ಸುದ್ದಿ

ಪುತ್ತೂರು : ಇನ್‌ಸ್ಟಾಗ್ರಾಂನಲ್ಲಿ ದ್ವೇಷದ ಸಂದೇಶ ಹಾಕಿದ ಕುರಿತು ದೂರು ದಾಖಲು

ಕಾಲೇಜಿನಲ್ಲಿ ನಡೆದ ನೃತ್ಯ ಕಾರ್ಯಕ್ರಮವನ್ನು ಆಕ್ಷೇಪಿಸಿ ಕೋಮು ದ್ವೇಷದ ಸಂದೇಶ ಪುತ್ತೂರು: ಇನ್‌ಸ್ಟಾಗ್ರಾಮ್‌ನಲ್ಲಿ ಕೋಮು ವೈಮನಸ್ಸು ಉಂಟು ಮಾಡುವ ಹಾಗೂ ಸುಳ್ಳು ಮಾಹಿತಿಯನ್ನು ಹೊಂದಿರುವ ಸಂದೇಶವನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ಶುಕ್ರವಾರ Instagram ಖಾತೆ ಬಳಕೆದಾರ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಉಪನ್ಯಾಸಕ ಜಾನ್ಸನ್ ಡೇವಿಡ್‌ ಸಿಕ್ವೇರ ಎಂಬವರು ನೀಡಿರುವ ದೂರಿನಂತೆ @tm_bad_karma_990 ಎಂಬ Instagram ಖಾತೆಯ ಬಳಕೆದಾರ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ. ಶುಕ್ರವಾರ ತನ್ನ […]

ಪುತ್ತೂರು : ಇನ್‌ಸ್ಟಾಗ್ರಾಂನಲ್ಲಿ ದ್ವೇಷದ ಸಂದೇಶ ಹಾಕಿದ ಕುರಿತು ದೂರು ದಾಖಲು Read More »

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಪೂರೈಸುತ್ತಿದ್ದ ಯುವಕ ಸೆರೆ

11 ಲಕ್ಷ ರೂ. ಮೌಲ್ಯದ ಮಾದಕವಸ್ತು, ಮೊಬೈಲ್‌ ವಶ ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜುಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ. ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದ. ಅವನಿಂದ ಸುಮಾರು 53.29 ಗ್ರಾಂ ಎಂಡಿಎಂಎ ಮತ್ತು 2.33

ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಪೂರೈಸುತ್ತಿದ್ದ ಯುವಕ ಸೆರೆ Read More »

ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾದ ಮಹೇಶ್‌ ಶೆಟ್ಟಿ ತಿಮರೋಡಿ

ಕೆಲ ದಿನಗಳಿಂದ ಯಾರಿಗೂ ಸಿಗದಿದ್ದ ತಿಮರೋಡಿ ಇಂದು ದಿಢೀರ್‌ ಹಾಜರು ಮಂಗಳೂರು: ಕೆಲ ದಿನಗಳಿಂದ ಯಾರಿಗೂ ಕಾಣಿಸದಿದ್ದ ಮಹೇಶ್‌ ಶೆಟ್ಟಿ ತಿಮರೋಡಿ ಇಂದು ದಿಢೀರ್‌ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ಇಂದು ಹಾಜರಾಗಿದ್ದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಅವರನ್ನು ನಿಂದಿಸಿದ ಆರೋಪದಲ್ಲಿ ಬ್ರಹ್ಮಾವರ ಠಾಣೆಯಲ್ಲಿ ದಾಖಲಾದ ಕೇಸ್‌ಗೆ ಸಂಬಂದಿಸಿ ಆಗಸ್ಟ್‌ 21ರಂದು ಉಜಿರೆಯ ತಿಮರೋಡಿ ನಿವಾಸಕ್ಕೆ ಪೊಲೀಸರು ಆಗಮಿಸಿ ಮಹೇಶ್‌ ಶೆಟ್ಟಿಯನ್ನು ಬಂಧಿಸಿದ್ದರು. ಬಂಧನದ ವೇಳೆ

ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾದ ಮಹೇಶ್‌ ಶೆಟ್ಟಿ ತಿಮರೋಡಿ Read More »

ಬೆಂಗಳೂರು : ಸಿಖ್‌ ಗುರುದ್ವಾರಕ್ಕೆ ಬಾಂಬ್‌ ಬೆದರಿಕೆ

ಆರ್‌ಡಿಎಕ್ಸ್‌ ಇಟ್ಟು ಗುರುದ್ವಾರವನ್ನು ಸ್ಫೋಟಿಸುವುದಾಗಿ ಬೆದರಿಕೆ ಬೆಂಗಳೂರು : ಬೆಂಗಳೂರಿನ ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ಕು ಆರ್​​ಡಿಎಕ್ಸ್ ಸ್ಫೋಟಿಸುವುದಾಗಿ ರಾಜಗಿರಿ ಎಂಬಾತನ ಹೆಸರಿನಲ್ಲಿ ಕಳುಹಿಸಲಾದ ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿದ್ದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಋಷಿಪಾಲ್ ಸಿಂಗ್ ಎಂಬವರು ನೀಡಿದ ದೂರು

