತವಾಗಿ ಎರಡಕ್ಕೇರಿದೆ. ಇನ್ನೂ ಆರು ಮಂದಿ ಸುರಂಗದೊಳಗಿದ್ದು, ಅವರ ಸ್ಥಿತಿ ಏನಾಗಿದೆ ಎಂದು ಗೊತ್ತಾಗಿಲ್ಲ. ಮಾ.9ರಂದು ಗುರುಪ್ರೀತ್‌ ಸಿಂಗ್‌ ಎಂಬ ಕಾರ್ಮಿಕನ ಶವ ಪತ್ತೆಯಾಗಿತ್ತು. ನಿನ್ನೆ ಪತ್ತೆಯಾದ ಶವದ

ಶ್ರೀಶೈಲಂ ಸುರಂಗ ಕುಸಿತ : ಒಂದು ತಿಂಗಳಾದರೂ ಮುಗಿಯದ ರಕ್ಷಣಾ ಕಾರ್ಯಾಚರಣೆ Read More »

ಐದನೇ ವಾರಕ್ಕೆ ಪಾದರ್ಪಣೆ ಮಾಡಿದ “ಭಾವ ತೀರ ಯಾನ’ ಸಿನಿಮಾ | ಇಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು ಮಾ.25 ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಐದನೇ ವಾರಕ್ಕೆ ಪಾದರ್ಪಣೆ ಮಾಡಿದ “ಭಾವ ತೀರ ಯಾನ’ ಸಿನಿಮಾ | ಇಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ Read More »

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು

ಹಾಗೇ ಹೇಳಿಯೇ ಇಲ್ಲ ಎಂದು ಪಾರಾಗಲು ಯತ್ನ ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ಅನುಮಾನದ ನೋಟಗಳಿಗೆ ಗುರಿಯಾಗಿ ಮುಜುಗರ ಅನುಭವಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದರ ಬೆನ್ನಿಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀವ್ರ ವಿವಾದದ ಸುಳಿಯಲ್ಲಿ ಸಿಲುಕಿರುವ ಡಿ.ಕೆ.ಶಿವಕುಮಾರ್‌ ತಾನು ಹಾಗೆ ಹೇಳಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿ ಪಾರಾಗಲು ಯತ್ನಿಸಿದ್ದಾರೆ. ಸಂದರ್ಶನದಲ್ಲಿ ಶಿವಕುಮಾರ್‌ ನೀಡಿದ ಹೇಳಿಕೆ ಕಳೆದ ಲೋಕಸಭೆ ಚುನಾವಣೆಯಿಂದೀಚೆಗೆ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ

ಪ್ರೋಟೊಕಾಲ್‌ ದುರ್ಬಳಕೆ ಮಾಡಿ ಚಿನ್ನ ಕಳ್ಳ ಸಾಗಾಟ ಮಾಡಿದ ಕುರಿತು ತನಿಖೆ ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.2 ಕೆಜಿ ಚಿನ್ನದೊಂದಿಗೆ ಡಿಆರ್​ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ಗೆ ನೀಡಿದ ಪ್ರೋಟೊಕಾಲ್‌ ಕುರಿತಾದ ತನಿಖಾ ವರದಿ ಇಂದು ಸರಕಾರದ ಕೈಸೇರಲಿದೆ. ಸರಕಾರ ಈ ಪ್ರಕರಣದಲ್ಲಿ ಪ್ರೋಟೋಕಾಲ್ ದುರ್ಬಳಕೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರಿಗೆ ಆದೇಶಿಸಿತ್ತು. ಈಗ ವರದಿ ಸಿದ್ದವಾಗಿದ್ದು ಇಂದು ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ Read More »

ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ನಾಪತ್ತೆ

ಕಡಬ: ಸಾರಣೆ ಕೆಲಸಕ್ಕೆಂದು ಹೋದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಕಡಬದಲ್ಲಿ ನಡೆದಿದೆ. ಈ ಕುರಿತಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಬಳ್ಳ ಗ್ರಾಮದ ಜೋಗಿ ಮನೆ ಚೆನ್ನಕೇಶವ ಜೋಗಿ (61) ಎಂದು ಪತ್ತೆಹಚ್ಚಲಾಗಿದೆ. ಮಾ.11 ರಂದು ತನ್ನ ಮನೆಯಿಂದ ಕೋಡಿಂಬಾಳಕ್ಕೆ ಸಾರಣೆ ಕೆಲಸಕ್ಕೆ ಹೋದವರು ತಿರುಗಿ ಬರಲಿಲ್ಲ. ಇವರ ಬಳಿ ಇದ್ದ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮನೆಯಿಂದ ಹೊರ ಹೋಗುವ ವೇಳೆ ಉದ್ದ ತೋಳಿನ ಹಸಿರು

ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ನಾಪತ್ತೆ Read More »

error: Content is protected !!
Scroll to Top