ಸುದ್ದಿ

ಧರ್ಮಸ್ಥಳ ಪ್ರಕರಣ : ಬಿಗುವಿನ ಪರಿಸ್ಥಿತಿ ನಡುವೆಯೇ ಇಂದು 13ನೇ ಪಾಯಿಂಟ್‌ ಶೋಧ

ಕ್ಷೇತ್ರಕ್ಕೆ ಅವಮಾನ ಮಾಡುತ್ತಿರುವವರ ವಿರುದ್ಧ ಸಿಡಿದ ಧರ್ಮಸ್ಥಳ ಗ್ರಾಮಸ್ಥರು ಮಂಗಳೂರು: ಬುಧವಾರ ನಡೆದ ಹಲ್ಲೆ, ಘರ್ಷಣೆಯ ಅಹಿತಕರ ಘಟನೆಯ ಬಳಿಕ ಧರ್ಮಸ್ಥಳದ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ಇದರ ನಡುವೆಯೇ ಇಂದು ಅತಿ ಮಹತ್ವದ್ದು ಎನ್ನಲಾಗಿರುವ 13ನೇ ಪಾಯಿಂಟ್‌ನಲ್ಲಿ ಅಗೆತ ಕಾರ್ಯಾಚರಣೆ ನಡೆಯಲಿದೆ. ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈ ನಡುವೆ ಕೊನೆಯ ಪಾಯಿಂಟ್ ಆಗಿರುವ 13ನೇ ಜಾಗದ ಉತ್ಖನನ ವಿಶೇಷ ತನಿಖಾ ತಂಡ ಕಗ್ಗಂಟಾಗಿದೆ. ದೂರುದಾರ ಮುಸುಕುಧಾರಿ ತೋರಿಸಿದ […]

ಧರ್ಮಸ್ಥಳ ಪ್ರಕರಣ : ಬಿಗುವಿನ ಪರಿಸ್ಥಿತಿ ನಡುವೆಯೇ ಇಂದು 13ನೇ ಪಾಯಿಂಟ್‌ ಶೋಧ Read More »

ಟ್ರಂಪ್‌ ಸುಂಕ ಡಬ್ಬಲ್‌

ಭಾರತದ ಮೇಲೆ ಮತ್ತೆ ಶೇ.25 ಸುಂಖ ವಿಧಿಸಿದ ಅಮೆರಿಕ ಅಧ್ಯಕ್ಷ ನವದೆಹಲಿ : ರಷ್ಯಾದಿಂದ ತೈಲ ಖರೀದಿಸುತ್ತಿರುವುದರ ವಿರುದ್ದ ಭಾರತದ ಮೇಲೆ ಕೆಂಡ ಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತಕ್ಕೆ ಮತ್ತೆ ಶೇ.25 ವ್ಯಾಪಾರ ಸುಂಕ ವಿಧಿಸಿದ್ದಾರೆ. ಇದರೊಂದಿಗೆ ಭಾರತದ ಮೇಲೆ ಟ್ರಂಪ್‌ ಶುಲ್ಕ ಶೇ.50ಕ್ಕೇರಿದಂತಾಗಿದೆ.ಮಂಗಳವಾರವಷ್ಟೇ 24 ಗಂಟೆಯೊಳಗೆ ಭಾರತದ ಮೇಲಿನ ಸುಂಕವನ್ನು ಗಣನೀಯವಾಗಿ ಹೆಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಟ್ರಂಪ್‌ ಹೇಳಿದಂತೆ ಮಾಡಿ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ.25ರಷ್ಟು ಸುಂಕ ವಿಧಿಸಿದ್ದಾರೆ. ಈ ಮೂಲಕ

ಟ್ರಂಪ್‌ ಸುಂಕ ಡಬ್ಬಲ್‌ Read More »

