ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಂದ ಹಣ ಪಡೆದು ವಂಚನೆ : ನಕಲಿ ಅಳಿಯ-ಮಾವ ಸೆರೆ

ಮಂಗಳೂರು, ಉಡುಪಿ, ಕಾರ್ಕಳದ 9 ಯುವತಿಯರಿಗೆ ವಂಚಿಸಿರುವ ಆರೋಪಿಗಳು ಮಂಗಳೂರು : ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಆರೋಪಿ ಹಾಗೂ ಅವನಿಗೆ ಸಹಾಯ ಮಾಡುತ್ತಿದ್ದವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಇವರಿಬ್ಬರ ಬಂಧನದಿಂದ ಬೆಳಕಿಗೆ ಬಂದಿದೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನ ವಂಚನೆಗೆ ಸಾಥ್ ನೀಡಿದ್ದ ಮೂಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. […]

ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಂದ ಹಣ ಪಡೆದು ವಂಚನೆ : ನಕಲಿ ಅಳಿಯ-ಮಾವ ಸೆರೆ Read More »

ತಾಯಿಯ ಕುಡಿತದ ಚಟಕ್ಕೆ ಬಲಿಯಾಯ್ತು ಮುಗ್ಧ ಮಗಳ ಜೀವ

ಯಾದಗಿರಿ: ಮದ್ಯ ಸೇವನೆ ನಿಲ್ಲಿಸುವಂತೆ ಬೇಡಿಕೊಂಡ ಪುತ್ತಿಯನ್ನೇ ನಿರ್ದಯವಾಗಿ ಹೆತ್ತಮ್ಮನೇ ಕೊಂದು ಹಾಕಿದ ಘಟನೆ ರಾಜೀವ್ ನಗರದಲ್ಲಿ ನಡೆದಿದೆ. ಪ್ರತಿಭಾ (11) ಮೃತ ದುರ್ದೈವಿ‌. ಆರೋಪಿ ಕ್ರೂರಿ‌ ತಾಯಿಯನ್ನು ನಿರ್ಮಲಾ ಎಂದು ಗುರುತಿಸಲಾಗಿದೆ. ನಿರ್ಮಲಾಳಿಗೆ ಕುಡಿತದ ಚಟ ಇದ್ದು, ಅದನ್ನು ಬಿಟ್ಟುಬಿಡುವಂತೆ ಪುಟ್ಟ ಮಗು ಅಮ್ಮನಿಗೆ ಹೇಳಿದ್ದಳು. ಇದರಿಂದ ಕೋಪಗೊಂಡ ನಿರ್ಮಲಾ ಅವಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಬಳಿಕ ಆಕೆ ಜ್ಯೂಸ್ ಕುಡಿಯಲು ಹಣ ಕೇಳಿದಾಗ ನೀಡದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕಥೆ ಕಟ್ಟಿದ್ದಾಳೆ.

ತಾಯಿಯ ಕುಡಿತದ ಚಟಕ್ಕೆ ಬಲಿಯಾಯ್ತು ಮುಗ್ಧ ಮಗಳ ಜೀವ Read More »

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ: ಸುಟ್ಟು ಕರಕಲಾದ ವಸ್ತುಗಳು

ವೀರಕಂಭ: ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿರುವ ವಸ್ತುಗಳೆಲ್ಲಾ ಆಹುತಿಯಾದ ಘಟನೆ ಗಣೇಶ್ ಕೋಡಿಯಲ್ಲಿ ನಡೆದಿದೆ. ರಾಜೇಶ್ವರಿ ಎಂಬವರ ‌ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವುದಾಗಿದೆ. ಇದರಿಂದಾಗಿ ಮನೆಯಲ್ಲಿದ್ದ ಬಟ್ಟೆ ಬರೆ ಸೇರಿದಂತೆ ಇತರ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದೇ ಇದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಅಕ್ಕಪಕ್ಕದ ಮನೆಯವರು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ: ಸುಟ್ಟು ಕರಕಲಾದ ವಸ್ತುಗಳು Read More »

