ಏ.10-20 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಜಾತ್ರೋತ್ಸವಕ್ಕೆ ನಡೆಯಿತು ಗೊನೆ ಮುಹೂರ್ತ
ಪುತ್ತೂರು : ಏ.10 ರಿಂದ 20 ರ ತನಕ ವೈಭವದಿಂದ ನಡೆಯಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಮಂಗಳವಾರ ಬೆಳಿಗ್ಗೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಗರ್ಭಗುಡಿಯಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ವಾದ್ಯದೊಂದಿಗೆ ಸ್ಥಳೀಯ ತೋಟವೊಂದರಲ್ಲಿ ವೆ.ಮೂರ್ತಿ ವಿ.ಎಸ್.ಭಟ್ ಗೊನೆ ಕಡಿಯುವ ಮೂಲಕ ಗೊನೆಮುಹೂರ್ತಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಶಾಸಕ ಅಶೋಕ್ ಕುಮಾರ್ ರೈ, […]