ಧರ್ಮಸ್ಥಳ: ಯೂಟ್ಯೂಬರ್ಸ್ ಮೇಲೆ ಹಲ್ಲೆ, ಪೊಲೀಸರಿಂದ ಲಘು ಲಾಠಿ ಚಾರ್ಜ್

ಧರ್ಮಸ್ಥಳ: ಈಗಾಗಲೇ ದೇಶದೆಲ್ಲೆಡೆ ಸದ್ದು ಮಾಡಿರುವ ಧರ್ಮಸ್ಥಳ ಪ್ರಕರಣದಲ್ಲಿ ಅನಾಮಿಕ ದೂರುದಾರ ಗುರುತಿ ಮಾಡಿದ ಸ್ಥಳಗಳಲ್ಲಿ SIT ಶೋಧ ಕಾರ್ಯ ನಡೆಸುತ್ತಿದೆ. ಅದೇ ಪರಿಸರದಲ್ಲಿ ಇಂದು ಸಂಜೆ ಅಹಿತಕರ ಘಟನೆಯೊಂದು ಸದ್ದು ಮಾಡಿದೆ. ಸೌಜನ್ಯ ಪರ ಎಂದು ಹೇಳಿಕೊಂಡು ವಿಡಿಯೋಗಳನ್ನು ಮಾಡುತ್ತಿದ್ದ ಮೂವರು ಯೂಟ್ಯೂಬರ್ಸ್‌ ಮೇಲೆ ನೇತ್ರಾವತಿ ನದಿ ತೀರದ ಪಾಂಗಳ ಪರಿಸರದಲ್ಲಿ ಹಲ್ಲೆ ನಡೆದಿದೆ. ಯೂಟ್ಯೂಬರ್ಸ್ ಹಾಗು ಮತ್ತೊಂದು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು, ಹಲ್ಲೆಯ ವರೆಗೆ ತಲುಪಿದೆ. ಅಶಾಂತಿ ಸೃಷ್ಟಿಯಾಗುವ ಪರಿಸರ ನಿರ್ಮಾಣವಾದ

ಧರ್ಮಸ್ಥಳ: ಯೂಟ್ಯೂಬರ್ಸ್ ಮೇಲೆ ಹಲ್ಲೆ, ಪೊಲೀಸರಿಂದ ಲಘು ಲಾಠಿ ಚಾರ್ಜ್ Read More »

5 ವರ್ಷದ ಬಾಲಕಿ ಮೇಲೆ ಮಸೀದಿಯಲ್ಲಿ ಅತ್ಯಾಚಾರ: ಆರೋಪಿ ಬಂಧನ

ಬೆಳಗಾವಿ: ಯರಗಟ್ಟಿ ಪಟ್ಟಣದ ಮಸೀದಿಯಲ್ಲಿ 2023 ರ ಅಕ್ಟೋಬರ್ ತಿಂಗಳಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿ ತುಫೆಲಹ್ಮದ್ ದಾದಾಪೀರ್ ನಾಗರ್ಚಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಹಿಂದೂ ಕಾರ್ಯಕರ್ತ ಪುನೀತ್ ಕೆರೇಹಳ್ಳಿ ಅವರು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಮಸೀದಿ ಒಳಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೋಸ್ಟ್ ಮಾಡಿದ ಕಾರಣಕ್ಕೆ ಬೆಳಕಿಗೆ ಬಂದಿದೆ. ಟ್ವಿಟರ್ ಮೂಲಕ ಈ ಮಾಹಿತಿ ತಿಳಿದ ತಕ್ಷಣವೇ ಬೆಳಗಾವಿ ಪೊಲೀಸರು ಆರೋಪಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

5 ವರ್ಷದ ಬಾಲಕಿ ಮೇಲೆ ಮಸೀದಿಯಲ್ಲಿ ಅತ್ಯಾಚಾರ: ಆರೋಪಿ ಬಂಧನ Read More »

ಪಿಗ್ಮಿ ಸಂಗ್ರಹಕನಿಂದ ನಗದು ಕಳವು: ಆರೋಪಿ ಆರೆಸ್ಟ್

ಬ್ರಹ್ಮಾವರ: ಬೈಕಿನ ಸೈಟ್ ಬಾಕ್ಸ್‌ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳವು ಆರೋಪಿಯನ್ನು ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಂತೋಷ ಹನುಮಂತ ಕಟ್ಟಿಮನಿ (39) ಎಂದು ಗುರುತಿಸಲಾಗಿದೆ. ಈತನಿಂದ ಕಳವು ಮಾಡಿದ 32,000ರೂ. ನಗದು ಹಾಗೂ ಮೊಬೈಲ್ ಫೋನ್ ವಶಪಡಿಸಕೊಳ್ಳಲಾಗಿದೆ. ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕ ಅ.4ರಂದು ಸಂಜೆ ಬ್ರಹ್ಮಾವರ ಶಿವಳ್ಳಿ ಹೋಬೆಲ್ ಎದುರುಗಡೆ ಕರ್ನಾಟಕ ಬ್ಯಾಂಕ್ ಎಟಿಎಮ್ ಬಳಿ ಪಿಗ್ಮಿ ಕಲೆಕ್ಷನ್ ಮಾಡಿದ ನಗದನ್ನು ಬೈಕ್‌ನ