ಬೆಂಗಳೂರು : ಸಿಖ್‌ ಗುರುದ್ವಾರಕ್ಕೆ ಬಾಂಬ್‌ ಬೆದರಿಕೆ Read More »

ಜಪಾನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ದೂರಿ ಸ್ವಾಗತ

ವಾಣಿಜ್ಯ, ತಂತ್ರಜ್ಞಾನ ಅಭಿವೃದ್ಧಿ ನಿಟ್ಟಿನಲ್ಲಿ ಎರಡು ದಿನದ ಭೇಟಿ ಟೋಕಿಯೊ: ಎರಡು ದಿನಗಳ ಭೇಟಿಗಾಗಿ ಜಪಾನ್‌ಗೆ ಹೋಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜಪಾನ್‌ನಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಗಿದೆ. ಭಾರತ-ಜಪಾನ್ ಪಾಲುದಾರಿಕೆಯನ್ನು ಮುನ್ನಡೆಸಲು ಪ್ರಧಾನಿ ಮೋದಿಯವರು ಇಂದು ಸಂಜೆ ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರ ಈ ಭೇಟಿ ಎರಡೂ ದೇಶಗಳ ನಡುವಿನ ನಾಗರೀಕರು ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸಲು ಒಂದು ಅವಕಾಶವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಆಗಸ್ಟ್ 29ರಿಂದ

ಜಪಾನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ದೂರಿ ಸ್ವಾಗತ Read More »

ರಷ್ಯಾ ಡ್ರೋನ್‌ ದಾಳಿ : ಮುಳುಗಿದ ಉಕ್ರೇನ್‌ನ ಅತಿದೊಡ್ಡ ಸಮರ ನೌಕೆ

ತೀವ್ರಗೊಂಡ ರಷ್ಯಾ-ಉಕ್ರೇನ್‌ ಯುದ್ಧ ಮಾಸ್ಕೊ: ಕಳೆದ ಸುಮಾರು ಮೂರು ವರ್ಷಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್‌ ಯುದ್ಧ ಮತ್ತೆ ತೀವ್ರ ಸ್ವರೂಪ ತಾಳಿದ್ದು, ನಿನ್ನೆ ರಾತ್ರಿ ರಷ್ಯಾ ಡ್ರೋನ್‌ ದಾಳಿ ಮಾಡಿ ಉಕ್ರೇನ್‌ನ ನೌಕಾಪಡೆಯ ಪ್ರಮುಖ ಯುದ್ಧನೌಕೆಯೊಂದನ್ನು ಮುಳುಗಿಸಿದೆ. ಉಕ್ರೇನ್‌ನ ಗಸ್ತು ಹಡಗನ್ನು ರಷ್ಯಾ ಡ್ರೋನ್‌ ದಾಳಿ ನಡೆಸಿ ಮುಳುಗಿದೆ ಎಂದು ವರದಿಯಾಗಿದೆ. ಉಕ್ರೇನ್‌ ದೊಡ್ಡ ಗಸ್ತು ಹಡಗು ಸಿಮ್ಫೆರೊಪೋಲ್ ಡ್ಯಾನ್ಯೂಬ್ ನದಿಯಲ್ಲಿ ಸಂಚರಿಸುತ್ತಿದ್ದಾಗ ದಾಳಿ ನಡೆಸಲಾಗಿದೆ ಎಂದು ರಷ್ಯಾ ಹೇಳಿದೆ. ರೇಡಿಯೋ, ಎಲೆಕ್ಟ್ರಾನಿಕ್, ರಾಡಾರ್‌ಗಳನ್ನು ಈ ಹಡಗು ಹೊಂದಿತ್ತು.

ರಷ್ಯಾ ಡ್ರೋನ್‌ ದಾಳಿ : ಮುಳುಗಿದ ಉಕ್ರೇನ್‌ನ ಅತಿದೊಡ್ಡ ಸಮರ ನೌಕೆ Read More »

ಬಂಟ್ವಾಳ : 13 ವರ್ಷದ ಬಾಲಕನಿಂದ ಮಹಿಳೆಯರಿಗೆ ಕಿರುಕುಳ!

