ಸುದ್ದಿ

ಕಾಣಿಕೆ ಡಬ್ಬಿಯ ಹಣ ಕಳವು : ಮೂವರು ಸೆರೆ

ರಸ್ತೆ ಬದಿ ಅಳವಡಿಸಿದ್ದ ಕಾಣಿಕೆ ಡಬ್ಬಿಯ ಬೀಗ ಒಡೆದು ಹಣ ಕದ್ದ ಯುವಕರು ವಿಟ್ಲ: ಕನ್ಯಾನ ಗ್ರಾಮದ ದೇಲಂತಬೆಟ್ಟುವಿನಲ್ಲಿ ರಸ್ತೆ ಬದಿಯಲ್ಲಿದ್ದ ಎರಡು ಕಾಣಿಕೆ ಡಬ್ಬಿಗಳಲ್ಲಿದ್ದ ಹಣ ಕದ್ದ ಮೂವರನ್ನು ವಿಟ್ಲ ಪೊಲೀಸರು ಬಂದಿಸಿದ್ದಾರೆ. ವಿಟ್ಲ ಕಸಬಾ ಗ್ರಾಮದ ತ್ವಾಹಿದ್‌ (19), ಉಮ್ಮರ್‌ ಫಾರೂಕ್‌ (18) ಮತ್ತು ನಬೀಲ್‌( 18) ಆರೋಪಿಗಳು. ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿರುವ ಧಾರ್ಮಿಕ ಕೇಂದ್ರಕ್ಕೆ […]

ಕಾಣಿಕೆ ಡಬ್ಬಿಯ ಹಣ ಕಳವು : ಮೂವರು ಸೆರೆ Read More »

ವಿಟ್ಲ : ಆವರಣ ಗೋಡೆಗೆ ಖಾಸಗಿ ಬಸ್‌ ಡಿಕ್ಕಿ, ಪ್ರಯಾಣಿಕರಿಗೆ ಗಾಯ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಆವರಣ ಗೋಡೆಗೆ ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲದಲ್ಲಿ ಶನಿವಾರ ಸಂಜೆ ನಡೆದಿದೆ. ವಿಟ್ಲ ಕೆ.ಎಸ್.ಆರ್.ಟಿ.ಸಿ.ನಿಲ್ದಾಣದ ಬಳಿ ಖಾಸಗಿ ಬಸ್ಸಿನ ಬ್ರೇಕ್ ವೈಫಲ್ಯದಿಂದ ರಸ್ತೆ ಬದಿಯ ಆವರಣ ಗೋಡೆಗೆ ಢಿಕ್ಕಿಯಾಗಿದೆ. ಅಪಘಾತದಲ್ಲಿ ಆವರಣ ಗೋಡೆ ಕುಸಿದುಬಿದ್ದಿದ್ದು, ಬಸ್ ಮುಂಭಾಗ ನಜ್ಜುಗುಜ್ಜಾಗಿದೆ. 17ಕ್ಕೂ ಅಧಿಕ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ವಿಟ್ಲದಿಂದ ಕನ್ಯಾನಕ್ಕೆ ಬಸ್ ತೆರಳುವ ಸಂದರ್ಭ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿಟ್ಲ ಎಸ್.ಐ.ರಾಮಕೃಷ್ಣ

ವಿಟ್ಲ : ಆವರಣ ಗೋಡೆಗೆ ಖಾಸಗಿ ಬಸ್‌ ಡಿಕ್ಕಿ, ಪ್ರಯಾಣಿಕರಿಗೆ ಗಾಯ Read More »

ವಿಟ್ಲ: ಅಕ್ರಮವಾಗಿ ಸಾಗಿಸುತ್ತಿದ್ದ ಕೆಂಪುಕಲ್ಲು, ಲಾರಿ ವಶ

ವಿಟ್ಲ : ಎರಡು ಲಾರಿಗಳಲ್ಲಿ ಅಕ್ರಮವಾಗಿ ಕೆಂಪುಕಲ್ಲುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದಾರೆ. ಶನಿವಾರ ವಿಟ್ಲ ಠಾಣಾ ಉಪನಿರೀಕ್ಷಕ ರಾಮಕೃಷ್ಣ ಅವರು ತಮ್ಮ ಸಿಬ್ಬಂದಿಯೊಂದಿಗೆ ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಉಕ್ಕುಡ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ KA 01 AJ 9542 & KA 50 AF 3229 ನೋಂದಣಿ ಸಂಖ್ಯೆಯ ಎರಡು ಲಾರಿಗಳನ್ನು ನಿಲ್ಲಿಸಿ, ತಪಾಸಣೆ ನಡೆಸಲಾಗಿದೆ. ಈ ವೇಳೆ

ವಿಟ್ಲ: ಅಕ್ರಮವಾಗಿ ಸಾಗಿಸುತ್ತಿದ್ದ ಕೆಂಪುಕಲ್ಲು, ಲಾರಿ ವಶ Read More »

