ಸುದ್ದಿ

ಮಲ್ಲಿಕಾರ್ಜುನ ಖರ್ಗೆಯವರ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಖರ್ಗೆಯವರ ಪುತ್ರ ಮಿಲಿಂದ್ ಖರ್ಗೆ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಖರ್ಗೆ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಿಲಿಂದ್ ಸಾರ್ವಜನಿಕವಾಗಿ […]

ಮಲ್ಲಿಕಾರ್ಜುನ ಖರ್ಗೆಯವರ ಪುತ್ರನ ಆರೋಗ್ಯ ಸ್ಥಿತಿ ಗಂಭೀರ Read More »

4ನೇ ಟೆಸ್ಟ್‌ : ಸೋಲಿನ ದವಡೆಯಿಂದ ಪಾರಾಗಿ ಡ್ರಾ ಸಾಧಿಸಿದ ಭಾರತ

ಇಂಗ್ಲೆಂಡ್‌ ಗೆಲುವಿನಾಸೆಗೆ ತಣ್ಣೀರೆರಚಿದ ಗಿಲ್‌, ಜಡೇಜಾ, ಸುಂದರ್‌ ಶತಕ ಮ್ಯಾಂಚೆಸ್ಟರ್‌: ಇಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ನಾಲ್ಕನೇ ಪಂದ್ಯವನ್ನು ಸೋಲಿನ ದವಡೆಯಿಂದ ಪಾರು ಮಾಡಿ ಡ್ರಾ ಮಾಡಿಕೊಳ್ಳಲು ಭಾರತ ಯಶಸ್ವಿಯಾಗಿದೆ. ನಾಯಕ ಶುಭಮನ್‌ ಗಿಲ್‌, ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್‌ ಸುಂದರ್‌ ಅವರ ಅಜೇಯ ಶತಕದ ನೆರವಿನಿಂದ 4ನೇ ಟೆಸ್ಟ್‌ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ 311 ರನ್‌ ಮುನ್ನಡೆ ಪಡೆದ ಕಾರಣ ಭಾರತದ ಬ್ಯಾಟರ್‌ಗಳು ಎರಡನೇ ಇನ್ನಿಂಗ್ಸ್‌ನಲ್ಲಿ ಎಚ್ಚರಿಕೆಯಿಂದ ಆಟವಾಡಿ

4ನೇ ಟೆಸ್ಟ್‌ : ಸೋಲಿನ ದವಡೆಯಿಂದ ಪಾರಾಗಿ ಡ್ರಾ ಸಾಧಿಸಿದ ಭಾರತ Read More »

ದ್ವಿಶತಕ ದಾಟಿದ ಫಲಾನುಭವಿಗಳ ಸಂಖ್ಯೆ – ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮತ್ತುಕೆವಿಜಿ ವೈದ್ಯಕೀಯ ಮಹಾವಿದ್ಯಾಲಯಗಳ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಒಟ್ಟು ಇನ್ನೂರಕ್ಕೂ ಮಿಕ್ಕಿದ ಸಂಖ್ಯೆಯ ಆರೋಗ್ಯಾಕಾಂಕ್ಷಿಗಳು ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು. ಯಶಸ್ವೀ ಶಿಬಿರಇದೊಂದು ಅತ್ಯಂತ ಪ್ರಯೋಜನಕಾರಿ ಮತ್ತು ಸಕಾಲಿಕವಾದ ಶಿಬಿರವಾಗಿತ್ತು ಎಂದು ಫಲಾನುಭವಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಶಿಬಿರದಲ್ಲಿ ವಿತರಿಸಲಾದ ಆಹಾರದ ಗುಣಮಟ್ಟವು ಅತಿ ಉತ್ತಮವಾಗಿತ್ತು ಎಂದು ಕೆವಿಜಿ ವೈದ್ಯಕೀಯ ಕಾಲೇಜಿನ ವೈದ್ಯರು ಮತ್ತು ಸಿಬ್ಬಂದಿಗಳು ಪ್ರತಿಕ್ರಿಯಿಸಿದ್ದಾರೆ. ಎಲ್ಲವೂ ಉಚಿತರಕ್ತದೊತ್ತಡ ಮತ್ತು

ದ್ವಿಶತಕ ದಾಟಿದ ಫಲಾನುಭವಿಗಳ ಸಂಖ್ಯೆ – ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ Read More »