ರಾತ್ರಿ ಹೊತ್ತು ಸ್ಕೂಟರ್‌ನಲ್ಲಿ ಬಂದು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಾಲಕ ಬಂಟ್ವಾಳ : ಪಾಣೆಮಂಗಳೂರು ಪೇಟೆಯಲ್ಲಿ 13 ವರ್ಷ ಪ್ರಾಯದ ಬಾಲಕನೊಬ್ಬ ಮಹಿಳೆಯರಿಗೆ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪಾಣೆಮಂಗಳೂರು ಪೇಟೆ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ರಾತ್ರಿ ಸುಮಾರು 7.30-8 ಗಂಟೆಯ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಮಹಿಳೆಯರಿಗೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಕಿರುಕುಳ

ಬಂಟ್ವಾಳ : 13 ವರ್ಷದ ಬಾಲಕನಿಂದ ಮಹಿಳೆಯರಿಗೆ ಕಿರುಕುಳ! Read More »

ಪುತ್ತೂರು : ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಂಗ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಪರಿಚಿತನಾದ ಯುವಕನಿಂದ ಕೃತ್ಯ ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ರೈಲ್ವೆ ಹಳಿ ಪಕ್ಕದ ಗುಡ್ಡಗಾಡು ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಮೇಲೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ವಯಸ್ಸಿನ ಬಾಲಕಿ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಸಂತ್ರಸ್ತೆ ಕಳೆದ ಎರಡು

ಪುತ್ತೂರು : ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಂಗ ಬಂಧನ Read More »

ಮಂಗಳೂರಿನಲ್ಲೂ ನಡೆಯಲಿದೆ ಸಂಪುಟ ಸಭೆ : ಸ್ಪೀಕರ್‌ ಖಾದರ್‌ ಮಾಹಿತಿ

ಕರಾವಳಿಯ ಬೇಡಿಕೆಗಳಿಗೆ ಸ್ಪಂದಿಸಲು ಸದವಕಾಶ ಮಂಗಳೂರು: ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಸಚಿವ ಸಂಪುಟ ಸಭೆಗೆ ಮುಂಚಿತವಾಗಿ ಜಿಲ್ಲೆಯ ಅವಶ್ಯಕತೆಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸುವಂತೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಲಬುರಗಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಸಭೆಗಳು ನಡೆದಿವೆ. ಬಿಜಾಪುರದ ನಂತರ ಮಂಗಳೂರು ಸಚಿವ

ಮಂಗಳೂರಿನಲ್ಲೂ ನಡೆಯಲಿದೆ ಸಂಪುಟ ಸಭೆ : ಸ್ಪೀಕರ್‌ ಖಾದರ್‌ ಮಾಹಿತಿ Read More »

ಚಾಲಕನ ನಿರ್ಲಕ್ಷ್ಯ, ಅತಿವೇಗ ತಲಪಾಡಿಯ ಭೀಕರ ಅಪಘಾತಕ್ಕೆ ಕಾರಣ

ಗಾಯಾಳುಗಳ ಚಿಕಿತ್ಸೆಯ ಪೂರ್ತಿ ವೆಚ್ಚ ಭರಿಸುವುದಾಗಿ ಹೇಳಿದ ಕೆಎಸ್‌ಆರ್‌ಟಿಸಿ ಮಂಗಳೂರು: ತಲಪಾಡಿಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತ ಆಘಾತದ ಅಲೆಯೆಬ್ಬಿಸಿದೆ. ಚಾಲಕನೊಬ್ಬನ ನಿರ್ಲಕ್ಷ್ಯ 6 ಮಂದಿಯ ಜೀವ ಕಸಿದಿದೆ. ಆರು ಮಂದಿ ತಮ್ಮದಲ್ಲದ ತಪ್ಪಿಗೆ ವಿನಾಕಾರಣ ಪ್ರಾಣ ತೆತ್ತಿರುವುದು ನಿಜಕ್ಕೂ ದುರಂತ. ಬಸ್‌ ಚಾಲಕನ ಅತಿವೇಗ, ಅಜಾಗರೂಕತೆ ಕಾರಣ ಎಂದು ಕೆಎಸ್‌ಆರ್‌ಟಿಸಿ ಕೂಡ ಒಪ್ಪಿಕೊಂಡಿದೆ. ಬಸ್‌ ಚಾಲಕ ನಿಜಲಿಂಗಪ್ಪ ಚಲವಾದಿಯ ಅಜಾಗರೂಕತೆಯಿಂದ ಅಪಘಾತವಾಗಿದೆ. ಕಾಸರಗೋಡಿನಿಂದ ಮಂಗಳೂರಿಗೆ ಹೊರಟಿದ್ದ ಬಸ್‌ (ನಂ. KA19F3407) ತಲಪಾಡಿ ಟೋಲ್‌ಗಿಂತ 150

ಚಾಲಕನ ನಿರ್ಲಕ್ಷ್ಯ, ಅತಿವೇಗ ತಲಪಾಡಿಯ ಭೀಕರ ಅಪಘಾತಕ್ಕೆ ಕಾರಣ Read More »

error: Content is protected !!
Scroll to Top