ಸುದ್ದಿ

ಏ.1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ

ಟೋಲ್ ದರ ಶೇ 4ರಿಂದ 5ರಷ್ಟು ಏರಿಕೆ ಬೆಂಗಳೂರು : ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಪ್ರಯಾಣ ಶುಲ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನಿಸಿದೆ. ಇದರಿಂದಾಗಿ ಕರ್ನಾಟಕದ ಪ್ರಮುಖ 9 ಹೆದ್ದಾರಿಗಳಲ್ಲಿ ಕಾರು, ಬಸ್ ಮತ್ತು ಲಾರಿಗಳ ಟೋಲ್ ದರದಲ್ಲಿ ಶೇ 4ರಿಂದ 5ರಷ್ಟು ಏರಿಕೆಯಾಗಲಿದೆ. ರಾಜ್ಯದ ಆರ್ಥಿಕ ಜೀವನಾಡಿಗಳಂತಿರುವ ಬೆಂಗಳೂರು-ಮಂಗಳೂರು, ಮಂಗಳೂರು-ಉಡುಪಿ-ಕುಂದಾಪುರ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ, ಬೆಂಗಳೂರು-ತುಮಕೂರು, ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಹಾಸನ ಸೇರಿದಂತೆ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ದರ […]

ಏ.1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ Read More »

ಜಾನುವಾರು ಕಳವು ಪ್ರಕರಣ ಆರೋಪಿಗಳ ವಿರುದ್ಧ ಕೋಕಾ ಅನ್ವಯ

ಕಳೆದ ವರ್ಷ ಕಾರ್ಕಳದಲ್ಲಿ ನಡೆದಿದ್ದ ಗೋ ಕಳ್ಳತನ ಕಾರ್ಕಳ : ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿ ಎಂಬಲ್ಲಿ ಕಳೆದ ವರ್ಷ ನಡೆದ ಜಾನುವಾರು ಕಳವು ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಕಾಯ್ದೆ ಅನ್ವಯಿಸಿ ಮರಳಿ ಬಂಧಿಸಲಾಗಿದೆ. ಜಯಶ್ರೀ ಪೂಜಾರಿ ಎಂಬವರ ಮನೆಯ ಹಟ್ಟಿಗೆ ನುಗ್ಗಿದ ಆರೋಪಿಗಳು ಜಾನುವಾರುಗಳನ್ನು ಕಳವು ಮಾಡಲು ಯತ್ನಿಸಿದಾಗ ತಡೆಯಲು ಬಂದ ಮನೆಯವರನ್ನು ತಲವಾರು ತೋರಿಸಿ ಬೆದರಿಸಿದ್ದರು. ಹಟ್ಟಿಯಲ್ಲಿದ್ದ ಮೂರು ಜಾನುವಾರುಗಳ ಹಗ್ಗಗಳನ್ನು ಕತ್ತರಿಸಿ ವಾಹನದಲ್ಲಿ ತುಂಬಿಕೊಂಡು ಹೋಗಿ ವಧೆ ಮಾಡಿರುವುದು ಬೆಳಕಿಗೆ ಬಂದಿದೆ.

ಜಾನುವಾರು ಕಳವು ಪ್ರಕರಣ ಆರೋಪಿಗಳ ವಿರುದ್ಧ ಕೋಕಾ ಅನ್ವಯ Read More »

ಕಾರ್ಕಳದ ಪತ್ನಿ ಮನೆಯಲ್ಲಿ ನೆಲ್ಯಾಡಿಯ ನವವಿವಾಹಿತ ಆತ್ಮಹತ್ಯೆ : ದೂರು ದಾಖಲು

ಪ್ರೀತಿಸಿ ಮದುವೆಯಾಗಿದ್ದ ಯುವ ಉದ್ಯಮಿಯ ಬದುಕು ಒಂದೇ ತಿಂಗಳಲ್ಲಿ ದುರಂತ ಅಂತ್ಯ ಕಾರ್ಕಳ : ಒಂದು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಯುವ ಉದ್ಯಮಿ ಕಾರ್ಕಳದಲ್ಲಿರುವ ಪತ್ನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ನಾನಾ ಅನುಮಾನಗಳಿಗೆ ಕಾರಣವಾಗಿದೆ. ಮಾ.17ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಟದಲ್ಲಿದ್ದವರು ಚಿಕಿತ್ಸೆ ಫಲಿಸದೆ ಮಾ.29ರಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ

ಕಾರ್ಕಳದ ಪತ್ನಿ ಮನೆಯಲ್ಲಿ ನೆಲ್ಯಾಡಿಯ ನವವಿವಾಹಿತ ಆತ್ಮಹತ್ಯೆ : ದೂರು ದಾಖಲು Read More »