ಮಗಳ ವಿದ್ಯಾಭ್ಯಾಸಕ್ಕೆ ತೊಂದರೆ ಕೊಟ್ಟ ಕುಡುಕ ತಂದೆಗೆ ಪೊಲೀಸರಿಂದ ಕ್ಲಾಸ್

ದಾವಣಗೆರೆ: ಮಗಳು ಶಾಲೆಗೆ ಹೋಗದಂತೆ ತಡೆಯಲು ಕುಡುಕ ತಂದೆಯೊಬ್ಬ ಅವಳ ಪುಸ್ತಕಗಳನ್ನೆಲ್ಲಾ ‌ಸುಟ್ಟು ಹಾಕಿದ್ದು,‌ ಸಂತ್ರಸ್ತ ಬಾಲಕಿ ಪೊಲೀಸರಿಗೆ ದೂರು ನೀಡಿದ ಘಟನೆ ನ್ಯಾಮತಿ ತಾಲೂಕಿನ ಆರುಂಡಿಯಲ್ಲಿ ‌ನಡೆದಿದೆ. ಹುಡುಗಿ 10 ನೇ ತರಗತಿಯಲ್ಲಿ ಕಲಿಯುತ್ತಿದ್ದು ಶಾಲೆಗೆ ಹೋಗದಂತೆ ಆಕೆಗೆ ತಂದೆಯೇ ಗದರಿದ್ದಾನೆ. ಜೊತೆಗೆ ಆಕೆಯ ಶಾಲೆಯ ಬ್ಯಾಗ್‌ನಲ್ಲಿದ್ದ ಪುಸ್ತಕಗಳನ್ನು ಸುಟ್ಟು ಹಾಕಿದ್ದಾನೆ. ಈ ವೇಳೆ ಶಾಲೆಗೆ ಹೋಗಲೇ ಬೇಕು ಎಂದು ಹಠ ಹಿಡಿದ ಮಗಳು ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾಳೆ. ತಕ್ಷಣವೇ ಸ್ಥಳಕ್ಕೆ ಬಂದ

ಮಗಳ ವಿದ್ಯಾಭ್ಯಾಸಕ್ಕೆ ತೊಂದರೆ ಕೊಟ್ಟ ಕುಡುಕ ತಂದೆಗೆ ಪೊಲೀಸರಿಂದ ಕ್ಲಾಸ್ Read More »

ವಿದ್ಯಾರ್ಥಿನಿ ಅಪಹರಣ ಪ್ರಹಸನಕ್ಕೆ ಟ್ವಿಸ್ಟ್: ತಾನೇ ಕೈಗೆ ಗೀರಿಕೊಂಡು ಅಪಹರಣದ ನಾಟಕವಾಡಿದಳಾ ಯುವತಿ?

ಬೆಳ್ತಂಗಡಿ: ಮೂವರು ದುಷ್ಕರ್ಮಿಗಳಿಂದ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಎನ್ನುವ ಸುದ್ದಿಗೆ ಟ್ವಿಸ್ಟ್ ಸಿಕ್ಕಿದ್ದು, ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡಿನಿಂದ ಗೀರಿಕೊಂಡು ಅಪಹರಣದ ಕಥೆ ಕಟ್ಟಿದ್ದಳು ಎನ್ನುವ ಸತ್ಯಾಂಶ ಪೊಲೀಸರ ತನಿಖೆಯ ವೇಳೆ ಬಯಲಾಗಿದೆ. ಮೂವರು ದುಷ್ಕರ್ಮಿಗಳು ಕಾರಿನಲ್ಲಿ ಬಂದು ಅಪಹರಣಕ್ಕೆ ಯತ್ನಿಸಿ‌, ತನ್ನ ಕೈಗೆ ಚಾಕು ಚುಚ್ಚಿ ಪರಾರಿಯಾದರು ಎಂದು ಯುವತಿ ಹೇಳಿದ್ದಳು. ಆದರೆ ಆಕೆ ಹೇಳಿದಂತ ಯಾವ ಘಟನೆಯೂ ‌ಸ್ಥಳದಲ್ಲಿ ನಡೆದಂತೆ ಇರಲಿಲ್ಲ. ಪೊಲೀಸರು ಸಹ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಸಿಟಿವಿ ಪರಿಶೀಲನೆ ಸೇರಿದಂತೆ

ವಿದ್ಯಾರ್ಥಿನಿ ಅಪಹರಣ ಪ್ರಹಸನಕ್ಕೆ ಟ್ವಿಸ್ಟ್: ತಾನೇ ಕೈಗೆ ಗೀರಿಕೊಂಡು ಅಪಹರಣದ ನಾಟಕವಾಡಿದಳಾ ಯುವತಿ? Read More »