ಹರಿದ್ವಾರ : ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ 6 ಮಂದಿ ಸಾವು

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನೋಡಿ ಜನ ಗಾಬರಿಯಾದಾಗ ನೂಕುನುಗ್ಗಲು ಹರಿದ್ವಾರ: ಹರಿದ್ವಾರದ ಪ್ರಸಿದ್ಧ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ದೇವಸ್ಥಾನದ ಸಮೀಪವಿರುವ ವಿದ್ಯುತ್‌ ಕಂಬದಲ್ಲಿ ಶಅರ್ಟ್‌ ಸರ್ಕ್ಯೂಟ್‌ ಆಗಿದ್ದು, ಇದನ್ನು ನೋಡಿ ಭಕ್ತರು ಗಾಬರಿಯಾಗಿ ಓಡ;ಲು ತೊಡಗಿದಾಗ ನೂಕುನುಗ್ಗಲು ಸಂಭವಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೊಂಡಿದ್ದಾರೆ. ಆದರೆ ಪೊಲೀಸರು ಶಾರ್ಟ್‌ ಸರ್ಕ್ಯೂಟ್‌ ಅವಗಡಕ್ಕೆ ಕಾರಣ ಎಂದು ಸ್ಪಷ್ಟಪಡಿಸಿಲ್ಲ. ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಇಂದು ಬೆಳಗ್ಗೆ

ಹರಿದ್ವಾರ : ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ 6 ಮಂದಿ ಸಾವು Read More »

ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ

ಬಂಟ್ವಾಳ : ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಬಳಿ ಶನಿವಾರ ನಡೆದಿದೆ. ಕಾರು ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಕಾರಿನಲ್ಲಿದ್ದ ಚಾಲಕ ಮತ್ತು ಓರ್ವ ಪ್ರಯಾಣಿಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ತುಂಬಿದೆ. ಹೀಗಾಗಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ ಎಂದು ವಾಹನ ಚಾಲಕ, ಮಾಲಕರು ತಿಳಿಸಿದ್ದಾರೆ.

ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ Read More »

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಯೂಟ್ಯೂಬರ್‌ ಮಂಗಳೂರಿನಲ್ಲಿ ಬಂಧನ

ಮದುವೆಯಾಗಿ ಮೂರು ಮಕ್ಕಳಿದ್ದರೂ ಹದಿಹರೆಯದ ಬಾಲಕಿ ಸ್ನೇಹ ಬೆಳೆಸಿ ದ್ರೋಹ ಮಂಗಳೂರು: ಮದುವೆಯಾಗಿ ಮೂವರು ಮಕ್ಕಳಿದ್ದರೂ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನ ಏರ್‌ಪೋರ್ಟ್‌ನಲ್ಲಿ ಕಾಸರಗೋಡು ನಿವಾಸಿ ಮುಹಮ್ಮದ್ ಸಾಲಿ ಬಂಧಿತ. ಆರೋಪಿ ವಿದೇಶದಿಂದ ಹಿಂದಿರುಗಿದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯನಾಗಿದ್ದ ಸಾಲಿ, ಶಾಲು ಕಿಂಗ್ ಮೀಡಿಯಾ, ಶಾಲು ಕಿಂಗ್

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಯೂಟ್ಯೂಬರ್‌ ಮಂಗಳೂರಿನಲ್ಲಿ ಬಂಧನ Read More »

ಆಗಸ್ಟ್‌ 1ರಿಂದ ಯುಪಿಐ ಪಾವತಿ ವ್ಯವಸ್ಥೆಗೆ ಹೊಸ ನಿಯಮ

ಎಲ್ಲ ಆನ್‌ಲೈನ್‌ ಪೇಮೆಂಟ್‌ ವ್ಯವಸ್ಥೆಗೆ ಅನ್ವಯ ನವದೆಹಲಿ : ಜಗತ್ತಿನ ನಂಬರ್‌ 1 ಪಾವತಿ ವ್ಯವಸ್ಥೆಯಾಗಿರುವ ಯುಪಿಐಯಲ್ಲಿ ಆಗಸ್ಟ್‌ 1, 2025ರಿಂದ ಹಲವು ಬದಲಾವಣೆಗಳಾಗಲಿವೆ. ಯುಪಿಐಯಲ್ಲಿ ಹೊಸ ನಿಯಮಗಳು ಜಾರಿ ಆಗಲಿವೆ. ಯುಪಿಐ ಪಾವತಿ ವೇಗ, ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯ ಸುಧಾರಣೆ ದೃಷ್ಟಿಯಿಂದ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಈ ಬದಲಾವಣೆಗಳನ್ನು ಮಾಡುತ್ತಿದೆ. ಗೂಗಲ್‌ ಪೇ, ಫೋನ್‌ ಪೇ ಸೇರಿದಂತೆ ಎಲ್ಲ ರೀತಿಯ ಯುಪಿಐ ಆಧಾರಿತ ಪಾವತಿ ವ್ಯವಸ್ಥೆಗೆ ಇದು ಅನ್ವಯವಾಗಲಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್

ಆಗಸ್ಟ್‌ 1ರಿಂದ ಯುಪಿಐ ಪಾವತಿ ವ್ಯವಸ್ಥೆಗೆ ಹೊಸ ನಿಯಮ Read More »