ಪಿಗ್ಮಿ ಸಂಗ್ರಹಕನಿಂದ ನಗದು ಕಳವು: ಆರೋಪಿ ಆರೆಸ್ಟ್ Read More »

ಅಕ್ಷಯ ಕಾಲೇಜಿನಲ್ಲಿ ಪಾಟ್ಲಕ್ ಕಾರ್ಯಾಗಾರ

ಪುತ್ತೂರು: ಅಕ್ಷಯ ಕಾಲೇಜಿನ ಹಾಸ್ಪಿಟಾಲಿಟಿ ಸೈನ್ಸ್ ವಿಭಾಗದ ವತಿಯಿಂದ “ಪಾಟ್ಲಕ್” ಎಂಬ ಕಾರ್ಯಾಗಾರ ನಡೆಯಿತು.ಈ ಕಾರ್ಯಾಗಾರವು ಪಾಕಶಾಲೆಯ ಕಲೆಗಳು ಮತ್ತು ಆಹಾರ ಪ್ರಸ್ತುತಿಯ ಮೇಲೆ ಕೇಂದ್ರೀಕರಿಸಿತ್ತು. ಗಯಾ ಕೆಫೆಯ ಪ್ರಸಿದ್ಧ ಪಾಕಶಾಲೆಯ ತಜ್ಞ ಶೆಫ್ ಪ್ರಜ್ವಲ್ ಡಿ’ಸೋಜ ನೇತೃತ್ವ ವಹಿಸಿದ್ದರು. ಅವರು ಆಹಾರ ಕ್ಯಾನ್ವಾಸ್, ಆಹಾರ ಅಲಂಕಾರ ತಂತ್ರಗಳು ಮತ್ತು ಆಹಾರದ ದೃಶ್ಯ ಆಕರ್ಷಣೆಯನ್ನು ಹೆಚ್ಚಿಸುವಲ್ಲಿ ಬಣ್ಣಗಳ ಪಾತ್ರದ ಕುರಿತು ಮಾಹಿತಿ ಹಂಚಿಕೊಂಡರು. ಶೆಫ್ ಪ್ರಜ್ವಲ್ ಡಿ’ಸೋಜ ಅವರ ಅಧಿವೇಶನವು ಮಾಹಿತಿಯುಕ್ತವಾಗಿದ್ದು, ವಿದ್ಯಾರ್ಥಿಗಳಿಗೆ ಪಾಕಶಾಲೆಯ ಪ್ರಸ್ತುತಿಯ ಬಗ್ಗೆ

ಅಕ್ಷಯ ಕಾಲೇಜಿನಲ್ಲಿ ಪಾಟ್ಲಕ್ ಕಾರ್ಯಾಗಾರ Read More »

ಪಶು ವೈದ್ಯೆ ಕೀರ್ತನಾ ಜೋಶಿ ಆತ್ಮಹತ್ಯೆ

ಪುತ್ತೂರು: ಇಲ್ಲಿನ ಬಪ್ಪಳಿಗೆ ನಿವಾಸಿ, ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ (27 ವ.) ಅವರು ಸೋಮವಾರ ರಾತ್ರಿ ಮಂಗಳೂರಿನ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು, ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪಶುವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿರುವ ಡಾ. ಕೀರ್ತನಾ ಜೋಶಿ ಅವರು ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಸೋಮವಾರ ತಡರಾತ್ರಿ ಸ್ವಗೃಹದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು

ಪಶು ವೈದ್ಯೆ ಕೀರ್ತನಾ ಜೋಶಿ ಆತ್ಮಹತ್ಯೆ Read More »