ವಿಧಾನಸೌಧದ ಸಚಿವರ ಕಚೇರಿಯಲ್ಲೇ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳವು

ಸಂದರ್ಶಕರೊಬ್ಬರು ಮರೆತು ಹೋದ ಬ್ಯಾಗ್‌ ಕಳ್ಳತನ ಬೆಂಗಳೂರು : ಹೆಚ್ಚಿನ ಭದ್ರತೆ ಇರುವ ಸ್ಥಳವಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300

ವಿಧಾನಸೌಧದ ಸಚಿವರ ಕಚೇರಿಯಲ್ಲೇ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳವು Read More »

ಕಾಸರಗೋಡಿನ ಖ್ಯಾತ ಸೋಷಿಯಲ್ ಮೀಡಿಯಾ ಇನ್ಫ್ಲುಯನ್ಸರ್ ಆತ್ಮಹತ್ಯೆಗೆ ಶರಣು

ಕಾಸರಗೋಡು: ಸಾಮಾಜಿಕ ಜಾಲತಾಣದ ಇನ್ಫ್ಲುಯೆನ್ಸರ್, ಕಾಸರಗೋಡಿನ ಅಡೂರು ಮೂಲದ ಚಿನ್ನು ನಾನು ಖ್ಯಾತಿಯ ರೇಷ್ಮಾ(24) ಅವರು ಉಳಿಯತ್ತಡ್ಕದಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೇಷ್ಮಾ ಅವರಿಗೆ ಒಂದು ಮಗುವೂ ಇದ್ದು, ಇತ್ತೀಚೆಗಷ್ಟೇ ಪತಿಯಿಂದ ‌ವಿಚ್ಛೇದನ ಪಡೆದಿದ್ದರು. ಕಾಸರಗೋಡು ಮಲೆಯಾಳಂ, ತುಳು ಮೂಲಕವೇ ರೀಲ್ಸ್ ಮಾಡಿ ಜನಪ್ರಿಯರಾಗಿದ್ದ ರೇಷ್ಮಾ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರಿಗೆ ಸಾಮಾಜಿಕ ಜಾಲತಾಣದಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಕರಿದ್ದರು. ನೇಣು ಬಿಗಿದ ‌ಸ್ಥಿತಿಯಲ್ಲಿದ್ದ

ಕಾಸರಗೋಡಿನ ಖ್ಯಾತ ಸೋಷಿಯಲ್ ಮೀಡಿಯಾ ಇನ್ಫ್ಲುಯನ್ಸರ್ ಆತ್ಮಹತ್ಯೆಗೆ ಶರಣು Read More »

ತಲೆಗೆ ಗಾಯವಾಗಿ ವೃದ್ಧ ಸಾವು : ಸಾವಿನ ಬಗ್ಗೆ ಅನುಮಾನ

ಮನೆಯಲ್ಲೇ ಬಿದ್ದಿತ್ತು 73ರ ಹರೆಯದ ವ್ಯಕ್ತಿಯ ಶವ ಕಡಬ: ವೃದ್ಧರೊಬ್ಬರು ತಲೆಗೆ ಗಾಯಗೊಂಡ ಸ್ಥಿತಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ನೆಲ್ಯಾಡಿಯಲ್ಲಿರುವ ಅವರ ನಿವಾಸದಲ್ಲಿ ಭಾನುವಾರ ಶವ ಪತ್ತೆಯಾಗಿದೆ. ಮೃತರನ್ನು ಕಡಬ ನೆಲ್ಯಾಡಿ ಗ್ರಾಮದ ನಿವಾಸಿ ಕೆ.ಸಿ. ವರ್ಗೀಸ್ (73) ಎಂದು ಗುರುತಿಸಲಾಗಿದೆ. ಕೆ.ವಿ.ಥಾಮಸ್ ಸಲ್ಲಿಸಿದ ದೂರಿನ ಪ್ರಕಾರ, ಭಾನುವಾರ ಮಧ್ಯಾಹ್ನ ಚಿಕಿತ್ಸೆಗಾಗಿ ತನ್ನ ತಾಯಿಯನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ದಿದ್ದರು. ರಾತ್ರಿ 8 ಗಂಟೆಗೆ ಅವರನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋದ ನಂತರ, ರಾತ್ರಿ 11 ಗಂಟೆಗೆ ಮನೆಗೆ