ಧರ್ಮಸ್ಥಳ ಪ್ರಕರಣ : 8 ತಾಸಿಗೂ ಅಧಿಕ ಹೊತ್ತು ದೂರುದಾರನ ವಿಚಾರಣೆ

ವಕೀಲರ ಜೊತೆಗೆ ಮುಸುಕು ಧರಿಸಿಕೊಂಡು ಬಂದ ದೂರುದಾರ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಆರೋಪಿಸಿದ ವ್ಯಕ್ತಿಯನ್ನು ಶನಿವಾರ ಎಸ್‌ಐಟಿ ಅಧಿಕಾರಿಗಳು ಎಂಟು ತಾಸಿಗೂ ಅಧಿಕ ಹೊತ್ತು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಧರ್ಮಸ್ಥಳ ಪ್ರಕರಣದ ತನಿಖೆಗೆ ರಚಿಸಲಾದ ಎಸ್‌ಐಟಿ ಅಧಿಕಾರಿಗಳು ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯ ಸರ್ಕಾರಿ ಅತಿಥಿಗೃಹದಲ್ಲಿ ಎಸ್‌ಐಟಿ ತಂಡದ ಡಿಐಜಿ ಎಂ.ಎನ್. ಅನುಚೇತ್ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರು ದೂರುದಾರನನ್ನು ವಿಚಾರಣೆಗೊಳಪಡಿಸಿದರು. ಬೆಳಗ್ಗೆ 10.50ಕ್ಕೆ

ಧರ್ಮಸ್ಥಳ ಪ್ರಕರಣ : 8 ತಾಸಿಗೂ ಅಧಿಕ ಹೊತ್ತು ದೂರುದಾರನ ವಿಚಾರಣೆ Read More »

ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ : ಓರ್ವ ಸಾವು, 20 ಮಂದಿಗೆ ಗಾಯ

ಇಳಿಜಾರಿನಲ್ಲಿ ಬ್ರೇಕ್‌ಫೇಲ್‌ ಆದ ಟ್ರಕ್‌ 25ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿಯಾಗಿ ಅಪಘಾತ ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಯಗಢ ಜಿಲ್ಲೆಯ ಖೋಪೋಲಿ ಬಳಿ ಸುಮಾರು 20 ವಾಹನಗಳು ಸರಣಿ ಅಪಘಾತಕ್ಕೀಡಾಗಿ ಓರ್ವ ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದಾರೆ. ಏಕಮುಖ ಸಂಚಾರ ರಸ್ತೆಯಲ್ಲಿ 25ಕ್ಕೂ ಹೆಚ್ಚು ವಾಹನಗಳು ಪರಸ್ಪರ ಡಿಕ್ಕಿಯಾಗಿವೆ. ಖೋಪೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಬೈಗೆ ಹೋಗುವ ಮಾರ್ಗದಲ್ಲಿ ಘಟನೆ ಸಂಭವಿಸಿದೆ. ಇಳಿಜಾರಿನಲ್ಲಿ ಕಂಟೇನರ್‌ ಟ್ರಕ್‌ನ ಬ್ರೇಕ್‌ ಫೇಲ್‌ ಆಗಿ ಇದರಿಂದ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಬಿಎಂಡಬ್ಲ್ಯು

ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ : ಓರ್ವ ಸಾವು, 20 ಮಂದಿಗೆ ಗಾಯ Read More »

ಅಧಿಕಾರ ಹಂಚಿಕೆ ಆಗಲಿ : ಕಾಂಗ್ರೆಸ್‌ ಶಾಸಕ ಬಿ.ದೇವೇಂದ್ರಪ್ಪ

ಕಾಂಗ್ರೆಸ್‌ನಲ್ಲಿ ಮುಗಿಯದ ಕುರ್ಚಿ ಕಿತ್ತಾಟ ಬೆಂಗಳೂರು: ಹೈಕಮಾಂಡ್‌ಎಷ್ಟೇ ತೇಪೆ ಹಾಕಿದರೂ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಬೇಗುದಿ ಶಮನವಾಗುತ್ತಿಲ್ಲ. ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಾಕಷ್ಟು ಚರ್ಚೆ ಮತ್ತು ತೀವ್ರ ಕುತೂಹಲ ಮೂಡಿಸುತ್ತಿವೆ. ಐದು ವರ್ಷ ನಾನೇ ಸಿಎಂ ಎಂದಿರುವ ಸಿದ್ದರಾಮಯ್ಯ ಪದೇಪದೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದೇಗುಲಗಳಿಗೆ ಸರಣಿ ಭೇಟಿ ನೀಡಿ ಪೂಜೆ, ಹೋಮ ಮಾಡಿಸುತ್ತಿದ್ದಾರೆ. ಈದರ ಮಧ್ಯೆ ಸಿಎಂ ಮತ್ತು ಡಿಸಿಎಂ ನಡುವೆ ಒಪ್ಪಂದ ಆಗಿದ್ದರೆ ಅಧಿಕಾರ ಹಂಚಿಕೆ ಆಗಲಿ ಎಂದು

ಅಧಿಕಾರ ಹಂಚಿಕೆ ಆಗಲಿ : ಕಾಂಗ್ರೆಸ್‌ ಶಾಸಕ ಬಿ.ದೇವೇಂದ್ರಪ್ಪ Read More »

error: Content is protected !!
Scroll to Top