ಪತ್ನಿಯ ವಿಕೃತ ಬೇಡಿಕೆ : ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

ಪತ್ನಿಯ ಕಾಟದಿಂದ ಮುಕ್ತಿ ಕೊಡುವಂತೆ ಪೊಲೀಸರಿಗೆ ಮೊರೆ ಬೆಂಗಳೂರು: ಪತ್ನಿಯ ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ತಾಳಲಾರದೆ ಪತಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪತ್ನಿಯ ವಿಪರೀತ ವಿಕೃತ ಲೈಂಗಿಕ ಬೇಡಿಕೆ, ತಾನು ಮಾತ್ರವಲ್ಲದೆ ತನ್ನ ಸ್ನೇಹಿತೆಯ ಜೊತೆಗೂ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸುತ್ತಿದ್ದಾಳೆಂದು ದೂರಿನಲ್ಲಿ ತಿಳಿಸಿದ್ದಾರೆ. ನನ್ನ ಪತ್ನಿ ಅಶ್ಲೀಲ ವೀಡಿಯೋಗಳನ್ನು ಕಳುಹಿಸಿ

ಪತ್ನಿಯ ವಿಕೃತ ಬೇಡಿಕೆ : ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ Read More »

ನವಮಂಗಳೂರು ಬಂದರಿನಲ್ಲಿ ಮುಗಿಲೆತ್ತರ ಚಿಮ್ಮಿದ ಸುಂಟರಗಾಳಿ

ಮಂಗಳೂರು: ನವಮಂಗಳೂರು ಬಂದರು ಒಳಗಡೆ ಭಾನುವಾರ ಸುಂಟರಗಾಳಿ ಕಾಣಿಸಿಕೊಂಡು ಮುಗಿಲೆತ್ತರ ಚಿಮ್ಮಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಪಣಂಬೂರಿನಲ್ಲಿರುವ ನವಮಂಗಳೂರು ಬಂದರಿನಲ್ಲಿ ಕಲ್ಲಿದ್ದಲು ರಾಶಿ ಹಾಕಿರುವ‌ ಸ್ಥಳದಲ್ಲಿ ಭಾರಿ ಸುಂಟರಗಾಳಿ ಎದ್ದಿದೆ. ಕಪ್ಪು ಮಿಶ್ರಿತ ಮಣ್ಣಿನೊಂದಿಗೆ ನೆಲದಿಂದ ಆಕಾಶದೆತ್ತರಕ್ಕೆ ಸುಂಟರಗಾಳಿ ಹೋಗಿತ್ತು. ಬುಗುರಿ ತಿರುಗಿದಂತೆ ತಿರುಗಿದ ಸುಂಟರಗಾಳಿಯ ದೃಶ್ಯವನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

ನವಮಂಗಳೂರು ಬಂದರಿನಲ್ಲಿ ಮುಗಿಲೆತ್ತರ ಚಿಮ್ಮಿದ ಸುಂಟರಗಾಳಿ Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ತಪ್ಪೊಪ್ಪಿಕೊಂಡ ಉಗ್ರ

2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಬೆಂಗಳೂರು: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಉಗ್ರ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ. ಶಿವಮೊಗ್ಗದ ಶಾರೀಕ್ (27) 2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಕಂಕನಾಡಿ ಸಮೀಪ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ. ಟೈಮರ್ ದೋಷದಿಂದ ಸಂಭವಿಸಿದ್ದ ಸ್ಫೋಟದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. ಉಗ್ರನನ್ನು ಆಸ್ಪತ್ರೆಗೆ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ತಪ್ಪೊಪ್ಪಿಕೊಂಡ ಉಗ್ರ Read More »

ಭೀಕರ ಅಪಘಾತ : ತಾಯಿ-ಮಗಳು ದುರ್ಮರಣ

ದೇವಸ್ಥಾನಗಳಿಗೆ ಭೇಟಿ ನೀಡಿ ಮರಳುತ್ತಿರುವಾಗ ಸಂಭವಿಸಿದ ಅಪಘಾತ ಉಡುಪಿ: ಟ್ರಕ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ತಾಯಿ-ಮಗಳು ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಬೆಂಗಳೂರಿನ ನೆಲಮಂಗಲ ನಿವಾಸಿ ರಾಘು ಎಂಬವರ ಪತ್ನಿ ಮಮತಾ (36), ಪುತ್ರಿ ಧೃತಿಕ (14) ಮೃತ ದುರ್ದೈವಿಗಳು. ಇನ್ನೊರ್ವ ಮಗಳು ಜಾಹ್ನವಿ (12) ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಘು ಕುಂದಾಪುರ

ಭೀಕರ ಅಪಘಾತ : ತಾಯಿ-ಮಗಳು ದುರ್ಮರಣ Read More »