ಸಾರ್ವಜನಿಕ ಶ್ರೀ ಗಣೇಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಸವಣೂರು:  ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಸವಣೂರು. ಇದರ 43 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯನ್ನು ಗೌರವಧ್ಯಕ್ಷರಾದ ಶ್ರೀ ಕೆ ಸೀತಾರಾಮ ರೈಯವರ ಉಪಸ್ಥಿತಿಯಲ್ಲಿ ಆಗಸ್ಟ್ 4 ರಂದು ಸವಣೂರಿನ ವಿನಾಯಕ ಸಭಾ ಭವನದಲ್ಲಿ ನಡೆಯಿತು.  ಅಧ್ಯಕ್ಷರಾದ ಶ್ರೀ ಪ್ರಭಾಕರ ಶೆಟ್ಟಿ ನಡುಬೈಲು ಗಣೇಶೋತ್ಸವ ಸಮಿತಿ ಪೋಷಕರು ಉದ್ಯಮಿಗಳು ಬೆಳ್ಳಿಯ ಕಿರೀಟದ ಸೇವಕರ್ತಾರಾದ ಶ್ರೀ ಎನ್ ಸುಂದರ ರೈ ಸವಣೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ರಾಕೇಶ್ ರೈ ಕೆಡೆಂಜಿ,

ಸಾರ್ವಜನಿಕ ಶ್ರೀ ಗಣೇಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಸ್ವಾಮೀಜಿಗೆ ಆನ್‌ಲೈನ್‌ನಲ್ಲಿ ಬಂತು ಮುಸ್ಲಿಂ ಟೋಪಿ!

ಮೂಲ ಧರ್ಮ ಮರೆಮಾಚಿದ ಹಿನ್ನೆಲೆಯಲ್ಲಿ ಮಠ ತೊರೆದಿದ್ದ ಸ್ವಾಮೀಜಿಯ ನಡೆ ಬಗ್ಗೆ ಅನುಮಾನ ಚಾಮರಾಜನಗರ : ಮೂಲ ಧರ್ಮ ಮರೆಮಾಚಿ ಗುಂಡ್ಲುಪೇಟೆಯ ಲಿಂಗಾಯತ ಮಠವೊಂದಕ್ಕೆ ಮಠಾಧೀಶರಾಗಿದ್ದ ಮುಸ್ಲಿಂ ಯುವಕನ ಹೆಸರಿಗೆ ಆನ್‌ಲೈನ್‌ ಮೂಲಕ ಮುಸ್ಲಿಂ ಟೋಪಿ ಬಂದಿರುವುದು ಮತ್ತು ಅವರ ಕೆಲವು ಫೋಟೊ ಮತ್ತು ವಿಡಿಯೋಗಳು ಬಹಿರಂಗವಾಗಿ ಹೊಸ ವಿವಾದ ಸೃಷ್ಟಿಯಾಗಿದೆ. ಲಿಂಗದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಯುವಕ ತಮ್ಮ ಮೂಲ ಧರ್ಮದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಹಾಗೂ ತಮ್ಮ ದಾಖಲಾತಿಗಳಲ್ಲಿ ಮೂಲಧರ್ಮದ ಹೆಸರನ್ನು ಉಳಿಸಿಕೊಂಡಿರುವುದು

ಸ್ವಾಮೀಜಿಗೆ ಆನ್‌ಲೈನ್‌ನಲ್ಲಿ ಬಂತು ಮುಸ್ಲಿಂ ಟೋಪಿ! Read More »

ಬೆಳ್ತಂಗಡಿ : ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಲ್ಲೆಸೆತ

ಬೆಳ್ತಂಗಡಿ: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಹಾನಿಯುಂಟುಮಾಡಿದ ಘಟನೆ ಮಂಗಳವಾರ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಬಸ್ಸಿಗೆ ಅಜ್ಞಾತ ದುಷ್ಕರ್ಮಿಗಳು ಕಲ್ಲು ಹೊಡೆದಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಕೆ.ಎ 21 ಎಫ್ 0103 ನಂಬರ್‌ನ ಬಸ್ಸನ್ನು ಚಾಲಕ ಧರ್ಮಸ್ಥಳದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್

ಬೆಳ್ತಂಗಡಿ : ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಲ್ಲೆಸೆತ Read More »

error: Content is protected !!
Scroll to Top