ಪ್ರಜ್ವಲ್ ರೇವಣ್ಣ‌ನಿಗೆ ಜೀವಾವಧಿ ಶಿಕ್ಷೆ, 5 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

ಬೆಂಗಳೂರು: ಐವತೈದು ವರ್ಷದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ. ಪ್ರಜ್ವಲ್‌ಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜೀವಾವಧಿ ಶಿಕ್ಷೆ ಮತ್ತು 5 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಒಂದು ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಇದಾಗಿದ್ದು, ಇನ್ನೂ ಮೂರು ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಕಳೆದ 14 ತಿಂಗಳುಗಳಿಂದ ಪ್ರಜ್ವಲ್ ಜೈಲು ವಾಸದಲ್ಲಿದ್ದು, ಮತ್ತೆ

ಪ್ರಜ್ವಲ್ ರೇವಣ್ಣ‌ನಿಗೆ ಜೀವಾವಧಿ ಶಿಕ್ಷೆ, 5 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್ Read More »

ಧರ್ಮಸ್ಥಳ ಕೇಸ್: 9 ನೇ ಪಾಯಿಂಟ್‌ನಲ್ಲೂ ಕಳೇಬರದ ಅವಶೇಷ ಇಲ್ಲ

ಧರ್ಮಸ್ಥಳ: ದೇಶವನ್ನೇ ತನ್ನತ್ತ ಸೆಳೆದ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಗುರುತು ಮಾಡಲಾದ 9 ನೇ ಪಾಯಿಂಟ್‌ನಲ್ಲಿ ಉತ್ಖನನ ನಡೆಸಲಾಗಿದ್ದು, ಇದರಲ್ಲಿ ಕಳೇಬರದ ಯಾವುದೇ ಕುರುಹು ಪತ್ತೆಯಾಗಿಲ್ಲ. SIT ಅಧಿಕಾರಿಗಳು ಗುರುತಿಸಲಾದ ಪ್ರದೇಶದಲ್ಲಿ ಪೌರಕಾರ್ಮಿಕರ ಮೂಲಕ 4 ಅಡಿಗಳಷ್ಟು ಅಗೆಸಿದ್ದು, ಬಳಿಕ ಜೆಸಿಬಿ ಬಳಸಿ ಸ್ಥಳದಲ್ಲಿ ಮತ್ತು ಸುತ್ತಮುತ್ತಲಲ್ಲಿ ಪರಿಶೀಲಿಸಿದರೂ ಯಾವುದೇ ಸಾಕ್ಷಿ ಪತ್ತೆಯಾಗಿಲ್ಲ. ಈ ಸ್ಥಳದಲ್ಲಿ ಹಲವು ಹೆಣಗಳನ್ನು ಹೂತಿದ್ದೇನೆ. ಕುರುಹುಗಳು ಸಿಗಲೇ ಬೇಕು ಎಂದು ಈ ಹಿಂದೆ ದೂರುದಾರ ಹೇಳಿದ್ದು, ಆದ್ದರಿಂದ ಈ ಸ್ಥಳ

ಧರ್ಮಸ್ಥಳ ಕೇಸ್: 9 ನೇ ಪಾಯಿಂಟ್‌ನಲ್ಲೂ ಕಳೇಬರದ ಅವಶೇಷ ಇಲ್ಲ Read More »

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : 13 ಕಡೆ ಎನ್‌ಐಎ ದಾಳಿ

ಬಜ್ಪೆ, ಸುರತ್ಕಲ್‌ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಅಧಿಕಾರಿಗಳಿಂದ ಪರಿಶೋಧನೆ ಮಂಗಳೂರು: ಸಂಘ ಪರಿವಾರದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ದಾಳಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಸೇರಿದಂತೆ ಸುಮಾರು 13 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : 13 ಕಡೆ ಎನ್‌ಐಎ ದಾಳಿ Read More »

ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಉದ್ದೇಶಪೂರ್ವಕ ದುಷ್ಕೃತ್ಯ : ತನಿಖಾ ವರದಿಯಲ್ಲಿ ಬಹಿರಂಗ

ಹಳಿಯ ಇಂಟರ್‌ಲಾಕ್‌ ಕಿತ್ತು ಹಾಕಿದ ಪರಿಣಾಮ ಭೀಕರ ಅಪಘಾತ ಚೆನ್ನೈ: ಕಳೆದ ವರ್ಷ ಮೈಸೂರಿನಿಂದ ದರ್ಭಾಂಗಗೆ ಹೋಗುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತ ಉದ್ದೇಶಿತ ದುಷ್ಕೃತ್ಯ. ಹಳಿ ಇಂಟರ್‌ಲಾಕ್ ತೆಗೆದು ದುಷ್ಕೃತ್ಯ ಎಸಗಿದ್ದಾರೆ ಎಂದು ರೈಲ್ವೆ ಸುರಕ್ಷತಾ ಆಯುಕ್ತರು ತನಿಖಾ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ. ಈ ಕುರಿತು ದಕ್ಷಿಣ ರೈಲ್ವೆ ವಲಯದ ರೈಲ್ವೆ ಸುರಕ್ಷತಾ ವಿಭಾಗದ ಆಯುಕ್ತ ಎ.ಎಂ.ಚೌಧರಿ, ಕಳೆದ ವರ್ಷ ಅಕ್ಟೋಬರ್‌ 11ರಂದು ಚೆನ್ನೈ ಸಮೀಪದ ಕವರೈ ಪಟ್ಟಿ ರೈಲ್ವೆ

ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಉದ್ದೇಶಪೂರ್ವಕ ದುಷ್ಕೃತ್ಯ : ತನಿಖಾ ವರದಿಯಲ್ಲಿ ಬಹಿರಂಗ Read More »

ಎನ್‌ಕೌಂಟರ್‌ಗೆ ಇನ್ನೋರ್ವ ಉಗ್ರ ಬಲಿ

ರಾತ್ರಿಯಿಡೀ ನಡೆದ ಕಾರ್ಯಾಚರಣೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆಯುತ್ತಿರುವ ʻಆಪರೇಷನ್‌ ಅಖಾಲ್‌ʼ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ʻಆಪರೇಷನ್‌ ಅಖಾಲ್‌ʼ ಹೆಸರಿನಲ್ಲಿ ಕಾರ್ಯಾಚರಣೆ ಶುರು ಮಾಡಿತು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ ಭದ್ರತಾ

ಎನ್‌ಕೌಂಟರ್‌ಗೆ ಇನ್ನೋರ್ವ ಉಗ್ರ ಬಲಿ Read More »

ಧರ್ಮಸ್ಥಳ ಪ್ರಕರಣ : 15 ವರ್ಷಗಳ ಪೊಲೀಸ್‌ ದಾಖಲೆಗಳು ನಾಶ?

ಆರ್‌ಟಿಐ ಅಡಿ ಕೇಳಿದ ಮಾಹಿತಿಗೆ ದಾಖಲೆಗಳನ್ನು ಡಿಲೀಟ್‌ ಮಾಡಲಾಗಿದೆ ಎಂದು ಉತ್ತರಿಸಿದ ಪೊಲೀಸರು ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ಇಸವಿಯಿಂದ 2015ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳು(ಯುಡಿಆರ್‌) ಡಿಲೀಟ್ ಆಗಿದೆ ಎಂದು ಹೇಳಲಾಗಿದ್ದು, ಇದು ಹೊಸ ವಿವಾದ ಸೃಷ್ಟಿಸಿದೆ. ಇದೇ ಅವಧಿಯಲ್ಲಿ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಅನಾಮಿಕ ವ್ಯಕ್ತಿ ಆರೋಪಿಸಿದ್ದಾರೆ. 1998 ಮತ್ತು 2014ರ ನಡುವೆ ಲೈಂಗಿಕ

ಧರ್ಮಸ್ಥಳ ಪ್ರಕರಣ : 15 ವರ್ಷಗಳ ಪೊಲೀಸ್‌ ದಾಖಲೆಗಳು ನಾಶ? Read More »

ಮಲಯಾಳಂ ಚಿತ್ರರಂಗದ ಜನಪ್ರಿಯ ಹಾಸ್ಯನಟ ಹೋಟೆಲ್‌ ಕೋಣೆಯಲ್ಲಿ ನಿಗೂಢವಾಗಿ ಸಾವು

ಶೂಟಿಂಗ್‌ ಮುಗಿಸಿ ಬಂದ ನಟ ಶವವಾಗಿ ಪತ್ತೆ ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಜನಪ್ರಿಯ ಹಾಸ್ಯನಟ ಕಲಾಭವನ್ ನವಾಸ್ (51) ಶುಕ್ರವಾರ ರಾತ್ರಿ ಛೋಟಾನಿಕ್ಕರದಲ್ಲಿರುವ ಹೋಟೆಲ್ ಒಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ. ನವಾಸ್ ಮುಂದಿನ ‘ಪ್ರಕಂಬನಂʼ ಚಲನಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದರು. ಶುಕ್ರವಾರ ರಾತ್ರಿ ಚಿತ್ರೀಕರಣ ಮುಗಿಸಿ ಹೋಟೆಲ್‌ನಿಂದ ಚೆಕ್‌ಔಟ್ ಮಾಡಬೇಕಿತ್ತು. ಆದರೆ, ಸಮಯಕ್ಕೆ ತಮ್ಮ ಕೋಣೆಯಿಂದ ನಿರ್ಗಮಿಸದ ಕಾರಣ ರೂಮ್ ಬಾಯ್ ಅವರು ಹೋಗಿ ನೋಡಿದಾಗ ನವಾಸ್ ಅವರು ಪ್ರಜ್ಞೆತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತು,

ಮಲಯಾಳಂ ಚಿತ್ರರಂಗದ ಜನಪ್ರಿಯ ಹಾಸ್ಯನಟ ಹೋಟೆಲ್‌ ಕೋಣೆಯಲ್ಲಿ ನಿಗೂಢವಾಗಿ ಸಾವು Read More »

error: Content is protected !!
Scroll to Top