ಎಂಟು ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ ಅಪರಾಧಿ ಪತ್ತೆ

ಬಸವರಾಜು ಎಂದು ಹೆಸರು ಬದಲಿಸಿಕೊಂಡಿದ್ದ ಸುಳ್ಯದ ಅಜೀಜ್‌ ಮಂಗಳೂರು: ಎಂಟು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ಹೆಸರು ಬದಲಿಸಿ ಆಂಧ್ರಪ್ರದೇಶದಲ್ಲಿ ಅಡಗಿದ್ದ ಸುಳ್ಯದ ಮೋಸ್ಟ್ ವಾಂಟೆಡ್ ಅಪರಾಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಪ್ರಕರಣದಲ್ಲಿ ಶಿಕ್ಷೆಯಾದ ಬಳಿಕ ತಲೆಮರೆಸಿಕೊಂಡಿದ್ದ ಸುಳ್ಯ ಅಜ್ಜಾವರ ನಿವಾಸಿ ಎನ್.ಎಂ. ಅಜೀಜ್‌ ಎಂಬಾತನನ್ನು ಆಂಧ್ರದ ಚಿತ್ತೂರು ಜೈಲಿನಲ್ಲಿ ಪೊಲೀಸರು ಪತ್ತೆಹಚ್ಚಿದ್ದಾರೆ.​​ಕಡಬ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣವೊಂದರಲ್ಲಿ ಈತನಿಗೆ ಹೈಕೋರ್ಟ್ ಹತ್ತು ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. 2018ರಲ್ಲಿ ಕೇರಳ ಪೊಲೀಸರು ಈತನನ್ನು ಸುಳ್ಯ ನ್ಯಾಯಾಲಯಕ್ಕೆ

ಎಂಟು ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ ಅಪರಾಧಿ ಪತ್ತೆ Read More »

ಈಜಲು ನದಿಗಿಳಿದ ಬಾಲಕ ಮುಳುಗಿ ಸಾವು

ಬೆಳ್ತಂಗಡಿ: ಈಜಲು ನದಿಗಿಳಿದ 14 ವರ್ಷದ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಅಂತರಾಯ ಪಲ್ಕೆಯಲ್ಲಿ ಶನಿವಾರ ಸಂಜೆ ನಡೆದಿದೆ. ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಹಸನಬ್ಬ ಎಂಬವರ ಪುತ್ರ ಮೊಹಮ್ಮದ್ ಹಫೀಜ್ ಮೃತ ಬಾಲಕ. ನೇತ್ರಾವತಿ ನದಿಯ ಅಂತ್ರಾಯ ಕೊಳದಲ್ಲಿ ನಾಲ್ವರು ಮಕ್ಕಳು ಈಜಲು ಇಳಿದಿಗಿದ್ದ ಹಫೀಜ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಅಲ್ಲಿದ್ದವರು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಾಲಕನ ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ತನಿಖೆ ನಡೆಯುತ್ತಿದೆ.

ಈಜಲು ನದಿಗಿಳಿದ ಬಾಲಕ ಮುಳುಗಿ ಸಾವು Read More »

ಮತ್ತೆ ವಕ್ಕರಿಸಿದ ಕೊರೋನಾ : ಅಮೆರಿಕದಲ್ಲಿ ರೂಪಾಂತರಿ ವೈರಸ್‌ ಹಾವಳಿ

25ಕ್ಕೂ ಹೆಚ್ಚು ರಾಜ್ಯಗಳಲ್ಲಿ ಈ ಹೊಸ ರೂಪಾಂತರಿ ತಳಿಯ ಕಾಟ ವಾಷಿಂಗ್ಟನ್‌ : ಜಗತ್ತಿನಾದ್ಯಂತ ಕೊರೋನಾ ಮತ್ತೆ ಆತಂಕ ಸೃಷ್ಟಿಸಿದೆ. ಅಮೆರಿಕದಲ್ಲಿ ಕೋವಿಡ್-19‌ ಹೊಸ ರೂಪಾಂತರಿ BA.3.2 ಸಿಕಾಡಾ ಕಾಣಿಸಿಕೊಂಡು ವೇಗವಾಗಿ ಹರಡುತ್ತಿದೆ. ಈ ವೈರಸ್ ಈಗಾಗಲೇ ಕೆಲವು ದೇಶಗಳಲ್ಲಿ ಕಾಟ ಕೊಡಲಾರಂಭಿಸಿದೆ. ಅಮೆರಿಕದ ರೋಗ ನಿಯಂತ್ರಣ ಹಾಗೂ ಮುನ್ನೆಚ್ಚರಿಕಾ ಕೇಂದ್ರ ದೇಶದೆಲ್ಲೆಡೆ ನೀರಿನ ಮಾದರಿ ಪರೀಕ್ಷಿಸಿದ್ದು, 25ಕ್ಕೂ ಹೆಚ್ಚು ರಾಜ್ಯಗಳಲ್ಲಿ ಈ ಹೊಸ ರೂಪಾಂತರಿ ಪತ್ತೆಯಾಗಿದೆ. ಕೀಟದ ಹೆಸರು ಸಿಕಾಡಾ ಬಿಎ 3.2 ಅಥವಾ ʼಸಿಕಾಡಾʼ

ಮತ್ತೆ ವಕ್ಕರಿಸಿದ ಕೊರೋನಾ : ಅಮೆರಿಕದಲ್ಲಿ ರೂಪಾಂತರಿ ವೈರಸ್‌ ಹಾವಳಿ Read More »

error: Content is protected !!
Scroll to Top