ತಲೆಗೆ ಗಾಯವಾಗಿ ವೃದ್ಧ ಸಾವು : ಸಾವಿನ ಬಗ್ಗೆ ಅನುಮಾನ Read More »

ಮತ್ತೆ ತಾರಕಕ್ಕೇರಿದ ಕಾಂಗ್ರೆಸ್‌ ಕುರ್ಚಿ ಫೈಟ್‌ : ಡಿಕೆಶಿ ದಿಢೀರ್‌ ದಿಲ್ಲಿ ದೌಡು

ಭಾರಿ ಕುತೂಹಲ ಕೆರಳಿಸಿದ ಡಿಕೆಶಿ ಹೈಕಮಾಂಡ್‌ ಭೇಟಿ ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವಿನ ಎರಡನೇ ಸುತ್ತಿನ ಕುರ್ಚಿ ಜಗಳ ತಾರಕಕ್ಕೇರಿದೆ. ಶಿವಕುಮಾರ್‌ ಈ ಸಲ ಏನಾದರೊಂದು ತೀರ್ಮಾನವಾಗಲೇಬೇಕು ಎಂದು ಹಠಕ್ಕೆ ಬಿದ್ದಿದ್ದು, ಅವರ ಇತ್ತೀಚೆಗಿನ ಹೇಳಿಕೆಗಳು ಮತ್ತು ನಡೆಗಳು ಇದನ್ನು ಪುಷ್ಟೀಕರಿಸುತ್ತಿವೆ. ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ವದಂತಿಗಳು ಮುಂದುವರಿದಿರುವಂತೆಯೇ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಕೈಬಿಟ್ಟು ಡಿ.ಕೆ.ಶಿವಕುಮಾರ್ ಇಂದು ದೆಹಲಿಗೆ

ಮತ್ತೆ ತಾರಕಕ್ಕೇರಿದ ಕಾಂಗ್ರೆಸ್‌ ಕುರ್ಚಿ ಫೈಟ್‌ : ಡಿಕೆಶಿ ದಿಢೀರ್‌ ದಿಲ್ಲಿ ದೌಡು Read More »

ಅಯೋಧ್ಯೆ ಮೇಲೆ ದಾಳಿ ಮಾಡುಲುದ್ದೇಶಿಸಿದ್ದ ಉಗ್ರ ಜೈಲಿನಲ್ಲಿ ಹತ್ಯೆ

ಸಹಕೈದಿಯ ಜೊತೆಗೆ ನಡೆದ ಜಗಳದಲ್ಲಿ ಸಾವಿಗೀಡಾದ ಉಗ್ರ ಲಖನೌ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಸೆರೆಯಾಗಿ ಫರಿದಾಬಾದ್ ಜೈಲಿನಲ್ಲಿದ್ದ ಉಗ್ರನನ್ನು ಸಹಕೈದಿಯೊಬ್ಬ ಕೊಲೆ ಮಾಡಿದ್ದಾನೆ. ಅಬ್ದುಲ್ ರೆಹಮಾನ್(20) ಕೊಲೆಯಾದ ಆರೋಪಿಯಾಗಿದ್ದು, ಜೈಲಿನಲ್ಲಿದ್ದ ಕಾಶ್ಮೀರಿ ಯುವಕ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆ ಎಸಗಿದ್ದಾನೆ. ಅಬ್ದುಲ್ ರೆಹಮಾನ್ ಮತ್ತು ಅರುಣ್‌ ಚೌಧರಿ ಮಧ್ಯೆ ಭಾನುವಾರ ಜಗಳ ನಡೆದು ವಿಕೋಪಕ್ಕೆ ತಿರುಗಿ ರಾತ್ರಿ 8 ಗಂಟೆಯ ವೇಳೆಗೆ ಅರುಣ್

ಅಯೋಧ್ಯೆ ಮೇಲೆ ದಾಳಿ ಮಾಡುಲುದ್ದೇಶಿಸಿದ್ದ ಉಗ್ರ ಜೈಲಿನಲ್ಲಿ ಹತ್ಯೆ Read More »

error: Content is protected !!
Scroll to Top